Homeಮುಖಪುಟಗಾಂಧಿನಾ..ಗೋಡ್ಸೆನಾ? ಉತ್ತರಿಸಲು ಸಮಯ ಬೇಕು ಎಂದ ಇತ್ತೀಚೆಗೆ ಬಿಜೆಪಿ ಸೇರಿದ ಮಾಜಿ ನ್ಯಾಯಾಧೀಶ!

ಗಾಂಧಿನಾ..ಗೋಡ್ಸೆನಾ? ಉತ್ತರಿಸಲು ಸಮಯ ಬೇಕು ಎಂದ ಇತ್ತೀಚೆಗೆ ಬಿಜೆಪಿ ಸೇರಿದ ಮಾಜಿ ನ್ಯಾಯಾಧೀಶ!

- Advertisement -
- Advertisement -

ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶ ಸ್ಥಾನಕ್ಕೆ ರಾಜೀನಾಮೆ ನೀಡಿ ಗುರುವಾರ (ಮಾ.8) ಬಿಜೆಪಿ ಸೇರಿರುವ ಅಭಿಜಿತ್ ಗಂಗೋಪಾಧ್ಯಾಯ ಅವರು ಗಾಂಧಿ ಮತ್ತು ಗೋಡ್ಸೆ ಕುರಿತು ತಮ್ಮ ನಿಲುವು ಪ್ರಕಟಿಸಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ.

ಬಂಗಾಳಿ ಟಿವಿ ವಾಹಿನಿಯೊಂದರ ಸಂದರ್ಶನಲ್ಲಿ ಅಭಿಜಿತ್ ಅವರಿಗೆ ನಿರೂಪಕ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಆ ಪ್ರಶ್ನೆಗಳಿಗೆ ಅಭಿಜಿತ್ ಅವರು ವೇಗವಾಗಿ ಉತ್ತರಿಸಬೇಕಿತ್ತು. ಹಾಗೆಯೇ ಅವರು ಎಲ್ಲಾ ಪ್ರಶ್ನೆಗಳಿಗೆ ಫಟಾ ಫಟ್ ಉತ್ತರಿಸಿದ್ದಾರೆ. ಆದರೆ, ನಿರೂಪಕ ಗಾಂಧಿನಾ..ಗೋಡ್ಸೆನಾ? ಎಂದು ಕೇಳಿದಾಗ, “ಈ ಪ್ರಶ್ನೆಗೆ ನಾನು ಈಗ ಉತ್ತರಿಸುವುದಿಲ್ಲ, ನನಗೆ ಸಮಯ ಬೇಕು” ಎಂದು ಅಭಿಜಿತ್ ಅವರು ಪ್ರತಿಕ್ರಿಯಿಸಿದ್ದಾರೆ.

ಅಭಿಜಿತ್ ಅವರ ಕುಟುಂಬ ಸುಧೀರ್ಘ ಸಮಯದಿಂದ ಎಡಪಕ್ಷಗಳ ಜೊತೆಗೆ ಸಂಪರ್ಕ ಹೊಂದಿರುವ ಬಗ್ಗೆ ಕೇಳಿದ ಪ್ರಶ್ನೆಗೆ, “ನಾನು ಉದ್ಯೋಗ ಕೇಳಿದೆ. ಆದರೆ, ಇತರರಿಗೆ ಸಿಕ್ಕಿತು, ನನಗೆ ಸಿಕ್ಕಿಲ್ಲ. ಆಗ ನಾನು ಸಿಪಿಎಂ ಪಕ್ಷವನ್ನು ಸ್ಲೋಗನ್ಸ್ ಅಂಡ್ ಡೋಗ್ಮಾಸ್ ಎಂದು ಕರೆದೆ” ಎಂದಿದ್ದಾರೆ.

ಅಭಿಜಿತ್ ಗಂಗೋಪಾಧ್ಯಾಯ ಅವರ ಈ ಎರಡು ಹೇಳಿಕೆಗಳು ಭಾರೀ ಸಂಚಲನಕ್ಕೆ ಕಾರಣವಾಗಿದೆ. ಹೈಕೋರ್ಟ್‌ ನ್ಯಾಯಧೀಶ ಹುದ್ದೆಯಿಂದ ಕೆಳಗಿಳಿದ ನಾಲ್ಕೇ ದಿನಕ್ಕೆ ಗಾಂಧಿನಾ..ಗೋಡ್ಸೆನಾ? ಎಂದು ಕೇಳಿದಾಗ, ನನಗೆ ಉತ್ತರಿಸಲು ಸಮಯ ಬೇಕು ಎಂದಿರುವುದು ಜನರ ಆಶ್ಚರ್ಯಕ್ಕೆ ಕಾರಣವಾಗಿದೆ. ಅಭಿಜಿತ್ ಅವರ ಹೇಳಿಕೆಗೆ ಟಿಎಂಸಿ ನಾಯಕರು ಕಿಡಿಕಾರಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಟಿಎಂಸಿ ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ, “ನಾಲ್ಕು ದಿನಗಳ ಹಿಂದೆಯಷ್ಟೇ ಹೈಕೋರ್ಟ್ ನ್ಯಾಯಾಧೀಶರಾಗಿದ್ದ ವ್ಯಕ್ತಿಗೆ ಗಾಂಧಿ ಮತ್ತು ಗೋಡ್ಸೆ ನಡುವೆ ನಿರ್ಧರಿಸಲು ಸಾಧ್ಯವಾಗುತ್ತಿಲ್ಲ. ಈ ಮನುಷ್ಯ ನ್ಯಾಯಾಲಯದಲ್ಲಿ ತೀರ್ಪುಗಳನ್ನು ಹೇಗೆ ನೀಡಿರಬಹುದು? ಅವರ ಮನಸ್ಥಿತಿ ಹೇಗಿತ್ತು ಎಂದು ಊಹಿಸಿ” ಎಂದಿದ್ದಾರೆ.

ಅಭಿಜಿತ್ ಗಂಗೋಪಾಧ್ಯಾಯ ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ತುಮುಲುಕ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆಯಿದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ಶಾಸಕರಾಗಿರುವ ನಂದಿಗ್ರಾಮ ವಿಧಾನಸಭಾ ಕ್ಷೇತ್ರ ತುಮುಲುಕ್ ಲೋಕಸಭಾ ಕ್ಷೇತ್ರದೊಳಗೆ ಬರುತ್ತದೆ. ತುಮುಲುಕ್ ಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚಿನ ಜನ ಬೆಂಬಲವಿದೆ.

ಇದನ್ನೂ ಓದಿ : ಹೈಕೋರ್ಟ್‌ ನ್ಯಾಯಾಧೀಶರು ಬಿಜೆಪಿ ಸೇರ್ಪಡೆ: ನ್ಯಾಯಾಂಗದ ಸ್ವಾತಂತ್ರ್ಯದ ಪ್ರಶ್ನೆ ಉದ್ಭವಿಸಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...