Homeಕರ್ನಾಟಕಬಡವರ ಬೆಂಬಲಕ್ಕೆ ನಿಲ್ಲದ ಬಿಜೆಪಿ ಸರ್ಕಾರವನ್ನು ಗೆಲ್ಲಿಸಬೇಕೇ: ಸಿಎಂ ಸಿದ್ದರಾಮಯ್ಯ

ಬಡವರ ಬೆಂಬಲಕ್ಕೆ ನಿಲ್ಲದ ಬಿಜೆಪಿ ಸರ್ಕಾರವನ್ನು ಗೆಲ್ಲಿಸಬೇಕೇ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

‘ಕೊಟ್ಟ ಮಾತಿನಂತೆ ನಡೆದುಕೊಳ್ಳುವವರನ್ನು ಬೆಂಬಲಿಸಿದರೆ ರಾಜ್ಯದ ಅಭಿವೃದ್ಧಿ ಸಾಧ್ಯ; ಬಡವರ ಬೆಂಬಲಕ್ಕೆ ನಿಲ್ಲದ ಬಿಜೆಪಿ ಸರ್ಕಾರವನ್ನು ಗೆಲ್ಲಿಸಬೇಕೇ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜನರನ್ನು ಪ್ರಶ್ನಿಸಿದರು.

ಮಂಡ್ಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಆಯೋಜಿಸಲಾಗಿದ್ದ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ, ವಿವಿಧ ಯೋಜನೆಗಳ ಸವಲತ್ತುಗಳನ್ನು ನೀಡಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ಅನ್ನಭಾಗ್ಯ ಯೋಜನೆಯಡಿ 5 ಕೆಜಿಯ ಜೊತೆಗೆ 5 ಕೆಜಿ ಅಕ್ಕಿ ನೀಡಿ, ರಾಜ್ಯವನ್ನು ಹಸಿವು ಮುಕ್ತ ಮಾಡುವ ಸರ್ಕಾರದ ಉದ್ದೇಶಕ್ಕೆ ಕೇಂದ್ರ ಸರ್ಕಾರ ಸಹಕರಿಸಲಿಲ್ಲ. ಆದ್ದರಿಂದ 5 ಕೆಜಿ ಬದಲಿಗೆ 170 ರೂ.ಗಳನ್ನು ನೀಡುತ್ತಿದ್ದೇವೆ. ಜಿಲ್ಲೆಯಲ್ಲಿ 438705 ಫಲಾನುಭವಿಗಳಿಗೆ 166 ಕೋಟಿ ರೂ.ಗಳ ಅನ್ನಭಾಗ್ಯದ ಆರ್ಥಿಕ ನೆರವು ನೀಡಲಾಗಿದೆ. ಬಡವರ ಬೆಂಬಲಕ್ಕೆ ನಿಲ್ಲದ ಬಿಜೆಪಿ ಸರ್ಕಾರವನ್ನು ಗೆಲ್ಲಿಸಬೇಕೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಕಳೆದ ಚುನಾವಣೆಯಲ್ಲಿ ರಾಜ್ಯದ ಜನ ನಮ್ಮ ನಿರೀಕ್ಷೆಯನ್ನೂ ಮೀರಿ ಆಶೀರ್ವಾದ ಮಾಡಿದ್ದಾರೆ. 136 ಸ್ಥಾನಗಳಲ್ಲಿ ನಮ್ಮನ್ನು ಗೆಲ್ಲಿಸಿದ್ದಾರೆ. ಕರ್ನಾಟಕದ ಜನ ಪ್ರಭುದ್ಧವಾದ ತೀರ್ಮಾನ ಮಾಡಿದ್ದಾರೆ. ಮಂಡ್ಯ ಜನರೂ ಕೂಡ ಸುಳ್ಳು ಭರವಸೆ ನೀಡಿದ್ದರೂ, ದಾರಿ ತಪ್ಪಿಸುವ ಕೆಲಸ ಮಾಡಿದ್ದರೂ ಸರಿಯಾದ ತೀರ್ಮಾನವನ್ನೇ ಮಾಡಿದ್ದಾರೆ ಎಂದರು.

