Homeಮುಖಪುಟಚುನಾವಣಾ ಬಾಂಡ್‌: ಸುಪ್ರೀಂಕೋರ್ಟ್‌ಗೆ ತನ್ನ ಘನತೆಯನ್ನು ಕಾಪಾಡುವ ಜವಾಬ್ದಾರಿಯಿದೆ: ಕಪಿಲ್‌ ಸಿಬಲ್

ಚುನಾವಣಾ ಬಾಂಡ್‌: ಸುಪ್ರೀಂಕೋರ್ಟ್‌ಗೆ ತನ್ನ ಘನತೆಯನ್ನು ಕಾಪಾಡುವ ಜವಾಬ್ದಾರಿಯಿದೆ: ಕಪಿಲ್‌ ಸಿಬಲ್

- Advertisement -
- Advertisement -

ಚುನಾವಣಾ ಬಾಂಡ್ ವಿವರಗಳನ್ನು ಬಹಿರಂಗಪಡಿಸಲು ಎಸ್‌ಬಿಐ ಕಾಲಾವಕಾಶವನ್ನು ಕೋರಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಜ್ಯಸಭಾ ಸಂಸದ, ಹಿರಿಯ ವಕೀಲ ಕಪಿಲ್ ಸಿಬಲ್, ತನ್ನ ಘನತೆಯನ್ನು ಕಾಪಾಡುವುದು ಸುಪ್ರೀಂ ಕೋರ್ಟ್‌ನ ಜವಾಬ್ದಾರಿಯಾಗಿದೆ ಮತ್ತು ಬ್ಯಾಂಕ್‌ನ ಮನವಿಯನ್ನು ಸ್ವೀಕರಿಸುವುದು ಅಷ್ಟೊಂದು ಸುಲಭವಲ್ಲ ಎಂದು ಹೇಳಿದ್ದಾರೆ.

ಚುನಾವಣಾ ಬಾಂಡ್ ವಿರುದ್ಧದ ಪ್ರಕರಣದಲ್ಲಿ ಅರ್ಜಿದಾರರ ಪರ ವಾದ ಮಂಡಿಸಿದ್ದ ಕಪಿಲ್‌ ಸಿಬಲ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಡೇಟಾವನ್ನು ಸಾರ್ವಜನಿಕಗೊಳಿಸಲು ಹಲವಾರು ವಾರಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದೆ. ಇದು ಯಾರೋ ಯಾರನ್ನೋ ರಕ್ಷಿಸಲು ಬಯಸಿದಂತಿದೆ ಎಂದು ಹೇಳಿದ್ದಾರೆ.

ಪಿಟಿಐಗೆ ನೀಡಿದ ವೀಡಿಯೊ ಸಂದರ್ಶನದಲ್ಲಿ ಮಾತನಾಡಿದ ಕಪಿಲ್‌ ಸಿಬಲ್‌, ಸರ್ಕಾರವನ್ನು ರಕ್ಷಿಸಲು ಎಸ್‌ಬಿಐ ಉದ್ದೇಶಿಸಿದೆ. ಇಲ್ಲವಾದರೆ ಏಪ್ರಿಲ್-ಮೇನಲ್ಲಿ ಚುನಾವಣೆಗಳು ನಡೆಯುವಾಗ ಚುನಾವಣಾ ಬಾಂಡ್ ವಿವರಗಳನ್ನು ಬಹಿರಂಗಪಡಿಸಲು ಜೂನ್ 30ರವರೆಗೆ ವಿಸ್ತರಣೆ ಕೋರಿ ಬ್ಯಾಂಕ್ ಅರ್ಜಿ ಸಲ್ಲಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಕಳೆದ ತಿಂಗಳು ಯೋಜನೆಯನ್ನು ರದ್ದುಪಡಿಸಿದ್ದ ಚುನಾವಣಾ ಬಾಂಡ್‌ಗಳ ವಿವರಗಳನ್ನು ಬಹಿರಂಗಪಡಿಸಲು ವಿಸ್ತರಣೆಯನ್ನು ಕೋರಿ ಎಸ್‌ಬಿಐ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಸಂವಿಧಾನ ಪೀಠದ ವಿಚಾರಣೆ ಬಾಕಿ ಇರವಾಗ ಹಿರಿಯ ವಕೀಲರ ಈ ಹೇಳಿಕೆ ಮಹತ್ವವನ್ನು ಪಡೆದುಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು, ಚುನಾವಣಾ ಬಾಂಡ್‌ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ದೇಣಿಗೆಯ ವಿವರಗಳನ್ನು ಸಲ್ಲಿಸಲು ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ್ದಕ್ಕಾಗಿ ಬ್ಯಾಂಕ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಕೋರಿದ್ದ ಪ್ರತ್ಯೇಕ ಅರ್ಜಿಯನ್ನು ಆಲಿಸಲಿದೆ. ಮಾರ್ಚ್ 6ರೊಳಗೆ ಚುನಾವಣಾ ಆಯೋಗಕ್ಕೆ ಬಾಂಡ್‌ಗಳನ್ನು ಸಲ್ಲಿಸಬೇಕು ಎಂದು ಈ ಮೊದಲು ಸುಪ್ರೀಂಕೋರ್ಟ್‌ ಎಸ್‌ಬಿಐಗೆ ಹೇಳಿತ್ತು.

