Homeಮುಖಪುಟತಮಿಳುನಾಡಿನಲ್ಲಿ ಹೋರ್ಡಿಂಗ್‌ ಬಿದ್ದು ಯುವತಿ ಸಾವು: ಗಾಳಿಯ ಮೇಲೆ ಕೇಸು ಹಾಕಿ ಎಂದ ರಾಜಕಾರಣಿ...

ತಮಿಳುನಾಡಿನಲ್ಲಿ ಹೋರ್ಡಿಂಗ್‌ ಬಿದ್ದು ಯುವತಿ ಸಾವು: ಗಾಳಿಯ ಮೇಲೆ ಕೇಸು ಹಾಕಿ ಎಂದ ರಾಜಕಾರಣಿ…

- Advertisement -
- Advertisement -

ಕಳೆದ ತಿಂಗಳು ಸೆಪ್ಟೆಂಬರ್ 12 ರಂದು, ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಭಾಶ್ರಿ ರವಿಯವರು ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಅಕ್ರಮವಾಗಿ ನಿರ್ಮಿಸಲಾದ ಹೋರ್ಡಿಂಗ್ ತನ್ನ ಮೇಲೆ ಬಿದ್ದ ಪರಿಣಾಮ ಸಾವನಪ್ಪಿದ್ದರು. ಅವರ ದುರಂತ ಸಾವಿಗೆ ತಮಿಳುನಾಡಿನ ಹಿರಿಯ ರಾಜಕಾರಣಿ ಪೊನ್ನಯ್ಯನ್ “ಗಾಳಿಯನ್ನು ಶಿಕ್ಷಿಸಿ” ಎಂದು ವಿಲಕ್ಷಣ ಹೇಳಿಕೆ ನೀಡಿದ್ದಾರೆ.

ಸ್ಥಳೀಯ ಸುದ್ದಿವಾಹಿನಿಯೊಂದಿಗೆ ಮಾತನಾಡಿದ AIADMK ಮುಖಂಡ ಪೊನ್ನಯ್ಯನ್, ಹೋರ್ಡಿಂಗ್ ನಿರ್ಮಿಸಿದ ವ್ಯಕ್ತಿಯನ್ನು ಮಹಿಳೆಯ ಸಾವಿಗೆ ಹೊಣೆಗಾರರನ್ನಾಗಿ ಮಾಡಲಾಗುವುದಿಲ್ಲ ಮತ್ತು ಕೇಸು ದಾಖಲಿಬೇಕಾದರೆ ಗಾಳಿಯ ಮೇಲೆ ದಾಖಲಿಸಿ ಶಿಕ್ಷಿಸಿ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.

ಚೆನ್ನೈನಿಂದ 320 ಕಿಲೋಮೀಟರ್ ದೂರದಲ್ಲಿರುವ ಕೃಷ್ಣಗಿರಿ ಜಿಲ್ಲೆಯಲ್ಲಿ ಮೂರು ವಾರಗಳ ನಂತರ ಬಂಧನಕ್ಕೊಳಗಾದ ಆಡಳಿತಾರೂಡ AIADMK ಸದಸ್ಯ ಜಯಗೋಪಾಲ್ ಅವರು ಈ ಹೋರ್ಡಿಂಗ್ ಅನ್ನು ನಿರ್ಮಿಸಿದ್ದರು.

“ಬ್ಯಾನರ್ ಇಟ್ಟುಕೊಂಡ ವ್ಯಕ್ತಿ ಅವಳನ್ನು ಸಾವಿಗೆ ತಳ್ಳಲಿಲ್ಲ. ಯಾವುದೇ ಪ್ರಕರಣವನ್ನು ದಾಖಲಿಸಬೇಕಾದರೆ, ಗಾಳಿಯನ್ನು ಹೊಣೆಗಾರರನ್ನಾಗಿ ಮಾಡಿ ”ಎಂದು ಅವರು ಹೇಳಿಕೆ ನೀಡಿದ್ದಾರೆ.

ಸೆಪ್ಟೆಂಬರ್ 12 ರಂದು, ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಭಾಶ್ರಿ ರವಿ (23) ಹೆಲ್ಮೆಟ್ ಧರಿಸಿ ತನ್ನ ದ್ವಿಚಕ್ರ ವಾಹನದಲ್ಲಿ ಪ್ರಮುಖ ನಗರದ ರಸ್ತೆಯೊಂದರಲ್ಲಿ ಹೋಗುತ್ತಿದ್ದರು. ಆಗ ತಮಿಳುನಾಡು ಮುಖ್ಯಮಂತ್ರಿ ಇ ಪಳನಿಸಾಮಿ ಮತ್ತು ಮಾಜಿ ಮುಖ್ಯಮಂತ್ರಿ ಜಯಲಲಿತಾರವರ ಫೋಟೊ ಇದ್ದ ಭಾರೀ ಗಾತ್ರದ ಕಟೌಟ್ ಆಕೆಯ ಸ್ಕೂಟರ್‍ ಮೇಲೆ ಬಿದ್ದಿತು. ಇದರಿಂದ ಗಾಬರಿಗೊಳಗಾದ ಆಕೆ ಆಯಾತಪ್ಪಿ ವಾಟರ್ ಟ್ಯಾಂಕರ್ ಸ್ಕೂಟರ್‌ನಿಂದ ಡಿಕ್ಕಿ ಹೊಡೆದಾಗ ಅವಳ ತಲೆಗೆ ಗಾಯವಾಯಿತು. ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತದರೂ ಅಲ್ಲಿ ಆಕೆ ಸಾವನ್ನಪ್ಪಿದ್ದಾಳೆ.

