Homeಮುಖಪುಟಜಮ್ಮು ಕಾಶ್ಮೀರಕ್ಕೆ ಮೋದಿ ಭೇಟಿ ವೇಳೆ ವಿದೇಶಿ ಮಾಧ್ಯಮಗಳ ಪತ್ರಕರ್ತರನ್ನು ಹೊರಗಿಟ್ಟ ಸರ್ಕಾರ!

ಜಮ್ಮು ಕಾಶ್ಮೀರಕ್ಕೆ ಮೋದಿ ಭೇಟಿ ವೇಳೆ ವಿದೇಶಿ ಮಾಧ್ಯಮಗಳ ಪತ್ರಕರ್ತರನ್ನು ಹೊರಗಿಟ್ಟ ಸರ್ಕಾರ!

ವಿದೇಶಿ ಮಾಧ್ಯಮಗಳಿಗಾಗಿ ಕೆಲಸ ಮಾಡುತ್ತಿರುವ ಭಾರತೀಯರಿಗೂ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಗುರುವಾರ (ಮಾ.7) ನಡೆಸಿದ ರ್‍ಯಾಲಿಯ ಕುರಿತು ವರದಿ ಮಾಡಲು ವಿದೇಶಿ ಪತ್ರಕರ್ತರಿಗೆ ಅವಕಾಶ ನೀಡಿರಲಿಲ್ಲ ಎಂದು ಸರ್ಕಾರ ಮತ್ತು ಮಾಧ್ಯಮ ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನ 370ನೇ ವಿಧಿಯ ರದ್ದತಿಯ ಬಳಿಕ ಪ್ರಧಾನಿ ಮೋದಿ ಗುರುವಾರ ಮೊದಲ ಬಾರಿಗೆ ಶ್ರೀನಗರಕ್ಕೆ ಭೇಟಿ ನೀಡಿದ್ದರು. ಆಗಸ್ಟ್ 5, 2019ರಂದು 370ನೇ ವಿಧಿಯನ್ನು ರದ್ದುಗೊಳಿಸಲಾಗಿತ್ತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್) ಯು ಮೋದಿ ಕಾರ್ಯಕ್ರಮದ ವರದಿ ಮಾಡಲು ಪಾಸ್‌ಗಳಿಗಾಗಿ ಪತ್ರಕರ್ತರಿಂದ 160 ಅರ್ಜಿಗಳನ್ನು

ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಗುರುವಾರ(ಮಾ.7) ನಡೆಸಿದ ರ್‍ಯಾಲಿಯ ಕುರಿತು ವರದಿ ಮಾಡಲು ವಿದೇಶಿ ಪತ್ರಕರ್ತರಿಗೆ ಅವಕಾಶ ನೀಡಿರಲಿಲ್ಲ ಎಂದು ಸರ್ಕಾರ ಮತ್ತು ಮಾಧ್ಯಮ ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನ 370ನೇ ವಿಧಿಯ ರದ್ದತಿಯ ಬಳಿಕ ಪ್ರಧಾನಿ ಮೋದಿ ಗುರುವಾರ ಮೊದಲ ಬಾರಿಗೆ ಶ್ರೀನಗರಕ್ಕೆ ಭೇಟಿ ನೀಡಿದ್ದರು. ಆಗಸ್ಟ್ 5, 2019 ರಂದು 370ನೇ ವಿಧಿಯನ್ನು ರದ್ದುಗೊಳಿಸಲಾಗಿತ್ತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್) ಯು ಕಾರ್ಯಕ್ರಮವನ್ನು ವರದಿ ಮಾಡಲು ಪಾಸ್‌ಗಳಿಗಾಗಿ ಪತ್ರಕರ್ತರಿಂದ 160 ಅರ್ಜಿಗಳನ್ನು ರ್‍ಯಾಲಿಗೆ ಒಂದು ವಾರ ಮೊದಲು ಸ್ವೀಕರಿಸಿತ್ತು. ಇವುಗಳಲ್ಲಿ 127 ಅನ್ನು ಅನುಮೋದಿಸಲಾಗಿದೆ. ಪಾಸ್‌ಗಳನ್ನು ನಿರಾಕರಿಸಿದವರಲ್ಲಿ ಎಪಿ, ಎಎಫ್‌ಪಿ ಮತ್ತು ರಷ್ಯಾದ ಸುದ್ದಿ ಸಂಸ್ಥೆ ಸ್ಪುಟ್ನಿಕ್‌ನಂತಹ ಮಾಧ್ಯಮಗಳು ಸೇರಿವೆ ಎಂದು ನ್ಯೂಸ್‌ ಮಿನಿಟ್ ವರದಿ ತಿಳಿಸಿದೆ.

