Homeಮುಖಪುಟ'ಇಂಡಿಯಾ ಔಟ್' ಅಭಿಯಾನ: ಏನಿದು ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆ?

‘ಇಂಡಿಯಾ ಔಟ್’ ಅಭಿಯಾನ: ಏನಿದು ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆ?

- Advertisement -
- Advertisement -

ಭಾರತದ ಉತ್ಪನ್ನಗಳು ಬಾಂಗ್ಲಾದೇಶದಲ್ಲಿ ಬಹಿಷ್ಕಾರದ ಕರೆಗಳನ್ನು ಎದುರಿಸುತ್ತಿದ್ದು, ಭಾರತ ಮತ್ತು ಬಾಂಗ್ಲಾದೇಶದ ಸಂಬಂಧ ನಿಜಕ್ಕೂ ಹಳಸಿದ್ಯಾ ಎಂಬ ಪ್ರಶ್ನೆ ಮೂಡಿದೆ. ಢಾಕಾದ ಶೇಖ್ ಹಸೀನಾ ಸರ್ಕಾರದ ಜೊತೆ ಭಾರತ ಉತ್ತಮ ಸಂಬಂಧವನ್ನು ಹೊಂದಿದೆ, ಆದರೆ ಶೇಖ್ ಹಸೀನಾ ಮತ್ತು ಅವರ ಅವಾಮಿ ಲೀಗ್‌ಗೆ ವಿರುದ್ಧವಾಗಿರುವ ಪಕ್ಷಗಳು ಮತ್ತು ನಾಯಕರು ಮಾಲ್ಡೀವ್ಸ್‌ನಲ್ಲಿನ ರೀತಿಯಲ್ಲಿ ‘ಇಂಡಿಯಾ ಔಟ್’ ಅಭಿಯಾನಕ್ಕೆ ಕರೆಯನ್ನು ನೀಡಿದ್ದಾರೆ.

ಕೆಲವು ಸಾಮಾಜಿಕ ಮಾಧ್ಯಮ ಖಾತೆಗಳು ಬಾಂಗ್ಲಾದೇಶದ “ಭಾರತದ ಉತ್ಪನ್ನಗಳನ್ನು ಬಹಿಷ್ಕರಿಸಿ” ಎಂಬ ಭಾವನೆಯನ್ನು ಉತ್ತೇಜಿಸಲು ಪ್ರಯತ್ನಿಸುತ್ತಿದೆ, ಮೋದಿ ಸರ್ಕಾರವು ಸೋಮವಾರ ರಂಜಾನ್ ಮತ್ತು ಈದ್‌ಗೆ ಮುಂಚಿತವಾಗಿ ಬಾಂಗ್ಲಾದೇಶಕ್ಕೆ 50,000 ಟನ್ ಈರುಳ್ಳಿಯನ್ನು ರಫ್ತು ಮಾಡಲು ಅವಕಾಶ ಮಾಡಿಕೊಟ್ಟಿದೆ. ವಿಶೇಷವಾಗಿ ರಂಜಾನ್ ಅವಧಿಯಲ್ಲಿ ಹಬ್ಬದ ಮತ್ತು ಉಪವಾಸದ ಸಮಯದಲ್ಲಿ ಭಕ್ಷ್ಯಗಳಿಗೆ, ಈರುಳ್ಳಿ ಮುಖ್ಯವಾಗಿದೆ. ಈರುಳ್ಳಿ ರಫ್ತು ನಿಷೇಧಿಸಲಾಗಿದೆಯಾದರೂ, ಸರ್ಕಾರವು ಎರಡು ಆಪ್ತ ರಾಷ್ಟ್ರಗಳಾದ ಬಾಂಗ್ಲಾದೇಶ ಮತ್ತು ಯುಎಇಗೆ ವಿನಾಯಿತಿ ನೀಡಿದೆ. ಭಾರತವು ಡಿಸೆಂಬರ್ 2023ರಲ್ಲಿ ಈರುಳ್ಳಿ ರಫ್ತು ನಿಷೇಧಿಸಿತ್ತು.

