Homeಫ್ಯಾಕ್ಟ್‌ಚೆಕ್Fact Check: ರಂಝಾನ್‌ ಪ್ರಯುಕ್ತ ಸರ್ಕಾರಿ ಶಾಲೆಗಳ ಸಮಯ ಬದಲಾವಣೆ ಮಾಡಲಾಗಿದೆಯಾ?

Fact Check: ರಂಝಾನ್‌ ಪ್ರಯುಕ್ತ ಸರ್ಕಾರಿ ಶಾಲೆಗಳ ಸಮಯ ಬದಲಾವಣೆ ಮಾಡಲಾಗಿದೆಯಾ?

- Advertisement -
- Advertisement -

‘ರಂಝಾನ್ ಪ್ರಯುಕ್ತ ರಾಜ್ಯದ ಸರ್ಕಾರಿ ಶಾಲೆಗಳ ಸಮಯ ಬದಲಾವಣೆ ಮಾಡಲಾಗಿದೆ. ಮುಸ್ಲಿಂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರ ಸಮಯ ಬದಲಿಸಿದೆ. ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಶಾಲೆಯಿಂದ ಅರ್ಧ ಗಂಟೆ ಬೇಗ ಹೋಗಬಹುದು’ ಎಂಬ ಸುದ್ದಿಯೊಂದು ಎರಡು ದಿನಗಳ ಹಿಂದೆ ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಪ್ರಕಟಗೊಂಡಿದೆ.

ಟಿವಿ9, ಸುವರ್ಣ ನ್ಯೂಸ್‌, ಹೊಸ ದಿಗಂತ ಸೇರಿದಂತೆ ಕನ್ನಡದ ಮುಖ್ಯವಾಹಿನಿ ಮಾಧ್ಯಮಗಳು ಈ ಸುದ್ದಿಯನ್ನು ಪ್ರಸಾರ ಮಾಡಿವೆ.

ಫೋಸ್ಟ್ ಲಿಂಕ್ ಇಲ್ಲಿದೆ

ಇದನ್ನೇ ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು, “ರಂಜಾನ್ ಹಬ್ಬದ ಪ್ರಯುಕ್ತ ಸಂಜೆ ನಾಲ್ಕರ ಬದಲು ಮಧ್ಯಾಹ್ನ 12:45ಕ್ಕೆ ಶಾಲೆ ಮುಕ್ತಾಯಗೊಳಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯ ಸರ್ಕಾರದ ಮುಸ್ಲಿಂ ಪ್ರೀತಿ” ಎಂದು ಬರೆದುಕೊಂಡಿದ್ದಾರೆ.


ಫ್ಯಾಕ್ಟ್‌ಚೆಕ್:
ರಾಜ್ಯ ಸರ್ಕಾರ ರಂಝಾನ್ ಪ್ರಯುಕ್ತ ಶಾಲೆಗಳ ವೇಳಾಪಟ್ಟಿ ಬದಲಾಯಿಸಿದೆ ಎಂಬ ಸುದ್ದಿಯ ಸತ್ಯಾಸತ್ಯತೆ ತಿಳಿಯುವ ಪ್ರಯತ್ನವನ್ನು ನಾನುಗೌರಿ.ಕಾಂ ಮಾಡಿದೆ.

ಇದಕ್ಕಾಗಿ ನಾವು ಮೊದಲು ಸರ್ಕಾರ ಸಮಯ ಬದಲಾವಣೆಯ ಕುರಿತು ಸುತ್ತೋಲೆ ಹೊರಡಿಸಿದೆಯಾ? ಎಂದು ಪರಿಶೀಲಿಸಿದ್ದೇವೆ. ಈ ವೇಳೆ ಮಾರ್ಚ್‌ 6,2024ರಂದು ‘ಕರ್ನಾಟಕ ರಾಜ್ಯ ಉರ್ದು ಮತ್ತು ಇತರ ಅಲ್ಪ ಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯದ ಆಯುಕ್ತರ ಕಚೇರಿಯಿಂದ’ ಹೊರಡಿಸಿರುವ ಸುತ್ತೋಲೆ ದೊರೆತಿದೆ.

ಈ ಸುತ್ತೋಲೆಯ ಆರಂಭದಲ್ಲಿಯೇ “ರಂಜಾನ್ ಮಾಹೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಾಲಾ ಅವಧಿ ಬದಲಾವಣೆ ಮಾಡುವ ಬಗ್ಗೆ” ಎಂಬ ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ.

