Homeಮುಖಪುಟಜಮ್ಮು ಕಾಶ್ಮೀರಕ್ಕೆ ಮೋದಿ ಭೇಟಿ ವೇಳೆ ವಿದೇಶಿ ಮಾಧ್ಯಮಗಳ ಪತ್ರಕರ್ತರನ್ನು ಹೊರಗಿಟ್ಟ ಸರ್ಕಾರ!

ಜಮ್ಮು ಕಾಶ್ಮೀರಕ್ಕೆ ಮೋದಿ ಭೇಟಿ ವೇಳೆ ವಿದೇಶಿ ಮಾಧ್ಯಮಗಳ ಪತ್ರಕರ್ತರನ್ನು ಹೊರಗಿಟ್ಟ ಸರ್ಕಾರ!

ವಿದೇಶಿ ಮಾಧ್ಯಮಗಳಿಗಾಗಿ ಕೆಲಸ ಮಾಡುತ್ತಿರುವ ಭಾರತೀಯರಿಗೂ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಗುರುವಾರ (ಮಾ.7) ನಡೆಸಿದ ರ್‍ಯಾಲಿಯ ಕುರಿತು ವರದಿ ಮಾಡಲು ವಿದೇಶಿ ಪತ್ರಕರ್ತರಿಗೆ ಅವಕಾಶ ನೀಡಿರಲಿಲ್ಲ ಎಂದು ಸರ್ಕಾರ ಮತ್ತು ಮಾಧ್ಯಮ ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನ 370ನೇ ವಿಧಿಯ ರದ್ದತಿಯ ಬಳಿಕ ಪ್ರಧಾನಿ ಮೋದಿ ಗುರುವಾರ ಮೊದಲ ಬಾರಿಗೆ ಶ್ರೀನಗರಕ್ಕೆ ಭೇಟಿ ನೀಡಿದ್ದರು. ಆಗಸ್ಟ್ 5, 2019ರಂದು 370ನೇ ವಿಧಿಯನ್ನು ರದ್ದುಗೊಳಿಸಲಾಗಿತ್ತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್) ಯು ಮೋದಿ ಕಾರ್ಯಕ್ರಮದ ವರದಿ ಮಾಡಲು ಪಾಸ್‌ಗಳಿಗಾಗಿ ಪತ್ರಕರ್ತರಿಂದ 160 ಅರ್ಜಿಗಳನ್ನು

ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಗುರುವಾರ(ಮಾ.7) ನಡೆಸಿದ ರ್‍ಯಾಲಿಯ ಕುರಿತು ವರದಿ ಮಾಡಲು ವಿದೇಶಿ ಪತ್ರಕರ್ತರಿಗೆ ಅವಕಾಶ ನೀಡಿರಲಿಲ್ಲ ಎಂದು ಸರ್ಕಾರ ಮತ್ತು ಮಾಧ್ಯಮ ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನ 370ನೇ ವಿಧಿಯ ರದ್ದತಿಯ ಬಳಿಕ ಪ್ರಧಾನಿ ಮೋದಿ ಗುರುವಾರ ಮೊದಲ ಬಾರಿಗೆ ಶ್ರೀನಗರಕ್ಕೆ ಭೇಟಿ ನೀಡಿದ್ದರು. ಆಗಸ್ಟ್ 5, 2019 ರಂದು 370ನೇ ವಿಧಿಯನ್ನು ರದ್ದುಗೊಳಿಸಲಾಗಿತ್ತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್) ಯು ಕಾರ್ಯಕ್ರಮವನ್ನು ವರದಿ ಮಾಡಲು ಪಾಸ್‌ಗಳಿಗಾಗಿ ಪತ್ರಕರ್ತರಿಂದ 160 ಅರ್ಜಿಗಳನ್ನು ರ್‍ಯಾಲಿಗೆ ಒಂದು ವಾರ ಮೊದಲು ಸ್ವೀಕರಿಸಿತ್ತು. ಇವುಗಳಲ್ಲಿ 127 ಅನ್ನು ಅನುಮೋದಿಸಲಾಗಿದೆ. ಪಾಸ್‌ಗಳನ್ನು ನಿರಾಕರಿಸಿದವರಲ್ಲಿ ಎಪಿ, ಎಎಫ್‌ಪಿ ಮತ್ತು ರಷ್ಯಾದ ಸುದ್ದಿ ಸಂಸ್ಥೆ ಸ್ಪುಟ್ನಿಕ್‌ನಂತಹ ಮಾಧ್ಯಮಗಳು ಸೇರಿವೆ ಎಂದು ನ್ಯೂಸ್‌ ಮಿನಿಟ್ ವರದಿ ತಿಳಿಸಿದೆ.

