Homeಮುಖಪುಟಚುನಾವಣಾ ಆಯುಕ್ತರಾಗಿ ನೇಮಕಾತಿ ವೇಳೆಯೂ ಉದ್ಭವಿಸಿದ್ದ ವಿವಾದ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಅರುಣ್ ಗೋಯೆಲ್...

ಚುನಾವಣಾ ಆಯುಕ್ತರಾಗಿ ನೇಮಕಾತಿ ವೇಳೆಯೂ ಉದ್ಭವಿಸಿದ್ದ ವಿವಾದ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಅರುಣ್ ಗೋಯೆಲ್ ರಾಜೀನಾಮೆ ನೀಡಿದ್ದೇಕೆ?

- Advertisement -
- Advertisement -

ಲೋಕಸಭೆ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇರುವಾಗ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ ನೀಡಿದ್ದು, ರಾಷ್ಟ್ರಪತಿಗಳು ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಆದರೆ ಅಧಿಕಾರವಧಿ ಇನ್ನೂ 3 ವರ್ಷಗಳ ಕಾಲ ಇದ್ದರೂ, ಚುನಾವಣೆ ಹೊಸ್ತಿಲಲ್ಲಿ ಅವರು ರಾಜೀನಾಮೆ ನೀಡಿದ್ದೇಕೆ ಎಂಬ ಪ್ರಶ್ನೆಗಳು ವ್ಯಾಪಕವಾಗಿ ಉದ್ಭವಿಸಿದೆ.

ಮೂಲಗಳ ಪ್ರಕಾರ, ಚುನಾವಣೆ ದಿನಾಂಕಗಳನ್ನು ಮುಂದಿನ ವಾರ ಘೋಷಿಸುವ ಸಾಧ್ಯತೆಯಿದೆ ಮತ್ತು  ಗೋಯೆಲ್ ಅವರ ರಾಜೀನಾಮೆ ಇದೀಗ ಈ ಬಗ್ಗೆ ಪ್ರಶ್ನೆಯನ್ನು ಹುಟ್ಟುಹಾಕಿದೆ. ರಾಜೀನಾಮೆ ನೀಡುವಾಗ  ಗೋಯೆಲ್ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿದ್ದಾರೆ ಎಂದು ಉನ್ನತ ಅಧಿಕಾರಿಗಳು ಹೇಳಿದ್ದಾರೆ, ಸರ್ಕಾರವು ಅವರನ್ನು ಹುದ್ದೆ ತೊರೆಯದಂತೆ ಮನವೊಲಿಸಲು ಪ್ರಯತ್ನಿಸಿದೆ, ಆದರೆ ಅವರು  ಅದಕ್ಕೆ ಒಪ್ಪಲಿಲ್ಲ ಎಂದು ಅಧಿಕಾರಿಯೋರ್ವರು ಹೇಳಿದ್ದಾರೆ. ರಾಜೀನಾಮೆಗೆ ಅನಾರೋಗ್ಯವೇ ಕಾರಣ ಎಂಬ ಊಹಾಪೋಹಗಳ ಬೆನ್ನಲ್ಲಿ ಗೋಯೆಲ್ ಪರಿಪೂರ್ಣವಾಗಿ ಆರೋಗ್ಯವಾಗಿದ್ದಾರೆ, ನೂತನ ಚುನಾವಣಾ ಆಯುಕ್ತರ ನೇಮಕ ಪ್ರಕ್ರಿಯೆಯನ್ನು ಸರ್ಕಾರ ಆರಂಭಿಸಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಶನಿವಾರ ಹೊರಡಿಸಿರುವ ಗೆಜೆಟ್ ಅಧಿಸೂಚನೆಯಲ್ಲಿ, ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಉಲ್ಲಖಿಸಲಾಗಿದೆ.

