Homeಮುಖಪುಟಮೌಲಾನಾ ಆಝಾದ್ ಫೌಂಡೇಶನ್‌ ಮುಚ್ಚುವಂತೆ ಆದೇಶ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್‌

ಮೌಲಾನಾ ಆಝಾದ್ ಫೌಂಡೇಶನ್‌ ಮುಚ್ಚುವಂತೆ ಆದೇಶ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್‌

- Advertisement -
- Advertisement -

ಮೌಲಾನಾ ಆಝಾದ್ ಎಜುಕೇಶನ್ ಫೌಂಡೇಶನ್‌ನ್ನು(MAEF) ಮುಚ್ಚುವ ಕೇಂದ್ರ ವಕ್ಫ್ ಕೌನ್ಸಿಲ್‌ನ ಪ್ರಸ್ತಾವನೆಯನ್ನು ಅನುಮೋದಿಸಿದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಮನವಿಯ ಕುರಿತು ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ.

ಮೌಲಾನಾ ಆಝಾದ್ ಎಜುಕೇಶನ್ ಫೌಂಡೇಶನ್‌ ಸರ್ಕಾರಿ ಧನಸಹಾಯದ ಸಂಸ್ಥೆಯಾಗಿದ್ದು, ಶಿಕ್ಷಣಕ್ಕಾಗಿ, ವಿಶೇಷವಾಗಿ ಮೌಲಾನಾ ಆಝಾದ್ ನ್ಯಾಷನಲ್ ಫೆಲೋಶಿಪ್‌ನಂತಹ ಯೋಜನೆಗಳನ್ನು ಮೌಲಾನಾ ಆಝಾದ್ ಎಜುಕೇಶನ್ ಫೌಂಡೇಶನ್‌ ಮೂಲಕ ನೀಡಲಾಗುತ್ತಿತ್ತು. ಆದರೆ 2022ರಲ್ಲಿ ಕೇಂದ್ರವು ಇದನ್ನು ಸ್ಥಗಿತಗೊಳಿಸಿತ್ತು.

ದೆಹಲಿ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಅವರ ವಿಭಾಗೀಯ ಪೀಠವು ಈ ಬಗ್ಗೆ ಮಾಹಿತಿಯನ್ನು ನೀಡುವಂತೆ ಸರ್ಕಾರಿ ವಕೀಲರನ್ನು ಕೇಳಿದೆ ಮತ್ತು ಮಾರ್ಚ್ 7ಕ್ಕೆ ಈ ಕುರಿತು ವಿಚಾರಣೆಯನ್ನು ಮುಂದೂಡಿದೆ.

ಮೌಲಾನಾ ಆಝಾದ್ ಎಜುಕೇಶನ್ ಫೌಂಡೇಶನ್‌ನ್ನು ಮುಚ್ಚುವ ಆದೇಶವು ಸಂಪೂರ್ಣವಾಗಿ ದುರುದ್ದೇಶಪೂರಿತ, ಫೌಂಡೇಶನ್‌ನ್ನು ಮುಚ್ಚುವ ನಿರ್ಧಾರ ಏಕಪಕ್ಷೀಯವಾಗಿದೆ ಹಾಗೂ ಅರ್ಹ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ವಿದ್ಯಾರ್ಥಿವೇತನದಿಂದ ವಂಚಿತರನ್ನಾಗಿಸಲಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

1860ರ ಸೊಸೈಟಿಗಳ ನೋಂದಣಿ ಕಾಯಿದೆಯ ಸೆಕ್ಷನ್ 13ರ ಪ್ರಕಾರ, ನೋಂದಾಯಿಸಲಾದ ಯಾವುದೇ ಸೊಸೈಟಿಯ ವಿಸರ್ಜನೆಗೆ ಆ ಸೊಸೈಟಿಯ ಮೂರು-ಐದನೇ ಸದಸ್ಯರ ಸಮ್ಮತಿ ಬೇಕಾಗುತ್ತದೆ. ಅಲ್ಲದೆ, ಅದರ ಸ್ವತ್ತುಗಳನ್ನು ಇದೇ ರೀತಿಯ ಸೊಸೈಟಿಗೆ ವರ್ಗಾಯಿಸಬೇಕು ಮತ್ತು ಸೆಕ್ಷನ್ 14ರ ಪ್ರಕಾರ 3-4 ಸದಸ್ಯರ ಮತದಿಂದ ಅದನ್ನು ನಿರ್ಧರಿಸಬೇಕಾಗುತ್ತದೆ.

ಮುಸ್ಲಿಮ್‌ ಸಮುದಾಯಕ್ಕೆ ಶಿಕ್ಷಣವನ್ನು ಉತ್ತೇಜಿಸುವ ದೃಷ್ಟಿಯಿಂದ ಸ್ಥಾಪಿಸಲಾಗಿದ್ದ ಮೌಲಾನಾ ಆಝಾದ್ ಶಿಕ್ಷಣ ಪ್ರತಿಷ್ಠಾನವನ್ನು(MAEF) ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಮುಚ್ಚುವಂತೆ ಆದೇಶಿಸಿರುವ ಬಗ್ಗೆ ಈ ಮೊದಲು ವರದಿಯಾಗಿತ್ತು. ಫೆಬ್ರವರಿ 7ರಂದು ಅಲ್ಪಸಂಖ್ಯಾತ ಸಚಿವಾಲಯದ ಅಧೀನ ಕಾರ್ಯದರ್ಶಿ ಧೀರಜ್ ಕುಮಾರ್ ಅವರು ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ ಎಂದು ವರದಿ ಉಲ್ಲೇಖಿಸಿತ್ತು.

