Homeಮುಖಪುಟಅತ್ಯಾಚಾರ ಪ್ರಕರಣ ಇತ್ಯರ್ಥಕ್ಕೆ ನ್ಯಾಯಾಲಯದ ಹೊರಗೆ ಸಂಧಾನ: ಹೈಕೋರ್ಟ್ ಕಳವಳ

ಅತ್ಯಾಚಾರ ಪ್ರಕರಣ ಇತ್ಯರ್ಥಕ್ಕೆ ನ್ಯಾಯಾಲಯದ ಹೊರಗೆ ಸಂಧಾನ: ಹೈಕೋರ್ಟ್ ಕಳವಳ

ಅತ್ಯಾಚಾರ ಅಪರಾಧ ಮಹಿಳೆಯ ದೈಹಿಕ ಸ್ವಾಯತ್ತತೆಯ ಘೋರ ಉಲ್ಲಂಘನೆಯಾಗಿದೆ. ಇದನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಕ್ಕೆ ಅವಕಾಶ ನೀಡುವುದು ಸಂತ್ರಸ್ತೆಯ ನೋವುಗಳನ್ನು ಕಡೆಗಣಿಸಿದಂತೆ-ಹೈಕೋರ್ಟ್‌

- Advertisement -
- Advertisement -

“ಅತ್ಯಾಚಾರ ಪ್ರಕರಣಗಳನ್ನು ನ್ಯಾಯಾಲಯದ ಹೊರಗೆ ಇತ್ಯರ್ಥಪಡಿಸಲು ಸಾಧ್ಯವಿಲ್ಲ” ಎಂದು ಪ್ರತಿಪಾದಿಸಿರುವ ದೆಹಲಿ ಹೈಕೋರ್ಟ್, ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಪ್ರಕರಣವನ್ನು ಇತ್ಯರ್ಥಪಡಿಸಲು ಆರೋಪಿ ಮತ್ತು ಸಂತ್ರಸ್ತೆಯ ನಡುವೆ ರಾಜಿ ಮಾಡಿಕೊಳ್ಳುವಂತೆ ಸೂಚಿಸಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

“ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ಘನತೆ ಮತ್ತು ಹಕ್ಕುಗಳನ್ನು ಎತ್ತಿ ಹಿಡಿಯುವುದು ನ್ಯಾಯಾಂಗದ ಮೇಲಿದೆ” ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಹೇಳಿದ್ದು, ಅತ್ಯಾಚಾರದಂತಹ ಪ್ರಕರಣಗಳನ್ನು ನ್ಯಾಯಾಲಯದ ಹೊರಗಡೆ ಇತ್ಯರ್ಥಪಡಿಸಿಕೊಳ್ಳುವಂತೆ ನ್ಯಾಯಾಧೀಶರು ಹೇಳುವುದು ಅಪರಾಧ ನ್ಯಾಯ ವ್ಯವಸ್ಥೆ ಮತ್ತು ನ್ಯಾಯಯುತ ವಿಚಾರಣೆಯ ತತ್ವಗಳಿಗೆ ವಿರುದ್ಧವಾಗಿದೆ ಎಂದಿದ್ದಾರೆ.

ನ್ಯಾಯಾಲಯದ ಹೊರಗಡೆ ಅತ್ಯಾಚಾರ ಆರೋಪಿ ಮತ್ತು ಸಂತ್ರಸ್ತೆ ನಡುವೆ ರಾಜಿ ಮಾಡಿಕೊಳ್ಳಲಾಗಿದೆ. ಹಾಗಾಗಿ, ಆರೋಪಿಯ ವಿರುದ್ದದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿದ್ದ ಮನವಿಯನ್ನು ನ್ಯಾಯಾಲಯ ತಳ್ಳಿ ಹಾಕಿದೆ.

ವಿಚಾರಣಾ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಷನ್ ಸಾಕ್ಷ್ಯಗಳನ್ನು ದಾಖಲಿಸಲು ಪ್ರಯತ್ನಿಸುತ್ತಿರುವ ನಡುವೆ, ಅದೇ ನ್ಯಾಯಾಲಯದ ನ್ಯಾಯಾಧೀಶರು ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಅಡಿ ದಾಖಲಾಗಿರುವ ಪ್ರಕರಣವನ್ನು ಇತ್ಯರ್ಥಪಡಿಸಲು ಆರೋಪಿ ಮತ್ತು ಸಂತ್ರಸ್ತೆಗೆ ಸಲಹೆ ನೀಡಿದ್ದಾರೆ ಮತ್ತು ಸಹಾಯ ಮಾಡಿದ್ದಾರೆ ಎಂಬುದು ನಿಜವಾಗಿದ್ದರೆ, ಇದು ಅಪಾಯಕಾರಿ ನಡವಳಿಕೆ ಎಂದು ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಕಳವಳ ವ್ಯಕ್ತಪಡಿಸಿದ್ದಾರೆ.

ಮುಂದಿನ ವಿಚಾರಣೆ ನ್ಯಾಯಯುತವಾಗಿ ನಡೆಯಲು ಪ್ರಕರಣವನ್ನು ಇನ್ನೊಬ್ಬರು ನ್ಯಾಯಾಧೀಶರಿಗೆ ವರ್ಗಾಯಿಸುವಂತೆ ಹೈಕೋರ್ಟ್‌ ನಿರ್ದೇಶನ ನೀಡಿದ್ದಾರೆ.