ಅರುಣ್ ಗೋಯಲ್ 1985ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದರು. ನವೆಂಬರ್ 18, 2022ರಂದು ಸ್ವಯಂ ನಿವೃತ್ತಿ ಪಡೆದು, ಮರುದಿನ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದರು. ಅವರ ನೇಮಕ ವಿವಾದಕ್ಕೀಡಾಗಿತ್ತು. ಸುಪ್ರೀಂಕೋರ್ಟ್ ನಲ್ಲಿ ಈ ಕುರಿತು ಪ್ರಶ್ನಿಸಲಾಗಿತ್ತು. ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ಸ್ವಯಂ ನಿವೃತ್ತಿ ಪಡೆದ ಅರುಣ್ ಗೋಯಲ್ ಅವರನ್ನು ತಕ್ಷಣವೇ ಚುನಾವಣಾ ಆಯುಕ್ತ ಹುದ್ದೆಗೆ ನೇಮಿಸುವ ಆತುರವೇನಿತ್ತು? ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ADR) ಗೋಯೆಲ್ ಅವರ ನೇಮಕಾತಿಯ ವಿರುದ್ಧ ಏಪ್ರಿಲ್ 2023ರಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಕಳೆದ ವರ್ಷ ಮಾರ್ಚ್‌ನಲ್ಲಿ ಚುನಾವಣಾ ಆಯೋಗಗಳ ನೇಮಕಾತಿ ವಿಷಯದ ಕುರಿತು ಸಂವಿಧಾನಿಕ ಪೀಠವು ತೀರ್ಪು ನೀಡಿದ್ದರಿಂದ ಸುಪ್ರೀಂ ಕೋರ್ಟ್ 2023 ಆಗಸ್ಟ್‌ನಲ್ಲಿ ಈ ಕುರಿತ ಅರ್ಜಿಯನ್ನು ವಜಾಗೊಳಿಸಿತ್ತು.

ಡಿಸೆಂಬರ್ 7, 1962ರಂದು ಪಂಜಾಬ್‌ನ ಪಟಿಯಾಲದಲ್ಲಿ ಜನಿಸಿದ್ದ ಅರುಣ್ ಗೋಯೆಲ್, ಗಣಿತಶಾಸ್ತ್ರದಲ್ಲಿ M.Sc. ಪದವಿಯನ್ನು ಕುಲಪತಿಗಳ ಪದಕದೊಂದಿಗೆ ಪಡೆದಿದ್ದರು. ಅವರು ಇಂಗ್ಲೆಂಡ್‌ನ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದ ಚರ್ಚಿಲ್ ಕಾಲೇಜಿನಿಂದ ಅಭಿವೃದ್ಧಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಅವರು ಅಮೇರಿಕದ ಹಾರ್ವರ್ಡ್ ವಿಶ್ವವಿದ್ಯಾಲಯದ ಜಾನ್ ಎಫ್ ಕೆನಡಿ ಸರ್ಕಾರಿ ಶಾಲೆಯಲ್ಲಿ ತರಬೇತಿ ಪಡೆದಿದ್ದಾರೆ. ಆ ಬಳಿಕ ಪಂಜಾಬ್ ಕೇಡರ್‌ನ 1985-ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದರು. ಅರುಣ್ ಗೋಯೆಲ್ ಅವರು 37 ವರ್ಷಗಳ ಸೇವೆಯ ನಂತರ ಭಾರತ ಸರ್ಕಾರದ  ಕೈಗಾರಿಕೆ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಅವರು ನವೆಂಬರ್ 2022ರಲ್ಲಿ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಫೆಬ್ರವರಿ 2025ರಲ್ಲಿ ರಾಜೀವ್ ಕುಮಾರ್ ಅವರ ಅಧಿಕಾರದ ಅಂತ್ಯದ ನಂತರ ಗೋಯೆಲ್ ಅವರು ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗುವ ಸಾಧ್ಯತೆ ಇತ್ತು. 61 ವರ್ಷ ವಯಸ್ಸಿನ ಅವರ ಅಧಿಕಾರಾವಧಿಯು ಡಿಸೆಂಬರ್ 2027ರವರೆಗೆ ಇತ್ತು. ಫೆಬ್ರವರಿಯಲ್ಲಿ ಅನುಪ್ ಪಾಂಡೆ ನಿವೃತ್ತಿ ಮತ್ತು ಇದೀಗ ಗೋಯೆಲ್ ರಾಜೀನಾಮೆ ನಂತರ, ಮೂವರು ಸದಸ್ಯರ ಚುನಾವಣಾ ಆಯೋಗದ ಸಮಿತಿಯು ಈಗ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರನ್ನು ಮಾತ್ರ ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...