Homeಮುಖಪುಟಜಾತಿ ವ್ಯವಸ್ಥೆ ಆರಂಭದ ಕುರಿತ ಅವಲೋಕನ ತೀರ್ಪಿನ ಪ್ರತಿಯಿಂದ ತೆಗೆದು ಹಾಕಿದ ಮದ್ರಾಸ್ ಹೈಕೋರ್ಟ್

ಜಾತಿ ವ್ಯವಸ್ಥೆ ಆರಂಭದ ಕುರಿತ ಅವಲೋಕನ ತೀರ್ಪಿನ ಪ್ರತಿಯಿಂದ ತೆಗೆದು ಹಾಕಿದ ಮದ್ರಾಸ್ ಹೈಕೋರ್ಟ್

- Advertisement -
- Advertisement -

ಸನಾತನ ಧರ್ಮದ ಕುರಿತ ವಿವಾದಾತ್ಮಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಉದಯನಿಧಿ ಸ್ಟಾಲಿನ್, ಸಚಿವ ಸೇಕರ್ ಬಾಬು ಮತ್ತು ಸಂಸದ ಎ ರಾಜಾ ಅವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಸಲ್ಲಿಸಿದ ಅರ್ಜಿಗಳ ತೀರ್ಪಿನ ವೇಳೆ  ಮದ್ರಾಸ್ ಹೈಕೋರ್ಟ್ ಇದೀಗ ಜಾತಿ ವ್ಯವಸ್ಥೆಯ ಮೂಲದ ಬಗ್ಗೆ ಮಾಡಿದ ಟೀಕೆಗಳನ್ನು ತೆಗೆದು ಹಾಕಿದೆ.

ಮಾರ್ಚ್ 6ರಂದು ನ್ಯಾಯಮೂರ್ತಿ ಅನಿತಾ ಸುಮಂತ್ ಅವರು ಪ್ರಕಟಿಸಿದ ತೀರ್ಪಿನಲ್ಲಿ, ಇಂದು ಸಮಾಜದಲ್ಲಿ ಜಾತಿಯ ಆಧಾರದ ಮೇಲೆ ಅಸಮಾನತೆಗಳಿವೆ ಮತ್ತು ಅವುಗಳನ್ನು ತೊಡೆದುಹಾಕಲು ಈ ನ್ಯಾಯಾಲಯವು ನಿಸ್ಸಂದಿಗ್ಧವಾಗಿ ಒಪ್ಪಿಕೊಳ್ಳುತ್ತದೆ. ಆದರೆ, ಇಂದು ನಮಗೆ ತಿಳಿದಿರುವಂತೆ ಜಾತಿ ವ್ಯವಸ್ಥೆಯ ಮೂಲವು ಒಂದು ಶತಮಾನಕ್ಕಿಂತ ಕಡಿಮೆ ಹಳೆಯದು ಎಂದು ತೀರ್ಪಿನಲ್ಲಿ ಹೇಳಲಾಗಿತ್ತು.

ಆದರೆ, ಪ್ರಸ್ತುತ ಮದ್ರಾಸ್ ಹೈಕೋರ್ಟ್ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ತೀರ್ಪಿನ ಪ್ರತಿಯಲ್ಲಿ ಮೇಲಿನ ಅವಲೋಕನಗಳನ್ನು ತೆಗೆದುಹಾಕಲಾಗಿದೆ. ಇಂದು ಸಮಾಜದಲ್ಲಿ ಜಾತಿಯ ಆಧಾರದ ಮೇಲೆ ಅಸಮಾನತೆಗಳಿವೆ ಮತ್ತು ಅವುಗಳನ್ನು ತೊಡೆದುಹಾಕಲು ಈ ನ್ಯಾಯಾಲಯವು ನಿಸ್ಸಂದಿಗ್ಧವಾಗಿ ಒಪ್ಪಿಕೊಳ್ಳುತ್ತದೆ. ಆದರೆ, ಇಂದು ನಾವು ತಿಳಿದಿರುವಂತೆ ಜಾತಿಗಳ ವರ್ಗೀಕರಣವು ತೀರಾ ಇತ್ತೀಚಿನ ಮತ್ತು ಆಧುನಿಕ ವಿದ್ಯಮಾನವಾಗಿದೆ ಎಂದು ತೀರ್ಪಿನ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.

ಸನಾತನ ಧರ್ಮವು ಉನ್ನತಿ, ಉದಾತ್ತ ಮತ್ತು ಸದ್ಗುಣಶೀಲ ನೀತಿ ಸಂಹಿತೆಯನ್ನು ಸೂಚಿಸುತ್ತದೆ ಎಂದು ನ್ಯಾಯಾಲಯವು ಗಮನಿಸಿದೆ ಮತ್ತು ಹೀಗಾಗಿ ಸಚಿವರು, ಸಂಸದರು ಸನಾತನ ಧರ್ಮದ ಕುರಿತು ನೀಡಿದ  ತೀರ್ಪು ತಪ್ಪಾಗಿದೆ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಹಿಂದೂ ಮುನ್ನಾನಿ ಸಂಘಟನೆಯ ಪದಾಧಿಕಾರಿಗಳಾದ ಟಿ ಮನೋಹರ್, ಕಿಶೋರ್ ಕುಮಾರ್ ಮತ್ತು ವಿಪಿ ಜಯಕುಮಾರ್ ಅವರು ಸಲ್ಲಿಸಿದ ಅರ್ಜಿಗಳ ವಿಚಾರಣೆ ವೇಳೆ ಅವಲೋಕನಗಳನ್ನು ಮಾಡಲಾಗಿದೆ. ನ್ಯಾಯಾಲಯವು, ಹೇಳಿಕೆಗಳನ್ನು ನಿರ್ದಿಷ್ಟ ಸಮುದಾಯದ ವಿರುದ್ಧ ದ್ವೇಷವನ್ನು ಹರಡುತ್ತದೆ ಎಂದು ಹೇಳಿದೆ.