ಆದೇಶದ ಪ್ರಕಾರ, ನವೆಂಬರ್‌ 30, 2023ರಲ್ಲಿದ್ದಂತೆ ಫೌಂಡೇಶನ್‌ ಬಳಿ ರೂ.1,073.26 ಕೋಟಿ ನಿಧಿ ಇದ್ದು, ಬಾಧ್ಯತೆಗಳು ರೂ.40,355 ಕೋಟಿ ಆಗಿವೆ ಹಾಗೂ ಈ ಮೊತ್ತ ಕಳೆದರೆ ಉಳಿಯುವ ಮೊತ್ತ ರೂ.669.71 ಕೋಟಿ ಆಗಿದೆ. ಈ ನಿಧಿಯನ್ನು ಕನ್ಸಾಲಿಡೇಟೆಡ್‌ ಫಂಡ್ಸ್‌ ಆಫ್‌ ಇಂಡಿಯಾಗೆ ವರ್ಗಾಯಿಸುವ ಹಾಗೂ ಬಾಧ್ಯತೆಗಳನ್ನು ರಾಷ್ಟ್ರೀಯ ಅಲ್ಪಸಂಖ್ಯಾತ ಅಭಿವೃದ್ಧಿ ಮತ್ತು ಹಣಕಾಸು ಆಯೋಗಕ್ಕೆ ವರ್ಗಾಯಿಸುವ ಪ್ರಸ್ತಾಪವನ್ನು ಆದೇಶದಲ್ಲಿ ಮಾಡಲಾಗಿದೆ ಎಂದು ಹೇಳಲಾಗಿದೆ.

ಮೌಲಾನಾ ಅಬ್ಧುಲ್‌ ಕಲಾಂ ಆಝಾದ್‌ ಪೌಂಡೇಶನ್‌ ಮುಸ್ಲಿಂ ಸಮುದಾಯದ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ನಡುವೆ ಶಿಕ್ಷಣವನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಸರ್ಕಾರದಿಂದ ಅನುದಾನಿತ ಸಂಸ್ಥೆಯಾಗಿದೆ. ಇದನ್ನು ಮೊದಲ ಶಿಕ್ಷಣ ಮಂತ್ರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬ್ದುಲ್ ಕಲಾಂ ಆಝಾದ್ ಅವರ ಜನ್ಮ ಶತಮಾನೋತ್ಸವದಂದು 1989ರಲ್ಲಿ ಸ್ಥಾಪಿಸಲಾಗಿತ್ತು. ಇದರಡಿಯಲ್ಲಿ ಜೂನಿಯರ್ ಸಂಶೋಧನಾ ವಿದ್ಯಾರ್ಥಿಗಳಿಗೆ (ಜೆಆರ್‌ಎಫ್) ಮೊದಲ ಎರಡು ವರ್ಷಗಳವರೆಗೆ ಮಾಸಿಕ ರೂ.31,000 ನೀಡಿದರೆ, ಹಿರಿಯ ಸಂಶೋಧನಾ ವಿದ್ಯಾರ್ಥಿಗಳಿಗೆ (ಎಸ್‌ಆರ್‌ಎಫ್) ಉಳಿದ ಅವಧಿಗೆ ತಿಂಗಳಿಗೆ ರೂ.35,000 ನೀಡಲಾಗುತ್ತದೆ. 2021-22ರ ವರದಿಯಂತೆ ಮೌಲಾನಾ ಆಝಾದ್ ರಾಷ್ಟ್ರೀಯ ಫೆಲೋಶಿಪ್ 6,700 ವಿದ್ಯಾರ್ಥಿಗಳಿಗೆ ಸಹಾಯ ಮಾಡಿದೆ, ಇದರ ಮೊತ್ತ 738.85 ಕೋಟಿ ರೂ.ಎಂದು ಹೇಳಲಾಗಿದೆ. ಆದರೆ ಈ ಯೋಜನೆಯನ್ನು 2022ರಲ್ಲಿ ನಿಲ್ಲಿಸಲಾಗಿತ್ತು. ಇದರ ಪರಿಣಾಮವಾಗಿ ವಿದ್ಯಾರ್ಥಿಗಳ ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು.

ಇದನ್ನು ಓದಿ: ಟಿಆರ್‌ಪಿ ಹಗರಣ: ಅರ್ನಬ್‌ ಗೋಸ್ವಾಮಿ ವಿರುದ್ಧದ ಪ್ರಕರಣ ಹಿಂಪಡೆಯಲು ಅನುಮತಿಸಿದ ಕೋರ್ಟ್‌

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...