Homeಮುಖಪುಟರಾಮ ಈಗ ಇದ್ದಿದ್ದರೆ ಆತನಿಗೂ ಪಕ್ಷ ಸೇರುವಂತೆ ಇಡಿ-ಸಿಬಿಐ ಅನ್ನು ಬಿಜೆಪಿ ಕಳುಹಿಸುತ್ತಿತ್ತು: ಕೇಜ್ರಿವಾಲ್

ರಾಮ ಈಗ ಇದ್ದಿದ್ದರೆ ಆತನಿಗೂ ಪಕ್ಷ ಸೇರುವಂತೆ ಇಡಿ-ಸಿಬಿಐ ಅನ್ನು ಬಿಜೆಪಿ ಕಳುಹಿಸುತ್ತಿತ್ತು: ಕೇಜ್ರಿವಾಲ್

- Advertisement -
- Advertisement -

‘ಈ ಯುಗದಲ್ಲಿ ರಾಮನು ಇದ್ದಿದ್ದರೆ, ಕೇಸರಿ ಪಕ್ಷಕ್ಕೆ ಸೇರಲು ಅಥವಾ ಜೈಲಿಗೆ ಹೋಗುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರವು ಶ್ರೀರಾಮನಿಗೂ ಜಾರಿ ನಿರ್ದೇಶನಾಲಯ (ಇಡಿ) ನಂತಹ ಕೇಂದ್ರೀಯ ಸಂಸ್ಥೆಗಳನ್ನು ಕಳುಹಿಸುತ್ತಿತ್ತು’ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಭಗವಾನ್ ರಾಮನು ಇಂದು ಈ ಯುಗದಲ್ಲಿದ್ದರೆ, ಅವರು (ಬಿಜೆಪಿ) ಇಡಿ ಮತ್ತು ಸಿಬಿಐ ಅನ್ನು ಅವರ ಮನೆಗೆ ಕಳುಹಿಸುತ್ತಿದ್ದರು. ನೀವು ಬಿಜೆಪಿಗೆ ಬರುತ್ತೀರಾ ಅಥವಾ ನೀವು ಜೈಲಿಗೆ ಹೋಗುತ್ತೀರಾ? ಎಂದು ಬಂದೂಕುಗಳನ್ನು ಇಟ್ಟುಕೊಂಡು ಕೇಳುತ್ತಿದ್ದರು’ ಎಂದು  ಕೇಜ್ರಿವಾಲ್ ಶನಿವಾರ ದೆಹಲಿ ವಿಧಾನಸಭೆಯಲ್ಲಿ ಮಾತನಾಡುತ್ತಾ ಹೇಳಿದರು.

ಕೇಜ್ರಿವಾಲ್ ಮತ್ತು ಜಾರಿ ನಿರ್ದೇಶನಾಲಯದ ನಡುವಿನ ಹಗ್ಗಜಗ್ಗಾಟ ಮುಂದುವರಿದಿರುವಂತೆಯೇ ಆಮ್ ಆದ್ಮಿ ಪಕ್ಷದ ವರಿಷ್ಠರ ಹೇಳಿಕೆಗಳು ಬಂದಿದ್ದು, ದೆಹಲಿ ಮುಖ್ಯಮಂತ್ರಿಗೆ ಕೇಂದ್ರ ತನಿಖಾ ಸಂಸ್ಥೆಗಳು ಸಮನ್ಸ್‌ ನೀಡುವುದನ್ನು ಮುಂದುವರೆಸಿದ್ದಾರೆ.

“ಸರ್ಕಾರಿ ಸಂಸ್ಥೆಗಳನ್ನು ಹೆಚ್ಚಿಸಲು, ಅಗತ್ಯ ಸೇವೆಗಳನ್ನು ಒದಗಿಸಲು ಮತ್ತು ವೃದ್ಧರಿಗೆ ತೀರ್ಥಯಾತ್ರೆಗಳಿಗೆ ಅನುಕೂಲವಾಗುವಂತೆ ಎಎಪಿ ಉಪಕ್ರಮಗಳನ್ನು ಮುನ್ನಡೆಸುತ್ತಿದ್ದರೆ, ಬಿಜೆಪಿಯ ವಿಧಾನವು ಇಡಿ ಮತ್ತು ಸಿಬಿಐನಂತಹ ಸಂಸ್ಥೆಗಳ ಮೂಲಕ ವಿರೋಧ ಸರ್ಕಾರಗಳ ಪ್ರಯತ್ನಗಳಿಗೆ ಅಡ್ಡಿಯುಂಟುಮಾಡುತ್ತದೆ” ಎಂದು ಕೇಜ್ರಿವಾಲ್ ಅವರು ಹೇಳಿದರು.

