Homeಮುಖಪುಟಮುಖ್ಯ ಚುನಾವಣಾ ಆಯುಕ್ತರ ನಡುವಿನ ಭಿನ್ನಾಭಿಪ್ರಾಯದಿಂದಲೇ ಅರುಣ್ ಗೋಯೆಲ್ ರಾಜೀನಾಮೆ?

ಮುಖ್ಯ ಚುನಾವಣಾ ಆಯುಕ್ತರ ನಡುವಿನ ಭಿನ್ನಾಭಿಪ್ರಾಯದಿಂದಲೇ ಅರುಣ್ ಗೋಯೆಲ್ ರಾಜೀನಾಮೆ?

- Advertisement -
- Advertisement -

ಲೋಕಸಭಾ ಚುನಾವಣೆಯ ಘೋಷಣೆಗೆ ಕೇವಲ ಒಂದು ವಾರದ ಮೊದಲು ಚುನಾವಣಾ ಆಯುಕ್ತ (ಇಸಿ) ಅರುಣ್ ಗೋಯೆಲ್ ಅವರ ಹಠಾತ್ ರಾಜೀನಾಮೆ ಅನೇಕರಿಗೆ ಆಶ್ಚರ್ಯವನ್ನುಂಟುಮಾಡಿದೆ, ಆದರೆ ಚುನಾವಣಾ ಆಯೋಗದ ಒಳಗಿನ ಮೂಲಗಳ ಪ್ರಕಾರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಅರುಣ್ ಗೋಯೆಲ್ ಅವರ ನಡುವಿನ ಭಿನ್ನಾಭಿಪ್ರಾಯಗಳಿಂದ ಈ ಬೆಳವಣಿಗೆ ನಡೆದಿದೆ ಎಂದು ಹೇಳಲಾಗಿದೆ.

ಮೂಲಗಳ ಪ್ರಕಾರ, ಉತ್ತರಪ್ರದೇಶ ಮತ್ತು ಮಹಾರಾಷ್ಟ್ರದ ನಂತರ ಮೂರನೇ ಅತಿ ಹೆಚ್ಚು ಸಂಸದೀಯ ಸ್ಥಾನಗಳನ್ನು ಹೊಂದಿರುವ ಪಶ್ಚಿಮ ಬಂಗಾಳದ ಚುನಾವಣೆ ಸಿದ್ದತೆಗಳ ಬಗ್ಗೆ ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲು ಗೋಯೆಲ್ ನಿರಾಕರಿಸಿದ್ದರು. ನಂತರ ಮಾರ್ಚ್ 5ರಂದು ರಾಜೀವ್‌ ಕುಮಾರ್‌ ಏಕಾಂಗಿಯಾಗಿ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ್ದರು. ಪತ್ರಿಕಾಗೋಷ್ಠಿಯಲ್ಲಿ, ಅನಾರೋಗ್ಯದ ಹಿನ್ನೆಲೆ ಅರುಣ್‌ ಗೋಯೆಲ್ ದೆಹಲಿಗೆ ತೆರಳಿದ್ದಾರೆ ಎಂದು CEC ರಾಜೀವ್ ಕುಮಾರ್ ಹೇಳಿದ್ದರು. ಆದರೆ, ಗೋಯೆಲ್ ಅವರ ನಿಕಟ ಮೂಲಗಳು ಅದನ್ನು ತಳ್ಳಿಹಾಕಿವೆ ಮತ್ತು ಅವರು ಪರಿಪೂರ್ಣವಾಗಿ ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದು, ಕೆಲವು ಗಂಭೀರ ಭಿನ್ನಾಭಿಪ್ರಾಯಗಳಿಂದಾಗಿ ಅವರು ಪಶ್ಚಿಮ ಬಂಗಾಳದ ಭೇಟಿಯನ್ನು ಮೊಟಕುಗೊಳಿಸಿ ದೆಹಲಿಗೆ ವಾಪಾಸ್ಸು ತೆರಳಿದ್ದಾರೆ ಎಂದು ಹೇಳಿದ್ದಾರೆ.