ಅಲ್ ಜಝೀರಾ ವರದಿಯು ಢಾಕಾದ ಪಂಥಾಪತ್ ಪ್ರದೇಶದಲ್ಲಿ ಭಾರತೀಯ ಉತ್ಪನ್ನಗಳನ್ನು ಸಂಗ್ರಹಿಸುವ ಅಂಗಡಿಗಳು ಭಾರತದ ಹೊಸ ಉತ್ಪನ್ನಗಳನ್ನು ಬಹಿಷ್ಕರಿಸುತ್ತಿದೆ ಎಂಬುವುದನ್ನು ವರದಿ ಮಾಡಿದೆ. ಫೆಬ್ರವರಿಯಲ್ಲಿ ಢಾಕಾ ಮತ್ತು ಚಿತ್ತಗಾಂಗ್‌ನಲ್ಲಿನ ಹಲವಾರು ಅಂಗಡಿಗಳ ಮಾರಾಟಗಾರರು ಅಡುಗೆ ಎಣ್ಣೆ, ಸಂಸ್ಕರಿಸಿದ ಆಹಾರಗಳು, ಶೌಚಾಲಯಗಳು, ಸೌಂದರ್ಯವರ್ಧಕಗಳು ಮತ್ತು ಬಟ್ಟೆಗಳಂತಹ ಭಾರತೀಯ ಉತ್ಪನ್ನಗಳ ಮಾರಾಟದಲ್ಲಿ ಇಳಿಕೆಯಾಗಿದೆ ಎಂದು ವಾಯ್ಸ್ ಆಫ್ ಅಮೇರಿಕಾಗೆ ಮಾಹಿತಿ ನೀಡಿದ್ದಾರೆ.

ಬಾಂಗ್ಲಾದೇಶದ ಆನ್‌ಲೈನ್ ಅಭಿಯಾನವು ಹೆಚ್ಚಾಗಿ ಭಾರತೀಯ ಉತ್ಪನ್ನಗಳ ಬಹಿಷ್ಕಾರಕ್ಕೆ ಕರೆ ನೀಡಿದೆ ಮತ್ತು ಭಾರತ ವಿರೋಧಿ ಪೋಸ್ಟ್‌ಗಳನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ‘ಬಾಯ್ಕಾಟ್ ಇಂಡಿಯಾ’ ಅಭಿಯಾನದ ಪ್ರಮುಖ ಚಾಲಕರಲ್ಲಿ ಒಬ್ಬರು ಪ್ಯಾರಿಸ್ ಮೂಲದ ಪಿನಾಕಿ ಭಟ್ಟಾಚಾರ್ಯ ಎಂದು ಹೇಳಲಾಗಿದೆ.  ಬಾಂಗ್ಲಾದೇಶದಿಂದ ಗಡಿಪಾರು ಮಾಡಲಾಗಿದ್ದ ಬ್ಲಾಗರ್, ಆನ್‌ಲೈನ್ ಕಾರ್ಯಕರ್ತ ಮತ್ತು ಮಾನವ ಹಕ್ಕುಗಳ ರಕ್ಷಕ ಎಂದು ತನ್ನನ್ನು ತಾನು ವಿವರಿಸಿಕೊಳ್ಳುವ ವೈದ್ಯ ಪಿನಾಕಿ, ಜನವರಿ ಮಧ್ಯದಲ್ಲಿ ‘ಇಂಡಿಯಾ ಔಟ್’ ಅಭಿಯಾನವನ್ನು ಆರಂಭಿಸಿದ್ದರು.

4,000ಕ್ಕೂ ಹೆಚ್ಚು ಪೋಸ್ಟ್‌ಗಳು #BoycottIndianProducts ಜೊತೆಗೆ #IndiaOut ಮತ್ತು #BoycottIndiaದಂತಹ ಹ್ಯಾಶ್‌ಟ್ಯಾಗ್‌ಗಳನ್ನು ತೋರಿಸುತ್ತದೆ, ಹಸೀನಾ ಪ್ರಮಾಣವಚನ ಸ್ವೀಕರಿಸಿದ ಒಂದು ವಾರದ ನಂತರ ಬಾಂಗ್ಲಾದೇಶದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಇವುಗಳು ಹೆಚ್ಚಾಗಿ ಕಂಡು ಬಂದಿದೆ.

