Homeಮುಖಪುಟಜಾತಿ ವ್ಯವಸ್ಥೆ ಆರಂಭದ ಕುರಿತ ಅವಲೋಕನ ತೀರ್ಪಿನ ಪ್ರತಿಯಿಂದ ತೆಗೆದು ಹಾಕಿದ ಮದ್ರಾಸ್ ಹೈಕೋರ್ಟ್

ಜಾತಿ ವ್ಯವಸ್ಥೆ ಆರಂಭದ ಕುರಿತ ಅವಲೋಕನ ತೀರ್ಪಿನ ಪ್ರತಿಯಿಂದ ತೆಗೆದು ಹಾಕಿದ ಮದ್ರಾಸ್ ಹೈಕೋರ್ಟ್

- Advertisement -
- Advertisement -

ಸನಾತನ ಧರ್ಮದ ಕುರಿತ ವಿವಾದಾತ್ಮಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಉದಯನಿಧಿ ಸ್ಟಾಲಿನ್, ಸಚಿವ ಸೇಕರ್ ಬಾಬು ಮತ್ತು ಸಂಸದ ಎ ರಾಜಾ ಅವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಸಲ್ಲಿಸಿದ ಅರ್ಜಿಗಳ ತೀರ್ಪಿನ ವೇಳೆ  ಮದ್ರಾಸ್ ಹೈಕೋರ್ಟ್ ಇದೀಗ ಜಾತಿ ವ್ಯವಸ್ಥೆಯ ಮೂಲದ ಬಗ್ಗೆ ಮಾಡಿದ ಟೀಕೆಗಳನ್ನು ತೆಗೆದು ಹಾಕಿದೆ.

ಮಾರ್ಚ್ 6ರಂದು ನ್ಯಾಯಮೂರ್ತಿ ಅನಿತಾ ಸುಮಂತ್ ಅವರು ಪ್ರಕಟಿಸಿದ ತೀರ್ಪಿನಲ್ಲಿ, ಇಂದು ಸಮಾಜದಲ್ಲಿ ಜಾತಿಯ ಆಧಾರದ ಮೇಲೆ ಅಸಮಾನತೆಗಳಿವೆ ಮತ್ತು ಅವುಗಳನ್ನು ತೊಡೆದುಹಾಕಲು ಈ ನ್ಯಾಯಾಲಯವು ನಿಸ್ಸಂದಿಗ್ಧವಾಗಿ ಒಪ್ಪಿಕೊಳ್ಳುತ್ತದೆ. ಆದರೆ, ಇಂದು ನಮಗೆ ತಿಳಿದಿರುವಂತೆ ಜಾತಿ ವ್ಯವಸ್ಥೆಯ ಮೂಲವು ಒಂದು ಶತಮಾನಕ್ಕಿಂತ ಕಡಿಮೆ ಹಳೆಯದು ಎಂದು ತೀರ್ಪಿನಲ್ಲಿ ಹೇಳಲಾಗಿತ್ತು.

ಆದರೆ, ಪ್ರಸ್ತುತ ಮದ್ರಾಸ್ ಹೈಕೋರ್ಟ್ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ತೀರ್ಪಿನ ಪ್ರತಿಯಲ್ಲಿ ಮೇಲಿನ ಅವಲೋಕನಗಳನ್ನು ತೆಗೆದುಹಾಕಲಾಗಿದೆ. ಇಂದು ಸಮಾಜದಲ್ಲಿ ಜಾತಿಯ ಆಧಾರದ ಮೇಲೆ ಅಸಮಾನತೆಗಳಿವೆ ಮತ್ತು ಅವುಗಳನ್ನು ತೊಡೆದುಹಾಕಲು ಈ ನ್ಯಾಯಾಲಯವು ನಿಸ್ಸಂದಿಗ್ಧವಾಗಿ ಒಪ್ಪಿಕೊಳ್ಳುತ್ತದೆ. ಆದರೆ, ಇಂದು ನಾವು ತಿಳಿದಿರುವಂತೆ ಜಾತಿಗಳ ವರ್ಗೀಕರಣವು ತೀರಾ ಇತ್ತೀಚಿನ ಮತ್ತು ಆಧುನಿಕ ವಿದ್ಯಮಾನವಾಗಿದೆ ಎಂದು ತೀರ್ಪಿನ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.

ಸನಾತನ ಧರ್ಮವು ಉನ್ನತಿ, ಉದಾತ್ತ ಮತ್ತು ಸದ್ಗುಣಶೀಲ ನೀತಿ ಸಂಹಿತೆಯನ್ನು ಸೂಚಿಸುತ್ತದೆ ಎಂದು ನ್ಯಾಯಾಲಯವು ಗಮನಿಸಿದೆ ಮತ್ತು ಹೀಗಾಗಿ ಸಚಿವರು, ಸಂಸದರು ಸನಾತನ ಧರ್ಮದ ಕುರಿತು ನೀಡಿದ  ತೀರ್ಪು ತಪ್ಪಾಗಿದೆ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಹಿಂದೂ ಮುನ್ನಾನಿ ಸಂಘಟನೆಯ ಪದಾಧಿಕಾರಿಗಳಾದ ಟಿ ಮನೋಹರ್, ಕಿಶೋರ್ ಕುಮಾರ್ ಮತ್ತು ವಿಪಿ ಜಯಕುಮಾರ್ ಅವರು ಸಲ್ಲಿಸಿದ ಅರ್ಜಿಗಳ ವಿಚಾರಣೆ ವೇಳೆ ಅವಲೋಕನಗಳನ್ನು ಮಾಡಲಾಗಿದೆ. ನ್ಯಾಯಾಲಯವು, ಹೇಳಿಕೆಗಳನ್ನು ನಿರ್ದಿಷ್ಟ ಸಮುದಾಯದ ವಿರುದ್ಧ ದ್ವೇಷವನ್ನು ಹರಡುತ್ತದೆ ಎಂದು ಹೇಳಿದೆ.

