Homeಮುಖಪುಟಲೋಕಸಭಾ ಚುನಾವಣಾ ಪ್ರಚಾರ ಪ್ರಾರಂಭಿಸಿದ ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್

ಲೋಕಸಭಾ ಚುನಾವಣಾ ಪ್ರಚಾರ ಪ್ರಾರಂಭಿಸಿದ ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್

- Advertisement -
- Advertisement -

ಎಎಪಿ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ ಶುಕ್ರವಾರ ನವ ದೆಹಲಿಯಲ್ಲಿ ಪಕ್ಷದ ಲೋಕಸಭಾ ಚುನಾವಣಾ ಪ್ರಚಾರವನ್ನು ‘ಸಂಸದ್ ಮೇ ಭಿ ಕೇಜ್ರಿವಾಲ್, ದಿಲ್ಲಿ ಹೋಗಿ ಔರ್ ಖುಷ್ ಹಾಲ್’ ಎಂಬ ಘೋಷಣೆಯೊಂದಿಗೆ ಪ್ರಾರಂಭಿಸಿದರು. ಏಪ್ರಿಲ್-ಮೇksabha ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯಲಿದೆ.

ಡಿಡಿಯು ಮಾರ್ಗದಲ್ಲಿರುವ ಆಮ್ ಆದ್ಮಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಪಕ್ಷದ ಇತರ ಮುಖಂಡರು ಮತ್ತು ಕಾರ್ಯಕರ್ತರ ಸಮ್ಮುಖದಲ್ಲಿ ಪ್ರಚಾರವನ್ನು ಪ್ರಾರಂಭಿಸಲಾಯಿತು. ‘ನನ್ನ ಕುಟುಂಬವಾಗಿರುವ ದೆಹಲಿಯ ಜನರಿಗೆ ಸೇವೆ ಸಲ್ಲಿಸಲು ನಾನು ಎಲ್ಲ ಪ್ರಯತ್ನಗಳನ್ನು ಮಾಡಿದ್ದೇನೆ’ ಎಂದು ಕೇಜ್ರಿವಾಲ್ ಹೇಳಿದರು.

‘ನಮ್ಮ ಘೋಷವಾಕ್ಯ ‘ಸಂಸದ್ ಮೇ ಭಿ ಕೇಜ್ರಿವಾಲ್, ತೊ ದಿಲ್ಲಿ ಹೋಗಿ ಔರ್ ಖುಷ್ ಹಾಲ್’ (ಸಂಸತ್‌ನಲ್ಲಿ ಕೇಜ್ರಿವಾಲ್ ಅವರೊಂದಿಗೆ ದೆಹಲಿ ಹೆಚ್ಚು ಸಮೃದ್ಧವಾಗಲಿದೆ)’ ಎಂದು ಅವರು ಹೇಳಿದರು.

ದೆಹಲಿ -ಪಂಜಾಬ್ ರಾಜ್ಯಗಳು ಎಎಪಿ ಆಡಳಿತದಲ್ಲಿವೆ; ಈ ಎರಡು ರಾಜ್ಯಗಳಲ್ಲಿ ಮಾತ್ರ ಉಚಿತ ವಿದ್ಯುತ್ ಸರಬರಾಜು ಇದೆ ಎಂದು ಅವರು ಹೇಳಿದರು.

ದೆಹಲಿ ಲೆಫ್ಟಿನೆಂಟ್ ಗವರ್ನರ್ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಎಎಪಿ ಸರ್ಕಾರವು ಪ್ರಾರಂಭಿಸಿದ ಪ್ರತಿಯೊಂದು ಯೋಜನೆಯನ್ನು ಸ್ಥಗಿತಗೊಳಿಸುತ್ತದೆ. ಎಲ್ಲ ಏಳು ವಿರೋಧ ಪಕ್ಷದ ಅಭ್ಯರ್ಥಿಗಳನ್ನು ಸಂಸತ್ತಿಗೆ ಕಳುಹಿಸುವ ಮೂಲಕ ನಮ್ಮನ್ನು ಬಲಪಡಿಸಬೇಕು ಎಂದು ಜನರನ್ನು ಒತ್ತಾಯಿಸಿದರು.

‘ನೀವು ದೆಹಲಿಯಲ್ಲಿ ಸಾಮಾನ್ಯ ವ್ಯಕ್ತಿಯನ್ನು ಆಯ್ಕೆ ಮಾಡಿ ಅಧಿಕಾರಕ್ಕೆ ತಂದ ಕಾರಣ ಅವರು ನಿಮ್ಮನ್ನು ದ್ವೇಷಿಸುತ್ತಾರೆ. ಅವರು ಬುಲ್ಡೋಜರ್‌ಗಳಿಂದ ಮೊಹಲ್ಲಾ ಕ್ಲಿನಿಕ್‌ಗಳನ್ನು ಕೆಡವಿದರು, ಅವರು ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆ, ಆಸ್ಪತ್ರೆಗಳಲ್ಲಿ ಪರೀಕ್ಷೆಗಳು ಮತ್ತು ಔಷಧಿಗಳನ್ನು ನಿಲ್ಲಿಸಿದರು’ ಎಂದು ಕೇಂದ್ರ ಸರ್ಕಾರದ ವಿರುದ್ಧ ಅವರು ಆರೋಪ ಮಾಡಿದರು.