ಸುತ್ತೋಲೆಯ ಎರಡನೇ ಪ್ಯಾರದಲ್ಲಿ “ಉಲ್ಲೇಖಿತ 2ರ ಸರ್ಕಾರದ ಪತ್ರದಲ್ಲಿ ರಂಜಾನ್ ಮಾಸದ ಪ್ರಯುಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ, ಹಿರಿಯ ಮತ್ತು ಪ್ರೌಢ ಶಾಲೆಗಳನ್ನು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12:45 ರವರೆಗೆ ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಂದು ಒಂದು ತಿಂಗಳವರೆಗೆ ಮಾತ್ರ ನಡೆಸಲು ಈ ಹಿಂದೆ ದಿನಾಂಕ 31, 10 2002ರಲ್ಲಿ ಹೊರಡಿಸಲಾಗಿದ್ದ ಸ್ಟ್ಯಾಂಡಿಂಗ್ ಆರ್ಡರ್ ಅನ್ನು ಯಥಾವತ್ತು ಹೊರಡಿಸಲು ಸ್ವೀಕೃತವಾದ ಮನವಿಗಳನ್ನು ನಿಯಮನುಸಾರ ಪರಿಶೀಲಿಸಿ ಅಗತ್ಯ ಕ್ರಮ ವಹಿಸುವಂತೆ ಸೂಚಿಸಲಾಗಿದೆ” ಎನ್ನುವುದನ್ನು ಉಲ್ಲೇಖಿಸಿರುವುದನ್ನು ಕಾಣಬಹುದು.

ಅಧಿಕೃತ ಸುತ್ತೋಲೆಯ ಪ್ರಕಾರ, ರಂಝಾನ್ ಪ್ರಯುಕ್ತ ಒಂದು ತಿಂಗಳ ಕಾಲ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ, ಹಿರಿಯ ಮತ್ತು ಪ್ರೌಢ ಶಾಲೆಗಳನ್ನು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12:45 ರವರೆಗೆ ಸಮಯ ಬದಲಾವಣೆ ಮಾಡಿ ನಡೆಸಲು ಸೂಚಿಸಲಾಗಿದೆ.

ಸುತ್ತೋಲೆಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿರುವಂತೆ ರಂಝಾನ್ ಪ್ರಯಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ ಹಿರಿಯ ಮತ್ತು ಪ್ರೌಢ ಶಾಲೆಗಳ ಸಮಯ ಮಾತ್ರ ಬದಲಾವಣೆ ಮಾಡಲು ಸೂಚಿಸಲಾಗಿದೆ. ಅಲ್ಲದೆ, ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಅಲ್ಲ. ಮಾಧ್ಯಮಗಳು ಉರ್ದು ಶಾಲೆಗಳ ಸಮಯ ಬದಲಾಯಿಸಲಾಗಿದೆ ಎಂದು ಉಲ್ಲೇಖಿಸದೆ, ಸರ್ಕಾರಿ, ಅನುದಾನಿತ ಶಾಲೆಗಳ ಸಮಯ ಬದಲಾವಣೆ ಎಂದು ಸುದ್ದಿ ಪ್ರಸಾರ ಮಾಡಿ ತಪ್ಪು ಮಾಹಿತಿ ನೀಡಿದೆ. ಇದನ್ನೇ ನಂಬಿರುವ ಅನೇಕ ಜನರು ಮುಸ್ಲಿಮರ ರಂಝಾನ್ ಆಚರಣೆಗಾಗಿ ಸರ್ಕಾರಿ ಶಾಲೆಯ ವೇಳಾಪಟ್ಟಿಯನ್ನೇ ಬದಲಾಯಿಸಲಾಗಿದೆ ಎಂದು ಸರ್ಕಾರದ ಆದೇಶಕ್ಕೆ ಕೋಮು ಬಣ್ಣ ಬಳಿದಿದ್ದಾರೆ.

ಇದನ್ನೂ ಓದಿ : Fact Check: ವಿದೇಶಿ ಮಹಿಳೆಯ ಅತ್ಯಾಚಾರ ಆರೋಪಿಗಳೆಲ್ಲರೂ ಕ್ರೈಸ್ತರೆಂದು ಸುಳ್ಳು ಸುದ್ದಿ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...