Homeಮುಖಪುಟಲೋಕಸಭಾ ಚುನಾವಣೆ-2024: ಕರ್ನಾಟಕದ ಏಳು ಸ್ಥಾನ ಸೇರಿದಂತೆ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಬಿಡುಗಡೆ

ಲೋಕಸಭಾ ಚುನಾವಣೆ-2024: ಕರ್ನಾಟಕದ ಏಳು ಸ್ಥಾನ ಸೇರಿದಂತೆ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಬಿಡುಗಡೆ

- Advertisement -
- Advertisement -

ವಿಪಕ್ಷಗಳ ‘ಇಂಡಿಯಾ’ ಬಣದೊಂದಿಗೆ ಸೀಟು ಹಂಚಿಕೆ ಗೊಂದಲಗಳು ಅಲ್ಪಮಟ್ಟಿಗೆ ಬಗೆಹರಿಯುತ್ತಿರುವಾಗ ಕಾಂಗ್ರೆಸ್‌ ಪಕ್ಷವು ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. 2024ರ ಲೋಕಸಭಾ ಚುನಾವಣೆಗೆ ಕೈ ನಾಯಕರು ಸಜ್ಜಾಗಿದ್ದು, ಕರ್ನಾಟಕದ ಏಳು ಸ್ಥಾನಗಳು ಸೇರಿದಂತೆ ಒಟ್ಟು 39 ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಗುರುವಾರ ನಡೆದ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಛತ್ತೀಸ್‌ಗಢ, ಕರ್ನಾಟಕ, ಕೇರಳ, ಮೇಘಾಲಯ, ನಾಗಾಲ್ಯಾಂಡ್, ಸಿಕ್ಕಿಂ, ತೆಲಂಗಾಣ ಮತ್ತು ತ್ರಿಪುರಾ ರಾಜ್ಯಗಳಿಗೆ ಪಕ್ಷವು ಅಭ್ಯರ್ಥಿಗಳನ್ನು ಘೋಷಿಸಿದೆ. ಘೋಷಿಸಲಾದ 39 ಅಭ್ಯರ್ಥಿಗಳಲ್ಲಿ 15 ಸಾಮಾನ್ಯ ಜಾತಿ ಮತ್ತು 24 ಎಸ್‌ಸಿ/ಎಸ್‌ಟಿ/ಅಲ್ಪಸಂಖ್ಯಾತ ಅಭ್ಯರ್ಥಿಗಳಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಸೋಲಿಸಲು ಗರಿಷ್ಠ ಲೋಕಸಭಾ ಸ್ಥಾನಗಳನ್ನು ಗೆಲ್ಲುವುದು ನಮ್ಮ ಆದ್ಯತೆಯಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಗರಿಷ್ಠ ಸಂಖ್ಯೆಯ ಸಂಸತ್ ಸ್ಥಾನಗಳನ್ನು ಗೆಲ್ಲುವುದು ನಮ್ಮ ಗುರಿಯಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದರು.

ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಉಪಸ್ಥಿತರಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆನ್‌ಲೈನ್‌ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.

ಉತ್ತರ ಪ್ರದೇಶದ ಅಮೇಥಿಯಿಂದ ರಾಹುಲ್ ಗಾಂಧಿ ಎರಡನೇ ಸ್ಥಾನಕ್ಕೆ ಸ್ಪರ್ಧಿಸುತ್ತಾರಾ ಎಂಬ ಸಸ್ಪೆನ್ಸ್ ಹಾಗೆಯೇ ಉಳಿದಿದೆ. ಉಳಿದ ರಾಜ್ಯಗಳನ್ನು ಮುಂದಿನ ಸಭೆಗಳಲ್ಲಿ ಚರ್ಚೆಗೆ ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ಹೇಳಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಉಳಿದಿರುವ ರಾಜ್ಯದಲ್ಲಿ ಅಭ್ಯರ್ಥಿಗಳ ಹೆಸರನ್ನು ಚರ್ಚಿಸಲು ಪಕ್ಷವು ಮಾರ್ಚ್ 11 ರಂದು ತನ್ನ ಎರಡನೇ ಚುನಾವಣಾ ಸಮಿತಿ ಸಭೆಯನ್ನು ನಡೆಸಲಿದೆ.

