Homeಮುಖಪುಟ2024ರ ಆಸ್ಕರ್‌ ಪ್ರಶಸ್ತಿ ಪ್ರಧಾನ: 7 ಪ್ರಶಸ್ತಿಗಳನ್ನು ಗೆದ್ದುಕೊಂಡ ‘ಓಪನ್‌ ಹೈಮರ್’ ಚಿತ್ರತಂಡ

2024ರ ಆಸ್ಕರ್‌ ಪ್ರಶಸ್ತಿ ಪ್ರಧಾನ: 7 ಪ್ರಶಸ್ತಿಗಳನ್ನು ಗೆದ್ದುಕೊಂಡ ‘ಓಪನ್‌ ಹೈಮರ್’ ಚಿತ್ರತಂಡ

- Advertisement -
- Advertisement -

96ನೇ ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿ ಪ್ರಧಾನ ಸಮಾರಂಭ ಅಮೆರಿಕದ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ನಡೆದಿದೆ. ಬ್ರಿಟಿಷ್-ಅಮೆರಿಕನ್ ಚಲನಚಿತ್ರ ನಿರ್ಮಾಪಕ ಕ್ರಿಸ್ಟೋಫರ್ ನೋಲನ್ ಭಾನುವಾರ ತಮ್ಮ ಮೊದಲ ಅಕಾಡೆಮಿ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ‘ಓಪನ್‌ ಹೈಮರ್’ ಸಿನಿಮಾವು 96ನೇ ಆಸ್ಕರ್‌ ಪ್ರಶಸ್ತಿ ಸಮಾರಂಭದಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

ಹಾಲಿವುಡ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಆಸ್ಕರ್‌ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭವು ನಡೆದಿದೆ. ಓಪನ್‌ಹೈಮರ್’ ಚಿತ್ರದ ನಟನೆಗಾಗಿ ರಾಬರ್ಟ್ ಡೌನಿ ಜ್ಯೂ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಪಡೆದಿದ್ದಾರೆ. ಅದೇ ರೀತಿ ‘ದಿ ಹೋಲ್ಡೋವರ್ಸ್’ ಚಿತ್ರಕ್ಕಾಗಿ ಡೇವಿನ್ ಜಾಯ್ ರಾಂಡೋಲ್ಫ್ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಕ್ರಿಸ್ಟೋಫರ್ ನೋಲನ್ ಅವರ ಜೀವನಾಧಾರಿತ ಓಪನ್‌ಹೈಮರ್ ಸಿನಿಮಾಕ್ಕೆ ಈ ಬಾರಿ ಅತ್ಯುತ್ತಮ ಸಿನಿಮಾ ಸೇರಿದಂತೆ ಒಟ್ಟು ಏಳು ಆಸ್ಕರ್‌ಗಳು ದೊರಕಿವೆ. ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ನಟ, ಅತ್ಯುತ್ತಮ ಪೋಷಕ ನಟ, ಅತ್ಯುತ್ತಮ ಛಾಯಾಗ್ರಹಣ, ಅತ್ಯುತ್ತಮ ಸಂಕಲನ ಮತ್ತು ಅತ್ಯುತ್ತಮ ಮೂಲ ಸಿನಿಮಾ ಸೇರಿದಂತೆ ಒಟ್ಟು ಏಳು ವಿಭಾಗದಲ್ಲಿ ಓಪನ್‌ಹೈಮರ್‌ ಪ್ರಶಸ್ತಿ ಗೆದ್ದುಕೊಂಡಿದೆ. ಕ್ರಿಸ್ಟಫರ್ ನೋಲನ್ ಅವರ ಲೇಟೆಸ್ಟ್ ಸಿನಿಮಾ ಓಪನ್​ಹೈಮರ್ ವಿಶ್ವಾದ್ಯಂತ ರಿಲೀಸ್ ಆಗಿದ್ದು ಇದಕ್ಕೆ ವ್ಯಾಪಕ ಪ್ರತಿಕ್ರಿಯೆ ಕೇಳಿ ಬಂದಿತ್ತು. ಅಟೊಮಿಕ್ ಬಾಂಬ್ ಕಂಡುಹಿಡಿದ ಭೌತಶಾಸ್ತ್ರಜ್ಞ ಜೆ. ರಾಬರ್ಟ್ ಓಪನ್​ಹೈಮರ್ ಅವರ ಜೀವನವನ್ನು ಈ ಸಿನಿಮಾ ತೋರಿಸುತ್ತದೆ. ಇವರು ಲಾಸ್ ಆಲಮೋಸ್ ಪ್ರಯೋಗಾಲಯದ ನಿರ್ದೇಕರೂ ಆಗಿದ್ದರು. ಇಲ್ಲಿಯೇ ಬಾಂಬ್​​ಗಳ ಕುರಿತು ಪ್ರಯೋಗವೂ ನಡೆದಿತ್ತು.