ಜನತಾ ಪ್ರಾತಿನಿಧ್ಯ ಕಾಯ್ದೆಯಡಿ ಅನರ್ಹತೆಗಳ ಪಟ್ಟಿಯು ಲಕ್ಷ್ಮಣ ರೇಖೆ ಇದ್ದಂತೆ ಮತ್ತು ಅದನ್ನು ಅನುಸರಿಸಲು ನ್ಯಾಯಾಲಯ ಬದ್ಧವಾಗಿದೆ ಎಂದು ನ್ಯಾಯಾಲಯವು ಗಮನಿಸಿದೆ. ಹೀಗಾಗಿ, ಬಾಕಿ ಉಳಿದಿರುವ ಕ್ರಿಮಿನಲ್ ಮೊಕದ್ದಮೆಗಳಲ್ಲಿ ಸಚಿವರು, ಸಂಸದರಿಗೆ ಶಿಕ್ಷೆಯಾಗಿಲ್ಲ ಎಂದು ಗಮನಿಸಿದ ನ್ಯಾಯಾಲಯವು ಶಾಸಕತ್ವ ರದ್ಧತಿಗೆ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿತ್ತು. ಸನಾತನ ಧರ್ಮದ ಕುರಿತಾದ ಟೀಕೆಗಳಿಗಾಗಿ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಸುಪ್ರೀಂ ತರಾಟೆಗೆ ತೆಗೆದುಕೊಂಡ ಎರಡು ದಿನಗಳ ನಂತರ, ಇಂದು ಮದ್ರಾಸ್ ಹೈಕೋರ್ಟ್‌ ಸ್ಟಾಲಿನ್ ಮತ್ತು ಇತರ ಇಬ್ಬರು ಡಿಎಂಕೆ ನಾಯಕರನ್ನು ಶಾಸಕರಾಗಿ ಮುಂದುವರಿಸುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ‘ಸ್ಟಾಲಿನ್ ಅವರ ಹೇಳಿಕೆಗಳು ತಪ್ಪು’ ಎಂದು ಗಮನಿಸಿದ್ದರೂ, ಅವರು ಇನ್ನೂ ಯಾವುದೇ ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿಲ್ಲ’ ಎಂದು ಹೇಳಿತ್ತು.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರರಾಗಿರುವ 46 ವರ್ಷದ ಡಿಎಂಕೆ ನಾಯಕ, ಕಳೆದ ಸೆಪ್ಟೆಂಬರ್‌ನಲ್ಲಿ ಸನಾತನ ಧರ್ಮದ ಕುರಿತು ನೀಡಿದ ಹೇಳಿಕೆಯನ್ನು ಬಲಪಂಥೀಯರು ಮತ್ತು ಹಿಂದುತ್ವವಾದಿಗಳು ವಿವಾದ ಮಾಡಿದ್ದರು. ಸನಾತನವು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ, ಅದನ್ನು ವಿರೋಧಿಸುವ ಬದಲು ನಿರ್ಮೂಲನೆ ಮಾಡಬೇಕು’ ಎಂದು ಅವರು ಹೇಳಿದ ಮಾತುಗಳು ಭಾರೀ ಗದ್ದಲಕ್ಕೆ ಕಾರಣವಾಗಿತ್ತು. ಉದಯನಿಧಿ ಸ್ಟಾಲಿನ್ ಅಲ್ಲದೆ, ಅರ್ಜಿದಾರರು ರಾಜ್ಯ ಸಚಿವ ಪಿಕೆ ಸೇಕರ್ ಬಾಬು ಮತ್ತು ಡಿಎಂಕೆ ಸಂಸದ ಎ ರಾಜಾ ಅವರನ್ನು ಅವರ ಸ್ಥಾನದಿಂದ ವಜಾಗೊಳಿಸುವಂತೆ ಕೋರಿದ್ದರು. ಉದಯನಿಧಿ ಹೇಳಿಕೆ ನೀಡಿದಾಗ ಬಾಬು ಉಪಸ್ಥಿತರಿದ್ದರು. ಅವರ ಹೇಳಿಕೆಯನ್ನು ಬೆಂಬಲಿಸಿದ್ದ ರಾಜಾ, ‘ಸ್ಟಾಲಿನ್ ಅವರು ಜಾತಿ ಆಧಾರಿತ ತಾರತಮ್ಯವನ್ನು ಗುರಿಯಾಗಿಸಿಕೊಂಡಿದ್ದಾರೆ ಮತ್ತು ಹಿಂದೂ ಧರ್ಮವನ್ನು ಅಲ್ಲ’ ಎಂದು ಹೇಳಿದ್ದಾರೆ. ಅವರು ಕಾನೂನು ಕ್ರಮ ಎದುರಿಸಲು ಸಿದ್ಧ; ಆದರೆ ಅವರು ತಮ್ಮ ಹೇಳಿಕೆಗೆ ಬದ್ಧರಾಗಿದ್ದಾರೆ ಎಂದಿದ್ದರು.

ಇದನ್ನು ಓದಿ: ನೀವು ನಮ್ಮ ಮೇಲೆ ಒದ್ದರೆ, ನಾವು ನಮಾಝ್‌ ನಿಲ್ಲಿಸುವುದಿಲ್ಲ: ಅಸಾದುದ್ದೀನ್ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...