Homeಮುಖಪುಟಟಿಆರ್‌ಪಿ ಹಗರಣ: ಅರ್ನಬ್‌ ಗೋಸ್ವಾಮಿ ವಿರುದ್ಧದ ಪ್ರಕರಣ ಹಿಂಪಡೆಯಲು ಅನುಮತಿಸಿದ ಕೋರ್ಟ್‌

ಟಿಆರ್‌ಪಿ ಹಗರಣ: ಅರ್ನಬ್‌ ಗೋಸ್ವಾಮಿ ವಿರುದ್ಧದ ಪ್ರಕರಣ ಹಿಂಪಡೆಯಲು ಅನುಮತಿಸಿದ ಕೋರ್ಟ್‌

- Advertisement -
- Advertisement -

2020ರ ಟಿಆರ್‌ಪಿ ಹಗರಣ ಪ್ರಕರಣಕ್ಕೆ ಸಂಬಂಧಿಸಿ ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ ವಿರುದ್ಧದ ಪ್ರಕರಣ ಹಿಂಪಡೆಯುವ ಮುಂಬೈ ಪೊಲೀಸರ ಅರ್ಜಿಗೆ ಮುಂಬೈನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸಮ್ಮತಿಸಿದೆ.

ಮುಂಬೈ ಪೊಲೀಸ್ ತನಿಖೆಯಲ್ಲಿನ ವಿರೋಧಾಭಾಸಗಳು ಸೇರಿದಂತೆ ವಿವಿಧ ಅಂಶಗಳನ್ನು ಪರಿಗಣಿಸಿ ರಾಜ್ಯ ಗೃಹ ಇಲಾಖೆ ಪ್ರಕರಣವನ್ನು ಹಿಂಪಡೆಯಲು ನಿರ್ಧಾರ ಕೈಗೊಂಡಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಪ್ರಕರಣದ ಕುರಿತು ಆಲಿಸಿದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಲ್‌ಎಸ್ ಪಧೇನ್ ಅವರು ಪ್ರಕರಣ ಹಿಂಪಡೆಯಲು ಪೊಲೀಸರಿಗೆ ಅನುಮತಿ ನೀಡಿದ್ದಾರೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಹಿರಾಯ್ ದೃಢಪಡಿಸಿದ್ದಾರೆ.

2020ರಲ್ಲಿ ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿ ಸೇರಿದಂತೆ ಹಲವಾರು ಚಾನೆಲ್‌ಗಳ ವಿರುದ್ಧ ಟಿಆರ್‌ಪಿ ಹೆಚ್ಚಿಸಿರುವ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. ಆಗ ಮುಂಬೈನ ಪೊಲೀಸ್ ಕಮಿಷನರ್ ಆಗಿದ್ದ ಪರಮ್ ಬೀರ್ ಸಿಂಗ್ ಈ ಪ್ರಕರಣವನ್ನು ನಿರ್ವಹಿಸಿದ್ದರು. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಶಿಶಿರ್ ಹಿರಾಯ್ ಅವರು ವಿಚಾರಣೆಯನ್ನು ಮುಂದುವರಿಸುವುದರಿಂದ ಆರೋಪಿಗಳಿಗೆ ಶಿಕ್ಷೆಯಾಗುವುದಿಲ್ಲ, ಬದಲಿಗೆ ನ್ಯಾಯಾಲಯದ ಸಮಯ ವ್ಯರ್ಥವಾಗುತ್ತದೆ ಎಂದು  ನ್ಯಾಯಾಲಯದ ಗಮನಕ್ಕೆ ತಂದಿದ್ದು, ಇದರಿಂದ ಪ್ರಕರಣವನ್ನು ಹಿಂಪಡೆಯಲು ನ್ಯಾಯಾಲಯವು ಅನುಮತಿ ನೀಡಿದೆ ಎಂದು ತಿಳಿದು ಬಂದಿದೆ.

