Homeಮುಖಪುಟಇವಿಎಂಗಳ ಪರಿಣಾಮಕಾರಿತ್ವದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ರಾ ಗೋಯೆಲ್? ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ IAS ಅಧಿಕಾರಿ

ಇವಿಎಂಗಳ ಪರಿಣಾಮಕಾರಿತ್ವದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ರಾ ಗೋಯೆಲ್? ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ IAS ಅಧಿಕಾರಿ

- Advertisement -
- Advertisement -

ಚುನಾವಣಾ ಹೊಸ್ತಿಲ್ಲಲ್ಲೇ ಚುನಾವಣಾ ಆಯುಕ್ತ ಗೋಯೆಲ್ ರಾಜೀನಾಮೆ ದೇಶದಲ್ಲಿ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ. ಈ ಬಗ್ಗೆ ಭಾರತ ಸರಕಾರದ ವಿದ್ಯುತ್ ಮತ್ತು ಹಣಕಾಸು ಸಚಿವಾಲಯಗಳಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಎಎಸ್ ಅಧಿಕಾರಿ ಇಎಎಸ್ ಶರ್ಮಾ ಭಾರತದ ಚುನಾವಣಾ ಆಯೋಗದ (ಇಸಿಐ) ಸಮಗ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ರಾಷ್ಟ್ರಪತಿಗಳಿಗೆ ಪತ್ರವನ್ನು ಬರೆದಿದ್ದು, ಚುನಾವಣಾ ಪ್ರಕ್ರಿಯೆಯ ಪಾವಿತ್ರ್ಯತೆಯನ್ನು ಎತ್ತಿಹಿಡಿಯಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಲ್ಲಿ ತಕ್ಷಣದ ಮಧ್ಯಪ್ರವೇಶವನ್ನು ಕೋರಿದ್ದಾರೆ.

ಆಡಳಿತಾರೂಢ ಬಿಜೆಪಿ ಚುನಾವಣಾ ಪ್ರಕ್ರಿಯೆಯ ಸಮಗ್ರತೆಯನ್ನು ಹಾಳುಮಾಡುತ್ತಿದೆ ಮತ್ತು ತನ್ನ ಪರವಾಗಿ ಚುನವಣಾ ಆಯೋಗವನ್ನು ಬಳಸಿಕೊಳ್ಳುತ್ತಿದೆ ಎಂದು ಹೇಳಿದ ಶರ್ಮಾ, ಚುನಾವಣಾ ಆಯುಕ್ತ ಸ್ಥಾನದಿಂದ ಅರುಣ್ ಗೋಯೆಲ್ ಹಠಾತ್ ನಿರ್ಗಮನದ ಬಗ್ಗೆ ಪ್ರಶ್ನಿಸಿದ್ದಾರೆ. ಶರ್ಮಾ ಅವರು ರಾಷ್ಟ್ರಪತಿಗಳಿಗೆ ಈ ಕುರಿತು ಬಹಿರಂಗ ಪತ್ರವನ್ನು ಬರೆದಿದ್ದು, ನನ್ನ ದೃಷ್ಟಿಯಲ್ಲಿ,  ಗೋಯೆಲ್ ಅವರ ಹಠಾತ್ ಮತ್ತು ವಿವರಣೆ ನೀಡದ ನಿರ್ಗಮನವು ಈ ಕೆಳಗಿನ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಹೇಳಿದ್ದಾರೆ..

1.ಚುನಾವಣಾ ಪ್ರಕ್ರಿಯೆಯಲ್ಲಿ ರಾಜಕಾರಣಿಗಳು ಮಧ್ಯಪ್ರವೇಶಿಸುವ ಮೂಲಕ ಪಾವಿತ್ರ್ಯತೆಯನ್ನು ಹಾಳುಮಾಡುವ  ವಿಚಾರದಲ್ಲಿ ಗೋಯೆಲ್ ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆಯೇ?

2.ಇವಿಎಂಗಳ ಬಳಕೆಯ ಪರಿಣಾಮಕಾರಿತ್ವದ ಬಗ್ಗೆ ಗೋಯೆಲ್ ಅನುಮಾನ ವ್ಯಕ್ತಪಡಿಸಿದ್ದಾರೆಯೇ?

3. ಚುನಾವಣಾ ಬಾಂಡ್‌ ಕುರಿತ ವಿವರಗಳನ್ನು ಬಹಿರಂಗಪಡಿಸದಂತೆ ಎಸ್‌ಬಿಐಗೆ ರಾಜಕಾರಣಿಗಳು ಒತ್ತಡ ಹೇರಿರುವ ಬಗ್ಗೆ ಅವರು ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆಯೇ?

