Homeಮುಖಪುಟಮರಗಳ ರಕ್ಷಣೆಗೆ ನಿಂತ ಹೋರಾಟಗಾರರ ಬಂಧನ: ಆರೇ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ

ಮರಗಳ ರಕ್ಷಣೆಗೆ ನಿಂತ ಹೋರಾಟಗಾರರ ಬಂಧನ: ಆರೇ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ

- Advertisement -
- Advertisement -

ಮುಂಬೈನ ಆರೇ ಪ್ರದೇಶದಲ್ಲಿ ಪರಿಸರವಾದಿಗಳು ಮತ್ತು ಪರಿಸರ ಪ್ರೇಮಿಗಳ ಹೋರಾಟ ಜೋರಾದ ಹಿನ್ನೆಲೆ ಸೆಕ್ಷನ್ 144 ಜಾರಿ ಮಾಡಲಾಗಿದೆ. ನಿನ್ನೆಯಷ್ಟೇ ಬಾಂಬೆ ಹೈಕೋರ್ಟ್ ಆರೇ ಪ್ರದೇಶವನ್ನು ಅರಣ್ಯವೆಂದು ಘೋಷಿಸಬೇಕು ಮತ್ತು ಮರಗಳನ್ನು ಕಡಿದು ಮುಂಬೈ ಮೆಟ್ರೋ ಕಾರ್ ಶೆಡ್ ದಾರಿ ನಿರ್ಮಾಣ ಮಾಡುತ್ತಿರುವ ಕಾಮಗಾರಿಯನ್ನು ನಿಲ್ಲಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆ ಪರಿಸರವಾದಿಗಳು ನಿನ್ನೆ ಸಂಜೆಯಿಂದ ಸೇವ್ ಟ್ರೀ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದ್ರು.

ಇದನ್ನೂ ಓದಿ: ಆರೇ ಪ್ರದೇಶದ ಮರಗಳ ನಾಶ ತಡೆಗೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್

ಮೂಲಗಳ ಪ್ರಕಾರ, ಆರೇ ಪ್ರದೇಶದಲ್ಲಿರುವ ಸುಮಾರು 800 ಕ್ಕೂ ಹೆಚ್ಚು ಮರಗಳನ್ನು ಈಗಾಗಲೇ ಕಡಿಯಲಾಗಿದೆ. ಹೈಕೋರ್ಟ್ ಅರ್ಜಿ ವಜಾಗೊಳಿಸಿದ ನಂತರ ಮರಗಳನ್ನು ಕಡಿಯಲು ಮತ್ತಷ್ಟು ಮಷಿನ್ ಗಳನ್ನು ಸ್ಥಳಕ್ಕೆ ತರಲಾಗಿದೆ. ಪೊಲೀಸರು ಮತ್ತು ಹೋರಾಟಗಾರರ ಮಧ್ಯೆ ತೀವ್ರ ವಾಗ್ವಾದ ನಡೆದಿದೆ. ಮರಗಳ ಮಾರಣಹೋಮ ವಿರೋಧಿಸಿ, ಪ್ರತಿಭಟನೆ ನಡೆಸಿದ ಹೋರಾಟಗಾರರ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದು, 100ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, 20ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ. ಐಪಿಸಿ ಸೆಕ್ಷನ್ 353ರಲ್ಲಿ ಪ್ರಕರಣ ದಾಖಲಾಗಿದೆ. ಇಂದು ಬಂಧಿತರನ್ನು ಕೋರ್ಟ್ ಗೆ ಹಾಜರುಪಡಿಸಲಾಗುವುದು. ಆರೇ ಪ್ರದೇಶಕ್ಕೆ ಹೋಗುವ ದಾರಿಗೆ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ.

ಆರೇ ಪ್ರದೇಶದ ಸುತ್ತಮುತ್ತ 144 ಸೆಕ್ಷನ್ ಜಾರಿಯಾಗಿದ್ದು, ಜನರನ್ನು ಒಟ್ಟುಗೂಡದಂತೆ ತಡೆಯಲಾಗುತ್ತಿದೆ. ಆರೇ ಪ್ರದೇಶದಲ್ಲಿ ಹೋರಾಟಗಾರರನನ್ನು ವಶಕ್ಕೆ ಪಡೆದಿರುವ ಕ್ರಮವನ್ನು ಶಿವಸೇನೆ ನಾಯಕ ಆದಿತ್ಯ ಠಾಕರೆ, ಸ್ವರಾಜ್ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್ ಸೇರಿದಂತೆ ಅನೇಕ ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಆದಿತ್ಯ ಠಾಕರೆ, ಕೇಂದ್ರದ ಬಿಜೆಪಿ ಸರ್ಕಾರವನ್ನು ಗುರಿಯಾಗಿಸಿ, ಮರಗಳನ್ನು ಕಡಿಯುವ ನೀತಿ ಅನುಸರಿಸುವವರು, ಪ್ಲಾಸ್ಟಿಕ್ ನಿಯಂತ್ರಣದ ಬಗ್ಗೆ ಮಾತನಾಡಿ ಏನು ಪ್ರಯೋಜನ ಎಂದು ಪ್ರಶ್ನಿಸಿದ್ದಾರೆ. ಇತ್ತ ಯೋಗೇಂದ್ರ ಯಾದವ್ ಟ್ವೀಟ್ ಮಾಡಿ, ಮುಂದೆ ಜಲಕಂಟಕ ಎದುರಾಗುವಲ್ಲಿ ಯಾವುದೇ ಅನುಮಾನವಿಲ್ಲ. ಮಹಾರಾಷ್ಟ್ರ ಸರ್ಕಾರ ಮರಗಳ ಮಾರಣಹೋಮಕ್ಕೆ ಪುಷ್ಠಿ ನೀಡುತ್ತಿರುವುದು ಚಿಂತಾಜನಕ ವಿಷಯ ಎಂದು ಟ್ವೀಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...