Homeಮುಖಪುಟಬಿಜೆಪಿ ಸಂಸದರ ಸಂವಿಧಾನ ಬದಲಾವಣೆ ಹೇಳಿಕೆ: 'ಇದು ಆರ್‌ಎಸ್‌ಎಸ್‌ ತೆಗೆದುಕೊಂಡ ಪ್ರತಿಜ್ಞೆ' ಎಂದ ಪ್ರಕಾಶ್ ಅಂಬೇಡ್ಕರ್

ಬಿಜೆಪಿ ಸಂಸದರ ಸಂವಿಧಾನ ಬದಲಾವಣೆ ಹೇಳಿಕೆ: ‘ಇದು ಆರ್‌ಎಸ್‌ಎಸ್‌ ತೆಗೆದುಕೊಂಡ ಪ್ರತಿಜ್ಞೆ’ ಎಂದ ಪ್ರಕಾಶ್ ಅಂಬೇಡ್ಕರ್

- Advertisement -
- Advertisement -

‘ನಾವು ಬಂದಿರುವುದೇ ಸಂವಿಧಾನ ಬದಲಿಸುವುದಕ್ಕೆ’ ಎಂದು ಹಲವು ವರ್ಷಗಳ ಹಿಂದೆ ಹೇಳಿದ್ದ ಬಿಜೆಪಿ ಸಂಸದ ಅನಂತ್‌ಕುಮಾರ್ ಹೆಗ್ಡೆ, ಇದೀಗ ಪುನಃ ತಮ್ಮ ಹೇಳಿಕೆಯನ್ನು ಪುನರುಚ್ಛರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮರಿ ಮೊಮ್ಮಗ ಪ್ರಕಾಶ್ ಅಂಬೇಡ್ಕರ್, ‘ಅವರ ಮಾತುಗಳು ನನಗೆ ಆಶ್ಚರ್ಯವನ್ನುಂಟು ಮಾಡುವುದಿಲ್ಲ; 1950ರಲ್ಲಿ ಸಂವಿಧಾನವನ್ನು ಅಂಗೀಕರಿಸಿದ ನಂತರ ಆರ್‌ಎಸ್‌ಎಸ್‌ ತೆಗೆದುಕೊಂಡ ಪ್ರತಿಜ್ಞೆ ಇದು’ ಎಂದು ಹೇಳಿದ್ದಾರೆ.

ಅನಂತ್‌ಕುಮಾರ್ ಹೆಗಡೆ ಸಂವಿಧಾನ ವಿರೋಧಿ ಹೇಳಿಕೆ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಕಾಶ್, ‘ಅವರ (ಬಿಜೆಪಿ ಸಂಸದರ) ಮಾತುಗಳು ನನಗೆ ಆಶ್ಚರ್ಯವನ್ನುಂಟು ಮಾಡುವುದಿಲ್ಲ. ಅವರು ಸಾರ್ವಜನಿಕವಾಗಿ ಇಂತಹ ಹೇಳಿಕೆಯನ್ನು ನೀಡಿರುವುದು ಇದೇ ಮೊದಲಲ್ಲ ಎಂದು ನಿಮಗೆ ನೆನಪಿಸಲು ನನಗೆ ಅವಕಾಶ ಮಾಡಿಕೊಡಿ; ಅವರು 2017 ರಲ್ಲಿ ಹೇಳಿದ್ದರು. 1950ರಲ್ಲಿ ಸಂವಿಧಾನವನ್ನು ಅಂಗೀಕರಿಸಿದ ನಂತರ ಆರ್‌ಎಸ್‌ಎಸ್‌ ತೆಗೆದುಕೊಂಡ ಪ್ರತಿಜ್ಞೆ ಇದು’ ಎಂದು ಹೇಳಿದ್ದಾರೆ.