ಎಸ್‌ಬಿಐಗೆ ಚುನಾವಣೆಗಳು ಏಪ್ರಿಲ್-ಮೇ ತಿಂಗಳಲ್ಲಿ ಎಂದು ತಿಳಿದಿದೆ. ಚುನಾವಣಾ ಬಾಂಡ್‌ಗಳ ವಿವರಗಳನ್ನು ಸಾರ್ವಜನಿಕಗೊಳಿಸಿದರೆ ಅದು ಸಾರ್ವಜನಿಕ ಚರ್ಚೆಯ ವಿಷಯವಾಗಲಿದೆ ಎಂದು ಎಸ್‌ಬಿಐಗೆ ಗೊತ್ತಿದೆ. ಅವರು ಸಮಯವನ್ನು ಕೇಳುತ್ತಿದ್ದಾರೆ. ನ್ಯಾಯಾಲಯವು ಇದನ್ನು ಪರಿಗಣಿಸಲಿದೆ ಎಂದು ನಾನು ಬಯಸುತ್ತೇನೆ, ಯಾರು ಯಾರಿಗೆ ಹಣ ಕೊಟ್ಟಿದ್ದಾರೆ ಎಂಬುವುದನ್ನು ಪತ್ತೆ ಹಚ್ಚಲು ನಾವು ಮಾಹಿತಿಗಳನ್ನು ಒಟ್ಟುಗೂಡಿಸಬೇಕು, ಫೈಲ್‌ಗಳನ್ನು ಸಂಗ್ರಹಿಸಬೇಕು ಎಂದು ಎಸ್‌ಬಿಐ ಹೇಳುವುದು ಪುರಾತನವಾಗಿದೆ. ಇದು 21ನೇ ಶತಮಾನ ಮತ್ತು ನಮ್ಮ ಪ್ರೀತಿಯ ಪ್ರಧಾನಿ ನರೇಂದ್ರ ಮೋದಿ ಎಲ್ಲವನ್ನೂ ಡಿಜಿಟಲೀಕರಣದ ಬಗ್ಗೆ ಮಾತನಾಡುತ್ತಾರೆ ಎಂದು ಹೇಳಿದ್ದಾರೆ.

