Homeಕರ್ನಾಟಕಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ: ಸರ್ಕಾರಿ ಶಾಲೆಗಳನ್ನು ಹಳ್ಳಕ್ಕೆ ತಳ್ಳುವ ಮತ್ತೊಂದು ಹೆಜ್ಜೆ..

ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ: ಸರ್ಕಾರಿ ಶಾಲೆಗಳನ್ನು ಹಳ್ಳಕ್ಕೆ ತಳ್ಳುವ ಮತ್ತೊಂದು ಹೆಜ್ಜೆ..

- Advertisement -
- Advertisement -

ಪ್ರಾರ್ಥಮಿಕ ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಶಾಲಾ ವಾಸ್ತವ್ಯ ಮಾಡಿ ರಾಜ್ಯದ ಗಮನ ಸೆಳೆದರು. ಇಂತಹ ವಾಸ್ತವ್ಯದಿಂದ ಯಾರಿಗೆ ಲಾಭವಾಯಿತೋ, ಇಲ್ಲವೋ ಭರ್ಜರಿ ಪ್ರಚಾರವಂತು ಸಿಕ್ಕಿತು. ಸಚಿವರು ಶಾಲೆಗಳು ಮತ್ತು ಅಲ್ಲಿ ಕಲಿಯುತ್ತಿರುವ ಮಕ್ಕಳ ಪರಿಸ್ಥಿತಿ ತಿಳಿದುಕೊಂಡರೆ? ಸ್ಪಷ್ಟವಾಗಿ ಇಲ್ಲವೆಂದೇ ಹೇಳಬೇಕು. ಹೇಗೆಂದು ನೋಡೋಣ ಬನ್ನಿ

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಕೆಲವು ದಿನಗಳು ಕಳೆದ ನಂತರ ದಿಢೀರ್ ತುಮಕೂರು ಜಿಲ್ಲೆಗೆ ಭೇಟಿ ಕೊಟ್ಟರು. ಅದರಲ್ಲಿ ಒಂದು ಪಾವಗಡ ತಾಲೂಕು ಅಚ್ಚಮ್ಮನಹಳ್ಳಿ ಶಾಲಾ ವಾಸ್ತವ್ಯ. ಈ ಸಂದರ್ಭದಲ್ಲಿ ಮಕ್ಕಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ಸಚಿವ ಸುರೇಶ್ ಕುಮಾರ್ ತಡಕಾಡಿದರು. ವಿಜ್ಞಾನ, ಗಣಿತ, ಇಂಗ್ಲೀಷ್ ಶಿಕ್ಷಕರೇ ಇಲ್ಲ, ಪಾಠಗಳು ಹಾಗೆ ಉಳಿಯುತ್ತಿವೆ. ಕಂಪ್ಯೂಟರ್ ಕಲಿಕೆ ಇದೆ. ಕಂಪ್ಯೂಟರ್‍ಗಳೇ ಇಲ್ಲ್ಲವೆಂದರು ಮಕ್ಕಳು. ಇದಕ್ಕೂ ಸಚಿವರಿಂದ ಉತ್ತರವಿಲ್ಲ. ಶಾಲೆಗೆ ಭೇಟಿ ನೀಡಿ ವಾರಗಳು ಕಳೆದರೂ ಅಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸಲಿಲ್ಲ. ಹಾಗಾದರೆ ಭೇಟಿ ನೀಡುವ ಅವಶ್ಯಕತೆ ಏನಿತ್ತು ಎಂದು ಗ್ರಾಮಸ್ಥರು ಪ್ರಶ್ನಿಸುತ್ತಾರೆ.

ಶಾಲಾ ವಾಸ್ತವ್ಯದಿಂದ ಏನೂ ಬದಲಾವಣೆ ಆಗುವುದಿಲ್ಲ. ಸರ್ಕಾರದ ಮಟ್ಟದಲ್ಲೇ ಕೈಗೊಳ್ಳಬೇಕಾದ ಕ್ರಮಗಳು ಸಾಕಷ್ಟು ಇವೆ. ಸಮಾನ ಶಿಕ್ಷಣದ ವ್ಯವಸ್ಥೆ ಜಾರಿಗೆ ತಂದರೆ ಶಿಕ್ಷಣದ ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಣೆ ಮಾಡಬಹುದು. ಇದು ಸಚಿವರಿಗೂ ಗೊತ್ತು. ಆದರೆ ಮಾಡಲು ಮನಸ್ಸಿಲ್ಲ ಅಷ್ಟೇ.

