Homeಮುಖಪುಟರಾಮ ಈಗ ಇದ್ದಿದ್ದರೆ ಆತನಿಗೂ ಪಕ್ಷ ಸೇರುವಂತೆ ಇಡಿ-ಸಿಬಿಐ ಅನ್ನು ಬಿಜೆಪಿ ಕಳುಹಿಸುತ್ತಿತ್ತು: ಕೇಜ್ರಿವಾಲ್

ರಾಮ ಈಗ ಇದ್ದಿದ್ದರೆ ಆತನಿಗೂ ಪಕ್ಷ ಸೇರುವಂತೆ ಇಡಿ-ಸಿಬಿಐ ಅನ್ನು ಬಿಜೆಪಿ ಕಳುಹಿಸುತ್ತಿತ್ತು: ಕೇಜ್ರಿವಾಲ್

- Advertisement -
- Advertisement -

‘ಈ ಯುಗದಲ್ಲಿ ರಾಮನು ಇದ್ದಿದ್ದರೆ, ಕೇಸರಿ ಪಕ್ಷಕ್ಕೆ ಸೇರಲು ಅಥವಾ ಜೈಲಿಗೆ ಹೋಗುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರವು ಶ್ರೀರಾಮನಿಗೂ ಜಾರಿ ನಿರ್ದೇಶನಾಲಯ (ಇಡಿ) ನಂತಹ ಕೇಂದ್ರೀಯ ಸಂಸ್ಥೆಗಳನ್ನು ಕಳುಹಿಸುತ್ತಿತ್ತು’ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಭಗವಾನ್ ರಾಮನು ಇಂದು ಈ ಯುಗದಲ್ಲಿದ್ದರೆ, ಅವರು (ಬಿಜೆಪಿ) ಇಡಿ ಮತ್ತು ಸಿಬಿಐ ಅನ್ನು ಅವರ ಮನೆಗೆ ಕಳುಹಿಸುತ್ತಿದ್ದರು. ನೀವು ಬಿಜೆಪಿಗೆ ಬರುತ್ತೀರಾ ಅಥವಾ ನೀವು ಜೈಲಿಗೆ ಹೋಗುತ್ತೀರಾ? ಎಂದು ಬಂದೂಕುಗಳನ್ನು ಇಟ್ಟುಕೊಂಡು ಕೇಳುತ್ತಿದ್ದರು’ ಎಂದು  ಕೇಜ್ರಿವಾಲ್ ಶನಿವಾರ ದೆಹಲಿ ವಿಧಾನಸಭೆಯಲ್ಲಿ ಮಾತನಾಡುತ್ತಾ ಹೇಳಿದರು.

ಕೇಜ್ರಿವಾಲ್ ಮತ್ತು ಜಾರಿ ನಿರ್ದೇಶನಾಲಯದ ನಡುವಿನ ಹಗ್ಗಜಗ್ಗಾಟ ಮುಂದುವರಿದಿರುವಂತೆಯೇ ಆಮ್ ಆದ್ಮಿ ಪಕ್ಷದ ವರಿಷ್ಠರ ಹೇಳಿಕೆಗಳು ಬಂದಿದ್ದು, ದೆಹಲಿ ಮುಖ್ಯಮಂತ್ರಿಗೆ ಕೇಂದ್ರ ತನಿಖಾ ಸಂಸ್ಥೆಗಳು ಸಮನ್ಸ್‌ ನೀಡುವುದನ್ನು ಮುಂದುವರೆಸಿದ್ದಾರೆ.

“ಸರ್ಕಾರಿ ಸಂಸ್ಥೆಗಳನ್ನು ಹೆಚ್ಚಿಸಲು, ಅಗತ್ಯ ಸೇವೆಗಳನ್ನು ಒದಗಿಸಲು ಮತ್ತು ವೃದ್ಧರಿಗೆ ತೀರ್ಥಯಾತ್ರೆಗಳಿಗೆ ಅನುಕೂಲವಾಗುವಂತೆ ಎಎಪಿ ಉಪಕ್ರಮಗಳನ್ನು ಮುನ್ನಡೆಸುತ್ತಿದ್ದರೆ, ಬಿಜೆಪಿಯ ವಿಧಾನವು ಇಡಿ ಮತ್ತು ಸಿಬಿಐನಂತಹ ಸಂಸ್ಥೆಗಳ ಮೂಲಕ ವಿರೋಧ ಸರ್ಕಾರಗಳ ಪ್ರಯತ್ನಗಳಿಗೆ ಅಡ್ಡಿಯುಂಟುಮಾಡುತ್ತದೆ” ಎಂದು ಕೇಜ್ರಿವಾಲ್ ಅವರು ಹೇಳಿದರು.