“ಅರ್ಜಿಗಳನ್ನು ಸ್ವೀಕರಿಸಿದ ನಂತರ, ಡಿಐಪಿಆರ್ ಪರಿಶೀಲನೆಗಾಗಿ ಪೊಲೀಸ್ ಇಲಾಖೆಯೊಂದಿಗೆ ವಿವರಗಳನ್ನು ಹಂಚಿಕೊಂಡಿದೆ. ಈ ವೇಳೆ 160 ರಲ್ಲಿ 127 ಪತ್ರಕರ್ತರಿಗೆ ಅಥವಾ ಮಾಧ್ಯಮಗಳಿಗೆ ಅವಕಾಶ ನೀಡಲಾಗಿದೆ. ಯಾವುದೇ ವಿದೇಶಿ ಮಾಧ್ಯಮಕ್ಕೆ ಪಾಸ್‌ ನೀಡಲಾಗಿಲ್ಲ” ಎಂದು ಜಮ್ಮು ಕಾಶ್ಮೀರ ಆಡಳಿತದ ಮೂಲವೊಂದು ತಿಳಿಸಿರುವುದಾಗಿ ವರದಿ ಹೇಳಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಜಮ್ಮು ಕಾಶ್ಮೀರ ಡಿಐಪಿಆರ್ ನಿರ್ದೇಶಕ ಜತಿನ್ ಕಿಶೋರ್, ವಿದೇಶಿ ಮಾಧ್ಯಮಗಳಿಗೆ ಅನುಮತಿ ನಿರಾಕರಿಸಿರುವ ಬಗ್ಗೆ ಖಚಿತಡಿಸಿಲ್ಲ. ಆದರೆ, ಇದು ಸರಿಯಾದ ಕ್ರಮವಲ್ಲ. ನಮಗೆ ಪಿಐಬಿಯಿಂದ ಪಟ್ಟಿ ಬಂದಿತ್ತು ಎಂದು ಹೇಳಿದ್ದಾರೆ.

ಮತ್ತೊಂದೆಡೆ ಪಿಐಬಿಯ ಮಹಾನಿರ್ದೇಶಕ ಮನೀಶ್ ದೇಸಾಯಿ, ಶ್ರೀನಗರ ಕಾರ್ಯಕ್ರಮಕ್ಕೆ ಅನುಮತಿ ನೀಡಲಾದ ಮಾಧ್ಯಮಗಳ ಪಟ್ಟಿ ತಯಾರಿಕೆಯಲ್ಲಿ ನಾವು ತೊಡಗಿಸಿಕೊಂಡಿಲ್ಲ ಎಂದು ಜಾರಿಕೊಂಡಿದ್ದಾರೆ. ಸ್ಥಳೀಯ ಮಾಧ್ಯಮವರನ್ನು ಸಂಬಂಧಪಟ್ಟ ರಾಜ್ಯವು ನೋಡಿಕೊಳ್ಳುತ್ತದೆ ಎಂದು ಹೇಳಿದ್ದಾರೆ.

ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಭಾಗವಹಿಸುವ ಕಾರ್ಯಕ್ರಮಗಳಿಗೆ ಪಾಸ್‌ಗಳನ್ನು ಡಿಐಪಿಆರ್ ನೀಡುತ್ತದೆ ಎಂದು ಪತ್ರಕರ್ತರು ಹೇಳಿಕೊಂಡಿದ್ದಾರೆ.