‘ಆರೆಸ್ಸೆಸ್ ಮತ್ತು ಬಿಜೆಪಿ ಭಾರತೀಯ ಸಂವಿಧಾನವನ್ನು ಅಳಿಸಿಹಾಕಲು ಮತ್ತು ಮನು ಸ್ಮೃತಿಯನ್ನು ಬದಲಿಸಲು ದೀರ್ಘಾವಧಿಯ ಯೋಜನೆಯನ್ನು ಹೊಂದಿವೆ. ಅವರು ನಿಯಮಗಳನ್ನು ನಿರ್ದೇಶಿಸಲು, ಸ್ವಾತಂತ್ರ್ಯ, ಘನತೆ ಮತ್ತು ಧರ್ಮದ ಸ್ವಾತಂತ್ರ್ಯದ ಹಕ್ಕನ್ನು ಕಸಿದುಕೊಳ್ಳಲು ಮತ್ತು ನಮ್ಮ ಪ್ರೀತಿಯ ರಾಷ್ಟ್ರದ ಜಾತ್ಯತೀತ ಬಟ್ಟೆಯನ್ನು ಬದಲಾಯಿಸಲು ಬಯಸುತ್ತಾರೆ. ಬಾಬಾಸಾಹೇಬರು ಹೇಳಿದ್ದನ್ನು ನಾನು ಪುನರುಚ್ಚರಿಸುತ್ತೇನೆ, “ನಮ್ಮ ಯಜಮಾನರಾಗಲು ನಿಮ್ಮ ಆಸಕ್ತಿ ಇರಬಹುದು. ಆದರೆ ನಾವು ನಿಮ್ಮ ಗುಲಾಮರಾಗುವುದು ಹೇಗೆ?” ಎಂದು ಬರೆದುಕೊಂಡಿದ್ದಾರೆ.

ಬಿಜೆಪಿಯ ರಹಸ್ಯ ಕಾರ್ಯಸೂಚಿಯ ಭಾಗ: ಸಿಎಂ ಸಿದ್ದರಾಮಯ್ಯ

ಸಂವಿಧಾನ ಬದಲಾಯಿಸುವ ಅನಂತ್‌ಕುಮಾರ್ ಹೆಗಡೆ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಸಂವಿಧಾನವನ್ನು ತಿದ್ದುಪಡಿ ಮಾಡುವ ಮೂಲಕ ಹಿಂದೂ ಧರ್ಮವನ್ನು ರಕ್ಷಿಸಲು ಬಿಜೆಪಿಗೆ 400 ಸ್ಥಾನಗಳನ್ನು ಪಡೆಯಬೇಕು ಎಂಬ ಅನಂತಕುಮಾರ್ ಹೆಗಡೆಯವರ ಹೇಳಿಕೆ ಅವರ ವೈಯಕ್ತಿಕ ಹೇಳಿಕೆಯಲ್ಲ. ಭಾರತೀಯ ಜನತಾ ಪಕ್ಷದ (ಬಿಜೆಪಿ) ರಹಸ್ಯ ಕಾರ್ಯಸೂಚಿಯ ಭಾಗವಾಗಿದೆ’ ಎಂದು ಹೇಳಿದ್ದಾರೆ.

‘ನಮ್ಮ ಸಂವಿಧಾನವು ಎಲ್ಲಾ ಧರ್ಮದ ಜನರನ್ನು ಸಮಾನವಾಗಿ ರಕ್ಷಿಸುತ್ತದೆ ಮತ್ತು ಪ್ರತಿಯೊಬ್ಬ ನಾಗರಿಕನಿಗೆ ಅವನ ಅಥವಾ ಅವಳ ನಂಬಿಕೆಯನ್ನು ಅನುಸರಿಸುವ ಸ್ವಾತಂತ್ರ್ಯವನ್ನು ಒದಗಿಸುತ್ತದೆ. ಹಾಗಾದರೆ, ಅನಂತ್ ಕುಮಾರ್ ಹೆಗಡೆಯವರು ಸಂವಿಧಾನವನ್ನೇ ಬದಲಾಯಿಸುವ ಮೂಲಕ ಹಿಂದೂ ಧರ್ಮದ ಯಾವ ಆವೃತ್ತಿಯನ್ನು ರಕ್ಷಿಸುವ ಗುರಿ ಹೊಂದಿದ್ದಾರೆ’ ಎಂದು ಅವರು ಪ್ರಶ್ನಿಸಿದ್ದಾರೆ.