ಆಸ್ಕರ್‌ ಪ್ರಶಸ್ತಿ ಗೆದ್ದ ಚಲನಚಿತ್ರ ಹಾಗೂ ಕಲಾವಿದರ ಮಾಹಿತಿ…

1 ಅತ್ಯುತ್ತಮ ಚಿತ್ರ: ಓಪನ್‌ ಹೈಮರ್

2 ಅತ್ಯುತ್ತಮ ನಿರ್ದೇಶಕ: ಕ್ರಿಸ್ಟೋಫರ್ ನೋಲನ್

3 ಅತ್ಯುತ್ತಮ ನಟಿ: ಎಮ್ಮಾ ಸ್ಟೋನ್

4 ಅತ್ಯುತ್ತಮ ನಟ: ಸಿಲಿಯನ್ ಮರ್ಫಿ

4 ಅತ್ಯುತ್ತಮ ಅಂತರರಾಷ್ಟ್ರೀಯ ಚಲನಚಿತ್ರ: ‘ದಿ ಝೋನ್ ಆಫ್ ಇಂಟರೆಸ್ಟ್’

5 ಅತ್ಯುತ್ತಮ ಪೋಷಕ ನಟ: ರಾಬರ್ಟ್ ಡೌನಿ ಜೂನಿಯರ್ (ಓಪೆನ್‌ ಹೈಮರ್)

6 ಅತ್ಯುತ್ತಮ ಪೋಷಕ ನಟಿ: ಡೇವಿನ್ ಜಾಯ್ ರಾಂಡೋಲ್ಫ್ (ದಿ ಹೋಲ್ಡವರ್ಸ್)

7 ಅತ್ಯುತ್ತಮ ಹಾಡು: ಬಾರ್ಬಿ (ವಾಟ್ ವಾಸ್ ಐ ಮೇಡ್ ಫಾರ್)

8 ಅತ್ಯುತ್ತಮ ವಿಶ್ಯುವಲ್ ಎಫೆಕ್ಟ್: ‘ಗಾಡ್ಜಿಲ್ಲಾ ಮೈನಸ್ ಒನ್’

9 ಅತ್ಯುತ್ತಮ ಧ್ವನಿ ವಿನ್ಯಾಸ: ‘ದಿ ಝೋನ್ ಆಫ್ ಇಂಟರೆಸ್ಟ್’

10 ಅತ್ಯುತ್ತಮ ಸಂಕಲನ: ‘ಓಪನ್‌ ಹೈಮರ್’

11 ಅತ್ಯುತ್ತಮ ಛಾಯಾಗ್ರಹಣ: ‘ಓಪನ್‌ ಹೈಮರ್’

12 ಅತ್ಯುತ್ತಮ ಮೂಲ ಚಿತ್ರಕಥೆ: ಜಸ್ಟಿನ್ ಟ್ರೈಟ್ ಮತ್ತು ಆರ್ಥರ್ ಹರಾರಿ ಅವರ ‘ಅನ್ಯಾಟಮಿ ಆಫ್ ಎ ಫಾಲ್’

13 ಅತ್ಯುತ್ತಮ ಸಾಕ್ಷ್ಯಚಿತ್ರ: ಜಾನ್ ಮತ್ತು ಯೊಕೊ ಅವರ ‘ವಾರ್ ಇಸ್ ಓವರ್’

14 ಅತ್ಯುತ್ತಮ ಅನಿಮೇಟೆಡ್ ಚಲನಚಿತ್ರ: ಹಯಾವೊ ಮಿಯಾಜಾಕಿ ಮತ್ತು ತೋಶಿಯೊ ಸುಜುಕ್ ಅವರ ‘ದಿ ಬಾಯ್ ಅಂಡ್ ದಿ ಹೆರಾನ್’

15 ಅತ್ಯುತ್ತಮ ಮೇಕಪ್‌ ಮತ್ತು ಕೇಶ ವಿನ್ಯಾಸ: ‘ಪೂರ್‌ ಥಿಂಗ್ಸ್‌’ (Poor Things)

16 ಅತ್ಯುತ್ತಮ ಸಾಕ್ಷ್ಯಚಿತ್ರ ಕಿರುಚಿತ್ರ: ‘ದಿ ಲಾಸ್ಟ್ ರಿಪೇರಿ ಶಾಪ್’

ಪ್ರಶಸ್ತಿ ನೀಡಲು ವೇದಿಕೆಗೆ ಬೆತ್ತಲಾಗಿ ಬಂದ ನಟ:

