Homeಮುಖಪುಟಪ್ರಜಾಪ್ರಭುತ್ವದಿಂದ ಚುನಾವಣಾ ನಿರಂಕುಶಾಧಿಕಾರದತ್ತ ಭಾರತ: ವಿ-ಡೆಮ್ ವರದಿ

ಪ್ರಜಾಪ್ರಭುತ್ವದಿಂದ ಚುನಾವಣಾ ನಿರಂಕುಶಾಧಿಕಾರದತ್ತ ಭಾರತ: ವಿ-ಡೆಮ್ ವರದಿ

- Advertisement -
- Advertisement -

ಇತ್ತೀಚಿನ ವರ್ಷಗಳಲ್ಲಿ ಭಾರತವು ವಿಶ್ವದ ಅತ್ಯಂತ ‘ಕೆಟ್ಟ ನಿರಂಕುಶವಾದಿ’ಗಳಲ್ಲಿ ಒಂದಾಗಿದೆ ಎಂದು ಸ್ವೀಡನ್ ಮೂಲದ ವೆರೈಟೀಸ್ ಆಫ್ ಡೆಮಾಕ್ರಸಿ (ವಿ-ಡೆಮ್) ಇನ್‌ಸ್ಟಿಟ್ಯೂಟ್ ಗುರುವಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ.

ವಿ-ಡೆಮ್ ವಿವಿಧ ದೇಶಗಳ ‘ಪ್ರಜಾಪ್ರಭುತ್ವ ಮತ್ತು ನಿರಂಕುಶಾಧಿಕಾರ’ವನ್ನು ‘ಉದಾರ ಪ್ರಜಾಪ್ರಭುತ್ವ, ಚುನಾವಣಾ ಪ್ರಜಾಪ್ರಭುತ್ವ, ಚುನಾವಣಾ ನಿರಂಕುಶಪ್ರಭುತ್ವ ಮತ್ತು ಮುಚ್ಚಿದ ನಿರಂಕುಶಪ್ರಭುತ್ವ’ ಎಂಬ ನಾಲ್ಕು ವಿಭಾಗಗಳಾಗಿ ವರ್ಗೀಕರಿಸಿ ಅಧ್ಯಯನ ನಡೆಸಿದೆ. ಈ ಮೂಲಕ ದೇಶಗಳು ಯಾವ ಕಡೆ ವಾಲುತ್ತಿದೆ ಎಂದು ಅಂದಾಜಿಸಿದೆ.

“ಅಭಿವ್ಯಕ್ತಿ ಮತ್ತು ಸಂಘಟನಾ ಸ್ವಾತಂತ್ರ್ಯವಿಲ್ಲದ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳು ನಡೆಯದ ಕೇವಲ ಕಾರ್ಯಾಂಗಕ್ಕಾಗಿ ಬಹುಪಕ್ಷೀಯ ಚುನಾವಣೆಗಳು ಅಸ್ತಿತ್ವದಲ್ಲಿರುವುದನ್ನು ‘ಚುನಾವಣಾ ನಿರಂಕುಶಾಧಿಕಾರ’ ಎಂದು ವಿ-ಡೆಮ್ ವ್ಯಾಖ್ಯಾನಿಸಿದೆ.