ಜನತಾ ಪ್ರಾತಿನಿಧ್ಯ ಕಾಯ್ದೆಯಡಿ ಅನರ್ಹತೆಗಳ ಪಟ್ಟಿಯು ಲಕ್ಷ್ಮಣ ರೇಖೆ ಇದ್ದಂತೆ ಮತ್ತು ಅದನ್ನು ಅನುಸರಿಸಲು ನ್ಯಾಯಾಲಯ ಬದ್ಧವಾಗಿದೆ ಎಂದು ನ್ಯಾಯಾಲಯವು ಗಮನಿಸಿದೆ. ಹೀಗಾಗಿ, ಬಾಕಿ ಉಳಿದಿರುವ ಕ್ರಿಮಿನಲ್ ಮೊಕದ್ದಮೆಗಳಲ್ಲಿ ಸಚಿವರು, ಸಂಸದರಿಗೆ ಶಿಕ್ಷೆಯಾಗಿಲ್ಲ ಎಂದು ಗಮನಿಸಿದ ನ್ಯಾಯಾಲಯವು ಶಾಸಕತ್ವ ರದ್ಧತಿಗೆ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿತ್ತು. ಸನಾತನ ಧರ್ಮದ ಕುರಿತಾದ ಟೀಕೆಗಳಿಗಾಗಿ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಸುಪ್ರೀಂ ತರಾಟೆಗೆ ತೆಗೆದುಕೊಂಡ ಎರಡು ದಿನಗಳ ನಂತರ, ಇಂದು ಮದ್ರಾಸ್ ಹೈಕೋರ್ಟ್‌ ಸ್ಟಾಲಿನ್ ಮತ್ತು ಇತರ ಇಬ್ಬರು ಡಿಎಂಕೆ ನಾಯಕರನ್ನು ಶಾಸಕರಾಗಿ ಮುಂದುವರಿಸುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ‘ಸ್ಟಾಲಿನ್ ಅವರ ಹೇಳಿಕೆಗಳು ತಪ್ಪು’ ಎಂದು ಗಮನಿಸಿದ್ದರೂ, ಅವರು ಇನ್ನೂ ಯಾವುದೇ ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿಲ್ಲ’ ಎಂದು ಹೇಳಿತ್ತು.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರರಾಗಿರುವ 46 ವರ್ಷದ ಡಿಎಂಕೆ ನಾಯಕ, ಕಳೆದ ಸೆಪ್ಟೆಂಬರ್‌ನಲ್ಲಿ ಸನಾತನ ಧರ್ಮದ ಕುರಿತು ನೀಡಿದ ಹೇಳಿಕೆಯನ್ನು ಬಲಪಂಥೀಯರು ಮತ್ತು ಹಿಂದುತ್ವವಾದಿಗಳು ವಿವಾದ ಮಾಡಿದ್ದರು. ಸನಾತನವು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ, ಅದನ್ನು ವಿರೋಧಿಸುವ ಬದಲು ನಿರ್ಮೂಲನೆ ಮಾಡಬೇಕು’ ಎಂದು ಅವರು ಹೇಳಿದ ಮಾತುಗಳು ಭಾರೀ ಗದ್ದಲಕ್ಕೆ ಕಾರಣವಾಗಿತ್ತು. ಉದಯನಿಧಿ ಸ್ಟಾಲಿನ್ ಅಲ್ಲದೆ, ಅರ್ಜಿದಾರರು ರಾಜ್ಯ ಸಚಿವ ಪಿಕೆ ಸೇಕರ್ ಬಾಬು ಮತ್ತು ಡಿಎಂಕೆ ಸಂಸದ ಎ ರಾಜಾ ಅವರನ್ನು ಅವರ ಸ್ಥಾನದಿಂದ ವಜಾಗೊಳಿಸುವಂತೆ ಕೋರಿದ್ದರು. ಉದಯನಿಧಿ ಹೇಳಿಕೆ ನೀಡಿದಾಗ ಬಾಬು ಉಪಸ್ಥಿತರಿದ್ದರು. ಅವರ ಹೇಳಿಕೆಯನ್ನು ಬೆಂಬಲಿಸಿದ್ದ ರಾಜಾ, ‘ಸ್ಟಾಲಿನ್ ಅವರು ಜಾತಿ ಆಧಾರಿತ ತಾರತಮ್ಯವನ್ನು ಗುರಿಯಾಗಿಸಿಕೊಂಡಿದ್ದಾರೆ ಮತ್ತು ಹಿಂದೂ ಧರ್ಮವನ್ನು ಅಲ್ಲ’ ಎಂದು ಹೇಳಿದ್ದಾರೆ. ಅವರು ಕಾನೂನು ಕ್ರಮ ಎದುರಿಸಲು ಸಿದ್ಧ; ಆದರೆ ಅವರು ತಮ್ಮ ಹೇಳಿಕೆಗೆ ಬದ್ಧರಾಗಿದ್ದಾರೆ ಎಂದಿದ್ದರು.

ಇದನ್ನು ಓದಿ: ನೀವು ನಮ್ಮ ಮೇಲೆ ಒದ್ದರೆ, ನಾವು ನಮಾಝ್‌ ನಿಲ್ಲಿಸುವುದಿಲ್ಲ: ಅಸಾದುದ್ದೀನ್ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...