HomeUncategorizedಅತಿಕ್ರಮಣ ತೆರವು, ಅಭಿವೃದ್ಧಿ ನೆಪದಲ್ಲಿ ಬುಲ್ಡೋಝರ್‌ ಕಾರ್ಯಾಚರಣೆ: 2022-23ರಲ್ಲಿ ಸಂತ್ರಸ್ತರೆಷ್ಟು?

ಅತಿಕ್ರಮಣ ತೆರವು, ಅಭಿವೃದ್ಧಿ ನೆಪದಲ್ಲಿ ಬುಲ್ಡೋಝರ್‌ ಕಾರ್ಯಾಚರಣೆ: 2022-23ರಲ್ಲಿ ಸಂತ್ರಸ್ತರೆಷ್ಟು?

- Advertisement -
- Advertisement -

ಮೋದಿ ಆಡಳಿತದ ಭಾರತದಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ 2022 ಮತ್ತು 2023ರಲ್ಲಿ ಅತಿ ಹೆಚ್ಚು  ಮನೆಗಳನ್ನು ತೆರವುಗೊಳಿಸಲಾಗಿದ್ದು, ಈ ಒಂದು ವರ್ಷದ ಅವಧಿಯಲ್ಲಿ 7.4 ಲಕ್ಷ ಜನರನ್ನು ಬಲವಂತವಾಗಿ ತೆರವುಗೊಳಿಸಲಾಗಿದೆ ಎಂದು ವರದಿಯೊಂದು ಬಹಿರಂಗಪಡಿಸಿದೆ.

ವಕೀಲರ ಗುಂಪು ಹೌಸಿಂಗ್ ಮತ್ತು ಲ್ಯಾಂಡ್ ರೈಟ್ಸ್ ನೆಟ್‌ವರ್ಕ್ (ಎಚ್‌ಎಲ್‌ಆರ್‌ಎನ್) ಈ ಕುರಿತು ‘ಭಾರತದಲ್ಲಿ 2022- 2023ರಲ್ಲಿ ಬಲವಂತದ ತೆರವು’ ಎಂಬ ಶೀರ್ಷಿಕೆಯ ವರದಿಯನ್ನು ಬಿಡುಗಡೆ ಮಾಡಿದೆ. ವರದಿಯಲ್ಲಿ ದೇಶಾದ್ಯಂತ 1.53 ಲಕ್ಷ ಮನೆಗಳನ್ನು ನೆಲಸಮಗೊಳಿಸಲಾಗಿದೆ ಎಂದು ಕೂಡ ಉಲ್ಲೇಖಿಸಲಾಗಿದೆ. 23 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಾಥಮಿಕ ಮತ್ತು ಮಾಧ್ಯಮಿಕ ದತ್ತಾಂಶ ಸಂಗ್ರಹಣೆಯ ಮೂಲಕ HLRN ಈ ವರದಿಯನ್ನು ಸಿದ್ದಪಡಿಸಿದ್ದು, ತೆರವು ಕಾರ್ಯಾಚರಣೆಗಳಿಂದ ಮನೆಗಳನ್ನು ಕಳೆದುಕೊಂಡ ಅಥವಾ ಮನೆಗಳಿಂದ ಸ್ಥಳಾಂತರಗೊಂಡ ವ್ಯಕ್ತಿಗಳ ನಿಜವಾದ ಸಂಖ್ಯೆಯು ಇನ್ನೂ ಹೆಚ್ಚಿರಬಹುದು ಎಂದು ಅಂದಾಜಿಸಿದೆ.

ಎಲ್ಲಾ ತೆರವು ಕಾರ್ಯಾಚರಣೆಯ ವೇಳೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಾನವ ಹಕ್ಕುಗಳ ಮಾನದಂಡಗಳನ್ನು ಅಧಿಕಾರಿಗಳು ಅನುಸರಿಸಿಲ್ಲ. ತೆರವು ಕಾರ್ಯಚರಣೆಯ ವೇಳೆ ವ್ಯಾಪಕವಾಗಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಅನೇಕ ನಿದರ್ಶನವು ತೆರವು ಕಾರ್ಯಾಚರಣೆಯನ್ನು ತೀವ್ರತೆ ಮತ್ತು ಕ್ರೂರತೆಯಿಂದ ಮಾಡಲಾಗಿದೆ ಎಂದು ವರದಿಯು ಉಲ್ಲೇಖಿಸಿದೆ.

