Homeಮುಖಪುಟಜಾತಿ ಗಣತಿ: ಕಾಂಗ್ರೆಸ್‌ನ ಬದ್ಧತೆಯನ್ನು ಪುನರುಚ್ಛರಿಸಿದ ರಾಹುಲ್‌ ಗಾಂಧಿ

ಜಾತಿ ಗಣತಿ: ಕಾಂಗ್ರೆಸ್‌ನ ಬದ್ಧತೆಯನ್ನು ಪುನರುಚ್ಛರಿಸಿದ ರಾಹುಲ್‌ ಗಾಂಧಿ

- Advertisement -
- Advertisement -

ದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸುವ ತಮ್ಮ ಪಕ್ಷದ ಸಂಕಲ್ಪವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಒತ್ತಿ ಹೇಳಿದ್ದು, ಆರ್ಥಿಕ ಸಮೀಕ್ಷೆ ಜೊತೆಗೆ ಮೀಸಲಾತಿಯ ಮೇಲಿನ ಶೇಕಡಾ 50ರಷ್ಟು ಮಿತಿಯನ್ನು ತೆಗೆದು ಹಾಕಲಾಗುವುದು ಎಂದು ಪುನರುಚ್ಛರಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್‌ ಗಾಂಧಿ, ಕಾಂಗ್ರೆಸ್‌ನ ಘೋಷಣೆಯು ಸಾಮಾಜಿಕ ನ್ಯಾಯದ ಕಡೆಗೆ ಇರುವ ಮೊದಲ ಹೆಜ್ಜೆಯಾಗಿದೆ. ಯಾರು ಬಡವರು ಎಂದು ನಾವು ಎಂದಾದರೂ ಯೋಚಿಸಿದ್ದೇವೆಯೇ? ಎಷ್ಟು ಮಂದಿ ಮತ್ತು ಯಾವ ಸ್ಥಿತಿಯಲ್ಲಿದ್ದಾರೆ? ಇದೆಲ್ಲವನ್ನೂ ಲೆಕ್ಕ ಹಾಕುವ ಅಗತ್ಯವಿಲ್ಲವೇ? ಎಂದು ರಾಹುಲ್‌ ಗಾಂಧಿ ಪ್ರಶ್ನಿಸಿದ್ದಾರೆ.

ಬಿಹಾರದಲ್ಲಿ ನಡೆಸಿದ ಜಾತಿ ಸಮೀಕ್ಷೆಯು 88 ಪ್ರತಿಶತದಷ್ಟು ಬಡ ಜನಸಂಖ್ಯೆಯು ದಲಿತ, ಬುಡಕಟ್ಟು, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರೆಂದು ಬಹಿರಂಗಪಡಿಸಿದೆ. ಬಿಹಾರದ ಅಂಕಿ-ಅಂಶಗಳು ದೇಶದ ನೈಜ ಚಿತ್ರದ ಒಂದು ಸಣ್ಣ ತುಣುಕಾಗಿದೆ. ದೇಶದ ಬಡ ಜನತೆಯು ಯಾವ ಸ್ಥಿತಿಯಲ್ಲಿ ವಾಸಿಸುತ್ತಿದ್ದಾರೆ ಎಂಬ ಬಗ್ಗೆ ಸಣ್ಣ ಕಲ್ಪನೆಯೂ ನಮಗೆ ಇಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ನಾವು ಅಧಿಕಾರಕ್ಕೆ ಬಂದರೆ ಎರಡು ಐತಿಹಾಸಿಕ ಕ್ರಮಗಳನ್ನು ತೆಗೆದುಕೊಳ್ಳಲಿದ್ದೇವೆ ಜಾತಿ ಗಣತಿ, ಆರ್ಥಿಕ ಸಮೀಕ್ಷೆ ಆಧಾರದ ಮೇಲೆ ನಾವು ಶೇಕಡಾ 50ರ ಮೀಸಲಾತಿ ಮಿತಿಯನ್ನು ಕಿತ್ತುಹಾಕುತ್ತೇವೆ. ಈ ವಿಧಾನವು  ಎಲ್ಲರಿಗೂ ಸರಿಯಾದ ಮೀಸಲಾತಿ, ಹಕ್ಕುಗಳನ್ನು ಒದಗಿಸುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಇದು ಬಡವರಿಗೆ ಸರಿಯಾದ ನೀತಿಗಳು ಮತ್ತು ಯೋಜನೆಗಳನ್ನು ಮಾಡಲು ಸಹಾಯ ಮಾಡುವುದರ ಜೊತೆಗೆ  ಶಿಕ್ಷಣ, ಉದ್ಯೋಗ, ಔಷಧ ಮತ್ತು ಮುಖ್ಯವಾಹಿನಿಗೆ ಅವರನ್ನು ತರುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ,  ಆದ್ದರಿಂದ ಎಚ್ಚೆತ್ತುಕೊಂಡು ಜಾತಿಗಣತಿ ಬಗ್ಗೆ ನಿಮ್ಮ ಧ್ವನಿಯನ್ನು ಎತ್ತಬೇಕು, ಜಾತಿ ಗಣತಿ ನಿಮ್ಮ ಹಕ್ಕು ಮತ್ತು ಅದು ನಿಮ್ಮನ್ನು ಕಷ್ಟಗಳ ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯ್ಯುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಗೆದ್ದು ಅಧಿಕಾರಕ್ಕೆ ಬಂದರೆ ರಾಷ್ಟ್ರವ್ಯಾಪಿ ಜಾತಿಗಣತಿ ನಡೆಸಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಮೊದಲು ಹೇಳಿದ್ದರು. ನಮಗೆ ಬೇಕಿರುವುದು ಸಾಮಾಜಿಕ ನ್ಯಾಯ. ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಕೂಡಲೇ ರಾಷ್ಟ್ರವ್ಯಾಪಿ ಜಾತಿಗಣತಿ ನಡೆಸುತ್ತದೆ. ದಲಿತರು ಮತ್ತು ಇತರೆ ಹಿಂದುಳಿದ ಸಮುದಾಯಗಳ ಜನಸಂಖ್ಯೆಯನ್ನು ಕಂಡುಹಿಡಿಯಲು ಇದು ಸಹಕಾರಿಯಾಗಲಿದೆ ಎಂದು ಹೇಳಿದ್ದರು.

ಇದನ್ನು ಓದಿ: ಸುಧಾಮೂರ್ತಿ ‘ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯ ಮಾಡುತ್ತಿದ್ದಾರೆ’ ಎಂದಿದ್ದ RSS ನಂಟಿನ ಮ್ಯಾಗ್‌ಝಿನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...