ಆದರೆ, ಮೂಲಗಳು ಇಬ್ಬರು ಅಧಿಕಾರಿಗಳ ನಡುವೆ ಏನಾಯಿತು ಮತ್ತು ಅವರ ಭಿನ್ನಾಭಿಪ್ರಾಯಗಳ ಬಗ್ಗೆ ಮತ್ತು ನಿಖರವಾಗಿ ಅವರು ಯಾವ ವಿಷಯಗಳಲ್ಲಿ ಭಿನ್ನಾಭಿಪ್ರಾಯ ಹೊಂದಿದ್ದಾರೆ ಎಂಬುದರ ಕುರಿತು ಹೆಚ್ಚಿನ ವಿವರಗಳನ್ನು ನೀಡಿಲ್ಲ. ಗೋಯೆಲ್ ಅವರು ನವೆಂಬರ್ 2027ರವರೆಗೆ ಅಧಿಕಾರಾವಧಿಯನ್ನು ಹೊಂದಿದ್ದರು ಮತ್ತು ಅವರು ಮುಂದಿನ ವರ್ಷ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಳ್ಳುವ ಸಾಧ್ಯತೆ ಇತ್ತು.

ದೆಹಲಿಯಲ್ಲಿ ಅವರು ಮಾರ್ಚ್ 7ರಂದು ಭಾರತೀಯ ಚುನಾವಣಾ ಆಯೋಗದ (ಇಸಿಐ) ಪ್ರಧಾನ ಕಚೇರಿಯಲ್ಲಿ ರಾಜೀವ್‌ ಕುಮಾರ್ ಅವರೊಂದಿಗೆ ಲೋಕಸಭೆ ಚುನಾವಣೆ ಸಂಬಂಧಿತ ಸಭೆಗಳಲ್ಲಿ ಭಾಗವಹಿಸಿದ್ದರು. ಆದರೆ ಮಾರ್ಚ್ 8ರಂದು, ಅವರು ಚುನಾವಣಾ ಸಿದ್ಧತೆಗಳ ಕುರಿತು ಇಸಿಐ ಮತ್ತು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಜೊತೆಗೆ ಸಭೆಗೆ ಹಾಜರಾಗಿಲ್ಲ, ಬದಲಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ತಿಳಿಸದೆ ಅವರು ತಮ್ಮ ರಾಜೀನಾಮೆಯನ್ನು ಭಾರತದ ರಾಷ್ಟ್ರಪತಿಗಳಿಗೆ ಕಳುಹಿಸಿದ್ದರು.

ಗೋಯಲ್‌ ಅವರಿಗೆ ರಾಜೀನಾಮೆ ಹಿಂತೆಗೆದುಕೊಳ್ಳುವಂತೆ ಮನವೊಲಿಸಲು ಸರ್ಕಾರ ಪ್ರಯತ್ನಿಸಿದೆ ಆದರೆ ಅವರು ತಮ್ಮ ನಿರ್ಧಾರದಲ್ಲಿ ಅಚಲವಾಗಿದ್ದರು ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಮಾರ್ಚ್ 9ರಂದು ಗೋಯಲ್‌ ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದು, ಕಾನೂನು ಮತ್ತು ನ್ಯಾಯ ಸಚಿವಾಲಯವು ಅದೇ ದಿನದಿಂದ ಜಾರಿಗೆ ಬರುವಂತೆ ಗೋಯೆಲ್ ಅವರ ರಾಜೀನಾಮೆಯನ್ನು ಅಂಗೀಕರಿಸಿದೆ ಎಂದು ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿತ್ತು.