ಆಸ್ಕರ್‌ ಕಾರ್ಯಕ್ರಮ ಪ್ರತಿವರ್ಷ ಒಂದಲ್ಲ ಒಂದು ಕಾರಣಕ್ಕೆ ಚರ್ಚಾ ವಿಚಾರವಾಗುತ್ತದೆ. ಈ ವರ್ಷ ಆಸ್ಕರ್‌ ವೇದಿಕೆಗೆ ನಟನೊಬ್ಬ ಬೆತ್ತಲಾಗಿ ಬಂದಿರುವುದು ವೈರಲ್‌ ಆಗಿದೆ. WWE ಸೂಪರ್‌ ಸ್ಟಾರ್‌, ಅಮೆರಿಕಾದ ನಟ ಜಾನ್‌ ಸೇನಾ ಆಸ್ಕರ್‌ ವೇದಿಕೆಗೆ ಬೆತ್ತಲಾಗಿ ಬಂದು ಅಚ್ಚರಿ ಮೂಡಿಸಿದ್ದಾರೆ.

ಜಾನ್‌ ಸೇನಾ ಅವರು ವಸ್ತ್ರ ವಿನ್ಯಾಸ ಪ್ರಶಸ್ತಿ ನೀಡಲು ವೇದಿಕೆ ಬಂದಿದ್ದರು. ಈ ವೇಳೆ ಅವರು ಖಾಸಗಿ ಭಾಗಕ್ಕೆ ಸ್ಟೋರಿ ಬೋರ್ಡ್‌ನ್ನು ಅಡ್ಡ ಹಿಡಿದು ಬೆತ್ತಲಾಗಿ ವೇದಿಕೆಗೆ ಬಂದಿದ್ದಾರೆ. ಜಾನ್‌ ಸೇನಾ ಈ ರೀತಿಯಾಗಿ ಬರುವುದು ಕಾರ್ಯಕ್ರಮದ ಒಂದು ಭಾಗವಾಗಿತ್ತು. ಇದಕ್ಕಾಗಿ ಪೂರ್ವ ತಯಾರಿಯನ್ನು ನಡೆಸಲಾಗಿತ್ತು. ಬೆತ್ತಲಾಗಿ ವೇದಿಕೆಗೆ ಬಂದ ಜಾನ್‌ ಸೇನಾ ಅವರ ಅವತಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಬಗ್ಗೆ ನಾನಾ ಚರ್ಚೆಗಳು ಆರಂಭವಾಗಿದೆ.

ಸಿನಿಮಾ ರಂಗದ ಅತ್ಯುತ್ತಮ ಸಾಧನೆಗೆ ನೀಡುವ ಅತ್ಯುನ್ನತ ಪ್ರಶಸ್ತಿ ಎಂದರೆ ಆಸ್ಕರ್. ಸಿನಿಮಾ ಕ್ಷೇತ್ರದ ಪ್ರತಿಭಾನ್ವಿತ ವ್ಯಕ್ತಿಗಳಿಗೆ ಗೌರವ ಸಮರ್ಪಿಸುವುದು ಈ ಪ್ರಶಸ್ತಿಯ ಪ್ರಮುಖ ಧ್ಯೇಯವಾಗಿದೆ. ಆಸ್ಕರ್ ಪುರಸ್ಕಾರದ ಮೂದಲ ಸಮಾರಂಭವು ಮೇ-16, 1929ರಂದು ಹಾಲಿವುಡ್ ರೂಸ್ವೆಲ್ಟ್ ಹೋಟಲ್ನಲ್ಲಿ 270 ಪ್ರೇಕ್ಷಕರ ಸಮ್ಮುಖದಲ್ಲಿ ನಡೆದಿದೆ. ಆಸ್ಕರ್ ಸಮಯ ಕಳೆದಂತೆ ತನ್ನ ಚಾಪನ್ನು ವಿಶ್ವದೆಲ್ಲೆಡೆ ಪಸರಿಸಿದೆ, ಪ್ರಶಸ್ತಿಯನ್ನು ಅತ್ಯುತ್ತಮ ನಟ, ಅತ್ಯುತ್ತಮ ನಟಿ, ಅತ್ಯುತ್ತಮ ಪೋಷಕ ನಟ ಮತ್ತು ನಟಿ, ಅತ್ಯತ್ತಮ ಚಿತ್ರಕಥೆ, ಅತ್ಯುತ್ತಮ ಆನಿಮೇಟಿಡ್, ಅತ್ಯುತ್ತಮ ಕಿರುಚಿತ್ರ, ಹೀಗೆ ಪ್ರಸ್ತುತ 24 ವಿಭಾಗಗಳಲ್ಲಿ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಇದನ್ನು ಓದಿ: ತಾಳ್ಮೆ ಕಳೆದುಕೊಂಡ ಬಿಜೆಪಿ ಕಾರ್ಯಕರ್ತರು: ಕೇಂದ್ರ ಸಚಿವ ಗಿರಿರಾಜ್ ಸಿಂಗ್‌ ವಿರುದ್ಧವೇ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...