ವಿಧಾನಸಭೆಯಲ್ಲಿ ಬಜೆಟ್ ಕುರಿತು ಚರ್ಚೆ ನಡೆಸುತ್ತಿರುವಾಗಲೇ, ಅಬಕಾರಿ ನೀತಿಯ ಪ್ರಕರಣದಲ್ಲಿ ಪ್ರಸ್ತುತ ಜೈಲು ಪಾಲಾಗಿರುವ ಮಾಜಿ ಹಣಕಾಸು ಸಚಿವ ಮನೀಶ್ ಸಿಸೋಡಿಯಾ ಅವರನ್ನು ಕೇಜ್ರಿವಾಲ್ ನೆನಪಿಸಿಕೊಂಡರು. ಸಿಸೋಡಿಯಾ ಅವರು ಮುಂದಿನ ವರ್ಷದ ಬಜೆಟ್ ಅನ್ನು ಮಂಡಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

“ನಾವು ಬಜೆಟ್ ಅನ್ನು ಚರ್ಚಿಸುತ್ತಿದ್ದೇವೆ ಮತ್ತು ಇಂದು ಹತ್ತನೇ ಬಜೆಟ್‌ನಲ್ಲಿ ನಾವು ಮನೀಶ್ ಸಿಸೋಡಿಯಾ ಅವರನ್ನು ನೆನಪಿಸಿಕೊಳ್ಳುತ್ತೇವೆ. ಇದಕ್ಕೂ ಮುನ್ನ ಮನೀಶ್ ಸಿಸೋಡಿಯಾ ಅವರು ವಿಧಾನಸಭೆಯಲ್ಲಿ 9 ಬಜೆಟ್ ಮಂಡಿಸಿದ್ದು, ಮುಂದಿನ ವರ್ಷದ ಬಜೆಟ್ ಮಂಡಿಸುತ್ತಾರೆ’ ಎಂದು ಆಶಿಸುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದರು.

ಈ ನಡುವೆ, ರಾಜಕೀಯ ಕಾರಣಗಳಿಗಾಗಿ ಭಗವಾನ್ ರಾಮನ ಹೆಸರನ್ನು ಕೇಜ್ರಿವಾಲ್ ತೆಗೆದುಕೊಂಡಿದ್ದಾರೆ ಎಂದು ಟೀಕಿಸುವ ಮೂಲಕ ಬಿಜೆಪಿ ತಿರುಗೇಟು ನೀಡಿದೆ. ಇದು ಕೋಟ್ಯಂತರ ಭಕ್ತರ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಹೇಳಿದೆ. ‘ಸಹಾನುಭೂತಿ ಪಡೆಯಲು ಎಎಪಿ ನಾಯಕರು ಪದೇ ಪದೇ ರಾಮನ ಹೆಸರನ್ನು ಬಳಸುತ್ತಿರುವುದು ವಿಷಾದನೀಯ’ ಎಂದು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

“ರಾಜಕೀಯ ಕಾರಣಗಳಿಗಾಗಿ ಭಗವಾನ್ ರಾಮನ ಹೆಸರನ್ನು ಪ್ರತಿ ಬಾರಿ ತೆಗೆದುಕೊಂಡಾಗಲೂ, ಇಡಿ ನೋಟೀಸ್ ಬಗ್ಗೆ ಮಾತನಾಡುವಾಗಲೂ ಅವರು ಶ್ರೀರಾಮನ ಭಕ್ತರಾಗಿರುವ ಕೋಟ್ಯಂತರ ಮತದಾರರ ಭಾವನೆಗಳನ್ನು ನೋಯಿಸುತ್ತಾರೆ ಎಂದು ಕೇಜ್ರಿವಾಲ್ ತಿಳಿದಿರಬೇಕು’ ಎಂದು ಸಚ್‌ದೇವ ಹೇಳಿದರು.

ಇದನ್ನೂ ಓದಿ; ಸಂವಿಧಾನ ನಾಶವೆ ನರೇಂದ್ರ ಮೋದಿ ಮತ್ತು ಬಿಜೆಪಿಯ ಅಂತಿಮ ಗುರಿ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...