ಈ ಘಟನೆಯು ರಾಜ್ಯಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ನಟ ಮತ್ತು ರಾಜಕಾರಣಿ ಕಮಲ್ ಹಾಸನ್  ರಾಜಕಾರಣಿಗಳನ್ನು ಕಟುವಾಗಿ ಟೀಕಿಸಿದ್ದರು. ರಾಜಕೀಯ ಪಕ್ಷಗಳು ಬ್ಯಾನರ್ ಮತ್ತು ಹೋರ್ಡಿಂಗ್‌ಗಳನ್ನು ನಿರ್ಮಿಸುವುದನ್ನು ನಿಷೇಧಿಸಿದ ಮದ್ರಾಸ್ ಹೈಕೋರ್ಟ್, “ರಾಜ್ಯವು ಅಕ್ರಮ ಹೋರ್ಡಿಂಗ್‌ಗಳ ವಿರುದ್ಧ ಕ್ರಮ ಕೈಗೊಳ್ಳುವವರೆಗೆ “ಇನ್ನೂ ಎಷ್ಟು ಲೀಟರ್ ರಕ್ತ” ಚೆಲ್ಲುಬೇಕು ಎಂದು ಪ್ರಶ್ನಿಸಿತ್ತು.

ಆದರೆ, ಚೆನ್ನೈನಿಂದ 60 ಕಿಲೋಮೀಟರ್ ದೂರದಲ್ಲಿರುವ ಐತಿಹಾಸಿಕ ಪಟ್ಟಣವಾದ ಮಾಮಲ್ಲಾಪುರಂನಲ್ಲಿ ನಡೆದ ಅನೌಪಚಾರಿಕ ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಸ್ವಾಗತಿಸಲು ಗುರುವಾರ ನ್ಯಾಯಾಲಯವು, 30 ಬ್ಯಾನರ್‌ಗಳನ್ನು ಹಾಕಲು ಅನುಮತಿ ನೀಡಿತು. ಭಾರತ ಸರ್ಕಾರ ಮತ್ತು ರಾಜಕೀಯ ಪಕ್ಷಗಳ ನಡುವೆ ವ್ಯತ್ಯಾಸವಿದೆ ಎಂದು ನ್ಯಾಯಾಲಯ ವಾದಿಸಿತು.

ಆದರೆ ಈ ಘಟನೆಯನ್ನು ಡಿಎಂಕೆ ಮುಖಂಡ ಕಮಲ್ ಹಾಸನ್‌ ತೀವ್ರವಾಗಿ ಖಂಡಿಸಿದ್ದರು. ಅನಧಿಕೃತವಾಗಿ ಹೋರ್ಡಿಂಗ್‌ ಹಾಕಿರುವವರ ಮೇಲೆ ಸೂಕ್ತ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದರು.

ನಾಲ್ಕು ಬಾರಿ ಶಾಸಕರಾದ ಪೊನ್ನಯ್ಯನ್ “ಎಂ.ಕೆ. ಸ್ಟಾಲಿನ್ ಈ ಬಗ್ಗೆ ಸುಳ್ಳು ಹೇಳುತ್ತಾರೆ ಮತ್ತು ಉತ್ಪ್ರೇಕ್ಷೆ ಮಾಡುತ್ತಾರೆ. ಪ್ರಕರಣವು ಸುಪ್ರೀಂ ಕೋರ್ಟ್‌ಗೆ ಹೋಗಲಿ. ಅವರು ತೀರ್ಮಾನಿಸಲಿ. ಕರುಣಾನಿಧಿಯ ಆಡಳಿತ ದಿನಗಳಿಂದ ಎಷ್ಟು ಬ್ಯಾನರ್‌ಗಳನ್ನು ಹಾಕಿದ್ದರೆಂದು ಗೊತ್ತಾಗುತ್ತದೆ ಎಂದು ಅವರ “ಬ್ಯಾನರ್ ಒಂದು ಸಂವಹನ ರೂಪವಾಗಿದೆ ” ಎಂದು ತಿಳಿಸಿದ್ದಾರೆ.

ನವೆಂಬರ್ 2017 ರಲ್ಲಿ, 30 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್, ತಮಿಳುನಾಡಿನ ಕೊಯಮತ್ತೂರಿನಲ್ಲಿ ಸ್ನೇಹಿತರನ್ನು ಭೇಟಿಯಾಗಿ ವಾಪಸ್ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಅವರ ಬೈಕ್‌ಗೆ ಮರದ ಹೋರ್ಡಿಂಗ್‌ ಡಿಕ್ಕಿ ಹೊಡೆದು ಮೃತಪಟ್ಟರು. ಆಡಳಿತಾರೂಡ AIADMK ಎಂಜಿಆರ್‌ರವರ ಶತಮಾನೋತ್ಸವಕ್ಕಾಗಿ ಆ ಹೋರ್ಡಿಂಗ್‌ಅನ್ನು ರಸ್ತೆಯಲ್ಲಿ ಸ್ಥಾಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...