ಎಸ್‌ಬಿಐ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ಕೇಳಲಾದ ಪ್ರಶ್ನೆಗೆ ಸಿಬಲ್, ಇವುಗಳು ನ್ಯಾಯಾಂಗ ನಿಂದನೆ ವಿಷಯಗಳಾಗಿವೆ. ಇದು ನ್ಯಾಯಾಲಯದ ಘನತೆಯ ಮೇಲೆ ಪರಿಣಾಮ ಬೀರುತ್ತದೆ. ಅದರ ಘನತೆಯನ್ನು ಕಾಪಾಡುವ ಜವಾಬ್ದಾರಿ ನ್ಯಾಯಾಲಯದ ಮೇಲಿದೆ. ಎಸ್‌ಬಿಐ ನೀಡಿದ ಈ ವಿಶೇಷವಾದ ವಿವರಣೆಯನ್ನು ನ್ಯಾಯಾಲಯವು ಒಪ್ಪಿಕೊಳ್ಳುತ್ತಿದೆ ಎಂದಾದರೆ, ಇದು ನಗುವ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

ಎಸ್‌ಬಿಐ ಸ್ವತಃ ಅರ್ಜಿಯನ್ನು ಸಲ್ಲಿಸಿರುವುದು ಬಹುಶಃ ನ್ಯಾಯಾಲಯವು ಮನವಿ ಸ್ವೀಕರಿಸುತ್ತದೆ ಎಂಬ ಭರವಸೆಯ ಕಾರಣದಿಂದಾಗಿರಬಹುದು, ಆದರೆ ನನ್ನ ತಿಳುವಳಿಕೆ ಏನೆಂದರೆ, ಒಮ್ಮೆ ಸಾಂವಿಧಾನಿಕ ಪೀಠವು ತೀರ್ಪು ನೀಡಿದ ನಂತರ, ನ್ಯಾಯಾಲಯವು ಆ ರೀತಿ ಹೇಳುವುದು ಸುಲಭವಲ್ಲ ಎಂದು ಸಿಬಲ್ ಹೇಳಿದ್ದಾರೆ.

ಇಡೀ ಯೋಜನೆಯನ್ನು ಬಿಜೆಪಿಯ ಆಸ್ತಿಯನ್ನು ಹೆಚ್ಚಿಸುವ ಮತ್ತು ವಿಶ್ವದ ಶ್ರೀಮಂತ ಪಕ್ಷವನ್ನಾಗಿ ಮಾಡುವ ರಾಜಕೀಯ ಉದ್ದೇಶದಿಂದ ರೂಪಿಸಲಾಗಿದೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷದ ಬೊಕ್ಕಸಕ್ಕೆ ಹಣ ಬರುವಂತೆ ನೋಡಿಕೊಳ್ಳುವುದು 2017ರಲ್ಲಿ ನಿಗದಿಪಡಿಸಿದ ಯೋಜನೆಯ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಂತಹ ತನಿಖಾ ಸಂಸ್ಥೆಗಳು ಕಳೆದ ಕೆಲವು ವರ್ಷಗಳಲ್ಲಿ ನಡೆದುಕೊಂಡ ರೀತಿಯಲ್ಲಿಯೇ ನಡೆದುಕೊಳ್ಳುತ್ತಿದೆ, ಜೂನ್‌ಗಿಂತ ಮೊದಲು ಚುನಾವಣಾ ಬಾಂಡ್‌ಗಳ ವಿವರಗಳು ಹೊರಬಂದ ನಂತರ ಅವರು ವಿರೋಧ ಪಕ್ಷಗಳು ಮತ್ತು ನಾಯಕರನ್ನು ಗುರಿಯಾಗಿಸುತ್ತಾರೆ ಎಂದು ಸಿಬಲ್ ಹೇಳಿದರು. ಸುಪ್ರೀಂ ಕೋರ್ಟ್ ತೀರ್ಪಿನ ನಂತರ ವಿರೋಧ ಪಕ್ಷಗಳು ಒಟ್ಟಾಗಿ ಚುನಾವಣಾ ಬಾಂಡ್‌ಗಳ ವಿಷಯದ ಬಗ್ಗೆ ಧ್ವನಿ ಎತ್ತಬೇಕು ಎಂದು ಸಿಬಲ್ ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿಯಿಂದ ಸ್ಪರ್ಧಿಸಲು ಗೋಯಲ್‌ ರಾಜೀನಾಮೆ ನೀಡಿರಬಹುದು: ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...