Homeಮುಖಪುಟಮೋದಿ ರ್‍ಯಾಲಿ ಹಿನ್ನೆಲೆ: 10ನೇ ತರಗತಿ ಪರೀಕ್ಷೆ ಮುಂದೂಡಿದ ಜಮ್ಮು-ಕಾಶ್ಮೀರ ಆಡಳಿತ!

ಮೋದಿ ರ್‍ಯಾಲಿ ಹಿನ್ನೆಲೆ: 10ನೇ ತರಗತಿ ಪರೀಕ್ಷೆ ಮುಂದೂಡಿದ ಜಮ್ಮು-ಕಾಶ್ಮೀರ ಆಡಳಿತ!

- Advertisement -
- Advertisement -

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ 5 ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಕೇಂದ್ರಾಡಳಿತ ಪ್ರದೇಶವಾದ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದಾರೆ. ಮೋದಿ ಚುನಾವಣಾ ರ್ಯಾಲಿಗೆ ಚಾಲನೆ ಸೇರಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಣಿವೆ ರಾಜ್ಯಕ್ಕೆ ತೆರಳುತ್ತಿದ್ದು, ಈ ವೇಳೆ ಜನಸಂದಣಿಯನ್ನು ತೋರಿಸುವ ಹಿನ್ನೆಲೆ 7,000 ಸರಕಾರಿ ನೌಕರರಿಗೆ ಕಾರ್ಯಕ್ರಮಕ್ಕೆ ಹಾಜರಾಗುವಂತೆ ಸೂಚಿಸಿರುವ ಬಗ್ಗೆ ವರದಿಯಾಗಿತ್ತು. ಇದೀಗ ಇದರ ಬೆನ್ನಲ್ಲಿ ಮೋದಿ ಭೇಟಿ ಹಿನ್ನೆಲೆ ಮಾರ್ಚ್ 7ರಂದು ನಿಗದಿಯಾಗಿದ್ದ 10ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಮುಂದೂಡಿರುವ ಬಗ್ಗೆ ವರದಿಯಾಗಿದೆ.

ಜಮ್ಮು ಮತ್ತು ಕಾಶ್ಮೀರ ಶಾಲಾ ಶಿಕ್ಷಣ ಮಂಡಳಿಯ ಆದೇಶದಲ್ಲಿ ಮೋದಿ ಭೇಟಿಯನ್ನು ಉಲ್ಲೇಖಿಸದಿದ್ದರೂ, ಅನಿವಾರ್ಯ ಸಂದರ್ಭಗಳ ಹಿನ್ನೆಲೆ ಕೃಷಿ,  ಪ್ರವಾಸೋದ್ಯಮ ಸೇರಿದಂತೆ ವೃತ್ತಿಪರ ವಿಷಯಗಳ ಪರೀಕ್ಷೆ, 10ನೇ ತರಗತಿಯ ಪರೀಕ್ಷೆಯನ್ನು ಮುಂದೂಡುವುದಾಗಿ ಶಾಲಾ ಶಿಕ್ಷಣ ಮಂಡಳಿ ತಿಳಿಸಿದೆ ಎಂದು ದಿ ಟೆಲಿಗ್ರಾಫ್ ವರದಿಯನ್ನು ಮಾಡಿದೆ. ಹತ್ತನೇ ತರಗತಿಯ ಬೋರ್ಡ್ ಪರೀಕ್ಷೆಗಳು ಮಾರ್ಚ್ 7 ಮತ್ತು ಏಪ್ರಿಲ್ 3ರ ನಡುವೆ ನಡೆಯಲಿವೆ. ಪ್ರಾಯೋಗಿಕ ದಿನಾಂಕಗಳನ್ನು ನಂತರ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಮಂಡಳಿ ತಿಳಿಸಿದೆ.