5. ಚುನಾವಣಾ ಪ್ರಕ್ರಿಯೆಯ ಪಾವಿತ್ರ್ಯತೆಯನ್ನು ಕಾಪಾಡಿಕೊಳ್ಳಲು BEL, ECIL ಮತ್ತು SBI ಮಂಡಳಿಗಳಿಂದ ಬಿಜೆಪಿಯ ನಾಮನಿರ್ದೇಶಿತರನ್ನು ಹಿಂತೆಗೆದುಕೊಳ್ಳಬೇಕೆಂದು ಗೋಯೆಲ್ ಪ್ರಸ್ತಾಪಿಸಿದ್ದಾರೆಯೇ?

6.ಗೋಯೆಲ್ ಅವರು ರಾಜಕೀಯ ಕಾರ್ಯಕಾರಿಣಿಗಳನ್ನು ಅಸಮಾಧಾನಗೊಳಿಸುವಂತಹ ಯಾವುದೇ ವಿಷಯದ ಬಗ್ಗೆ ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆಯೇ?

7.ಆಡಳಿತ ಪಕ್ಷದ ಕುತಂತ್ರಗಳಿಗೆ ದಾರಿ ಮಾಡಿಕೊಡಲು ಅಧಿಕಾರದಲ್ಲಿರುವವರು ಗೋಯೆಲ್ ಅವರಿಗೆ ರಾಜೀನಾಮೆಯನ್ನು ನೀಡುವಂತೆ ಒತ್ತಾಯಿಸಿದ್ದಾರೆಯೇ? ಎಂದು ಶರ್ಮಾ ಅವರು ಪ್ರಶ್ನೆಯನ್ನು ಎತ್ತಿದ್ದಾರೆ.

ಲೋಕಸಭೆ ಚುನಾವಣೆಯ ಘೋಷಣೆಗೆ ಕೆಲವೇ ದಿನಗಳ ಮೊದಲು ಅರುಣ್ ಗೋಯೆಲ್ ಚುನಾವಣಾ ಆಯುಕ್ತ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು, ಇದು ಜನರಲ್ಲಿ ಚುನಾವಣಾ ಆಯೋಗದ ಪಾರದರ್ಶಕತೆ ಬಗ್ಗೆ ಪ್ರಶ್ನೆಯನ್ನು ಹುಟ್ಟು ಹಾಕಿತ್ತು. ಗೋಯಲ್‌ ರಾಜೀನಾಮೆ ಹಿನ್ನೆಲೆ ಚುನಾವಣಾ ಆಯೋಗದಲ್ಲಿ ಪಾರದರ್ಶಕತೆ ಇಲ್ಲ ಎಂದು ಆರೋಪಿಸಿರುವ ವಿರೋಧ ಪಕ್ಷದ ನಾಯಕರು ಚುನಾವಣೆ ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಯುತ್ತಿದೆಯೇ ಎಂಬ ಅನುಮಾನ ವ್ಯಕ್ತಪಡಿಸಿದ್ದರು.

ಈ ಮೊದಲು ಶರ್ಮಾ ಅವರು ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಮತ್ತು ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ಬೋರ್ಡ್‌ಗಳಲ್ಲಿ ಬಿಜೆಪಿಯ ಪ್ರತಿನಿಧಿಗಳ ಆಯ್ಕೆಯನ್ನು ಪ್ರಶ್ನಿಸಿದ್ದರು. BEL ಮತ್ತು ECIL ಇವಿಎಂ ತಯಾರಿಯನ್ನು ಮಾಡುತ್ತದೆ. ಇಂತಹ ಸಂಸ್ಥೆಗಳಿಗೆ ಬಿಜೆಪಿ ತನ್ನ ನಾಯಕರನ್ನು ಮಂಡಳಿಗೆ ಸದಸ್ಯರನ್ನಾಗಿ ನೇಮಿಸುವುದು ಅದರ ಕಾರ್ಯಾಚರಣೆಯ ಮೇಲೆ ಪ್ರಭಾವ ಬೀರುತ್ತದೆ ಎಂದು ಹೇಳಿದ್ದರು.