‘ಹೆಗ್ಡೆಯವರ ಹೇಳಿಕೆಯು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಆವೃತ್ತಿಯನ್ನು ಮನುಸ್ಮೃತಿಯಿಂದ ಪ್ರಭಾವಿತವಾಗಿ ಬದಲಿಸುವ ಬಿಜೆಪಿಯ ಗುಪ್ತ ಉದ್ದೇಶಗಳನ್ನು ಬಹಿರಂಗಪಡಿಸಿದೆ. ಬಿಜೆಪಿಯ ಆವೃತ್ತಿಯು ಜಾತಿ ವ್ಯವಸ್ಥೆಯ ಅನಿಷ್ಟ ಪದ್ಧತಿಗಳನ್ನು ಬಲಪಡಿಸುತ್ತದೆ. ಬಿಜೆಪಿಯು ಅಧಿಕಾರಕ್ಕೆ ಬಂದರೆ ಒಬಿಸಿ ಮತ್ತು ದಲಿತರಿಗೆ ಎಲ್ಲಾ ಮೀಸಲಾತಿಗಳನ್ನು ತೆಗೆದುಹಾಕುತ್ತದೆ. ಅವರ ಹೇಳಿಕೆಯು ಒಬಿಸಿಗಳು ಮತ್ತು ದಲಿತರ ಮೇಲೆ ನೇರ ದಾಳಿಯಾಗಿದೆ’ ಎಂದು ಕಿಡಿಕಾರಿದ್ದಾರೆ.

‘ಅನಂತ್ ಕುಮಾರ್ ಹೆಗಡೆಯವರು ಸಂವಿಧಾನದ ವಿರುದ್ಧ ಮಾತನಾಡುತ್ತಿರುವುದು ಇದೇ ಮೊದಲಲ್ಲ.ಸಂವಿಧಾನವನ್ನು ಬದಲಾಯಿಸುವ ಇಂಗಿತವನ್ನು ಅವರು ಪದೇ ಪದೇ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿಯ ಹಿರಿಯ ಸದಸ್ಯರು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಸ್ಪಷ್ಟ ಬೆಂಬಲವನ್ನು ಗಮನಿಸಿದರೆ, ಅವರು ಹೆಗ್ಡೆಯವರ ಅಭಿಪ್ರಾಯಗಳೊಂದಿಗೆ ಹೊಂದಿಕೆಯಾಗುತ್ತಾರೆ ಎಂಬುದು ಸ್ಪಷ್ಟವಾಗಿದೆ. ಮೋದಿಯವರು ಹೆಗ್ಡೆಯವರ ಅಭಿಪ್ರಾಯಗಳನ್ನು ಒಪ್ಪದಿದ್ದರೆ ಅವರನ್ನು ಮೊದಲು ಪಕ್ಷದಿಂದ ಉಚ್ಚಾಟಿಸಬೇಕು. ಹೆಗ್ಡೆಯವರ ವಿರುದ್ಧ ಕ್ರಮಕೈಗೊಳ್ಳಲು ವಿಫಲವಾಗಿರುವುದು ಪ್ರಧಾನಿಯವರ ಸೂಚ್ಯ ಒಪ್ಪಂದವನ್ನು ಸೂಚಿಸುತ್ತದೆ. ಇದು ಸಂವಿಧಾನಕ್ಕೆ ಮೋದಿಯವರ ಸಾರ್ವಜನಿಕ ನಿಷ್ಠೆಯ ಘೋಷಣೆಗಳು ಕೇವಲ ಮೇಲ್ನೋಟಕ್ಕೆ ತೋರುತ್ತದೆ’ ಎಂದು ಹೇಳಿದ್ದಾರೆ.

‘ತಮ್ಮ ಪಕ್ಷದ ವರಿಷ್ಠರ ಬೆಂಬಲವಿಲ್ಲದೇ, ಅನಂತಕುಮಾರ್ ಹೆಗಡೆಯಂತಹ ಸಂಸದರು ಇಂತಹ ಸಂವಿಧಾನ ವಿರೋಧಿ ಹೇಳಿಕೆಗಳನ್ನು ಧೈರ್ಯದಿಂದ ನೀಡುವುದು ಅಸಾಧ್ಯ. ಸಂವಿಧಾನವನ್ನು ಎತ್ತಿಹಿಡಿಯುತ್ತೇನೆ ಎಂದು ಪ್ರತಿಜ್ಞೆ ಮಾಡಿದ ಹೆಗಡೆ, ಅದರ ವಿರುದ್ಧ ಹೇಳಿಕೆ ನೀಡುವುದು ಶಿಕ್ಷಾರ್ಹ ಅಪರಾಧ. ಲೋಕಸಭೆಯ ಸ್ಪೀಕರ್ ಹೆಗಡೆ ವಿರುದ್ಧ ಗಂಭೀರ ಕ್ರಮ ಕೈಗೊಂಡು ಚುನಾವಣೆಗೆ ಸ್ಪರ್ಧಿಸದಂತೆ ಶಾಶ್ವತವಾಗಿ ಅನರ್ಹಗೊಳಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

