Homeಮುಖಪುಟ'ಪಿಎಫ್‌ ಪಾವತಿಸಲು ಅವರು ಅಪ್ಪನ ಸಾವಿಗಾಗಿ ಕಾಯುತ್ತಿದ್ದರು': ಇಪಿಎಫ್‌ಒ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ಕುಟುಂಬ

‘ಪಿಎಫ್‌ ಪಾವತಿಸಲು ಅವರು ಅಪ್ಪನ ಸಾವಿಗಾಗಿ ಕಾಯುತ್ತಿದ್ದರು’: ಇಪಿಎಫ್‌ಒ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ಕುಟುಂಬ

- Advertisement -
- Advertisement -

“ನನ್ನ ತಂದೆಯ ಪಿಎಫ್ ಹಣ ನೀಡಲು ಹೆಚ್ಚುವರಿ ದಾಖಲೆಗಳನ್ನು ಒದಗಿಸುವಂತೆ ಹೇಳಿ 9 ವರ್ಷಗಳ ಕಾಲ ಅಧಿಕಾರಿಗಳು ಸತಾಯಿಸಿದ್ದರು. ಆದರೆ, ತಂದೆ ಮೃತಪಟ್ಟ ಬೆನ್ನಲ್ಲೇ ಯಾವುದೇ ಹೆಚ್ಚುವರಿ ದಾಖಲೆ ಕೇಳದೆ ತಕ್ಷಣ ಹಣ ನೀಡಿದ್ದಾರೆ. ಕನಿಷ್ಠ ಪಕ್ಷ ಅವರು ತಂದೆಯ ಮರಣ ಪ್ರಮಾಣ ಪತ್ರ ಕೂಡ ಕೇಳಿಲ್ಲ” ಈ ಮಾತು ಹೇಳಿರುವುದು ಕಳೆದ ತಿಂಗಳು ಕೇರಳದ ಕೊಚ್ಚಿಯಲ್ಲಿರುವ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಕಚೇರಿಯೊಳಗೆ ಆತ್ಮಹತ್ಯೆ ಮಾಡಿಕೊಂಡ 69 ವರ್ಷದ ಕೆಪಿ ಶಿವರಾಮನ್ ಅವರ 39 ವರ್ಷದ ಪುತ್ರ ಪ್ರದೀಶ್.

ಕಳೆದ 9 ವರ್ಷಗಳಿಂದ ಅಧಿಕಾರಿಗಳು ಪಿಎಫ್ ಹಣ ನೀಡದೆ ಶಿವರಾಮನ್ ಅವರನ್ನು ಸತಾಯಿಸಿದ್ದರು. ಆದರೆ, ಅವರು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ, ಕುಟುಂಬಕ್ಕೆ ಕೊಡಬೇಕಾಗಿದ್ದ ಎಲ್ಲಾ ಬಾಕಿ ಹಣವನ್ನು ನೀಡಿದ್ದಾರೆ. ಕುಟುಂಬದ ಪ್ರಕಾರ, ಶಿವರಾಮನ್ ಅವರ ಪತ್ನಿ ಕಾನೂನುಬದ್ಧ ನಾಮಿನಿ ಎಂಬ ಪತ್ರವನ್ನು ಹೊರತುಪಡಿಸಿ, ಇನ್ಯಾವುದೇ ಹೆಚ್ಚುವರಿ ದಾಖಲೆಗಳನ್ನು ಕೇಳದೆ ಹಣ ನೀಡಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ವ್ಯವಸ್ಥೆಯ ವಿರುದ್ಧ ಹೋರಾಡಲು ನಮ್ಮ ಬಳಿ ಆರ್ಥಿಕ ಸಂಪನ್ಮೂಲಗಳಿಲ್ಲದಿದ್ದರೂ, ನನ್ನ ತಂದೆ ಶಿವರಾಮನ್‌ ಅವರಿಗೆ ನ್ಯಾಯ ದೊರಕಿಸಿಕೊಡಲು ಮತ್ತು ಬೇರೆಯವರ ತಂದೆಗೆ ಈ ರೀತಿ ಆಗದಂತೆ ನೋಡಿಕೊಳ್ಳಲು ನಾವು ಕಾನೂನು ಹೋರಾಟಕ್ಕೆ ಮುಂದಾಗಿದ್ದೇವೆ” ಎಂದು ಪ್ರದೀಶ್ ಹೇಳಿದ್ದಾರೆ.

“ನನ್ನ ತಂದೆ ಹೋದರು. ಆದರೆ, ಬೇರೆಯವರ ತಂದೆಗೆ ಈ ರೀತಿ ಆಗದಂತೆ ನೋಡಿಕೊಳ್ಳಲು ಕಾನೂನು ಮೊರೆ ಹೋಗಲು ನಿರ್ಧರಿಸಿದ್ದೇವೆ. ಅಧಿಕಾರಿಗಳಿಗೆ ಹಣ ಬಿಡುಗಡೆ ಮಾಡಬಹುದಿತ್ತು. ಆದರೆ, ಅವರು ನನ್ನ ತಂದೆ ಸಾಯುವವರೆಗೆ ಕಾದು, ಬಳಿಕ ತಕ್ಷಣ ಹಣ ಕೊಟ್ಟಿದ್ದಾರೆ. ಅವರು ನನ್ನ ತಂದೆ ಸಾಯಲು ಕಾಯುತ್ತಿದ್ದರು” ಎಂದು ದಿನಗೂಲಿ ಮಾಡುವ 39 ವರ್ಷದ ಪ್ರದೀಶ್ ಬೇಸರ ವ್ಯಕ್ತಪಡಿಸಿದ್ದಾರೆ.