ಗುರುವಾರ ಶ್ರೀನಗರದ ಬಕ್ಷಿ ಕ್ರೀಡಾಂಗಣದಲ್ಲಿ ‘ವಿಕಸಿತ ಭಾರತ, ವಿಕಸಿತ ಜಮ್ಮು ಕಾಶ್ಮೀರ’ ಎಂಬ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಈ ವೇಳೆ 6,400 ಕೋಟಿ ರೂಪಾಯಿಗಳ ಕೃಷಿ ಮತ್ತು ಪ್ರವಾಸೋದ್ಯಮ ಯೋಜನೆಗಳಿಗೆ ಅವರು ಚಾಲನೆ ನೀಡಿದ್ದಾರೆ. ಆರ್ಟಿಕಲ್ 370ರ ರದ್ದತಿಯ ನಂತರ ಜಮ್ಮು ಕಾಶ್ಮೀರ “ಮುಕ್ತವಾಗಿ ಉಸಿರಾಡುತ್ತಿದೆ” ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಪತ್ರಕರ್ತರಾಗಿ ಕೆಲಸ ಮಾಡುವ ವಿದೇಶಿ ಪ್ರಜೆಗಳು ಜಮ್ಮು ಕಾಶ್ಮೀರ, ಈಶಾನ್ಯ ರಾಜ್ಯಗಳು ಸೇರಿದಂತೆ ನಿರ್ಬಂಧಿತ ಅಥವಾ ಸಂರಕ್ಷಿತ ಪ್ರದೇಶಗಳಿಗೆ ಭೇಟಿ ನೀಡುವ ಎಂಟು ವಾರಗಳ ಮೊದಲು ಅನುಮತಿಗಾಗಿ ಅರ್ಜಿ ಸಲ್ಲಿಸಬೇಕು. ವಿದೇಶಿ ಮಾಧ್ಯಮಗಳಿಗಾಗಿ ಕೆಲಸ ಮಾಡುವ ಭಾರತೀಯ ಪ್ರಜೆಗಳಿಗೆ ಇಂತಹ ಯಾವುದೇ ನಿಯಮ ಇಲ್ಲ.

ಆದರೆ, ಮೋದಿ ಕಾರ್ಯಕ್ರಮಕ್ಕೆ ವಿದೇಶಿ ಮಾಧ್ಯಮಗಳಿಗಾಗಿ ಕೆಲಸ ಮಾಡುತ್ತಿರುವ ಭಾರತೀಯರಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

“ಪ್ರಧಾನಿ ಭಾಗವಹಿಸುವಂತಹ ಕಾರ್ಯಕ್ರಮಗಳಿಗೆ ಡಿಐಪಿಆರ್ ಮಾನ್ಯತೆ ಪಡೆದ ಪತ್ರಕರ್ತರ ವಿವರಗಳನ್ನು ಹುಡುಕುತ್ತದೆ. ಈ ಬಾರಿಯೂ ಅದೇ ನಡೆದಿದೆ. ಆದರೆ ಅವರು ವಿದೇಶಿ ಮಾಧ್ಯಮಗಳಲ್ಲಿ ಕೆಲಸ ಮಾಡುವವರನ್ನು ಹೊರತುಪಡಿಸಿ ಎಲ್ಲರಿಗೂ ಪಾಸ್ ನೀಡಿದ್ದಾರೆ” ಎಂದು ಅನುಮತಿ ನಿರಾಕರಿಸಲ್ಪಟ್ಟ ಪತ್ರಕರ್ತರೊಬ್ಬರು ಹೇಳಿರುವುದಾಗಿ ನ್ಯೂಸ್ ಮಿನಿಟ್ ತಿಳಿಸಿದೆ.

ಬುಧವಾರ, ತೆಲಂಗಾಣದಲ್ಲಿ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ತಮ್ಮ ಸಾರ್ವಜನಿಕ ಸೇವೆಯ ಬಗ್ಗೆ ಮಾಧ್ಯಮಗಳಲ್ಲಿ ಅಸಮರ್ಪಕ ಪ್ರಸಾರ ಮಾಡಲಾಗ್ತಿದೆ ಎಂದು ಹೇಳಿದ್ದರು.

ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದುವರೆಗೆ ಒಂದು ಬಾರಿಯೂ ಸರಿಯಾದ ಪತ್ರಿಕಾಗೋಷ್ಠಿಯನ್ನು ಅವರು ನಡೆಸಿಲ್ಲ. 2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಒಂದು ಬಾರಿ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು. ಆದರೆ, ಅಲ್ಲಿ ಪ್ರಶ್ನೆಗಳನ್ನು ಕೇಳಲು ಅವಕಾಶವೇ ಇರಲಿಲ್ಲ.

ಇತ್ತೀಚಿನ ವರದಿಗಳ ಪ್ರಕಾರ, ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತವು 11ನೇ ಸ್ಥಾನದಿಂದ 161 ನೇ ಸ್ಥಾನಕ್ಕೆ ಕುಸಿದಿದೆ.

ಇದನ್ನೂ ಓದಿ : ಲೋಕಸಭಾ ಚುನಾವಣೆ-2024: ಕರ್ನಾಟಕದ ಏಳು ಸ್ಥಾನ ಸೇರಿದಂತೆ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...