ಮಾರ್ಚ್ 7ರಂದು ಶ್ರೀನಗರದ ಬಕ್ಷಿ ಸ್ಟೇಡಿಯಂನಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ, 2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಶ್ರೀನಗರಕ್ಕೆ ಮೋದಿಯ ಮೊದಲ ಭೇಟಿಯಾಗಿದೆ. 370ನೇ ವಿಧಿಯನ್ನು ರದ್ದುಗೊಳಿಸುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕಾಶ್ಮೀರದಲ್ಲಿ ವ್ಯಾಪಕ ಬೆಂಬಲ ಎಂಬುವುದನ್ನು ಬಿಂಬಿಸಲು ಪ್ರಧಾನಿಯ ರ್ಯಾಲಿಗೆ ಭಾಗವಹಿಸುವಂತೆ ಸರಕಾರಿ ಅಧಿಕಾರಿಗಳಿಗೆ ಈ ಮೊದಲು ಸೂಚನೆಯನ್ನು ನೀಡಲಾಗಿತ್ತು. ಶ್ರೀನಗರದ ಖಾಸಗಿ ಶಾಲೆಗಳಿಗೆ ಈ ನೌಕರರನ್ನು ಶಾಲಾ ಬಸ್‌ಗಳಲ್ಲಿ ಬಕ್ಷಿ ಕ್ರೀಡಾಂಗಣಕ್ಕೆ ಕರೆದೊಯ್ಯುವಂತೆ ಆದೇಶಿಸಿದೆ ಎಂದು ವರದಿಯಾಗಿತ್ತು. ಇದಲ್ಲದೆ ಶ್ರೀನಗರದ ಆಹಾರ ಸುರಕ್ಷತಾ ಇಲಾಖೆಗೆ ಕೂಡ ಇದೇ ರೀತಿಯ ಆದೇಶವನ್ನು ನೀಡಲಾಗಿದೆ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ, ಭದ್ರತಾ ಏಜೆನ್ಸಿಗಳಿಗೆ, ಮೋದಿ ಅವರ ರ್ಯಾಲಿಯಲ್ಲಿ ಭಾಗವಹಿಸಲು ಸೂಚಿಸಲಾದ ನೌಕರರು ಪ್ರತ್ಯೇಕತಾವಾದಿ ಗುಂಪುಗಳು ಅಥವಾ ಉಗ್ರಗಾಮಿ ಸಂಘಟನೆಗಳೊಂದಿಗೆ ಸಂಪರ್ಕವನ್ನು ಹೊಂದಿದ್ದಾರೆಯೇ ಎಂದು ಕಂಡುಹಿಡಿಯಲು ಆದೇಶಿಸಲಾಗಿದೆ. ಸ್ಥಳೀಯ ಸುದ್ದಿ ಮಾದ್ಯಮದ ವರದಿಯ ಪ್ರಕಾರ, ಶ್ರೀನಗರದ 100ಕ್ಕೂ ಹೆಚ್ಚು ಹೋಟೆಲ್‌ಗಳು, ಲಾಡ್ಜ್‌ಗಳು ಮತ್ತು ಅತಿಥಿ ಗೃಹಗಳನ್ನು ಮೋದಿ ಕಾರ್ಯಕ್ರಮದ ಹಿನ್ನೆಲೆ ಮುಂಗಡವಾಗಿ ಕಾಯ್ದಿರಿಸಲಾಗಿದೆ. 1,000ಕ್ಕೂ ಹೆಚ್ಚು ವಾಹನಗಳನ್ನು ಬಾಡಿಗೆಗೆ ತೆಗೆದುಕೊಳ್ಳಲಾಗಿದೆ.

ಮೋದಿ ಶ್ರೀನಗರದ ಭೇಟಿಯ ವೇಳೆ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸುವ ನಿರೀಕ್ಷೆಯಿದೆ, ಯುವಕರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸುವ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಹೊಸ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಯಿದೆ. ಮೋದಿ ಭೇಟಿಯ ಹಿನ್ನೆಲೆ ಶ್ರೀನಗರ ನಗರದಾದ್ಯಂತ ಬಿಜೆಪಿ 10,000 ಧ್ವಜಗಳನ್ನು ಹಾಕಿದೆ.

ಇದನ್ನು ಓದಿ: ಹೈಕೋರ್ಟ್‌ ನ್ಯಾಯಾಧೀಶರು ಬಿಜೆಪಿ ಸೇರ್ಪಡೆ: ನ್ಯಾಯಾಂಗದ ಸ್ವಾತಂತ್ರ್ಯದ ಪ್ರಶ್ನೆ ಉದ್ಭವಿಸಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...