Homeಮುಖಪುಟಚುನಾವಣಾ ಬಾಂಡ್‌: ಸುಪ್ರೀಂಕೋರ್ಟ್‌ಗೆ ತನ್ನ ಘನತೆಯನ್ನು ಕಾಪಾಡುವ ಜವಾಬ್ದಾರಿಯಿದೆ: ಕಪಿಲ್‌ ಸಿಬಲ್

ಚುನಾವಣಾ ಬಾಂಡ್‌: ಸುಪ್ರೀಂಕೋರ್ಟ್‌ಗೆ ತನ್ನ ಘನತೆಯನ್ನು ಕಾಪಾಡುವ ಜವಾಬ್ದಾರಿಯಿದೆ: ಕಪಿಲ್‌ ಸಿಬಲ್

- Advertisement -
- Advertisement -

ಚುನಾವಣಾ ಬಾಂಡ್ ವಿವರಗಳನ್ನು ಬಹಿರಂಗಪಡಿಸಲು ಎಸ್‌ಬಿಐ ಕಾಲಾವಕಾಶವನ್ನು ಕೋರಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಜ್ಯಸಭಾ ಸಂಸದ, ಹಿರಿಯ ವಕೀಲ ಕಪಿಲ್ ಸಿಬಲ್, ತನ್ನ ಘನತೆಯನ್ನು ಕಾಪಾಡುವುದು ಸುಪ್ರೀಂ ಕೋರ್ಟ್‌ನ ಜವಾಬ್ದಾರಿಯಾಗಿದೆ ಮತ್ತು ಬ್ಯಾಂಕ್‌ನ ಮನವಿಯನ್ನು ಸ್ವೀಕರಿಸುವುದು ಅಷ್ಟೊಂದು ಸುಲಭವಲ್ಲ ಎಂದು ಹೇಳಿದ್ದಾರೆ.

ಚುನಾವಣಾ ಬಾಂಡ್ ವಿರುದ್ಧದ ಪ್ರಕರಣದಲ್ಲಿ ಅರ್ಜಿದಾರರ ಪರ ವಾದ ಮಂಡಿಸಿದ್ದ ಕಪಿಲ್‌ ಸಿಬಲ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಡೇಟಾವನ್ನು ಸಾರ್ವಜನಿಕಗೊಳಿಸಲು ಹಲವಾರು ವಾರಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದೆ. ಇದು ಯಾರೋ ಯಾರನ್ನೋ ರಕ್ಷಿಸಲು ಬಯಸಿದಂತಿದೆ ಎಂದು ಹೇಳಿದ್ದಾರೆ.

ಪಿಟಿಐಗೆ ನೀಡಿದ ವೀಡಿಯೊ ಸಂದರ್ಶನದಲ್ಲಿ ಮಾತನಾಡಿದ ಕಪಿಲ್‌ ಸಿಬಲ್‌, ಸರ್ಕಾರವನ್ನು ರಕ್ಷಿಸಲು ಎಸ್‌ಬಿಐ ಉದ್ದೇಶಿಸಿದೆ. ಇಲ್ಲವಾದರೆ ಏಪ್ರಿಲ್-ಮೇನಲ್ಲಿ ಚುನಾವಣೆಗಳು ನಡೆಯುವಾಗ ಚುನಾವಣಾ ಬಾಂಡ್ ವಿವರಗಳನ್ನು ಬಹಿರಂಗಪಡಿಸಲು ಜೂನ್ 30ರವರೆಗೆ ವಿಸ್ತರಣೆ ಕೋರಿ ಬ್ಯಾಂಕ್ ಅರ್ಜಿ ಸಲ್ಲಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಕಳೆದ ತಿಂಗಳು ಯೋಜನೆಯನ್ನು ರದ್ದುಪಡಿಸಿದ್ದ ಚುನಾವಣಾ ಬಾಂಡ್‌ಗಳ ವಿವರಗಳನ್ನು ಬಹಿರಂಗಪಡಿಸಲು ವಿಸ್ತರಣೆಯನ್ನು ಕೋರಿ ಎಸ್‌ಬಿಐ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಸಂವಿಧಾನ ಪೀಠದ ವಿಚಾರಣೆ ಬಾಕಿ ಇರವಾಗ ಹಿರಿಯ ವಕೀಲರ ಈ ಹೇಳಿಕೆ ಮಹತ್ವವನ್ನು ಪಡೆದುಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು, ಚುನಾವಣಾ ಬಾಂಡ್‌ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ದೇಣಿಗೆಯ ವಿವರಗಳನ್ನು ಸಲ್ಲಿಸಲು ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ್ದಕ್ಕಾಗಿ ಬ್ಯಾಂಕ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಕೋರಿದ್ದ ಪ್ರತ್ಯೇಕ ಅರ್ಜಿಯನ್ನು ಆಲಿಸಲಿದೆ. ಮಾರ್ಚ್ 6ರೊಳಗೆ ಚುನಾವಣಾ ಆಯೋಗಕ್ಕೆ ಬಾಂಡ್‌ಗಳನ್ನು ಸಲ್ಲಿಸಬೇಕು ಎಂದು ಈ ಮೊದಲು ಸುಪ್ರೀಂಕೋರ್ಟ್‌ ಎಸ್‌ಬಿಐಗೆ ಹೇಳಿತ್ತು.