ಚುನಾವಣಾ ಪೂರ್ವದಲ್ಲಿ ನೀಡಿದ್ದ ಅನೇಕ ಭರವಸೆಗಳ ಪೈಕಿ ಪ್ರಮುಖವಾಗಿ ಐದು ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೆ ತಂದೆವು. ಪ್ರಮಾಣವಚನ ಸ್ವೀಕಾರ ಮಾಡಿದ ದಿನವೇ 5 ಗ್ಯಾರಂಟಿಗಳ ಜಾರಿಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿದೆವು. ರಾಜ್ಯದ 3.50 ಕೋಟಿ ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾದ ಶಕ್ತಿ ಯೋಜನೆಗೆ ಚಾಲನೆ ನೀಡಿದೆವು. 50 ರಿಂದ 60 ಲಕ್ಷ ಮಹಿಳೆಯರು ಈ ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ ಎಂದರು.

ಕೃಷಿ ಇಲಾಖೆಗೆ 600 ಕೋಟಿ ರೂ.ಗಳನ್ನು ಬೆಳೆ ವಿಮೆಗೆ ನೀಡಲಾಗಿದ್ದು, ಇನ್ನೂ 800 ಕೋಟಿ ರೂ.ಗಳನ್ನು ನೀಡಲಾಗುವುದು. 33.25 ಲಕ್ಷ ರೈತರಿಗೆ 631 ಕೋಟಿ ರೂ.ಗಳನ್ನು ತಲಾ 2000 ರೂ.ಗಳ ಬೆಳೆ ಪರಿಹಾರಕ್ಕೆ ನೀಡಿದ್ದೇವೆ ಎಂದು ವಿವರಿಸಿದರು.

ಮಂಡ್ಯ ಜಿಲ್ಲೆ ಸಂಪೂರ್ಣ ಅಭಿವೃದ್ಧಿ:

ಬಿಜೆಪಿಯವರ ಮೇಲೆ ಜೆಡಿಎಸ್ ನಾಯಕರಿಗೆ ಬಹಳ ಪ್ರೀತಿ ಉಂಟಾಗಿದೆ; ನಮ್ಮ ಗ್ಯಾರಂಟಿಗಳ ಬಗ್ಗೆ ಟೀಕಿಸುತ್ತಾರೆ. ಜನರಿಗೆ ಸತ್ಯ ತಿಳಿಸದೆ ರೈತರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನಾವು ನಿಮ್ಮ ಪರ ಇದ್ದೇವೆ. ಮಂಡ್ಯ ಜಿಲ್ಲೆಯನ್ನು ಸಂಪೂರ್ಣ ಅಭಿವೃದ್ಧಿ ಮಾಡಲಾಗುವುದು. 500 ಕೋಟಿ ರೂ.ಗಳನ್ನು ಜಿಲ್ಲೆಗೆ ನೀಡಲಾಗುತ್ತಿದೆ. ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ನೀರಾವರಿಗೆ ಹೆಚ್ಚಿನ ಒತ್ತು ನೀಡಲಾಗಿತ್ತು. ವ್ಯವಸಾಯದ ಮೇಲೆ ಅವಲಂಬಿತ ಜನ ಹೆಚ್ಚಿದ್ದು, ಅಭಿವೃದ್ಧಿ ಮಾಡಲು ಪಣ ತೊಟ್ಟಿದ್ದೇವೆ. ಯಾರೂ ಏನೇ ಹೇಳಿದರೂ ಕೆಲಸ ಮಾಡಿದವರನ್ನು ಗೆಲ್ಲಿಸಬೇಕು ಎಂದರು.