“ಅರ್ಜಿಗಳನ್ನು ಸ್ವೀಕರಿಸಿದ ನಂತರ, ಡಿಐಪಿಆರ್ ಪರಿಶೀಲನೆಗಾಗಿ ಪೊಲೀಸ್ ಇಲಾಖೆಯೊಂದಿಗೆ ವಿವರಗಳನ್ನು ಹಂಚಿಕೊಂಡಿದೆ. ಈ ವೇಳೆ 160 ರಲ್ಲಿ 127 ಪತ್ರಕರ್ತರಿಗೆ ಅಥವಾ ಮಾಧ್ಯಮಗಳಿಗೆ ಅವಕಾಶ ನೀಡಲಾಗಿದೆ. ಯಾವುದೇ ವಿದೇಶಿ ಮಾಧ್ಯಮಕ್ಕೆ ಪಾಸ್‌ ನೀಡಲಾಗಿಲ್ಲ” ಎಂದು ಜಮ್ಮು ಕಾಶ್ಮೀರ ಆಡಳಿತದ ಮೂಲವೊಂದು ತಿಳಿಸಿರುವುದಾಗಿ ವರದಿ ಹೇಳಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಜಮ್ಮು ಕಾಶ್ಮೀರ ಡಿಐಪಿಆರ್ ನಿರ್ದೇಶಕ ಜತಿನ್ ಕಿಶೋರ್, ವಿದೇಶಿ ಮಾಧ್ಯಮಗಳಿಗೆ ಅನುಮತಿ ನಿರಾಕರಿಸಿರುವ ಬಗ್ಗೆ ಖಚಿತಡಿಸಿಲ್ಲ. ಆದರೆ, ಇದು ಸರಿಯಾದ ಕ್ರಮವಲ್ಲ. ನಮಗೆ ಪಿಐಬಿಯಿಂದ ಪಟ್ಟಿ ಬಂದಿತ್ತು ಎಂದು ಹೇಳಿದ್ದಾರೆ.

ಮತ್ತೊಂದೆಡೆ ಪಿಐಬಿಯ ಮಹಾನಿರ್ದೇಶಕ ಮನೀಶ್ ದೇಸಾಯಿ, ಶ್ರೀನಗರ ಕಾರ್ಯಕ್ರಮಕ್ಕೆ ಅನುಮತಿ ನೀಡಲಾದ ಮಾಧ್ಯಮಗಳ ಪಟ್ಟಿ ತಯಾರಿಕೆಯಲ್ಲಿ ನಾವು ತೊಡಗಿಸಿಕೊಂಡಿಲ್ಲ ಎಂದು ಜಾರಿಕೊಂಡಿದ್ದಾರೆ. ಸ್ಥಳೀಯ ಮಾಧ್ಯಮವರನ್ನು ಸಂಬಂಧಪಟ್ಟ ರಾಜ್ಯವು ನೋಡಿಕೊಳ್ಳುತ್ತದೆ ಎಂದು ಹೇಳಿದ್ದಾರೆ.

ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಭಾಗವಹಿಸುವ ಕಾರ್ಯಕ್ರಮಗಳಿಗೆ ಪಾಸ್‌ಗಳನ್ನು ಡಿಐಪಿಆರ್ ನೀಡುತ್ತದೆ ಎಂದು ಪತ್ರಕರ್ತರು ಹೇಳಿಕೊಂಡಿದ್ದಾರೆ.