ಡಾ.ನಂಜುಂಡಪ್ಪ ವರದಿ ಪ್ರಕಾರ ಅತೀ ಹಿಂದುಳಿದ ತಾಲೂಕು ಪಾವಗಡ. ಇಲ್ಲಿಗೆ ಶಿಕ್ಷಕರು ಬರುವುದು ಕಷ್ಟ. ದೂರದ ತಾಲೂಕು. ಇದು ಗೊತ್ತಿಲ್ಲವೇ ಮಾನ್ಯ ಸುರೇಶ್‍ಕುಮಾರ್ ಅವರಿಗೆ? ಪಾವಗಡದ ಅಚ್ಚಮ್ಮನಹಳ್ಳಿ, ಗುಬ್ಬಿ ತಾಲೂಕಿನ ಎರಡು ಶಾಲೆಗಳಿಗೂ ಭೇಟಿ ಕೊಟ್ಟರು. ಆಯಾ ಜನರಿಗೆ ಬಂದ ಭಾಗ್ಯವಾದರೂ ಏನು? ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಬಗ್ಗೆ ನಾಗರಿಕ ಸಂಘಟನೆಗಳು ಗಮನ ಸೆಳೆಯುತ್ತಲೇ ಬಂದಿವೆ. ಸಾವಿರಾರು ಶಾಲೆಗಳು ಮುಚ್ಚಿರುವ ಬಗ್ಗೆ ವರದಿ ಇದೆ.. ಸರ್ಕಾರದ ಬಳಿಯೂ ಅಂಕಿ ಆಂಶಗಳಿವೆ. ಹೀಗಿದ್ದರೂ ಏನು ಕ್ರಮ ಕೈಗೊಂಡರು. ಹೋಗಲಿ, ಸಚಿವರು ಶಾಲೆಗಳಿಗೆ ಭೇಟಿ ನೀಡಿ ವಾಸ್ತವ ಪರಿಸ್ಥಿತಿ ಅರಿತರು ಎಂದು ಭಾವಿಸೋಣ. ಸರ್ಕಾರಕ್ಕೆ ವಾಸ್ತವಿಕ ವರದಿ ನೀಡಿದರೇ? ಉತ್ತರ ಶೂನ್ಯ!

ಇದೀಗ ಸಚಿವ ಸುರೇಶ್‍ಕುಮಾರ್ ಶಿಕ್ಷಣದ ಗುಣಮಟ್ಟದ ಬಗ್ಗೆ ಮಾತನಾಡಿದ್ದಾರೆ. ಶಿಕ್ಷಣದಲ್ಲಿ ಬದಲಾವಣೆ ಎಂದಿದ್ದಾರೆ. ಸುಧಾರಣೆ ಎಂದಿಲ್ಲ. ಅಂದರೆ ಈಗಿರುವ ವ್ಯವಸ್ಥೆಯನ್ನು ಬದಲಿಸಿ ಆರ್‌ಎಸ್‍ಎಸ್‍ನ ವಿಷಕಾರಿ ಅಜೆಂಡಾವನ್ನು ಮಕ್ಕಳಿಗೆ ಉಣಿಸುವುದು ಎಂದರ್ಥವೇ? ಇರುವ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಕಂಪ್ಯೂಟರ್ ಇಲ್ಲ. ಎಷ್ಟೋ ಶಾಲೆಗಳು ಏಕೋಪಾಧ್ಯಾಯ ಶಾಲೆಗಳಾಗಿವೆ. ಮಕ್ಕಳ ಕೊರತೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನ ಮಾಡಿದೆ. ಹೀಗಿದ್ದರೂ ಗುಣಮಟ್ಟ ಸಾಧಿಸಲು ಆಗಿಲ್ಲ! ಇಂತಹ ಸನ್ನಿವೇಶದಲ್ಲಿ ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ಏಳನೇ ತರಗತಿ ಮಕ್ಕಳಿಗೆ ಪಬ್ಲಿಕ್ ಪರೀಕ್ಷೆ ಮಾಡುವುದಾಗಿ ಪ್ರಕಟಿಸಿದ್ದಾರೆ. 1 ರಿಂದ 9ನೇ ತರಗತಿವರೆಗೆ ಪಾಸು ಮಾಡುವ ಪದ್ದತಿ ಇನ್ನು ಮುಂದೆ ಇರುವುದಿಲ್ಲ ಎಂದು ಹೇಳಿದ್ದಾರೆ. ಇದು ಸರ್ಕಾರಿ ಶಾಲೆಗಳನ್ನು ಖಾಸಗೀಕರಣಗೊಳಿಸುವ ಹುನ್ನಾರವಲ್ಲದೆ ಮತ್ತೇನು?