ಇವಿಎಂಗಳ ದೋಷಗಳ ಬಗ್ಗೆ ಅನೇಕರು ವ್ಯಕ್ತಪಡಿಸಿದ ಕಳವಳಗಳನ್ನು ಇಸಿಐ ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದೆ ಎಂದು ಹೇಳಿದ ಶರ್ಮಾ ಚುನಾವಣಾ ಬಾಂಡ್‌ ವಿಚಾರದಲ್ಲಿ ಕೂಡ ರಾಷ್ಟ್ರಪತಿಗಳ ಗಮನವನ್ನು ಸೆಳೆದಿದ್ದಾರೆ. ಎಸ್‌ಬಿಐ ಮಂಡಳಿಯಲ್ಲಿ ಬಿಜೆಪಿ ಪ್ರತಿನಿಧಿಗಳು ಇದ್ದಾರೆ ಎಂದು ಆರೋಪಿಸಿದ್ದಾರೆ.

ಕಳೆದ ತಿಂಗಳು ಒಂದು ಮಹತ್ವದ ತೀರ್ಪಿನಲ್ಲಿ, ಸುಪ್ರೀಂಕೋರ್ಟ್ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಅಸಂವಿಧಾನಿಕ ಎಂದು ಘೋಷಿಸಿದೆ ಮತ್ತು ದಾನಿಗಳು ಮತ್ತು ಪಕ್ಷದ ನಿಧಿಯ ಮೂಲಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವಂತೆ ಎಸ್‌ಬಿಐಗೆ ನಿರ್ದೇಶನ ನೀಡಿತ್ತು. ಆದರೆ ಎಸ್‌ಬಿಐ ಚುನಾವಣಾ ಬಾಂಡ್‌ಗಳ ವಿವರಗಳನ್ನು ಒದಗಿಸಲು ಜುಲೈ 30ರವರೆಗೆ ವಿಸ್ತರಣೆಯನ್ನು ಕೋರಿದೆ. ಮೂಲಭೂತವಾಗಿ, ಲೋಕಸಭೆ ಚುನಾವಣೆಯ ನಂತರವೇ ಆದೇಶಗಳನ್ನು ಅನುಸರಿಸಲು ಎಸ್‌ಬಿಐ ಒಪ್ಪಿಕೊಂಡಿದೆ. ಅಧಿಕಾರ ಶಾಹಿಗಳು ಎಸ್‌ಬಿಐಗೆ ಜೂನ್ ಅಂತ್ಯದವರೆಗೆ ಚುನಾವಣಾ ಬಾಂಡ್‌ ಬಿಡುಗಡೆಯಲ್ಲಿ ವಿಳಂಬ ಮಾಡುವಂತೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದ್ದಾರೆ.

ಇಸಿಐ ಮೇಲೆ ಬಿಜೆಪಿ ಸಂಪೂರ್ಣ ಹಿಡಿತ ಸಾಧಿಸಲು ಮತ್ತು ಚುನಾವಣೆಗಳನ್ನು ದುರ್ಬಲಗೊಳಿಸುವ ಕುರಿತು ಕಳವಳಗಳನ್ನು ಶರ್ಮಾ ಎತ್ತಿ ತೋರಿಸಿದ್ದಾರೆ. ಚುನಾವಣಾ ಆಯುಕ್ತರಾಗಿ ನೇಮಕಗೊಳ್ಳುವ ಅಭ್ಯರ್ಥಿಗಳ ಆಯ್ಕೆಯಲ್ಲಿನ ಅಪಾರದರ್ಶಕತೆಯೂ ಇದರಲ್ಲಿ ಸೇರಿದೆ. ಚುನಾವಣಾ ಆಯುಕ್ತರ ನೇಮಕಾತಿಗೆ ಅಸ್ತಿತ್ವದಲ್ಲಿರುವ ಕಾರ್ಯವಿಧಾನವು ಪಾರದರ್ಶಕ ಮತ್ತು ವಸ್ತುನಿಷ್ಠವಾಗಿಲ್ಲ ಎಂದು ಭಾರತದ ಸರ್ವೋಚ್ಚ ನ್ಯಾಯಾಲಯವು ಸ್ಪಷ್ಟವಾಗಿ ಹೇಳಿದೆ ಎಂದು ಮಾಜಿ ಐಎಎಸ್ ಅಧಿಕಾರಿ ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನು ಓದಿ: ತಾಳ್ಮೆ ಕಳೆದುಕೊಂಡ ಬಿಜೆಪಿ ಕಾರ್ಯಕರ್ತರು: ಕೇಂದ್ರ ಸಚಿವ ಗಿರಿರಾಜ್ ಸಿಂಗ್‌ ವಿರುದ್ಧವೇ ಪ್ರತಿಭಟನೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...