ಮಂಡ್ಯದಲ್ಲಿ 4.57 ಕೋಟಿ ಮಹಿಳೆಯರು ಹಾಗೂ ಇಡೀ ರಾಜ್ಯದಲ್ಲಿ 170 ಕೋಟಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ನಂತರ ಜನರನ್ನು ಸಂಪೂರ್ಣವಾಗಿ ಹಿಂದಿನ ಸರ್ಕಾರ ಮರೆತಿತ್ತು. ಆದರೆ ನಾವು ನುಡಿದಂತೆ ನಡೆದಿದ್ದೇವೆ. ಬಿಜೆಪಿಯವರು ರೈತಪರ , ಬಡವರಪರ ಎಂದು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರೂ, ಯಾವುದೇ ಭರವಸೆಗಳನ್ನು ಈಡೇರಿಸಲಿಲ್ಲ. ಅವರು ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಲಿಲ್ಲ. ಕುಮಾರಸ್ವಾಮಿಯವರು ಸಿಎಂ ಆಗಿದ್ದಾಗ, ಬಿಜೆಪಿಯ ಯಡಿಯೂರಪ್ಪನವರು 17 ಶಾಸಕರನ್ನು ಕೊಂಡು ಆಪರೇಷನ್ ಕಮಲ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರು. ಮಾಜಿ ಪ್ರಧಾನಿ ದೇವೇಗೌಡರು ಕೋಮುವಾದಿಗಳೊಂದಿಗೆ ಸೇರುವುದಿಲ್ಲ ಎಂದಿದ್ದವರು, ಈಗ ಅವರನ್ನೇ ಬೆಂಬಲಿಸುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನ ಅಪವಿತ್ರ ಮೈತ್ರಿಯನ್ನು ಸೋಲಿಸಿ, ನಮ್ಮ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಡಬೇಕೆಂದು ಜನರನ್ನು ಕೋರಿದರು.

4.60 ಕೋಟಿ ಜನ ಗ್ಯಾರಂಟಿ ಫಲಾನುಭವಿಗಳು

ಮಂಡ್ಯ ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಇಲ್ಲಿನ ಜನರಿಗೆ 464303 ಜನ ನೋಂದಾಯಿಸಿಕೊಂಡಿದ್ದು, 104 ಕೋಟಿ ರೂ. ನೀಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 449197 ಮಹಿಳೆಯರು ನೊಂದಾಯಿಸಿಕೊಂಡಿದ್ದು, 512 ಕೋಟಿ ರೂ. ಗಳನ್ನು ನೀಡಲಾಗಿದೆ. ಯುವನಿಧಿ 3148 ಅರ್ಜಿಗಳು ನೋಂದಾವಣೆಯಾಗಿದ್ದು, 22 ಲಕ್ಷ ರೂ.ಗಳನ್ನು ವರ್ಗಾಯಿಸಲಾಗಿದೆ. ಬಡವರು, ಮಹಿಳೆಯರು, ದಲಿತರು, ರೈತರು ಸೇರಿದಂತೆ ಎಲ್ಲ ಜಾತಿಧರ್ಮದವರಿಗೂ ಆರ್ಥಿಕವಾಗಿ ಬಲ ತುಂಬಲಾಗುತ್ತಿದೆ. 4.60 ಕೋಟಿ ಜನರಿಗೆ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ತಲುಪುತ್ತಿದೆ. ಈವರ್ಷ 36 ಸಾವಿರ ಕೋಟಿ, ನಂತರ 52009 ಕೋಟಿ ರೂ.ಗಳನ್ನು ಬಜೆಟನಲ್ಲಿ ನಿಗದಿಪಡಿಸಲಾಗಿದೆ. ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಮಂಡ್ಯ ಶಾಸಕರಾದ ರವಿಕುಮಾರ್ , ರಮೇಶ್, ನರೇಂದ್ರಸ್ವಾಮಿ , ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ ಉದಯ, ವಿಧಾನಪರಿಷತ್ ಸದಸ್ಯರಾದ ಮಧು ಮಾದೇಗೌಡ ದಿನೇಶ್ ಗೂಳಿಗೌಡ, ಮರೀತಿಬ್ಬೇಗೌಡ, ರವಿಶಂಕರ್, ಲೋಕಸಭಾ ಅಭ್ಯರ್ಥಿ ವೆಂಕಟರಮಣ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ; ‘ಮಮತಾ ಬ್ಯಾನರ್ಜಿ ಪ್ರಧಾನಿ ಕಾರ್ಯಾಲಯಕ್ಕೆ ಸಂದೇಶ ಕಳುಹಿಸಿದ್ದಾರೆ..’; ಟಿಎಂಸಿ ಪಟ್ಟಿ ಬಿಡುಗಡೆಗೆ ಅಧೀರ್ ಲೇವಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...