‘ಸಂಘ ಪರಿವಾರ’ದ ಗುಪ್ತ ಉದ್ದೇಶಗಳ ಬಹಿರಂಗ ಘೋಷಣೆ: ರಾಹುಲ್ ಗಾಂಧಿ

‘ಸಂವಿಧಾನ ಬದಲಿಸಲು 400 ಸ್ಥಾನಗಳು ಬೇಕು ಎಂಬ ಬಿಜೆಪಿ ಸಂಸದರ ಹೇಳಿಕೆ ನರೇಂದ್ರ ಮೋದಿ ಮತ್ತು ಅವರ ‘ಸಂಘ ಪರಿವಾರ’ದ ಗುಪ್ತ ಉದ್ದೇಶಗಳ ಬಹಿರಂಗ ಘೋಷಣೆಯಾಗಿದೆ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಬಾಬಾ ಸಾಹೇಬರ ಸಂವಿಧಾನವನ್ನು ನಾಶ ಮಾಡುವುದೇ ನರೇಂದ್ರ ಮೋದಿ ಮತ್ತು ಬಿಜೆಪಿಯ ಅಂತಿಮ ಗುರಿಯಾಗಿದೆ. ಅವರು ನ್ಯಾಯ, ಸಮಾನತೆ, ನಾಗರಿಕ ಹಕ್ಕುಗಳು ಮತ್ತು ಪ್ರಜಾಪ್ರಭುತ್ವವನ್ನು ದ್ವೇಷಿಸುತ್ತಾರೆ. ಸಮಾಜವನ್ನು ವಿಭಜಿಸುವ ಮೂಲಕ, ಮಾಧ್ಯಮವನ್ನು ಗುಲಾಮರನ್ನಾಗಿ ಮಾಡುವ ಮೂಲಕ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಪಾಡುವ ಮತ್ತು ಸ್ವತಂತ್ರ ಸಂಸ್ಥೆಗಳನ್ನು ದುರ್ಬಲಗೊಳಿಸುವ ಮೂಲಕ, ಅವರು ವಿರೋಧವನ್ನು ತೊಡೆದುಹಾಕಲು ಸಂಚು ರೂಪಿಸುವ ಮೂಲಕ ಭಾರತದ ಮಹಾನ್ ಪ್ರಜಾಪ್ರಭುತ್ವವನ್ನು ಸಂಕುಚಿತ ಸರ್ವಾಧಿಕಾರವಾಗಿ ಪರಿವರ್ತಿಸಲು ಬಯಸುತ್ತಾರೆ’ ಎಂದು ರಾಹುಲ್ ಆತಂಖ ವ್ಯಕ್ತಪಡಿಸಿದ್ದಾರೆ.

‘ಸ್ವಾತಂತ್ರ್ಯ ವೀರರ ಕನಸುಗಳ ಜೊತೆಗೆ ಈ ಷಡ್ಯಂತ್ರಗಳನ್ನು ನಾವು ಯಶಸ್ವಿಯಾಗಲು ಬಿಡುವುದಿಲ್ಲ ಮತ್ತು ನಮ್ಮ ಕೊನೆಯ ಉಸಿರು ಇರುವವರೆಗೂ ಸಂವಿಧಾನದ ಭರವಸೆಯ ಪ್ರಜಾಪ್ರಭುತ್ವ ಹಕ್ಕುಗಳಿಗಾಗಿ ಹೋರಾಟವನ್ನು ಮುಂದುವರಿಸುತ್ತೇವೆ. ಸಂವಿಧಾನದ ಪ್ರತಿಯೊಬ್ಬ ಸೈನಿಕರು, ವಿಶೇಷವಾಗಿ ದಲಿತರು, ಆದಿವಾಸಿಗಳು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಎಚ್ಚೆತ್ತುಕೊಳ್ಳಿ, ನಿಮ್ಮ ಧ್ವನಿಯನ್ನು ಎತ್ತಿಕೊಳ್ಳಿ, ಭಾರತವು ನಿಮ್ಮೊಂದಿಗಿದೆ’ ಎಂದು ಹೇಳಿದ್ದಾರೆ.

ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇ’ದು ಬಿಜೆಪಿ ಸಂವಿಧಾನ ವಿರೋಧಿ’ ಎಂಬುದನ್ನು ತೋರಿಸುತ್ತದೆ ಎಂದು ಹೇಳಿದರು.

‘ಅವರು ಏನುಬೇಕೋ ಮಾಡಲಿ, ಸಂವಿಧಾನವನ್ನು ತಿದ್ದುಪಡಿ ಮಾಡಲಿ… ಇದು ಬಿಜೆಪಿ ಸರ್ಕಾರ (ಕೇಂದ್ರದಲ್ಲಿ) ಮತ್ತು ಬಿಜೆಪಿ ಸಂಸದರು ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನಕ್ಕೆ ವಿರುದ್ಧವಾಗಿದ್ದಾರೆ ಎಂಬುದನ್ನು ತೋರಿಸುತ್ತದೆ’ ಎಂದರು.

ಪದೇಪದೆ ಸಂವಿಧಾನ ವಿರೋಧಿ ಹೇಳಿಕೆ:

ಬಿಜೆಪಿ ಸಂಸದ ಅನಂತಕುಮಾರ ಹೆಗಡೆಯವರು ಇಂತಹ ಹೇಳಿಕೆ ನೀಡಿರುವುದು ಇದೇ ಮೊದಲಲ್ಲ. 2017 ರಲ್ಲಿ, ಆಗಿನ ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವರಾಗಿದ್ದ ಅವರು ಸಂವಿಧಾನವನ್ನು ಬದಲಾಯಿಸುವ ಕುರಿತು ತಮ್ಮ ಹೇಳಿಕೆ ನೀಡಿ ವಿವಾದವನ್ನು ಉಂಟುಮಾಡಿದ್ದರು. ನಂತರ ಲೋಕಸಭೆಯಲ್ಲಿ ಕ್ಷಮೆಯಾಚಿಸಿದ ಅವರು ತಮ್ಮ ಹೇಳಿಕೆಯನ್ನು ತಿರುಚಲಾಗಿದೆ ಎಂದು ಸಮರ್ಥಿಸಿಕೊಂಡರು.

ಸಂಸದರ ಹೇಳಿಕೆ ಪಕ್ಷದ ನಿಲುವಲ್ಲ:

ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಬಿಜೆಪಿ, ‘ಸಂಸದರ ಹೇಳಿಕೆ ಪಕ್ಷದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ’ ಎಂದು ಹೇಳುವ ಮೂಲಕ ಅಂತರ ಕಾಯ್ದುಕೊಂಡಿದೆ.

‘ಸಂಸದರಾದ ಅನಂತ್ ಕುಮಾರ್ ಹೆಗಡೆಯವರ ಸಂವಿಧಾನದ ಬಗ್ಗೆ ಹೇಳಿಕೆಗಳು ಅವರ ವೈಯಕ್ತಿಕ ಅಭಿಪ್ರಾಯಗಳಾಗಿದ್ದು, ಪಕ್ಷದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ. ಬಿಜೆಪಿಯು ರಾಷ್ಟ್ರದ ಸಂವಿಧಾನವನ್ನು ಎತ್ತಿಹಿಡಿಯುವ ನಮ್ಮ ಅಚಲ ಬದ್ಧತೆಯನ್ನು ಪುನರುಚ್ಚರಿಸುತ್ತದೆ ಮತ್ತು ಹೆಗಡೆಯವರ ಅಭಿಪ್ರಾಯಗಳಿಗೆ ಸಂಬಂಧಿಸಿದಂತೆ ವಿವರಣೆಯನ್ನು ಕೇಳುತ್ತೇವೆ’ ಎಂದು ಹೇಳಿದೆ.

ಇದನ್ನೂ ಓದಿ; ‘ಸಂವಿಧಾನ ಬದಲಾವಣೆ’ ಹೇಳಿಕೆ; ಹೆಗಡೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ, ಎಂಪಿ ಟಿಕೆಟ್ ಸಿಗುವುದು ಅನುಮಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...