ಎಸ್‌ಬಿಐಗೆ ಚುನಾವಣೆಗಳು ಏಪ್ರಿಲ್-ಮೇ ತಿಂಗಳಲ್ಲಿ ಎಂದು ತಿಳಿದಿದೆ. ಚುನಾವಣಾ ಬಾಂಡ್‌ಗಳ ವಿವರಗಳನ್ನು ಸಾರ್ವಜನಿಕಗೊಳಿಸಿದರೆ ಅದು ಸಾರ್ವಜನಿಕ ಚರ್ಚೆಯ ವಿಷಯವಾಗಲಿದೆ ಎಂದು ಎಸ್‌ಬಿಐಗೆ ಗೊತ್ತಿದೆ. ಅವರು ಸಮಯವನ್ನು ಕೇಳುತ್ತಿದ್ದಾರೆ. ನ್ಯಾಯಾಲಯವು ಇದನ್ನು ಪರಿಗಣಿಸಲಿದೆ ಎಂದು ನಾನು ಬಯಸುತ್ತೇನೆ, ಯಾರು ಯಾರಿಗೆ ಹಣ ಕೊಟ್ಟಿದ್ದಾರೆ ಎಂಬುವುದನ್ನು ಪತ್ತೆ ಹಚ್ಚಲು ನಾವು ಮಾಹಿತಿಗಳನ್ನು ಒಟ್ಟುಗೂಡಿಸಬೇಕು, ಫೈಲ್‌ಗಳನ್ನು ಸಂಗ್ರಹಿಸಬೇಕು ಎಂದು ಎಸ್‌ಬಿಐ ಹೇಳುವುದು ಪುರಾತನವಾಗಿದೆ. ಇದು 21ನೇ ಶತಮಾನ ಮತ್ತು ನಮ್ಮ ಪ್ರೀತಿಯ ಪ್ರಧಾನಿ ನರೇಂದ್ರ ಮೋದಿ ಎಲ್ಲವನ್ನೂ ಡಿಜಿಟಲೀಕರಣದ ಬಗ್ಗೆ ಮಾತನಾಡುತ್ತಾರೆ ಎಂದು ಹೇಳಿದ್ದಾರೆ.

