Homeಮುಖಪುಟನೀವು ನಮ್ಮ ಮೇಲೆ ಒದ್ದರೆ, ನಾವು ನಮಾಝ್‌ ನಿಲ್ಲಿಸುವುದಿಲ್ಲ: ಅಸಾದುದ್ದೀನ್ ಓವೈಸಿ

ನೀವು ನಮ್ಮ ಮೇಲೆ ಒದ್ದರೆ, ನಾವು ನಮಾಝ್‌ ನಿಲ್ಲಿಸುವುದಿಲ್ಲ: ಅಸಾದುದ್ದೀನ್ ಓವೈಸಿ

- Advertisement -
- Advertisement -

ದೆಹಲಿಯ ರಸ್ತೆಯಲ್ಲಿ ಶುಕ್ರವಾರದ ನಮಾಝ್‌ ಮಾಡುತ್ತಿದ್ದ ಮುಸ್ಲಿಮ್‌ ಸಮುದಾಯದ ಜನರ ಮೇಲೆ ಒದ್ದು ದುಷ್ಕೃತ್ಯವನ್ನು ಮೆರದ ಪೊಲೀಸರ ವರ್ತನೆಯನ್ನು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಖಂಡಿಸಿದ್ದು, ಮುಸ್ಲಿಮರು ನಮಾಜ್ ಮಾಡುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ಘಟನೆಯ ಬಗ್ಗೆ ಜಗತ್ತಿಗೆ ವಿವರಿಸಬೇಕಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಹೇಳಿಕೆಯನ್ನು ನೀಡಿರುವ  ಸಂಸದ ಅಸಾದುದ್ದೀನ್ ಓವೈಸಿ, ನೀವು ನಮ್ಮ ಮೇಲೆ ಒದ್ದರೆ ಅಥವಾ ಗುಂಡು ಹಾರಿಸಿದರೆ, ನಾವು ನಮಾಝ್‌ ನಿಲ್ಲಿಸುವುದಿಲ್ಲ. ಶುಕ್ರವಾರದ ಘಟನೆಯು ಮುಸ್ಲಿಮರ ವಿರುದ್ಧ ಜನರ ಮನಸ್ಸು ಎಷ್ಟು ಭ್ರಷ್ಟಗೊಂಡಿದೆ ಎಂಬುವುದನ್ನು ಎತ್ತಿ ತೋರಿಸುತ್ತಿದೆ ಎಂದು ಹೇಳಿದ್ದಾರೆ.

ಶುಕ್ರವಾರದಂದು ದೆಹಲಿಯ ರಸ್ತೆಗಳಲ್ಲಿ ಜನರು ಸೇರುವುದು ಮತ್ತು ನಮಾಝ್‌ನಲ್ಲಿ ಪಾಲ್ಗೊಳ್ಳುವುದು ಸಾಮಾನ್ಯವಾಗಿದೆ. ಹಿಂದಿನ ದೆಹಲಿ ಗಲಭೆಗಳಲ್ಲಿ ಮುಸ್ಲಿಮರನ್ನು ಪೊಲೀಸರು ಗುರಿಯಾಗಿಸಿಕೊಂಡ ಬಗೆಗೆ ದೆಹಲಿ ಪೊಲೀಸರು ಕಲಿಯಬೇಕು. ಈ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ, ಮುಸ್ಲಿಮರಿಗೆ ಎಷ್ಟು ಘನತೆ ಮತ್ತು ಗೌರವವಿದೆ ಎಂಬುವುದನ್ನು ಇದು ಹೇಳುತ್ತದೆ. ನಾನು ಪ್ರಧಾನಿ, ಬಿಜೆಪಿಯವರನ್ನು ಕೇಳಲು ಬಯಸುತ್ತೇನೆ ಅವಮಾನಕ್ಕೊಳಗಾದ ವ್ಯಕ್ತಿ ಯಾವ ಕುಟುಂಬಕ್ಕೆ ಸೇರಿದವನು? ಎಂದು ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.

ಏನಿದು ಘಟನೆ?

ಜನನಿಬಿಡ ರಸ್ತೆಯೊಂದರಲ್ಲಿ ಶುಕ್ರವಾರದ ಪ್ರಾರ್ಥನೆ ಸಲ್ಲಿಸುತ್ತಿದ್ದ ಸಣ್ಣ ಗುಂಪಿಗೆ ಪೊಲೀಸ್ ಅಧಿಕಾರಿಯೊಬ್ಬರು ಅಲ್ಲಿಂದ ತೆರಳುವಂತೆ ಕಾಲಿನಿಂದ ಒದೆಯುತ್ತಿರುವ ವಿಡಿಯೋ ನಿನ್ನೆ ವೈರಲ್ ಆಗಿತ್ತು. ಘಟನೆ ಕುರಿತು ವಿರೋಧ ವ್ಯಕ್ತವಾದ ನಂತರ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿತ್ತು.

ಘಟನೆಯ ವೀಡಿಯೋದಲ್ಲಿ ಕಂಡುಬರುವ ಪೊಲೀಸ್ ಪೋಸ್ಟ್ ಇನ್ ಚಾರ್ಜ್‌ನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಅಗತ್ಯ ಶಿಸ್ತು ಕ್ರಮವನ್ನೂ ತೆಗೆದುಕೊಳ್ಳಲಾಗುತ್ತಿದೆ ಎಂದು ಪೊಲೀಸ್ ಉಪ ಆಯುಕ್ತ ಎಂಕೆ ಮೀನಾ ತಿಳಿಸಿದ್ದಾರೆ.

ಘಟನೆಯ ಬಗ್ಗೆ ಕಾಂಗ್ರೆಸ್‌ನ ದೆಹಲಿ ಘಟಕವು ದೆಹಲಿ ಪೊಲೀಸರನ್ನು ನಿನ್ನೆ ತರಾಟೆಗೆ ತೆಗೆದುಕೊಂಡಿತ್ತು. ಇದು ತುಂಬಾ ನಾಚಿಕೆಗೇಡಿನ ಸಂಗತಿ! ರಸ್ತೆಯಲ್ಲಿ ನಮಾಝ್‌ ಮಾಡುವವರನ್ನು ಒದೆಯುತ್ತಿರುವ ದಿಲ್ಲಿ ಪೊಲೀಸ್ ಜವಾನ, ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಏನಿದೆ…? ಎಂದು ಪ್ರಶ್ನಿಸಿತ್ತು.

ಇದನ್ನು ಓದಿ: ವಾಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಪೊಲೀಸರಿಗೆ ಅರಿವು ಮೂಡಿಸುವ ಅಗತ್ಯವಿದೆ: ಸುಪ್ರೀಂಕೋರ್ಟ್

 

 

 

 

 

 

 

 

 

 

 

 

 

 

 

 

 

 

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...