ಅರುಣ್ ಗೋಯಲ್ 1985ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದರು. ನವೆಂಬರ್ 18, 2022ರಂದು ಸ್ವಯಂ ನಿವೃತ್ತಿ ಪಡೆದು, ಮರುದಿನ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದರು. ಅವರ ನೇಮಕ ವಿವಾದಕ್ಕೀಡಾಗಿತ್ತು. ಸುಪ್ರೀಂಕೋಟ್‌ನಲ್ಲಿ ಈ ಕುರಿತು ಪ್ರಶ್ನಿಸಲಾಗಿತ್ತು. ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ಸ್ವಯಂ ನಿವೃತ್ತಿ ಪಡೆದ ಅರುಣ್ ಗೋಯಲ್ ಅವರನ್ನು ತಕ್ಷಣವೇ ಚುನಾವಣಾ ಆಯುಕ್ತ ಹುದ್ದೆಗೆ ನೇಮಿಸುವ ಆತುರವೇನಿತ್ತು? ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ADR) ಗೋಯೆಲ್ ಅವರ ನೇಮಕಾತಿಯ ವಿರುದ್ಧ ಏಪ್ರಿಲ್ 2023ರಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಕಳೆದ ವರ್ಷ ಮಾರ್ಚ್‌ನಲ್ಲಿ ಚುನಾವಣಾ ಆಯೋಗಗಳ ನೇಮಕಾತಿ ವಿಷಯದ ಕುರಿತು ಸಂವಿಧಾನಿಕ ಪೀಠವು ತೀರ್ಪು ನೀಡಿದ್ದರಿಂದ ಸುಪ್ರೀಂ ಕೋರ್ಟ್ 2023 ಆಗಸ್ಟ್‌ನಲ್ಲಿ ಈ ಕುರಿತ ಅರ್ಜಿಯನ್ನು ವಜಾಗೊಳಿಸಿತ್ತು.

ಡಿಸೆಂಬರ್ 7, 1962ರಂದು ಪಂಜಾಬ್‌ನ ಪಟಿಯಾಲದಲ್ಲಿ ಜನಿಸಿದ್ದ ಅರುಣ್ ಗೋಯೆಲ್, ಗಣಿತಶಾಸ್ತ್ರದಲ್ಲಿ M.Sc. ಪದವಿಯನ್ನು ಕುಲಪತಿಗಳ ಪದಕದೊಂದಿಗೆ ಪಡೆದಿದ್ದರು. ಅವರು ಇಂಗ್ಲೆಂಡ್‌ನ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದ ಚರ್ಚಿಲ್ ಕಾಲೇಜಿನಿಂದ ಅಭಿವೃದ್ಧಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಅವರು ಅಮೇರಿಕದ ಹಾರ್ವರ್ಡ್ ವಿಶ್ವವಿದ್ಯಾಲಯದ ಜಾನ್ ಎಫ್ ಕೆನಡಿ ಸರ್ಕಾರಿ ಶಾಲೆಯಲ್ಲಿ ತರಬೇತಿ ಪಡೆದಿದ್ದಾರೆ. ಆ ಬಳಿಕ ಪಂಜಾಬ್ ಕೇಡರ್‌ನ 1985-ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದರು. ಅರುಣ್ ಗೋಯೆಲ್ ಅವರು 37 ವರ್ಷಗಳ ಸೇವೆಯ ನಂತರ ಭಾರತ ಸರ್ಕಾರದ  ಕೈಗಾರಿಕೆ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಅವರು ನವೆಂಬರ್ 2022ರಲ್ಲಿ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಇದನ್ನು ಓದಿ: ‘ಪ್ರಧಾನಿ ಕಾರ್ಯಾಲಯಕ್ಕೆ ಮಮತಾ ಬ್ಯಾನರ್ಜಿ ಸಂದೇಶ ಕಳುಹಿಸಿದ್ದಾರೆ..’; ಟಿಎಂಸಿ ಪಟ್ಟಿ ಬಿಡುಗಡೆಗೆ ಅಧೀರ್ ಲೇವಡಿ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...