‘ಭಾರತದಲ್ಲಿ 2022- 2023ರಲ್ಲಿ ಬಲವಂತದ ತೆರವು’ ಎಂಬ ಶೀರ್ಷಿಕೆಯ ವರದಿಯು ನ್ಯಾಯಾಲಯದ ಆದೇಶಗಳ ಮೂಲಕ ಬಲವಂತದ ತೆರವು ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದು ಹೇಳುತ್ತದೆ. ವಿಶ್ವಸಂಸ್ಥೆಯ ವ್ಯಾಖ್ಯಾನದಂತೆ HLRN ಬಲವಂತದ ತೆರವನ್ನು ಗುರುತಿಸಿದೆ. ಬಲವಂತದ ತೆರವು- ವ್ಯಕ್ತಿಗಳು, ಕುಟುಂಬಗಳು ಅಥವಾ ಸಮುದಾಯಗಳ ಇಚ್ಛೆಗೆ ವಿರುದ್ಧವಾಗಿ ಶಾಶ್ವತ ಅಥವಾ ತಾತ್ಕಾಲಿಕವಾಗಿ ತೆರವು ಮಾಡುವುದನ್ನು ಗಮನಿಸಿದೆ.

HLRN ವರದಿಯ ಪ್ರಕಾರ, 2022 ಮತ್ತು 2023ರಲ್ಲಿ, ಸುಮಾರು 3 ಲಕ್ಷ ಜನರನ್ನು ನ್ಯಾಯಾಲಯದ ಆದೇಶಗಳ ಬಳಿಕ ಅವರ ಮನೆಗಳಿಂದ ತೆರವು ಮಾಡಲಾಗಿದೆ. 2022ರಲ್ಲಿ ನ್ಯಾಯಾಲಯದ ಆದೇಶಗಳು 33,360ಕ್ಕೂ ಹೆಚ್ಚು ಜನರ ತೆರವು ಕಾರ್ಯಾಚರಣೆಗೆ ಕಾರಣವಾಯಿತು ಮತ್ತು 2023ರಲ್ಲಿ ಈ ಅಂಕಿ ಅಂಶವು ಸುಮಾರು 2.6 ಲಕ್ಷವನ್ನು ತಲುಪಿದೆ ಎಂದು ವರದಿಯು ತಿಳಿಸಿದೆ.

ಈ ಹಿಂದೆ, ವಸತಿ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳಲ್ಲಿ ಪರಿಹಾರವನ್ನು ಒದಗಿಸಲು ನ್ಯಾಯಾಲಯಗಳು ರಚನಾತ್ಮಕವಾಗಿ ಕಾನೂನನ್ನು ವ್ಯಾಖ್ಯಾನಿಸಿವೆ, ಸುಪ್ರೀಂ ಕೋರ್ಟ್ ಮತ್ತು ಹಲವಾರು ರಾಜ್ಯ ಉಚ್ಚ ನ್ಯಾಯಾಲಯಗಳು ವಸತಿ ಅಥವಾ ಆಶ್ರಯದ ಹಕ್ಕನ್ನು ಸಮರ್ಥಿಸಿದೆ ಎಂದು ವರದಿಯು ಉಲ್ಲೇಖಿಸಿದೆ.

ಸುದಾಮ ಸಿಂಗ್ ವರ್ಸಸ್ ದೆಹಲಿ ಸರ್ಕಾರ (2010) ಮತ್ತು ಅಜಯ್ ಮಾಕೆನ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ (2019) ದಲ್ಲಿನ ಮಹತ್ವದ ತೀರ್ಪುಗಳು ಯಾವುದೇ ಬಲವಂತದ ತೆರವು ಕಾರ್ಯಾಚರಣೆ ನಡೆಸುವ ಮೊದಲು ಸಮೀಕ್ಷೆಯನ್ನು ನಡೆಸಲು ಮತ್ತು ಪುನರ್ವಸತಿಯನ್ನು ಒದಗಿಸುವ ಕರ್ತವ್ಯವನ್ನು ಅಧಿಕಾರಿಗಳು ವಹಿಸಬೇಕು. ಆದರೆ ಅದನ್ನು ಮಾಡಿಲ್ಲ ಎನ್ನುವುದು ಕಂಡು ಬಂದಿದೆ.