ವಿಧಾನಸಭೆಯಲ್ಲಿ ಬಜೆಟ್ ಕುರಿತು ಚರ್ಚೆ ನಡೆಸುತ್ತಿರುವಾಗಲೇ, ಅಬಕಾರಿ ನೀತಿಯ ಪ್ರಕರಣದಲ್ಲಿ ಪ್ರಸ್ತುತ ಜೈಲು ಪಾಲಾಗಿರುವ ಮಾಜಿ ಹಣಕಾಸು ಸಚಿವ ಮನೀಶ್ ಸಿಸೋಡಿಯಾ ಅವರನ್ನು ಕೇಜ್ರಿವಾಲ್ ನೆನಪಿಸಿಕೊಂಡರು. ಸಿಸೋಡಿಯಾ ಅವರು ಮುಂದಿನ ವರ್ಷದ ಬಜೆಟ್ ಅನ್ನು ಮಂಡಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

“ನಾವು ಬಜೆಟ್ ಅನ್ನು ಚರ್ಚಿಸುತ್ತಿದ್ದೇವೆ ಮತ್ತು ಇಂದು ಹತ್ತನೇ ಬಜೆಟ್‌ನಲ್ಲಿ ನಾವು ಮನೀಶ್ ಸಿಸೋಡಿಯಾ ಅವರನ್ನು ನೆನಪಿಸಿಕೊಳ್ಳುತ್ತೇವೆ. ಇದಕ್ಕೂ ಮುನ್ನ ಮನೀಶ್ ಸಿಸೋಡಿಯಾ ಅವರು ವಿಧಾನಸಭೆಯಲ್ಲಿ 9 ಬಜೆಟ್ ಮಂಡಿಸಿದ್ದು, ಮುಂದಿನ ವರ್ಷದ ಬಜೆಟ್ ಮಂಡಿಸುತ್ತಾರೆ’ ಎಂದು ಆಶಿಸುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದರು.

ಈ ನಡುವೆ, ರಾಜಕೀಯ ಕಾರಣಗಳಿಗಾಗಿ ಭಗವಾನ್ ರಾಮನ ಹೆಸರನ್ನು ಕೇಜ್ರಿವಾಲ್ ತೆಗೆದುಕೊಂಡಿದ್ದಾರೆ ಎಂದು ಟೀಕಿಸುವ ಮೂಲಕ ಬಿಜೆಪಿ ತಿರುಗೇಟು ನೀಡಿದೆ. ಇದು ಕೋಟ್ಯಂತರ ಭಕ್ತರ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಹೇಳಿದೆ. ‘ಸಹಾನುಭೂತಿ ಪಡೆಯಲು ಎಎಪಿ ನಾಯಕರು ಪದೇ ಪದೇ ರಾಮನ ಹೆಸರನ್ನು ಬಳಸುತ್ತಿರುವುದು ವಿಷಾದನೀಯ’ ಎಂದು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

“ರಾಜಕೀಯ ಕಾರಣಗಳಿಗಾಗಿ ಭಗವಾನ್ ರಾಮನ ಹೆಸರನ್ನು ಪ್ರತಿ ಬಾರಿ ತೆಗೆದುಕೊಂಡಾಗಲೂ, ಇಡಿ ನೋಟೀಸ್ ಬಗ್ಗೆ ಮಾತನಾಡುವಾಗಲೂ ಅವರು ಶ್ರೀರಾಮನ ಭಕ್ತರಾಗಿರುವ ಕೋಟ್ಯಂತರ ಮತದಾರರ ಭಾವನೆಗಳನ್ನು ನೋಯಿಸುತ್ತಾರೆ ಎಂದು ಕೇಜ್ರಿವಾಲ್ ತಿಳಿದಿರಬೇಕು’ ಎಂದು ಸಚ್‌ದೇವ ಹೇಳಿದರು.

ಇದನ್ನೂ ಓದಿ; ಸಂವಿಧಾನ ನಾಶವೆ ನರೇಂದ್ರ ಮೋದಿ ಮತ್ತು ಬಿಜೆಪಿಯ ಅಂತಿಮ ಗುರಿ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...