Homeಮುಖಪುಟಬಿಜೆಪಿ 400 ಸೀಟ್ ಗೆದ್ದರೆ ಸಂವಿಧಾನ ತಿದ್ದುಪಡಿ: ಹಿಡನ್‌ ಅಜೆಂಡಾ ಬಿಚ್ಚಿಟ್ಟ ಬಿಜೆಪಿ ಸಂಸದ ಅನಂತ್‌...

ಬಿಜೆಪಿ 400 ಸೀಟ್ ಗೆದ್ದರೆ ಸಂವಿಧಾನ ತಿದ್ದುಪಡಿ: ಹಿಡನ್‌ ಅಜೆಂಡಾ ಬಿಚ್ಚಿಟ್ಟ ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ

- Advertisement -
- Advertisement -

ಸದಾ ದ್ವೇಷದ ಹೇಳಿಕೆಗೆ ಸುದ್ದಿಯಾಗುತ್ತಿದ್ದ ಉತ್ತರಕನ್ನಡ ಸಂಸದ ಅನಂತ್‌ ಕುಮಾರ್ ಹೆಗಡೆ ಸಂವಿಧಾನಕ್ಕೆ ತಿದ್ದುಪಡಿಯನ್ನು ತರುವ ಕುರಿತು ತನ್ನ ದುರಾಶೆಯನ್ನು ವ್ಯಕ್ತಪಡಿಸಿದ್ದು, ಸಂವಿಧಾನವನ್ನು ತಿದ್ದುಪಡಿ ಮಾಡಬೇಕಿದ್ರೆ, ಸಂವಿಧಾನವನ್ನು ಬದಲಾಯಿಸಬೇಕಿದ್ದರೆ ಲೋಕಸಭೆಯಲ್ಲಿ 400ಕ್ಕೂ ಅಧಿಕ ಸೀಟ್‌ ಗೆಲ್ಲಬೇಕು ಎಂದು ಹೇಳಿ ವಿವಾದವನ್ನು ಸೃಷ್ಟಿಸಿದ್ದಾರೆ.

