Homeಮುಖಪುಟಲೋಕಸಭೆ ಚುನಾವಣೆ: ಆರು ರಾಜ್ಯಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ ಕಾಂಗ್ರೆಸ್

ಲೋಕಸಭೆ ಚುನಾವಣೆ: ಆರು ರಾಜ್ಯಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ ಕಾಂಗ್ರೆಸ್

- Advertisement -
- Advertisement -

ಮೊದಲ ಹಂತದ 10 ರಾಜ್ಯಗಳ ಪೈಕಿ 6 ರಾಜ್ಯಗಳಿಗೆ ಕಾಂಗ್ರೆಸ್‌ ಬಹುತೇಕ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ ಎಂದು ಪಕ್ಷದ ಹಿರಿಯ ನಾಯಕ ಕೆ.ಸಿ ವೇಣುಗೋಪಾಲ್ ತಿಳಿಸಿದ್ದಾರೆ.

ನಿನ್ನೆ(ಮಾ.7) ಸಂಜೆ ಪ್ರಾರಂಭಗೊಂಡ ಕಾಂಗ್ರೆಸ್ ಚುನಾವಣಾ ಸಮಿತಿಯ ಮೊದಲ ಸಭೆ ತಡರಾತ್ರಿ ಮುಕ್ತಾಯಗೊಂಡಿತ್ತು. ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವೇಣುಗೋಪಾಲ್, ಅಭ್ಯರ್ಥಿಗಳ ಆಯ್ಕೆ ಬಹುತೇಕ ಅಂತಿಮಗೊಂಡಿರುವುದಾಗಿ ಹೇಳಿದ್ದಾರೆ.

“ಕೇರಳ, ಕರ್ನಾಟಕ, ತೆಲಂಗಾಣ, ಛತ್ತೀಸ್‌ಗಢ, ದೆಹಲಿ ಮತ್ತು ಲಕ್ಷದ್ವೀಪದ ಲೋಕಸಭಾ ಕ್ಷೇತ್ರಗಳಿಗೆ ನಾವು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದೇವೆ. ಇನ್ನೂ ಪ್ರಕ್ರಿಯೆ ಮುಂದುವರೆಯುತ್ತಿದೆ. ಶೀಘ್ರದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗುವುದು” ಎಂದು ವೇಣುಗೋಪಾಲ್ ಮಾಹಿತಿ ನೀಡಿದ್ದಾರೆ.

ವರದಿಗಳ ಪ್ರಕಾರ, ರಾಹುಲ್ ಗಾಂಧಿ ಅವರು ಕೇರಳದ ವಯನಾಡ್‌ನಿಂದ, ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಛತ್ತೀಸ್‌ಗಢದ ರಾಜನಂದಗಾಂವ್‌ನಿಂದ ಮತ್ತು ಜ್ಯೋತ್ಸ್ನಾ ಮಹಂತ್ ಕೊರ್ಬಾದಿಂದ ಮತ್ತೆ ಸ್ಪರ್ಧಿಸಲಿದ್ದಾರೆ. ಅಲ್ಲದೆ, ಛತ್ತೀಸ್‌ಗಢದ ಎಲ್ಲ ಪ್ರಮುಖ ನಾಯಕರು ಚುನಾವಣಾ ಕಣದಲ್ಲಿದ್ದಾರೆ.

ಕೇರಳದ 20 ಸ್ಥಾನಗಳ ಪೈಕಿ 16 ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಕೇಂದ್ರದ ಮಾಜಿ ಸಚಿವ ಹಾಗೂ ತಿರುವನಂತಪುರದ ಹಾಲಿ ಸಂಸದ ಶಶಿ ತರೂರ್ ಅಭ್ಯರ್ಥಿಗಳ ಪೈಕಿ ಸೇರಿದ್ದಾರೆ ಎಂದು ವರದಿಯಾಗಿದೆ.

ಕರ್ನಾಟಕದಲ್ಲಿ ರಾಜ್ಯ ಸರ್ಕಾರದಲ್ಲಿ ಸಚಿವರಾಗಿರುವರನ್ನು ಕಣಕ್ಕಿಳಿಸುವ ಸಾಧ್ಯತೆಯಿಲ್ಲ. ಬಹುತೇಕ ಸಚಿವರು ರಾಷ್ಟ್ರೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕರಾಗಿಲ್ಲ ಎಂದು ತಿಳಿದು ಬಂದಿದೆ.

ರಾಜ್ಯದ ಅಭ್ಯರ್ಥಿಗಳ ಪೈಕಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹೋದರ, ಸಂಸದ ಡಿ.ಕೆ ಸುರೇಶ್ ಕೂಡ ಇದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆಯೂ ಇನ್ನೂ ಯಾವುದೇ ನಿರ್ಧಾರವಾಗಿಲ್ಲ.

ಚುನಾವಣಾ ಸಮಿತಿಯು ಸೋಮವಾರ ಮತ್ತೆ ಸಭೆ ಸೇರಲಿದೆ. ಅಂದು ದೆಹಲಿ, ಛತ್ತೀಸ್‌ಗಢ, ತೆಲಂಗಾಣ, ಕರ್ನಾಟಕ, ಕೇರಳ, ಮಣಿಪುರ, ಮೇಘಾಲಯ, ತ್ರಿಪುರ, ಸಿಕ್ಕಿಂ ಮತ್ತು ಲಕ್ಷದ್ವೀಪದ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ. ಈಶಾನ್ಯ ರಾಜ್ಯಗಳಿಗೆ ಮುಂದಿನ ಹಂತದಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಬರೋಬ್ಬರಿ 90 ಸ್ಥಾನಗಳನ್ನು ಹೊಂದಿರುವ ಎರಡು ನಿರ್ಣಾಯಕ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಬಂಗಾಳದಲ್ಲಿ ಕಾಂಗ್ರೆಸ್ ಇನ್ನೂ ಸೀಟು ಹಂಚಿಕೆ ಸಮಸ್ಯೆಯನ್ನು ಬಗೆಹರಿಸಿಲ್ಲ. ಈ ನಡುವೆ ಇತರ ರಾಜ್ಯಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಕಾರ್ಯ ಪ್ರವೃತ್ತವಾಗಿದೆ.

ಮಹಾರಾಷ್ಟ್ರದ 48 ಸ್ಥಾನಗಳ ಸೀಟು ಹಂಚಿಕೆಯ ಕುರಿತು ಮಹಾ ವಿಕಾಸ್ ಅಘಾಡಿ ಮಿತ್ರ ಪಕ್ಷಗಳ ನಡುವೆ ಮಾತುಕತೆ ಇನ್ನೂ ಪ್ರಗತಿಯಲ್ಲಿದೆ. ಪಶ್ಚಿಮ ಬಂಗಾಳದಲ್ಲಿ ಸ್ವತಂತ್ರ ಸ್ಪರ್ಧೆಗೆ ಟಿಎಂಸಿ ಮುಂದಾಗಿದೆ. ಇಲ್ಲಿ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರ ಅಸಮಾಧಾನ ಶಮನಗೊಳಿಸಬೇಕಿದೆ.

ಇದನ್ನೂ ಓದಿ : ಮಹಿಳಾ ದಿನಾಚರಣೆಯಂದು ಪ್ರಧಾನಿ ಮೋದಿಗೆ ಕಾಂಗ್ರೆಸ್‌ನ 5 ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...