ಗುರುವಾರ ಶ್ರೀನಗರದ ಬಕ್ಷಿ ಕ್ರೀಡಾಂಗಣದಲ್ಲಿ ‘ವಿಕಸಿತ ಭಾರತ, ವಿಕಸಿತ ಜಮ್ಮು ಕಾಶ್ಮೀರ’ ಎಂಬ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಈ ವೇಳೆ 6,400 ಕೋಟಿ ರೂಪಾಯಿಗಳ ಕೃಷಿ ಮತ್ತು ಪ್ರವಾಸೋದ್ಯಮ ಯೋಜನೆಗಳಿಗೆ ಅವರು ಚಾಲನೆ ನೀಡಿದ್ದಾರೆ. ಆರ್ಟಿಕಲ್ 370ರ ರದ್ದತಿಯ ನಂತರ ಜಮ್ಮು ಕಾಶ್ಮೀರ “ಮುಕ್ತವಾಗಿ ಉಸಿರಾಡುತ್ತಿದೆ” ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಪತ್ರಕರ್ತರಾಗಿ ಕೆಲಸ ಮಾಡುವ ವಿದೇಶಿ ಪ್ರಜೆಗಳು ಜಮ್ಮು ಕಾಶ್ಮೀರ, ಈಶಾನ್ಯ ರಾಜ್ಯಗಳು ಸೇರಿದಂತೆ ನಿರ್ಬಂಧಿತ ಅಥವಾ ಸಂರಕ್ಷಿತ ಪ್ರದೇಶಗಳಿಗೆ ಭೇಟಿ ನೀಡುವ ಎಂಟು ವಾರಗಳ ಮೊದಲು ಅನುಮತಿಗಾಗಿ ಅರ್ಜಿ ಸಲ್ಲಿಸಬೇಕು. ವಿದೇಶಿ ಮಾಧ್ಯಮಗಳಿಗಾಗಿ ಕೆಲಸ ಮಾಡುವ ಭಾರತೀಯ ಪ್ರಜೆಗಳಿಗೆ ಇಂತಹ ಯಾವುದೇ ನಿಯಮ ಇಲ್ಲ.

ಆದರೆ, ಮೋದಿ ಕಾರ್ಯಕ್ರಮಕ್ಕೆ ವಿದೇಶಿ ಮಾಧ್ಯಮಗಳಿಗಾಗಿ ಕೆಲಸ ಮಾಡುತ್ತಿರುವ ಭಾರತೀಯರಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

“ಪ್ರಧಾನಿ ಭಾಗವಹಿಸುವಂತಹ ಕಾರ್ಯಕ್ರಮಗಳಿಗೆ ಡಿಐಪಿಆರ್ ಮಾನ್ಯತೆ ಪಡೆದ ಪತ್ರಕರ್ತರ ವಿವರಗಳನ್ನು ಹುಡುಕುತ್ತದೆ. ಈ ಬಾರಿಯೂ ಅದೇ ನಡೆದಿದೆ. ಆದರೆ ಅವರು ವಿದೇಶಿ ಮಾಧ್ಯಮಗಳಲ್ಲಿ ಕೆಲಸ ಮಾಡುವವರನ್ನು ಹೊರತುಪಡಿಸಿ ಎಲ್ಲರಿಗೂ ಪಾಸ್ ನೀಡಿದ್ದಾರೆ” ಎಂದು ಅನುಮತಿ ನಿರಾಕರಿಸಲ್ಪಟ್ಟ ಪತ್ರಕರ್ತರೊಬ್ಬರು ಹೇಳಿರುವುದಾಗಿ ನ್ಯೂಸ್ ಮಿನಿಟ್ ತಿಳಿಸಿದೆ.

ಬುಧವಾರ, ತೆಲಂಗಾಣದಲ್ಲಿ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ತಮ್ಮ ಸಾರ್ವಜನಿಕ ಸೇವೆಯ ಬಗ್ಗೆ ಮಾಧ್ಯಮಗಳಲ್ಲಿ ಅಸಮರ್ಪಕ ಪ್ರಸಾರ ಮಾಡಲಾಗ್ತಿದೆ ಎಂದು ಹೇಳಿದ್ದರು.

ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದುವರೆಗೆ ಒಂದು ಬಾರಿಯೂ ಸರಿಯಾದ ಪತ್ರಿಕಾಗೋಷ್ಠಿಯನ್ನು ಅವರು ನಡೆಸಿಲ್ಲ. 2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಒಂದು ಬಾರಿ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು. ಆದರೆ, ಅಲ್ಲಿ ಪ್ರಶ್ನೆಗಳನ್ನು ಕೇಳಲು ಅವಕಾಶವೇ ಇರಲಿಲ್ಲ.

ಇತ್ತೀಚಿನ ವರದಿಗಳ ಪ್ರಕಾರ, ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತವು 11ನೇ ಸ್ಥಾನದಿಂದ 161 ನೇ ಸ್ಥಾನಕ್ಕೆ ಕುಸಿದಿದೆ.

ಇದನ್ನೂ ಓದಿ : ಲೋಕಸಭಾ ಚುನಾವಣೆ-2024: ಕರ್ನಾಟಕದ ಏಳು ಸ್ಥಾನ ಸೇರಿದಂತೆ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...