ವರದಿಯ ಪ್ರಕಾರ, 2022ರಲ್ಲಿ ದೇಶದಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸುಮಾರು 178 ತೆರವು ಕಾರ್ಯಾಚರಣೆಗಳು ನಡೆದಿವೆ. ಇದರ ಪರಿಣಾಮವಾಗಿ 46,371 ಮನೆಗಳನ್ನು ಕೆಡವಲಾಯಿತು ಮತ್ತು 2.3ಲಕ್ಷ ಜನರನ್ನು ಬಲವಂತವಾಗಿ ಸ್ಥಳಾಂತರಿಸಲಾಗಿದೆ. 2023ರಲ್ಲಿ 146 ತೆರವು ಕಾರ್ಯಾಚರಣೆ ನಡೆದಿದೆ. ಇದರ ಪರಿಣಾಮವಾಗಿ 107, 499 ಮನೆಗಳನ್ನು ಕೆಡವಲಾಯಿತು ಮತ್ತು ಕನಿಷ್ಠ 5.15 ಲಕ್ಷ ಜನರನ್ನು ಬಲವಂತವಾಗಿ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದೆ. 2023ರ ಈ ಅಂಕಿ-ಅಂಶಗಳು ಕಳೆದ ಏಳು ವರ್ಷಗಳಲ್ಲಿ ದಾಖಲಾದ ಅತ್ಯಧಿಕ ಅಂಕಿ ಅಂಶವಾಗಿದೆ. ಈ ಅಂಕಿ-ಅಂಶಗಳು 2023ರಲ್ಲಿ ಪ್ರತಿದಿನ ಕನಿಷ್ಠ 294 ಮನೆಗಳ ಧ್ವಂಸ  ಮತ್ತು ಪ್ರತಿ ಗಂಟೆಗೆ 58 ಜನರ ಸ್ಥಳಾಂತರವನ್ನು ಬಿಂಬಿಸುತ್ತದೆ ಎಂದು HLRN ಲೆಕ್ಕಾಚಾರವು ಉಲ್ಲೇಖಿಸಿದೆ. ಆದರೆ 2022ರಲ್ಲಿ ಪ್ರತಿದಿನ ಕನಿಷ್ಠ 129 ಮನೆಗಳ ಧ್ವಂಸ  ಮತ್ತು ಪ್ರತಿ ಗಂಟೆಗೆ 25 ಜನರನ್ನು ತೆರವು  ಮಾಡಲಾಗಿದೆ ಎಂಬವುದನ್ನು ಅಂಕಿ-ಅಂಶಗಳು ಬಿಂಬಿಸುತ್ತದೆ ಎಂದು ವರದಿಯು ತಿಳಿಸಿದೆ.

ದೆಹಲಿಯ ತುಘಲಕಾಬಾದ್, ಅಹಮದಾಬಾದ್‌ನ ರಾಮ ಪಿರ್ ನೊ ಟೆಕ್ರೊ ಮತ್ತು ಫೈಜಾಬಾದ್-ನಯಾ ಘಾಟ್  ಗಳಲ್ಲಿನ ತೆರವು ಕಾರ್ಯಾಚರಣೆಯು ಜನರ ದೊಡ್ಡ ಗುಂಪಿನ ಮೇಲೆ ಪರಿಣಾಮವನ್ನು ಬೀರಿದೆ. HLRN ಪ್ರಕಾರ, ಕಳೆದ ಎರಡು ವರ್ಷಗಳಲ್ಲಿ 59% ತೆರವು ಕಾರ್ಯಾಚರಣೆಯನ್ನು ‘ಸ್ಲಂ ಅಥವಾ ಭೂ ತೆರವು’ ಅಥವಾ ‘ಅತಿಕ್ರಮಣ’ ಅಥವಾ ‘ನಗರದ ಸೌಂದರ್ಯೀಕರಣ’ ನೆಪದಲ್ಲಿ ಮಾಡಲಾಗಿದೆ. 2023ರಲ್ಲಿ 2.9 ಲಕ್ಷಕ್ಕೂ ಹೆಚ್ಚು ಮತ್ತು 2022ರಲ್ಲಿ 1.43 ಲಕ್ಷಕ್ಕೂ ಹೆಚ್ಚು ಜನರನ್ನು ಈ ಉದ್ದೇಶದಿಂದ ತೆರವು ಮಾಡಲಾಗಿದೆ. ಇದಲ್ಲದೆ  ಸ್ಮಾರ್ಟ್ ಸಿಟಿ ಯೋಜನೆ, ಮೂಲಸೌಕರ್ಯ ಮತ್ತು ಇತರ ಅಭಿವೃದ್ಧಿ ಯೋಜನೆಯ ನೆಪದಲ್ಲಿ ತೆರವು ಕಾರ್ಯಾಚರಣೆಯನ್ನು ಮಾಡಲಾಗಿದೆ ಎಂದು ವರದಿಯು ತಿಳಿಸಿದೆ.

ಇದನ್ನು ಓದಿ: SFI ನಾಯಕ ಅಭಿಮನ್ಯು ಹತ್ಯೆ ಪ್ರಕರಣ: ನ್ಯಾಯಾಲಯದಿಂದ ದಾಖಲೆಗಳು ನಾಪತ್ತೆ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...