ಇಪಿಎಫ್‌ಒ ನಿಯಮಗಳ ಪ್ರಕಾರ, ಮೃತ ವ್ಯಕ್ತಿಯ ಪಿಎಫ್‌ ಹಣ ಹಿಂಪಡೆಯಲು ಫಾರ್ಮ್‌ 20 ಅನ್ನು ಸಲ್ಲಿಸಬೇಕು. ಕುಟುಂಬ ಸದಸ್ಯರು ಈ ಹಣ ಪಡೆಯುವುದಾದರೆ, ಮೃತ ವ್ಯಕ್ತಿಯ ಮರಣ ಪ್ರಮಾಣ ಪತ್ರ, ರಕ್ಷಕತ್ವ ಪ್ರಮಾಣ ಪತ್ರ ಸೇರಿದಂತೆ ಹಲವು ದಾಖಲೆಗಳನ್ನು ನೀಡಬೇಕು. ಆದರೆ, ಶಿವರಾಮನ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವರ ಕುಟುಂಬ ಸದಸ್ಯರಿಂದ ಯಾವುದೇ ಹೆಚ್ಚುವರಿ ದಾಖಲೆಗಳನ್ನು ಕೇಳದೆ ಹಣ ನೀಡಲಾಗಿದೆ. ಇದೇ ಅಧಿಕಾರಿಗಳು ಶಿವರಾಮನ್ ಜೀವಂತ ಇದ್ದಾಗ ಹಣ ನೀಡದೆ ಸತಾಯಿಸಿ ಅವರ ಸಾವಿಗೆ ಕಾರಣರಾಗಿದ್ದರು.

ಏನಿದು ಪ್ರಕರಣ?

ಕೇರಳದ ತ್ರಿಶೂರ್ ಮೂಲದ ಶಿವರಾಮನ್ ಅವರು ಅಪೋಲೋ ಟೈರ್ಸ್‌ನಲ್ಲಿ ನೌಕರರಾಗಿದ್ದರು. 9 ವರ್ಷಗಳ ಹಿಂದೆ ಅವರು ವೃತ್ತಿಯಿಂದ ನಿವೃತ್ತರಾಗಿದ್ದರು. ಅಂದಿನಿಂದಲೂ, ತಮ್ಮ ಪಿಎಫ್‌ ಹಣವನ್ನು ಪಡೆಯಲು ಇಪಿಎಫ್‌ಒ ಕಚೇರಿಗೆ ಅಲೆಯುತ್ತಿದ್ದರು. ಆದರೆ, ದಾಖಲೆಗಳು ಹೋಲಿಕೆಯಾಗುತ್ತಿಲ್ಲವೆಂದು ಅಧಿಕಾರಿಗಳ ಅವರ ಹಣವನ್ನು ಪಾವತಿಸಲು ನಿರಾಕರಿಸಿದ್ದರು ಎನ್ನಲಾಗಿದೆ. ಮನನೊಂದಿದ್ದ ಶಿವರಾಮನ್ ಕಳೆದ ತಿಂಗಳು (ಫೆಬ್ರವರಿ) 7ರಂದು ಕೊಚ್ಚಿಯಲ್ಲಿರುವ ಇಪಿಎಫ್‌ಒ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ತಮ್ಮ ತಂದೆಯ ಸಾವಿಗೆ ಇಪಿಎಫ್‌ಒ ಅಧಿಕಾರಿಗಳೇ ಕಾರಣವೆಂದು ಆರೋಪಿಸಿರುವ ಪ್ರದೀಪ್, ಫೆಬ್ರವರಿ 7ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇದೀಗ, ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಿದೆ. ನಾವು ನಮ್ಮಂತೆ ಇತರ ಕುಟುಂಬಗಳಿಗೆ ನೋವು ಎದುರಾಗಬಾರದು ಎಂಬ ಕಾರಣಕ್ಕೆ ಕಾನೂನು ಹೋರಾಟ ಮಾಡುತ್ತಿದ್ದೇವೆ ಎಂದು ಪ್ರದೀಪ್ ಹೇಳಿದ್ದಾರೆ.

ವರದಿಯ ಪ್ರಕಾರ, ಶಿವರಾಮನ್ ಅವರ 90,000 ರೂ. ಪಿಎಫ್‌ ಹಣ ಇಪಿಎಫ್‌ಒ ಖಾತೆಯಲ್ಲಿತ್ತು. ಅದನ್ನು ಪಡೆಯಲು ಅವರು ಅರ್ಜಿ ಸಲ್ಲಿಸಿದ್ದರು. ಆದರೆ, ಅವರ ಗುರುತಿನ ದಾಖಲೆಗಳು ಹೊಂದಿಕೆಯಾಗುತ್ತಿಲ್ಲವೆಂದು ಅಧಿಕಾರಿಗಳು ಮರುಪಾವತಿಗೆ ನಿರಾಕರಿಸಿದ್ದರು. ಅಲ್ಲದೆ, ಅವರ ಶಾಲೆಯ ಪ್ರಮಾಣ ಪತ್ರಕ್ಕಾಗಿ ಬೇಡಿಕೆ ಇಟ್ಟಿದ್ದರು. ಆದರೆ, ಅವರಿಗೆ ಅದನ್ನು ನೀಡಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ : ಚುನಾವಣಾ ಬಾಂಡ್ ಮಾಹಿತಿ ಒದಗಿಸದ ಎಸ್‌ಬಿಐ: ನ್ಯಾಯಾಂಗ ನಿಂದನೆ ಕ್ರಮಕ್ಕೆ ಕೋರಿ ಸುಪ್ರೀಂ ಮೊರೆ ಹೋದ ಎಡಿಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...