ಸಧ್ಯದ ವ್ಯವಸ್ಥೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಕೆಲ ಮಕ್ಕಳಿಗೆ ಪ್ರಾಥಮಿಕ ಹಂತದಿಂದ ಪದವಿ ಹಂತಕ್ಕೆ ಬಂದರೂ ವ್ಯಾಕ್ಯ ಬರೆಯುವುದಿರಲಿ, ಸರಿಯಾಗಿ ಕಾಗುಣಿತ ಬರೆಯಲು ಬರುತ್ತಿಲ್ಲ. ಮಕ್ಕಳ ಉತ್ತರ ಪತ್ರಿಕೆಗಳನ್ನು ನೋಡಿದರೆ ಪಾಸು ಮಾಡುವ ಮನಸ್ಸೇ ಬರುವುದಿಲ್ಲ. ಕನಿಷ್ಟ ಅಂಕ ಗಳಿಸುವುದೂ ದುಃಸ್ಥರ. ಶಿಕ್ಷಕರು ತಮ್ಮ ಮರ್ಯಾದೆಯ ಪ್ರಶ್ನೆ ಎಂದು ಮಕ್ಕಳನ್ನು ಪಾಸು ಮಾಡುತ್ತಾರೆ. ಮುಂದಿನ ತರಗತಿಗೂ ಮಕ್ಕಳು ಬೇಕಲ್ಲವೇ?! ಇಲ್ಲಿ ಶಿಕ್ಷಕರನ್ನು ದೂರಬೇಕೋ? ಮಕ್ಕಳನ್ನು ದೂರಬೇಕೋ, ಪೋಷಕರನ್ನೋ ಅಥವಾ ಸರ್ಕಾರವನ್ನೋ! ಅಂತು ಮಕ್ಕಳು ಮಾತ್ರ ಶಿಕ್ಷಣ ಕಲಿಕೆಯಲ್ಲಿ ಹಿಂದೆ ಬಿದ್ದಿದ್ದಾರೆ. ಸರ್ಕಾರಿ ಶಾಲಾ ವ್ಯವಸ್ಥೆಯನ್ನು ಬಲಗೊಳಿಸಬೇಕಾದ ಶಿಕ್ಷಣ ಸಚಿವರಾದಿಯಾಗಿ ಸರ್ಕಾರ ಖಾಸಗಿ ಶಿಕ್ಷಣದ ಮಾಲಿಕತ್ವಕ್ಕೆ ಶರಣಾಗಿ ಸಾಮಾನ್ಯ ಬಡಮಕ್ಕಳನ್ನು ಹಾಳು ಮಾಡುತ್ತಿದ್ದಾರೆ.

ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಲೋಚನೆಗೆ ಬಡಮಕ್ಕಳು ಬೇಕಾಗಿಲ್ಲ. ಗ್ರಾಮೀಣಕ್ಕೂ ಮತ್ತು ನಗರ ಲೋಕದ ಚಿತ್ರಣ ಅವರ ಕಣ್ಣು ಮುಂದೆ ಇಲ್ಲ. ಕೇವಲ ಲಕ್ಷಲಕ್ಷ ವಸೂಲಿ ಮಾಡುವ ಖಾಸಗಿ ಶಿಕ್ಷಣ ಸಂಸ್ಥೆಗಳೇ ಅವರ ಮುಂದಿವೆ. ಆ ಚಿತ್ರಣ ಗ್ರಾಮೀಣ ಪರಿಸರವನ್ನು ಮಸುಕುಗೊಳಿಸುತ್ತದೆ. ಖಾಸಗೀಕರಣ, ಶಾಲೆಗಳ ವಿಲೀನ, ವಿಶೇಷ ಶಿಕ್ಷಣ ವಲಯ, ಸಂಕೀರ್ಣ ಶಿಕ್ಷಣ ಪದ್ದತಿ, ಹೀಗೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿ ಸರ್ಕಾರಿ ಶಾಲಾ ವ್ಯವಸ್ಥೆಯನ್ನೇ ಇಲ್ಲದಂತೆ ಮಾಡುವ ನೀತಿಗಳತ್ತಲೆ ಅವರ ಚಿತ್ತ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...