ನಿರಂಕುಶಾಧಿಕಾರವು ಜಾಗತಿಕ ಮಟ್ಟದಲ್ಲಿ ಏರಿಕೆಯಾಗಿದ್ದು, ವಿಶ್ವದ ಶೇ. 35ರಷ್ಟು ಜನಸಂಖ್ಯೆಯನ್ನು ಹೊಂದಿರುವ 42 ದೇಶಗಳು ಹೊಸದಾಗಿ ಈ ಪ್ರವೃತ್ತಿಯನ್ನು ಅನುಭವಿಸುತ್ತಿವೆ. ಏರಿಕೆಯಾಗುತ್ತಿರುವ ನಿರಂಕುಶಾಧಿಕಾರ ವಿದ್ಯಮಾನಕ್ಕೆ ಜಗತ್ತಿನ ಜನಸಂಖ್ಯೆಯ ಪೈಕಿ ಶೇ. 18ರಷ್ಟು ಜನಸಂಖ್ಯೆ ಹೊಂದಿರುವ ಭಾರತವು ಗಮನಾರ್ಹ ಕೊಡುಗೆ ನೀಡಿರುವುದು ವಿ-ಡೆಮ್ ವರದಿಯಲ್ಲಿ ಬೆಳಕಿಗೆ ಬಂದಿದೆ. ಈ ಹಿಂದೆ ಪ್ರಜಾಪ್ರಭುತ್ವ ದೇಶ ಎಂದು ಗುರುತಿಸಿಕೊಂಡಿದ್ದ ಭಾರತವು 2018ರಲ್ಲಿ ಚುನಾವಣಾ ನಿರಂಕುಶಾಧಿಕಾರವಾಗಿ ರೂಪಾಂತರಗೊಂಡಿದೆ ಹಾಗೂ 2023ರ ಕೊನೆಗೂ ಈ ಪ್ರವೃತ್ತಿ ಮುಂದುವರಿದಿದೆ ಎಂಬುದರತ್ತ ವರದಿಯು ಬೊಟ್ಟು ಮಾಡಿದೆ.

ಭಾರತದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಟೀಕಾಕಾರರ ಬಾಯಿ ಮುಚ್ಚಿಸಲು ದೇಶದ್ರೋಹ, ಮಾನನಷ್ಟ ಮತ್ತು ಭಯೋತ್ಪಾದನೆ ನಿಗ್ರಹದಂತಹ ಕಾನೂನುಗಳನ್ನು ಬಳಸಿದೆ ವರದಿ ತಿಳಿಸಿದೆ.

ಬಿಜೆಪಿ ಸರ್ಕಾರವು 2019ರಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಗೆ ತಿದ್ದುಪಡಿ ತರುವ ಮೂಲಕ ‘ಜಾತ್ಯತೀತತೆಯ ಸಂವಿಧಾನಿಕ ಬದ್ಧತೆ’ಯನ್ನು ದುರ್ಬಲಗೊಳಿಸಿದೆ. 2019ರ ತಿದ್ದುಪಡಿಯು ಕೇಂದ್ರ ಸರ್ಕಾರಕ್ಕೆ ವ್ಯಕ್ತಿಗಳನ್ನು ‘ಭಯೋತ್ಪಾದಕರು’ ಎಂದು ಗುರುತಿಸಲು ಅವಕಾಶ ಮಾಡಿಕೊಟ್ಟಿದೆ. ಇದು ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳಿಗೆ ಪ್ರಕರಣಗಳನ್ನು ತನಿಖೆ ಮಾಡಲು ಅಧಿಕಾರ ನೀಡಿದೆ ಎಂದು ವರದಿ ಹೇಳಿದೆ.

ಮಾಧ್ಯಮಗಳನ್ನು ಸೆನ್ಸಾರ್ ಮಾಡುವಂತಹ ಪ್ರಯತ್ನಗಳ ಮೂಲಕ ಅತ್ಯಂತ ಕೆಟ್ಟ ಸರ್ಕಾರಿ ಅಪರಾಧಿಗಳನ್ನು ಎಸಗುತ್ತಿರುವ ರಾಷ್ಟ್ರಗಳಾದ ಎಲ್ ಸಾಲ್ವಡಾರ್ ಮತ್ತು ಮಾರಿಷಸ್‌ಗಳ ಪಟ್ಟಿಯಲ್ಲಿ ಭಾರತ ಸೇರುತ್ತಿದೆ. ಭಾರತ ಸರ್ಕಾರ ಧಾರ್ಮಿಕ ಸ್ವಾತಂತ್ರ್ಯವನ್ನು ಹತ್ತಿಕ್ಕುವುದು, ರಾಜಕೀಯ ವಿರೋಧಿಗಳು ಮತ್ತು ಸರ್ಕಾರದ ನೀತಿಗಳ ವಿರುದ್ದ ಪ್ರತಿಭಟಿಸುವ ಜನರನ್ನು ಬೆದರಿಸುವುದು, ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿನ ಭಿನ್ನಾಭಿಪ್ರಾಯಗಳನ್ನು ಮೌನಗೊಳಿಸುತ್ತಿದೆ ಎಂದು ವರದಿ ತಿಳಿಸಿದೆ.

ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಮೂರನೇ ಬಾರಿಗೆ ಗೆಲ್ಲುವ ನಿರೀಕ್ಷೆಯಿದೆ. ಮೋದಿಯವರ ನಾಯಕತ್ವದಲ್ಲಿ ಈಗಾಗಲೇ ಗಣನೀಯ ಪ್ರಮಾಣದ ಪ್ರಜಾಪ್ರಭುತ್ವದ ಅವನತಿಯಾಗುತ್ತಿದೆ. ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ನಾಗರಿಕ ಸಮಾಜದ ಮೇಲೆ ನಡೆಯುತ್ತಿರುವ ನಿರಂತರ ದಬ್ಬಾಳಿಕೆಯನ್ನು ಗಮನಿಸಿದರೆ, ಈ ಪ್ರಮಾಣ ಇನ್ನಷ್ಟು ಹೆಚ್ಚಾಗಬಹುದು ಎಂದು ವರದಿ ಅಭಿಪ್ರಾಯಪಟ್ಟಿದೆ.

2023ರ ವಿ-ಡೆಮ್ ಇನ್‌ಸ್ಟಿಟ್ಯೂಟ್‌ನ ಲಿಬರಲ್ ಡೆಮಾಕ್ರಸಿ ಇಂಡೆಕ್ಸ್‌ನಲ್ಲಿ ಸಮೀಕ್ಷೆ ಮಾಡಲಾದ 179 ದೇಶಗಳಲ್ಲಿ ಭಾರತವು 104 ನೇ ಸ್ಥಾನದಲ್ಲಿದೆ. ಈ ಸೂಚ್ಯಂಕವನ್ನು “ಉದಾರ ಪ್ರಜಾಪ್ರಭುತ್ವ ಮತ್ತು ಚುನಾವಣಾ ಪ್ರಜಾಪ್ರಭುತ್ವ’ ಈ ಎರಡೂ ಅಂಶಗಳ ಮೂಲಕ ಅಳೆಯಲಾಗಿದೆ. ಉದಾರ ಪ್ರಜಾಪ್ರಭುತ್ವ ಮತ್ತು ಚುನಾವಣಾ ಪ್ರಜಾಪ್ರಭುತ್ವದ ಒಳಗೆ 71 ಉಪ ವರ್ಗೀಕರಣಗಳನ್ನು ಮಾಡಿ ಸಮೀಕ್ಷೆ ನಡೆಸಲಾಗಿದೆ.

ವಿ-ಡೆಮ್ ಇನ್ಸ್‌ಟ್ಯೂಟ್‌ನ ಈ ವರ್ಷದ ವರದಿಯ ಬಗ್ಗೆ ಭಾರತ ಸರ್ಕಾರ ಅಥವಾ ವಿದೇಶಾಂಗ ಇಲಾಖೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, 2021ರಲ್ಲಿ ವಿ-ಡೆಮ್ ಮತ್ತು ಯುಎಸ್ ಮೂಲದ ಸರ್ಕಾರೇತರ ಸಂಸ್ಥೆ ಫ್ರೀಡಂ ಹೌಸ್ “ಭಾರತದಲ್ಲಿ ಪ್ರಜಾಪ್ರಭುತ್ವ ಕುಸಿಯುತ್ತಿದೆ” ಎಂದು ವರದಿ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ವಿದೇಶಾಂಗ ಸಚಿವ ಎಸ್‌. ಜೈಶಂಕರ್, “ಸ್ವಯಂ ಘೋಷಿತ ಜಾಗತಿಕ ಪಾಲಕರಿಂದ ದೇಶಕ್ಕೆ ಅನುಮೋದನೆ ಅಥವಾ ನೈತಿಕ ಉಪದೇಶದ ಅಗತ್ಯವಿಲ್ಲ” ಎಂದಿದ್ದರು.

ಇದನ್ನೂ ಓದಿ : ಜಮ್ಮು ಕಾಶ್ಮೀರಕ್ಕೆ ಮೋದಿ ಭೇಟಿ ವೇಳೆ ವಿದೇಶಿ ಮಾಧ್ಯಮಗಳ ಪತ್ರಕರ್ತರನ್ನು ಹೊರಗಿಟ್ಟ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...