ಆನ್‌ಲೈನ್ ನ್ಯೂಸ್ ಪೋರ್ಟಲ್ ‘ಢಾಕಾ ಪೋಸ್ಟ್’ ಮಾರ್ಚ್‌ನಲ್ಲಿ 12 ಬಾಂಗ್ಲಾದೇಶದ ಪಕ್ಷಗಳು ಭಾರತೀಯ ಉತ್ಪನ್ನಗಳ ಬಹಿಷ್ಕಾರಕ್ಕೆ ಕರೆ ನೀಡಿವೆ ಎಂದು ವರದಿ ಮಾಡಿದೆ. ಬಹಿಷ್ಕಾರಕ್ಕೆ ಕರೆ ನೀಡಿದವರಲ್ಲಿ ಪ್ರಮುಖ ವಿರೋಧ ಪಕ್ಷವಾದ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ ಮತ್ತು ಪ್ರಮುಖ ಇಸ್ಲಾಮಿಸ್ಟ್ ಪಕ್ಷವಾದ ಬಾಂಗ್ಲಾದೇಶ ಜಮಾತ್-ಎ-ಇಸ್ಲಾಮಿ ಇರಲಿಲ್ಲ ಎನ್ನಲಾಗಿದೆ. 2022-2023ರಲ್ಲಿ ಉತ್ಪನ್ನಗಳ ಬಹಿಷ್ಕಾರದ ಪರಿಣಾಮವು ಆರ್ಥಿಕವಾಗಿ ಹೆಚ್ಚು ಪರಿಣಾಮ ಬೀರುವುದಿಲ್ಲ. ಆದರೆ ಈ ಬೆಳವಣಿಗೆಯು ಭಾರತಕ್ಕೆ ಎಚ್ಚರಿಕೆಯಾಗಿದೆ ಎಂಬುವುದು ಗಮನಾರ್ಹ.

‘ಭಾರತದ ಉತ್ಪನ್ನಗಳ ಬಹಿಷ್ಕಾರ’ ಅಭಿಯಾನದ ಬಗ್ಗೆ ಪ್ರತಿಕ್ರಿಯಿಸಿದ ಚಿತ್ತಗಾಂಗ್ ವಿಶ್ವವಿದ್ಯಾಲಯದ  ಮುಂತಸ್ಸಿರ್ ಮಾಮೂನ್, ಬಾಂಗ್ಲಾದೇಶದಲ್ಲಿ ಈ ಅಭಿಯಾನದ ಪ್ರಭಾವ ಬೀರಿರುವುದು ಕಂಡು ಬಂದಿಲ್ಲ ಎಂದು ಹೇಳಿಕೊಂಡಿದ್ದಾರೆ. ಒಂದು ರೀತಿಯ ಭಾರತೀಯ-ವಿರೋಧಿ ಅಲೆ ಬಾಂಗ್ಲಾದಲ್ಲಿ ಯಾವಾಗಲೂ ಪ್ರಚಲಿತದಲ್ಲಿದೆ, ಆದರೆ ಪ್ರಸ್ತುತ ಬಹಿಷ್ಕಾರದ ಅಭಿಯಾನವು ಸಾಮಾಜಿಕ ಮಾಧ್ಯಮ ಕೇಂದ್ರಿತವಾಗಿದೆ ಎಂದು ಮನೋಹರ್ ಪರಿಕ್ಕರ್ ರಕ್ಷಣಾ ಅಧ್ಯಯನ ಮತ್ತು ವಿಶ್ಲೇಷಣೆ ಸಂಸ್ಥೆಯ ಸ್ಮೃತಿ ಪಟ್ಟನಾಯಕ್ ಹೇಳಿದ್ದಾರೆ.

ಇದನ್ನು ಓದಿ: ಪ್ರೊ.ಜಿ.ಎನ್‌ ಸಾಯಿಬಾಬಾ ಖುಲಾಸೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...