Homeಮುಖಪುಟಮೋದಿ ಹೆಸರು ಜಪಿಸುವ ಪತಿಗೆ ಊಟ ಹಾಕ್ಬೇಡಿ: ಅರವಿಂದ್ ಕೇಜ್ರಿವಾಲ್

ಮೋದಿ ಹೆಸರು ಜಪಿಸುವ ಪತಿಗೆ ಊಟ ಹಾಕ್ಬೇಡಿ: ಅರವಿಂದ್ ಕೇಜ್ರಿವಾಲ್

- Advertisement -
- Advertisement -

ಮನೆಯಲ್ಲಿ ಮೋದಿ ಹೆಸರನ್ನು ಜಪ ಮಾಡಿದರೆ ಪತಿಗೆ ರಾತ್ರಿ ಊಟವನ್ನು ಹಾಕ್ಬೇಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಹಿಳೆಯರಿಗೆ ಹೇಳಿದ್ದಾರೆ.

‘ಮಹಿಳಾ ಸಮ್ಮಾನ್ ಸಮರೋಹ್’ ಕಾರ್ಯಕ್ರಮದಲ್ಲಿ ಮಾತನಾಡಿದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌, ಅನೇಕ ಪುರುಷರು ಪ್ರಧಾನಿ ಮೋದಿಯವರ ಹೆಸರನ್ನು ಜಪಿಸುತ್ತಿದ್ದಾರೆ, ಆದರೆ ನೀವು ಅವರನ್ನು ಸರಿಪಡಿಸಬೇಕು. ನಿಮ್ಮ ಪತಿ ಮೋದಿಯವರ ಹೆಸರನ್ನು ಜಪಿಸಿದರೆ, ನೀವು ಅವರಿಗೆ ರಾತ್ರಿಯ ಊಟವನ್ನು ನೀಡುವುದಿಲ್ಲ ಎಂದು ಹೇಳಬೇಕು ಎಂದು ಹೇಳಿದ್ದಾರೆ.

ಸರ್ಕಾರವು 2024-25ರ ಬಜೆಟ್‌ನಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೆ ಮಾಸಿಕ ಮೊತ್ತ 1,000 ರೂ.ಗಳನ್ನು ಒದಗಿಸುವ ಯೋಜನೆಯನ್ನು ಘೋಷಿಸಿದ ನಂತರ ಮಹಿಳೆಯರೊಂದಿಗೆ ಸಂವಾದ ನಡೆಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಹೇಳಿಕೆಯನ್ನು ನೀಡಲಾಗಿದೆ. ಅರವಿಂದ್ ಕೇಜ್ರಿವಾಲ್ ಅವರು ಕಾರ್ಯಕ್ರಮದಲ್ಲಿ, ಮಹಿಳೆಯರು ಎಎಪಿ ಪಕ್ಷಕ್ಕೆ ಬೆಂಬಲಿಸಬೇಕು ಮತ್ತು ತಮ್ಮ ಕುಟುಂಬಸ್ಥರನ್ನು ಆಪ್‌ಗೆ ಬೆಂಬಲಿಸುವಂತೆ ಮನವೊಲಿಕೆ ಮಾಡಬೇಕು,  ಬಿಜೆಪಿಯನ್ನು ಬೆಂಬಲಿಸುವ ಇತರ ಮಹಿಳೆಯರಿಗೆ ನಿಮ್ಮ ಸಹೋದರ ಕೇಜ್ರಿವಾಲ್ ಮಾತ್ರ ನಿಮ್ಮ ಬೆಂಬಲಕ್ಕೆ ನಿಲ್ಲುತ್ತಾರೆ ಎಂದು ಹೇಳುವಂತೆ ಅವರು ಮಹಿಳೆಯರಿಗೆ  ಆಗ್ರಹಿಸಿದ್ದಾರೆ.

ನಾನು ಕರೆಂಟ್ ಫ್ರೀ ಮಾಡಿದ್ದೇನೆ, ಬಸ್ ಟಿಕೆಟ್ ಉಚಿತ ಮಾಡಿದ್ದೇನೆ, ಈಗ ನಾನು ಪ್ರತಿ ತಿಂಗಳು ಮಹಿಳೆಯರಿಗೆ ಈ 1,000 ರೂಗಳನ್ನು ನೀಡುತ್ತಿದ್ದೇನೆ, ಬಿಜೆಪಿ ಅವರಿಗೆ ಏನು ಮಾಡಿದೆ? ಬಿಜೆಪಿಗೆ ಏಕೆ ಮತ ಹಾಕಬೇಕು? ಈ ಬಾರಿ ಕೇಜ್ರಿವಾಲ್‌ಗೆ ಮತ ಹಾಕಿ, ಅವರು ಮಹಿಳಾ ಸಬಲೀಕರಣದ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಅವರು ಪಕ್ಷದಲ್ಲಿ ಮಹಿಳೆಯರಿಗೆ ಕೆಲ ಹುದ್ದೆ ನೀಡಿ ಮಹಿಳಾ ಸಬಲೀಕರಣ ಮಾಡಿದ್ದೇವೆ ಎಂದು ಹೇಳುತ್ತಿದ್ದಾರೆ. ಮಹಿಳೆಯರಿಗೆ ಹುದ್ದೆ ಬೇಡ, ದೊಡ್ಡ ಹುದ್ದೆ, ಟಿಕೇಟ್ ಎಲ್ಲ ಸಿಗಬೇಕು ಎಂದು ನಾನು ಹೇಳುತ್ತಿಲ್ಲ. ಆದರೆ ಇದರಿಂದ ಕೇವಲ ಎರಡ್ಮೂರು ಮಹಿಳೆಯರಿಗೆ ಮಾತ್ರ ಲಾಭ. ಉಳಿದ ಮಹಿಳೆಯರಿಗೆ ಏನು ಸಿಗುತ್ತದೆ? ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. ತಮ್ಮ ಸರ್ಕಾರದ ಹೊಸ ಯೋಜನೆ  ‘ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆ’ ನಿಜವಾದ ಮಹಿಳಾ ಸಬಲೀಕರಣವನ್ನು ಮಾಡುತ್ತದೆ ಎಂದು ಹೇಳಿದ್ದಾರೆ.

ಹಣವಿದ್ದಾಗ ಸಬಲೀಕರಣವಾಗುತ್ತದೆ, ಪ್ರತಿ ಮಹಿಳೆಗೆ ಪ್ರತಿ ತಿಂಗಳು 1,000ರೂ. ಸಿಕ್ಕಾಗ ನಿಜವಾದ ಸಬಲೀಕರಣವಾಗುತ್ತದೆ. ಇಡೀ ವಿಶ್ವದಲ್ಲಿ ಈ ಯೋಜನೆಯು “ಅತಿದೊಡ್ಡ ಮಹಿಳಾ ಸಬಲೀಕರಣದ ಕಾರ್ಯಕ್ರಮ” ಎಂದು ದೆಹಲಿ ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನು ಓದಿ: ಜೈಪುರ ರೈಲಿನಲ್ಲಿ RPF ಪೇದೆ ನಾಲ್ವರನ್ನು ಹತ್ಯೆ ಮಾಡುವಾಗ ಅಡಗಿ ಕುಳಿತಿದ್ದ ಪೇದೆಗಳು: ತಡವಾಗಿ ಕರ್ತವ್ಯದಿಂದ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...