Homeಮುಖಪುಟಪ್ರಜಾಪ್ರಭುತ್ವದಿಂದ ಚುನಾವಣಾ ನಿರಂಕುಶಾಧಿಕಾರದತ್ತ ಭಾರತ: ವಿ-ಡೆಮ್ ವರದಿ

ಪ್ರಜಾಪ್ರಭುತ್ವದಿಂದ ಚುನಾವಣಾ ನಿರಂಕುಶಾಧಿಕಾರದತ್ತ ಭಾರತ: ವಿ-ಡೆಮ್ ವರದಿ

- Advertisement -
- Advertisement -

ಇತ್ತೀಚಿನ ವರ್ಷಗಳಲ್ಲಿ ಭಾರತವು ವಿಶ್ವದ ಅತ್ಯಂತ ‘ಕೆಟ್ಟ ನಿರಂಕುಶವಾದಿ’ಗಳಲ್ಲಿ ಒಂದಾಗಿದೆ ಎಂದು ಸ್ವೀಡನ್ ಮೂಲದ ವೆರೈಟೀಸ್ ಆಫ್ ಡೆಮಾಕ್ರಸಿ (ವಿ-ಡೆಮ್) ಇನ್‌ಸ್ಟಿಟ್ಯೂಟ್ ಗುರುವಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ.

ವಿ-ಡೆಮ್ ವಿವಿಧ ದೇಶಗಳ ‘ಪ್ರಜಾಪ್ರಭುತ್ವ ಮತ್ತು ನಿರಂಕುಶಾಧಿಕಾರ’ವನ್ನು ‘ಉದಾರ ಪ್ರಜಾಪ್ರಭುತ್ವ, ಚುನಾವಣಾ ಪ್ರಜಾಪ್ರಭುತ್ವ, ಚುನಾವಣಾ ನಿರಂಕುಶಪ್ರಭುತ್ವ ಮತ್ತು ಮುಚ್ಚಿದ ನಿರಂಕುಶಪ್ರಭುತ್ವ’ ಎಂಬ ನಾಲ್ಕು ವಿಭಾಗಗಳಾಗಿ ವರ್ಗೀಕರಿಸಿ ಅಧ್ಯಯನ ನಡೆಸಿದೆ. ಈ ಮೂಲಕ ದೇಶಗಳು ಯಾವ ಕಡೆ ವಾಲುತ್ತಿದೆ ಎಂದು ಅಂದಾಜಿಸಿದೆ.

“ಅಭಿವ್ಯಕ್ತಿ ಮತ್ತು ಸಂಘಟನಾ ಸ್ವಾತಂತ್ರ್ಯವಿಲ್ಲದ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳು ನಡೆಯದ ಕೇವಲ ಕಾರ್ಯಾಂಗಕ್ಕಾಗಿ ಬಹುಪಕ್ಷೀಯ ಚುನಾವಣೆಗಳು ಅಸ್ತಿತ್ವದಲ್ಲಿರುವುದನ್ನು ‘ಚುನಾವಣಾ ನಿರಂಕುಶಾಧಿಕಾರ’ ಎಂದು ವಿ-ಡೆಮ್ ವ್ಯಾಖ್ಯಾನಿಸಿದೆ.