ಆರೋಪಿಯು ಸಂತ್ರಸ್ತೆಯ ಒಪ್ಪಿಗೆಯಿಲ್ಲದೆ ಆಕೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದಾನೆ. ಆಕೆಯ ಕುಟುಂಬ ಸದಸ್ಯರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ, ಆಕೆಯ ಆಕ್ಷೇಪಾರ್ಹ ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪ್ರಾಸಿಕ್ಯೂಷನ್ ವಾದಿಸಿದೆ.

ಆರೋಪಿ ತನ್ನ ಮೇಲಿನ ಎಫ್‌ಐಆರ್ ರದ್ದುಪಡಿಸಲು ಕೋರುವಾಗ, ನನ್ನ ಮತ್ತು ಸಂತ್ರಸ್ತೆಯ ನಡುವೆ ಏನೇ ನಡೆದರೂ ಅದಕ್ಕೆ ನಮ್ಮಿಬ್ಬರ ಒಪ್ಪಿಗೆಯಿದೆ. ನಾನು ಆಕೆಗೆ ಪರಿಹಾರವಾಗಿ 3.50 ಲಕ್ಷ ರೂಪಾಯಿ ಕೊಡುತ್ತೇನೆ ಎಂದಿದ್ದಾನೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನ್ಯಾಯಾಲಯ, ಕಾನೂನು ಪ್ರಕ್ರಿಯೆ ದುರುಪಯೋಗವಾಗುತ್ತಿರುವಾಗ ಮತ್ತು ಗರ್ಭಪಾತದಂತಹ ಅನಿವಾರ್ಯ ಸಂದರ್ಭಗಳಲ್ಲಿ ಹೊರತು, ಅತ್ಯಾಚಾರದ ಅಪರಾಧವನ್ನು ಸಂತ್ರಸ್ತೆ ಮತ್ತು ಆರೋಪಿ ನಡುವೆ ರಾಜಿ ಸಂಧಾನದ ಮೂಲಕ ಇತ್ಯರ್ಥ ಮಾಡಿ ಮುಗಿಸಲು ಸಾಧ್ಯವಿಲ್ಲ ಎಂದಿದೆ.

ತನ್ನ ಮತ್ತು ಸಂತ್ರಸ್ತೆಯ ನಡುವೆ ನಡೆದಿರುವುದೆಲ್ಲ ಒಪ್ಪಿತ ಎಂದು ಆರೋಪಿ ವಾದಿಸಿದ್ದಾರೆ, ಹೀಗಿರುವಾಗ ಆತ ಆಕೆಗೆ 3.50 ಲಕ್ಷ ರೂ. ದುಡ್ಡು ಕೊಡುವ ಅಗತ್ಯವೇನಿದೆ? ಎಂದು ಪ್ರಶ್ನಿಸಿರುವ ನ್ಯಾಯಾಲಯ, ಇದು ಒಪ್ಪಿತ ಸಂಬಂಧದ ರಾಜಿ ಸಂಧಾನವಲ್ಲ, ಒಂದು ರೀತಿಯ ಸೆಟಲ್‌ಮೆಂಟ್ ಎಂದು ಅನುಮಾನ ವ್ಯಕ್ತಪಡಿಸಿದೆ.

ಸಂತ್ರಸ್ತೆಯ ಹಿಂದಿನ ಹೇಳಿಕೆಗಳು ಒಪ್ಪಿತ ಸಂಬಂಧವನ್ನು ಸೂಚಿಸುತ್ತಿಲ್ಲ. ಇಲ್ಲಿ ಹಣದ ಆಮಿಷ ಒಡ್ಡಿರುವ ಸಾಧ್ಯತೆಯಿದೆ. ಆರೋಪಿ ಹೇಳುವಂತೆ ಸಂತ್ರಸ್ತೆ ಮತ್ತು ಆತನ ನಡುವೆ ಒಪ್ಪಿತ ಸಂಬಂಧ ನಡೆದಿದ್ದರೆ, ಆತ ತಪ್ಪು ಮಾಡಿರದಿದ್ದರೆ ದುಡ್ಡು ಕೊಡುವ ಅವಶ್ಯಕತೆ ಏನಿದೆ? ಆತ ತಪ್ಪು ಮಾಡಿದ್ದಾನೆ ಎಂದರ್ಥವಲ್ಲವೇ? ಇದು ಒಮ್ಮತ ಸಂಬಂಧ ಎಂಬ ಪ್ರತಿಪಾದನೆಗೆ ವಿರುದ್ದವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಅತ್ಯಾಚಾರದ ಅಪರಾಧವು ಮಹಿಳೆಯ ದೈಹಿಕ ಸ್ವಾಯತ್ತತೆಯ ಘೋರ ಉಲ್ಲಂಘನೆಯಾಗಿದೆ. ಇದನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಕ್ಕೆ ಅವಕಾಶ ನೀಡುವುದು ಅತ್ಯಾಚಾರ ಸಂತ್ರಸ್ತೆಯ ನೋವುಗಳನ್ನು ಕಡೆಗಣಿಸಿದಂತೆ. ಆಕೆಯ ದುಃಖವನ್ನು ವ್ಯಾವಹಾರಿಕವಾಗಿ ಪರಿಗಣಿಸದಂತೆ ಎಂದು ನ್ಯಾಯಾಲಯ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದನ್ನೂ ಓದಿ : 370ನೇ ವಿಧಿಯ ರದ್ದತಿಯನ್ನು ಟೀಕಿಸುವುದು, ಪಾಕಿಸ್ತಾನಿಗಳಿಗೆ ಸ್ವಾತಂತ್ರ್ಯ ದಿನದ ಶುಭಾಶಯ ಕೋರುವುದು ಅಪರಾಧವಲ್ಲ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...