ಸಿದ್ದಾಪುರ ತಾಲೂಕಿನ ಹಲಗೇರಿ ಗ್ರಾಮದಲ್ಲಿ ಮಾತನಾಡಿದ ಸಂಸದ ಅನಂತ್‌ ಕುಮಾರ್‌ ಹೆಗಡೆ, ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಹೇಳಿದ್ದಾರೆ. 400ಸೀಟ್‌ ಯಾಕೆ? ಲೋಕಸಭೆಯಲ್ಲಿ ಬಹುಮತ ಇದೆ. ಆದರೆ, ರಾಜ್ಯಸಭೆಯಲ್ಲಿ 2/3 ರಷ್ಟು ಇಲ್ಲ. ಅಲ್ಪ ಬಹುಮತ ಇದೆ. ರಾಜ್ಯ ಸರಕಾರಗಳಲ್ಲಿ ಬೇಕಾದ ಬಹುಮತ ಇಲ್ಲ. ಸಂವಿಧಾನ ತಿದ್ದುಪಡಿ ಮಾಡಬೇಕಿದ್ದರೆ, ಕಾಂಗ್ರೆಸ್​ನವರು ಅನತಗ್ಯವಾಗಿ ಹೇರಿದ ವಿಚಾರಗಳನ್ನು ಸಂವಿಧಾನದಿಂದ ತೆಗೆದು ಹಾಕಲು ಬಹುಮತದ ಅಗತ್ಯವಿದೆ. ಹೀಗಾಗಿ ಈ ಸಲ ಮೋದಿಯವರು 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನವರು ಸಂವಿಧಾನದ ಮೂಲರೂಪವನ್ನೇ ತಿರುಚಿದ್ದಾರೆ. ಸಂವಿಧಾನದಲ್ಲಿ ಬೇಡದೇ ಇರುವುದನ್ನೆಲ್ಲ ಸೇರಿಸಿದ್ದಾರೆ. ಇಡೀ ಹಿಂದೂ ಸಮಾಜವನ್ನು ದಮನಿಸುವ ರೀತಿ ಕಾನೂನು ತಂದಿದ್ದಾರೆ. ಇದೆಲ್ಲದರ ಬದಲಾವಣೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಬಹುಮತ ಪಡೆದರೆ ಮಾತ್ರ ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಶಾಸನ ಸಭೆಗಳಲ್ಲಿ ಕಾಂಗ್ರೆಸ್‌ನವರು ಹೆಚ್ಚು ಇದ್ದರೆ ಏನೇ ತಿದ್ದುಪಡಿ ತಂದರೂ ಪಾಸ್ ಆಗಲ್ಲ. ಸಿಎಎ ಜಾರಿಗೆ ರಾಜ್ಯಗಳಿಂದ ಒಪ್ಪಿಗೆ ಬಂದಿಲ್ಲ. ಸಿಎಎ ತರದಿದ್ದರೆ ದೇಶದಲ್ಲಿ ಕಾನೂನು ಸುವ್ಯವಸ್ಥೆ ನಮ್ಮ ಕೈಯಲ್ಲಿ ಇರಲ್ಲ. ಇದು ದೇಶದ್ರೋಹಿಗಳ ಆಡಂಬರ ಆಗುತ್ತದೆ. ದೇಶ ಸರಿ ಆಗಬೇಕೆಂದರೆ ನಮ್ಮವರಿಂದಲೇ ಹೊರತು ಬೇರೆ ಅವರಿಂದ ಆಗಲ್ಲ. ಎಲ್ಲೆಡೆ ಬಹುಮತ ಬರಲಿ, ಆ ಮೇಲೆ ನೋಡಿ ಮಾರಿಜಾತ್ರೆ ಹೇಗಿರುತ್ತೆ ಎಂದು, ಜಾತ್ರೆಗೆ ಒಂದು ಕಳೆ ಬರೋದು ಇದಾದ ನಂತರವೇ ಎಂದು ಅನಂತ್‌ ಕುಮಾರ್‌ ಹೆಗಡೆ ಬಾಯಿಗೆ ಬಂದಂತೆ ಮಾತನಾಡಿದ್ದು, ಸಂವಿಧಾನದ ಪ್ರಕಾರ ಲೋಕಸಭೆಗೆ ಆಯ್ಕೆಯಾಗಿ ಸಂಸದನಾಗಿದ್ದುಕೊಂಡು, ತನ್ನದೇ ಸ್ಥಾನಕ್ಕೆ ಧಕ್ಕೆ ಬರುವ ರೀತಿಯಲ್ಲಿ ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯ ಬಳಿಕ 4 ವರ್ಷಗಳಿಂದ ತೆರೆಯ ಹಿಂದೆ ಸರಿದಿದ್ದ ಸಂಸದ ಅನಂತ್‌ ಕುಮಾರ್‌ ಹೆಗಡೆ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತೆ ವಿವಾದಾತ್ಮಕ ಮತ್ತು ದ್ವೇಷದ ಹೇಳಿಕೆ ಮೂಲಕ ಸುದ್ದಿಯಾಗಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏಕವಚನದಿಂದ ನಿಂದಿಸಿ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಮುಂಡಗೋಡ ಪೊಲೀಸರು ಇತ್ತೀಚೆಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದರು. ಕೆಲವು ದಿನಗಳ ಹಿಂದೆಯಷ್ಟೇ ಕುಮಟಾದಲ್ಲಿ ನಡೆದ ಸಭೆಯಲ್ಲಿ ಅನಂತಕುಮಾರ್‌ ಹೆಗಡೆ ಪ್ರಚೋದನಕಾರಿ ಮಾತನಾಡಿದ್ದಕ್ಕೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅಯೋಧ್ಯೆ ರಾಮಮಂದಿರ ವಿಚಾರವಾಗಿ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಅನಂತ್‌ ಕುಮಾರ್‌ ಹೆಗಡೆ ನಾಲಗೆ ಹರಿಯ ಬಿಟ್ಟಿದ್ದರು. ಭಟ್ಕಳ, ಶಿರಸಿ, ಶ್ರೀರಂಗಪಟ್ಟಣದ ಮಸೀದಿಗಳು ಹಿಂದೆ ದೇವಾಲಯಗಳಾಗಿದ್ದವು. ಅವುಗಳನ್ನು ಬಾಬರಿ ಮಸೀದಿ ರೀತಿಯಲ್ಲಿ ಹೊಡೆಯಬೇಕು ಎಂದು ಅನಂತ್‌ ಕುಮಾರ್‌ ಹೆಗಡೆ ಹೇಳಿದ್ದರು. ಅನಂತ್‌ ಕುಮಾರ್‌ ಹೆಗಡೆ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಹೇಳಿಕೆ ಜೊತೆಗೆ ಸಾಮಾಜಿಕ ಅಶಾಂತಿಗೆ ಕಾರಣವಾಗುವ ಮಾತುಗಳನ್ನಾಡಿರುವುದರಿಂದ ಸೆಕ್ಷನ್ 153ಎ ಮತ್ತು 505 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನು ಓದಿ: ಜೈಪುರ ರೈಲಿನಲ್ಲಿ RPF ಪೇದೆ ನಾಲ್ವರನ್ನು ಹತ್ಯೆ ಮಾಡುವಾಗ ಅಡಗಿ ಕುಳಿತಿದ್ದ ಪೇದೆಗಳು: ತಡವಾಗಿ ಕರ್ತವ್ಯದಿಂದ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...