ಎಎಪಿ ಕಾರ್ಯಕರ್ತರು ಚುನಾವಣಾ ಪ್ರಚಾರದ ವೇಳೆ ಪಕ್ಷದ ಸರ್ಕಾರಗಳು ಮಾಡಿದ ಕೆಲಸಗಳನ್ನು ವಿವರಿಸುವ ಕರಪತ್ರಗಳನ್ನು ಹಂಚಲಿದ್ದಾರೆ ಎಂದು ಅವರು ಹೇಳಿದರು.

ಪಂಜಾಬ್ ಮುಖ್ಯಮಂತ್ರಿ ಮಾನ್ ಮಾತನಾಡಿ, ‘ನಮ್ಮ ರಾಜ್ಯವು ಲೋಕಸಭೆ ಚುನಾವಣೆಯಲ್ಲಿ 13-0 ಫಲಿತಾಂಶವನ್ನು ಎಎಪಿ ಪರವಾಗಿ ಪಡೆಯಲಿದೆ’ ಎಂದು ಹೇಳಿದರು. ದೆಹಲಿಯಲ್ಲಿ ಕೇಜ್ರಿವಾಲ್ ಸರ್ಕಾರದ ಕೆಲಸಕ್ಕೆ ಕೇಂದ್ರವು ಅಡ್ಡಿಪಡಿಸುತ್ತಿದೆ ಮತ್ತು ಪಂಜಾಬ್‌ನ ಹಣವನ್ನು ತಡೆಹಿಡಿಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಲೋಕಸಭೆಯಲ್ಲಿ ಆಪ್ ಉತ್ತಮ ಸಂಖ್ಯೆಯ ಸಂಸದರನ್ನು ಹೊಂದಿದ್ದರೆ ಪಂಜಾಬ್‌ನ ಹಣವನ್ನು ನಿಲ್ಲಿಸಲು ಮತ್ತು ದೆಹಲಿಯಲ್ಲಿ ಕೆಲಸ ತಡೆಯಲು ಯಾರೂ ಧೈರ್ಯ ಮಾಡುವುದಿಲ್ಲ ಎಂದು ಅವರು ಹೇಳಿದರು.

ದೆಹಲಿ, ಗುಜರಾತ್ ಮತ್ತು ಹರಿಯಾಣದಲ್ಲಿ ತನ್ನೊಂದಿಗೆ ಮಾಡಿಕೊಂಡಿರುವ ಸೀಟು ಹಂಚಿಕೆ ಒಪ್ಪಂದದ ಅಡಿಯಲ್ಲಿ ಇಂಡಿಯಾ ಬ್ಲಾಕ್ ಪಾಲುದಾರ ಕಾಂಗ್ರೆಸ್ ಸಹಯೋಗದೊಂದಿಗೆ ಎಎಪಿ ಸಾರ್ವತ್ರಿಕ ಚುನಾವಣೆಯನ್ನು ಎದುರಿಸಲಿದೆ.

ಆದರೆ, ಪಂಜಾಬ್‌ನಲ್ಲಿ ಎರಡೂ ಪಕ್ಷಗಳು ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿವೆ. ದೆಹಲಿಯ ಏಳು ಲೋಕಸಭಾ ಸ್ಥಾನಗಳ ಪೈಕಿ ನಾಲ್ಕರಲ್ಲಿ ಎಎಪಿ ಸ್ಪರ್ಧಿಸಲಿದೆ ಮತ್ತು ಉಳಿದ ಮೂರರಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

ಕಾಂಗ್ರೆಸ್ ಜೊತೆಗಿನ ಸೀಟು ಹಂಚಿಕೆ ಒಪ್ಪಂದದಡಿಯಲ್ಲಿ ಗುಜರಾತ್‌ನ ಭರೂಚ್, ಜಾಮ್‌ನಗರ ಮತ್ತು ಹರಿಯಾಣದ ಕುರುಕ್ಷೇತ್ರ ಎಂಬ ಎರಡು ಕ್ಷೇತ್ರಗಳನ್ನು ಪಕ್ಷವು ಪಡೆದುಕೊಂಡಿದೆ. ಪ್ರತ್ಯೇಕವಾಗಿ, ಎಎಪಿ ಅಸ್ಸಾಂನ ಗುವಾಹಟಿ, ದಿಬ್ರುಗಢ ಮತ್ತು ಸೋನಿತ್‌ಪುರ ಲೋಕಸಭಾ ಕ್ಷೇತ್ರಗಳಿಂದ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಇದನ್ನೂ ಓದಿ; ಲೋಕಸಭೆ ಚುನಾವಣೆ: ಆರು ರಾಜ್ಯಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...