ನಿರಂಕುಶಾಧಿಕಾರವು ಜಾಗತಿಕ ಮಟ್ಟದಲ್ಲಿ ಏರಿಕೆಯಾಗಿದ್ದು, ವಿಶ್ವದ ಶೇ. 35ರಷ್ಟು ಜನಸಂಖ್ಯೆಯನ್ನು ಹೊಂದಿರುವ 42 ದೇಶಗಳು ಹೊಸದಾಗಿ ಈ ಪ್ರವೃತ್ತಿಯನ್ನು ಅನುಭವಿಸುತ್ತಿವೆ. ಏರಿಕೆಯಾಗುತ್ತಿರುವ ನಿರಂಕುಶಾಧಿಕಾರ ವಿದ್ಯಮಾನಕ್ಕೆ ಜಗತ್ತಿನ ಜನಸಂಖ್ಯೆಯ ಪೈಕಿ ಶೇ. 18ರಷ್ಟು ಜನಸಂಖ್ಯೆ ಹೊಂದಿರುವ ಭಾರತವು ಗಮನಾರ್ಹ ಕೊಡುಗೆ ನೀಡಿರುವುದು ವಿ-ಡೆಮ್ ವರದಿಯಲ್ಲಿ ಬೆಳಕಿಗೆ ಬಂದಿದೆ. ಈ ಹಿಂದೆ ಪ್ರಜಾಪ್ರಭುತ್ವ ದೇಶ ಎಂದು ಗುರುತಿಸಿಕೊಂಡಿದ್ದ ಭಾರತವು 2018ರಲ್ಲಿ ಚುನಾವಣಾ ನಿರಂಕುಶಾಧಿಕಾರವಾಗಿ ರೂಪಾಂತರಗೊಂಡಿದೆ ಹಾಗೂ 2023ರ ಕೊನೆಗೂ ಈ ಪ್ರವೃತ್ತಿ ಮುಂದುವರಿದಿದೆ ಎಂಬುದರತ್ತ ವರದಿಯು ಬೊಟ್ಟು ಮಾಡಿದೆ.

ಭಾರತದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಟೀಕಾಕಾರರ ಬಾಯಿ ಮುಚ್ಚಿಸಲು ದೇಶದ್ರೋಹ, ಮಾನನಷ್ಟ ಮತ್ತು ಭಯೋತ್ಪಾದನೆ ನಿಗ್ರಹದಂತಹ ಕಾನೂನುಗಳನ್ನು ಬಳಸಿದೆ ವರದಿ ತಿಳಿಸಿದೆ.

ಬಿಜೆಪಿ ಸರ್ಕಾರವು 2019ರಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಗೆ ತಿದ್ದುಪಡಿ ತರುವ ಮೂಲಕ ‘ಜಾತ್ಯತೀತತೆಯ ಸಂವಿಧಾನಿಕ ಬದ್ಧತೆ’ಯನ್ನು ದುರ್ಬಲಗೊಳಿಸಿದೆ. 2019ರ ತಿದ್ದುಪಡಿಯು ಕೇಂದ್ರ ಸರ್ಕಾರಕ್ಕೆ ವ್ಯಕ್ತಿಗಳನ್ನು ‘ಭಯೋತ್ಪಾದಕರು’ ಎಂದು ಗುರುತಿಸಲು ಅವಕಾಶ ಮಾಡಿಕೊಟ್ಟಿದೆ. ಇದು ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳಿಗೆ ಪ್ರಕರಣಗಳನ್ನು ತನಿಖೆ ಮಾಡಲು ಅಧಿಕಾರ ನೀಡಿದೆ ಎಂದು ವರದಿ ಹೇಳಿದೆ.

ಮಾಧ್ಯಮಗಳನ್ನು ಸೆನ್ಸಾರ್ ಮಾಡುವಂತಹ ಪ್ರಯತ್ನಗಳ ಮೂಲಕ ಅತ್ಯಂತ ಕೆಟ್ಟ ಸರ್ಕಾರಿ ಅಪರಾಧಿಗಳನ್ನು ಎಸಗುತ್ತಿರುವ ರಾಷ್ಟ್ರಗಳಾದ ಎಲ್ ಸಾಲ್ವಡಾರ್ ಮತ್ತು ಮಾರಿಷಸ್‌ಗಳ ಪಟ್ಟಿಯಲ್ಲಿ ಭಾರತ ಸೇರುತ್ತಿದೆ. ಭಾರತ ಸರ್ಕಾರ ಧಾರ್ಮಿಕ ಸ್ವಾತಂತ್ರ್ಯವನ್ನು ಹತ್ತಿಕ್ಕುವುದು, ರಾಜಕೀಯ ವಿರೋಧಿಗಳು ಮತ್ತು ಸರ್ಕಾರದ ನೀತಿಗಳ ವಿರುದ್ದ ಪ್ರತಿಭಟಿಸುವ ಜನರನ್ನು ಬೆದರಿಸುವುದು, ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿನ ಭಿನ್ನಾಭಿಪ್ರಾಯಗಳನ್ನು ಮೌನಗೊಳಿಸುತ್ತಿದೆ ಎಂದು ವರದಿ ತಿಳಿಸಿದೆ.

ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಮೂರನೇ ಬಾರಿಗೆ ಗೆಲ್ಲುವ ನಿರೀಕ್ಷೆಯಿದೆ. ಮೋದಿಯವರ ನಾಯಕತ್ವದಲ್ಲಿ ಈಗಾಗಲೇ ಗಣನೀಯ ಪ್ರಮಾಣದ ಪ್ರಜಾಪ್ರಭುತ್ವದ ಅವನತಿಯಾಗುತ್ತಿದೆ. ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ನಾಗರಿಕ ಸಮಾಜದ ಮೇಲೆ ನಡೆಯುತ್ತಿರುವ ನಿರಂತರ ದಬ್ಬಾಳಿಕೆಯನ್ನು ಗಮನಿಸಿದರೆ, ಈ ಪ್ರಮಾಣ ಇನ್ನಷ್ಟು ಹೆಚ್ಚಾಗಬಹುದು ಎಂದು ವರದಿ ಅಭಿಪ್ರಾಯಪಟ್ಟಿದೆ.

2023ರ ವಿ-ಡೆಮ್ ಇನ್‌ಸ್ಟಿಟ್ಯೂಟ್‌ನ ಲಿಬರಲ್ ಡೆಮಾಕ್ರಸಿ ಇಂಡೆಕ್ಸ್‌ನಲ್ಲಿ ಸಮೀಕ್ಷೆ ಮಾಡಲಾದ 179 ದೇಶಗಳಲ್ಲಿ ಭಾರತವು 104 ನೇ ಸ್ಥಾನದಲ್ಲಿದೆ. ಈ ಸೂಚ್ಯಂಕವನ್ನು “ಉದಾರ ಪ್ರಜಾಪ್ರಭುತ್ವ ಮತ್ತು ಚುನಾವಣಾ ಪ್ರಜಾಪ್ರಭುತ್ವ’ ಈ ಎರಡೂ ಅಂಶಗಳ ಮೂಲಕ ಅಳೆಯಲಾಗಿದೆ. ಉದಾರ ಪ್ರಜಾಪ್ರಭುತ್ವ ಮತ್ತು ಚುನಾವಣಾ ಪ್ರಜಾಪ್ರಭುತ್ವದ ಒಳಗೆ 71 ಉಪ ವರ್ಗೀಕರಣಗಳನ್ನು ಮಾಡಿ ಸಮೀಕ್ಷೆ ನಡೆಸಲಾಗಿದೆ.

ವಿ-ಡೆಮ್ ಇನ್ಸ್‌ಟ್ಯೂಟ್‌ನ ಈ ವರ್ಷದ ವರದಿಯ ಬಗ್ಗೆ ಭಾರತ ಸರ್ಕಾರ ಅಥವಾ ವಿದೇಶಾಂಗ ಇಲಾಖೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, 2021ರಲ್ಲಿ ವಿ-ಡೆಮ್ ಮತ್ತು ಯುಎಸ್ ಮೂಲದ ಸರ್ಕಾರೇತರ ಸಂಸ್ಥೆ ಫ್ರೀಡಂ ಹೌಸ್ “ಭಾರತದಲ್ಲಿ ಪ್ರಜಾಪ್ರಭುತ್ವ ಕುಸಿಯುತ್ತಿದೆ” ಎಂದು ವರದಿ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ವಿದೇಶಾಂಗ ಸಚಿವ ಎಸ್‌. ಜೈಶಂಕರ್, “ಸ್ವಯಂ ಘೋಷಿತ ಜಾಗತಿಕ ಪಾಲಕರಿಂದ ದೇಶಕ್ಕೆ ಅನುಮೋದನೆ ಅಥವಾ ನೈತಿಕ ಉಪದೇಶದ ಅಗತ್ಯವಿಲ್ಲ” ಎಂದಿದ್ದರು.

ಇದನ್ನೂ ಓದಿ : ಜಮ್ಮು ಕಾಶ್ಮೀರಕ್ಕೆ ಮೋದಿ ಭೇಟಿ ವೇಳೆ ವಿದೇಶಿ ಮಾಧ್ಯಮಗಳ ಪತ್ರಕರ್ತರನ್ನು ಹೊರಗಿಟ್ಟ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...