ಎಸ್‌ಬಿಐ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ಕೇಳಲಾದ ಪ್ರಶ್ನೆಗೆ ಸಿಬಲ್, ಇವುಗಳು ನ್ಯಾಯಾಂಗ ನಿಂದನೆ ವಿಷಯಗಳಾಗಿವೆ. ಇದು ನ್ಯಾಯಾಲಯದ ಘನತೆಯ ಮೇಲೆ ಪರಿಣಾಮ ಬೀರುತ್ತದೆ. ಅದರ ಘನತೆಯನ್ನು ಕಾಪಾಡುವ ಜವಾಬ್ದಾರಿ ನ್ಯಾಯಾಲಯದ ಮೇಲಿದೆ. ಎಸ್‌ಬಿಐ ನೀಡಿದ ಈ ವಿಶೇಷವಾದ ವಿವರಣೆಯನ್ನು ನ್ಯಾಯಾಲಯವು ಒಪ್ಪಿಕೊಳ್ಳುತ್ತಿದೆ ಎಂದಾದರೆ, ಇದು ನಗುವ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

ಎಸ್‌ಬಿಐ ಸ್ವತಃ ಅರ್ಜಿಯನ್ನು ಸಲ್ಲಿಸಿರುವುದು ಬಹುಶಃ ನ್ಯಾಯಾಲಯವು ಮನವಿ ಸ್ವೀಕರಿಸುತ್ತದೆ ಎಂಬ ಭರವಸೆಯ ಕಾರಣದಿಂದಾಗಿರಬಹುದು, ಆದರೆ ನನ್ನ ತಿಳುವಳಿಕೆ ಏನೆಂದರೆ, ಒಮ್ಮೆ ಸಾಂವಿಧಾನಿಕ ಪೀಠವು ತೀರ್ಪು ನೀಡಿದ ನಂತರ, ನ್ಯಾಯಾಲಯವು ಆ ರೀತಿ ಹೇಳುವುದು ಸುಲಭವಲ್ಲ ಎಂದು ಸಿಬಲ್ ಹೇಳಿದ್ದಾರೆ.

ಇಡೀ ಯೋಜನೆಯನ್ನು ಬಿಜೆಪಿಯ ಆಸ್ತಿಯನ್ನು ಹೆಚ್ಚಿಸುವ ಮತ್ತು ವಿಶ್ವದ ಶ್ರೀಮಂತ ಪಕ್ಷವನ್ನಾಗಿ ಮಾಡುವ ರಾಜಕೀಯ ಉದ್ದೇಶದಿಂದ ರೂಪಿಸಲಾಗಿದೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷದ ಬೊಕ್ಕಸಕ್ಕೆ ಹಣ ಬರುವಂತೆ ನೋಡಿಕೊಳ್ಳುವುದು 2017ರಲ್ಲಿ ನಿಗದಿಪಡಿಸಿದ ಯೋಜನೆಯ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಂತಹ ತನಿಖಾ ಸಂಸ್ಥೆಗಳು ಕಳೆದ ಕೆಲವು ವರ್ಷಗಳಲ್ಲಿ ನಡೆದುಕೊಂಡ ರೀತಿಯಲ್ಲಿಯೇ ನಡೆದುಕೊಳ್ಳುತ್ತಿದೆ, ಜೂನ್‌ಗಿಂತ ಮೊದಲು ಚುನಾವಣಾ ಬಾಂಡ್‌ಗಳ ವಿವರಗಳು ಹೊರಬಂದ ನಂತರ ಅವರು ವಿರೋಧ ಪಕ್ಷಗಳು ಮತ್ತು ನಾಯಕರನ್ನು ಗುರಿಯಾಗಿಸುತ್ತಾರೆ ಎಂದು ಸಿಬಲ್ ಹೇಳಿದರು. ಸುಪ್ರೀಂ ಕೋರ್ಟ್ ತೀರ್ಪಿನ ನಂತರ ವಿರೋಧ ಪಕ್ಷಗಳು ಒಟ್ಟಾಗಿ ಚುನಾವಣಾ ಬಾಂಡ್‌ಗಳ ವಿಷಯದ ಬಗ್ಗೆ ಧ್ವನಿ ಎತ್ತಬೇಕು ಎಂದು ಸಿಬಲ್ ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿಯಿಂದ ಸ್ಪರ್ಧಿಸಲು ಗೋಯಲ್‌ ರಾಜೀನಾಮೆ ನೀಡಿರಬಹುದು: ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...