ಮುಂಬೈ ಪೊಲೀಸರ ಎಫ್‌ಐಆರ್ ಆಧರಿಸಿ, ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿತ್ತು. ತನ್ನ ತನಿಖಾ ವರದಿಯಲ್ಲಿ ಪ್ರಕರಣದಲ್ಲಿ ಟಿಆರ್‌ಪಿ ಸಂಖ್ಯೆಗಳನ್ನು ದುರ್ಬಳಕೆ ಮಾಡಿದ ಆರೋಪದಿಂದ ರಿಪಬ್ಲಿಕ್ ಟಿವಿ ಮತ್ತು ರಿಪಬ್ಲಿಕ್ ಭಾರತ್‌ನ್ನು ಜಾರಿ ನಿರ್ದೇಶನಾಲಯವು ಈಗಾಗಲೇ ಮುಕ್ತಗೊಳಿಸಿದೆ.

2021ರಲ್ಲಿ ಈ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿತ್ತು. ಈ ಹಗರಣದಿಂದ ರಿಪಬ್ಲಿಕ್ ಟಿವಿ ಚಾನೆಲ್‌ ವೀಕ್ಷಕರ ಸಂಖ್ಯೆಯನ್ನು ಹೆಚ್ಚಿಸಿಕೊಂಡು ಹೆಚ್ಚಿನ ಆದಾಯವನ್ನು ಗಳಿಸಿದೆ ಎಂದು ಉಲ್ಲೇಖಿಸಿತ್ತು. 2023ರಲ್ಲಿ ರಾಜ್ಯ ಗೃಹ ಇಲಾಖೆ ಅಧಿಕಾರಿಗಳು ಮುಂಬೈ ಪೊಲೀಸರಿಂದ ದಾಖಲೆಗಳನ್ನು ಪಡೆದರು ಮತ್ತು ವಜಾಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಝೆ ಮತ್ತು ತಂಡವು ನಡೆಸಿದ ತನಿಖೆಯಲ್ಲಿ ಹಲವಾರು ನ್ಯೂನತೆಗಳಿವೆ ಎಂದು ಮರು ತನಿಖೆಯಲ್ಲಿ ಹೇಳಿದೆ. ವಝೆ ಅವರು ಪ್ರಕರಣದ ತನಿಖೆ ನಡೆಸಿದ ಅಪರಾಧ ಗುಪ್ತಚರ ಘಟಕದ ಮುಖ್ಯಸ್ಥರಾಗಿದ್ದರು.

ನಿರ್ದಿಷ್ಟ ಟಿವಿ ಚಾನೆಲ್‌ಗಳನ್ನು ವೀಕ್ಷಿಸಲು ಜನರಿಗೆ ಹಣ ಪಾವತಿಸುವ ಮೂಲಕ ಟಿಆರ್‌ಪಿಯಲ್ಲಿ ಹಗರಣ ನಡೆಯುತ್ತಿದೆ ಎಂದು 2020ರಲ್ಲಿ ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (BARC) ಹಂಸಾ ರಿಸರ್ಚ್ ಗ್ರೂಪ್ ಮೂಲಕ ದೂರು ದಾಖಲಿಸಿದೆ. ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಪೊಲೀಸರು ಅರ್ನಬ್‌ ಗೋಸ್ವಾಮಿಯನ್ನು ಆರೋಪಿ ಎಂದು ಹೆಸರಿಸಿದ್ದರು. ಈ ಪ್ರಕರಣದಲ್ಲಿ 10ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣದ ಎಲ್ಲ ಆರೋಪಿಗಳಿಗೆ ಈಗಾಗಲೇ ಜಾಮೀನು ಮಂಜೂರಾಗಿದೆ.

ಇದನ್ನು ಓದಿ: ಇಡಿ ದಾಳಿ ಬೆನ್ನಲ್ಲೇ ಬಿಜೆಪಿ ಸೇರಿದ ಟಿಎಂಸಿಯ ಹಿರಿಯ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...