ಛತ್ತೀಸ್‌ಗಢ

ಜಂಗ್ರಿರ್-ಚಂಪಾ (ಎಸ್‌ಸಿ): ಶಿವಕುಮಾರ್ ದಹರಿಯಾ

ಕೊರ್ಬಾ: ಜ್ಯೋತ್ಸನಾ ಮಹಂತ್

ರಾಜನಂದಗಾಂವ್: ಭೂಪೇಶ್ ಬಘೇಲ್

ದುರ್ಗ್: ರಾಜೇಂದ್ರ ಸಾಹು

ರಾಯಪುರ: ವಿಕಾಸ್ ಉಪಾಧ್ಯಾಯ

ಮಹಾಸಮುಂಡ್: ತಾಮಧ್ವಜ್ ಸಾಹು

ಕರ್ನಾಟಕ

ಬಿಜಾಪುರ (ಎಸ್‌ಸಿ): ಎಚ್‌ಆರ್‌ ಅಲಗೂರು

ಹಾವೇರಿ: ಆನಂದಸ್ವಾಮಿ ಗಡ್ಡದೇವರ ಮಠ

ಶಿವಮೊಗ್ಗ: ಗೀತಾ ಶಿವರಾಜಕುಮಾರ್

ಹಾಸನ: ಶ್ರೇಯಸ್ ಪಟೇಲ್

ತುಮಕೂರು: ಎಸ್‌.ಪಿ. ಮುದ್ದಹನುಮೇಗೌಡ

ಮಂಡ್ಯ: ವೆಂಕಟರಾಮೇಗೌಡ (ಸ್ಟಾರ್ ಚಂದ್ರು)

ಬೆಂಗಳೂರು ಗ್ರಾಮಾಂತರ: ಡಿ.ಕೆ.ಸುರೇಶ್

ಕೇರಳ

ಕಾಸರಗೋಡು: ರಾಜಮೋಹನ್ ಉನ್ನಿಥಾನ್

ಕಣ್ಣೂರು: ಕೆ ಸುಧಾಕರನ್

ವಡಕರ: ಶಾಫಿ ಪರಂಬಿಲ್

ವಯನಾಡ್: ರಾಹುಲ್ ಗಾಂಧಿ

ಕೋಝಿಕ್ಕೋಡ್: ಎಂಕೆ ರಾಘವನ್

ಪಾಲಕ್ಕಾಡ್: ವಿಕೆ ಶ್ರೀಕಂದನ್

ಆಲತ್ತೂರು (ಎಸ್‌ಸಿ): ರಮ್ಯಾ ಹರಿದಾಸ್

ತ್ರಿಶೂರ್: ಕೆ ಮುರಳೀಧರನ್

ಚಾಲಕುಡಿ: ಬೆನ್ನಿ ಬೆಹನಾನ್

ಎರ್ನಾಕುಲಂ: ಹೈಬಿ ಈಡನ್

ಇಡುಕ್ಕಿ: ಡೀನ್ ಕುರಿಯಕೋಸ್

ಆಲಪ್ಪುಳ: ಕೆ.ಸಿ.ವೇಣುಗೋಪಾಲ್

ಮಾವೇಲಿಕ್ಕರ (ಎಸ್‌ಸಿ): ಕೆ ಸುರೇಶ್

ಪತ್ತನಂತಿಟ್ಟ: ಆಂಟೊ ಆಂಟೋನಿ

ಅಟ್ಟಿಂಗಲ್: ಅಡೂರ್ ಪ್ರಕಾಶ್

ತಿರುವನಂತಪುರಂ: ಶಶಿ ತರೂರ್

ಲಕ್ಷದ್ವೀಪ

ಲಕ್ಷದ್ವೀಪ (ಎಸ್‌ಟಿ): ಮೊಹಮ್ಮದ್ ಹಮ್ದುಲ್ಲಾ ಸಯೀದ್

ಮೇಘಾಲಯ

ಶಿಲ್ಲಾಂಗ್ (ಎಸ್‌ಟಿ): ವಿನ್ಸೆಂಟ್ ಎಚ್ ಪಾಲಾ

ತುರಾ (ಎಸ್‌ಟಿ): ಸಲೆಂಗ್ ಎ ಸಂಗ್ಮಾ

ನಾಗಾಲ್ಯಾಂಡ್

ನಾಗಾಲ್ಯಾಂಡ್: ಎಸ್ ಸುಪೊಂಗ್ಮೆರೆನ್ ಜಮೀರ್

ಸಿಕ್ಕಿಂ

ಸಿಕ್ಕಿಂ: ಗೋಪಾಲ್ ಚೆಟ್ರಿ

ತೆಲಂಗಾಣ

ಜಹೀರಾಬಾದ್: ಸುರೇಶ್ ಕುಮಾರ್ ಶೆಟ್ಕಾರ್

ನಲ್ಗೊಂಡ: ರಘುವೀರ್ ಕುಂದೂರು

ಮಹೆಬೂಬನಗರ: ಚಲ್ಲಾ ವಂಶಿ ಚಂದ್ ರೆಡ್ಡಿ

ಮಹಬೂಬಾಬಾದ್ (ಎಸ್‌ಟಿ): ಬಲರಾಮ್ ನಾಯ್ಕ್ ಪೋರಿಕ

ತ್ರಿಪುರಾ

ತ್ರಿಪುರ ಪಶ್ಚಿಮ: ಆಶಿಶ್ ಕುಮಾರ್ ಸಹಾ

ಇದನ್ನೂ ಓದಿ; ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದವರಿಗೆ ಕಾಲಿನಿಂದ ಒದ್ದ ಪೊಲೀಸ್ ಅಧಿಕಾರಿ; ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...