Homeಮುಖಪುಟಸಿಎಎ: ಪೌರತ್ವ ಕಾಯ್ದೆ ಏನು ಹೇಳುತ್ತದೆ?

ಸಿಎಎ: ಪೌರತ್ವ ಕಾಯ್ದೆ ಏನು ಹೇಳುತ್ತದೆ?

- Advertisement -
- Advertisement -

ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ 4 ವರ್ಷಗಳ ಬಳಿಕ ಕೇಂದ್ರ ಸರ್ಕಾರ ನಿನ್ನೆ ಪೌರತ್ವ ತಿದ್ದುಪಡಿ ಕಾಯ್ದೆ ಸಿಎಎ ಜಾರಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಪೌರತ್ವ (ತಿದ್ದುಪಡಿ) ಮಸೂದೆ-2019ನ್ನು ಡಿಸೆಂಬರ್ 11, 2019ರಂದು ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ಈ ಮಸೂದೆಯು ಪೌರತ್ವ ಕಾಯ್ದೆ-1955ನ್ನು ತಿದ್ದುಪಡಿ ಮಾಡಿದೆ. ಧರ್ಮಾದ ಆಧಾರದಲ್ಲಿ ವಿದೇಶಿ ಅಕ್ರಮ ವಲಸಿಗರನ್ನು ಭಾರತೀಯ ಪೌರತ್ವಕ್ಕೆ ಅರ್ಹರನ್ನಾಗಿ ಮಾಡಿದ್ದು, ಇದು ವ್ಯಾಪಕವಾದ ವಿರೋಧಕ್ಕೆ ಕಾರಣವಾಗಿತ್ತು.

ಪೌರತ್ವ ಕಾಯಿದೆ, 1955 ಏನು ಹೇಳುತ್ತದೆ?

ಪೌರತ್ವ ಕಾಯಿದೆ, 1955ರ ಪ್ರಕಾರ ಭಾರತದಲ್ಲಿ ಐದು ವಿಧಾನಗಳ ಮೂಲಕ ಪೌರತ್ವವನ್ನು ಪಡೆಯಬಹುದು. ಪೌರತ್ವವನ್ನು ಹುಟ್ಟಿನಿಂದ, ಭಾರತೀಯ ಮೂಲದವರಾಗಿದ್ದು ಹೊರದೇಶಗಳಲ್ಲಿ ನೆಲೆಸಿದ್ದರೆ, ವಿದೇಶದವರಾಗಿದ್ದರೂ ಭಾರತದಲ್ಲಿ ಸರ್ಕಾರಿ ಸೇವೆಯಲ್ಲಿದ್ದರೆ, ಭಾರತ ಮೂಲದವರಾಗಿದ್ದು ಭಾರತದಲ್ಲಿ ಈಗಾಗಲೇ ವಾಸ್ತವ್ಯ ಹೂಡಿದ್ದರೆ ಅಥವಾ ಭಾರತದೊಳಗೆ ಸೇರಿಸಿಕೊಳ್ಳಲಾದ ಅನ್ಯದೇಶದ ಭೂಭಾಗದ ನಿವಾಸಿಯಾಗಿದ್ದರೆ, ಅಸ್ಸಾಂ ಒಪ್ಪಂದಕ್ಕೆ ಸೇರಿದ ಜನರಿಗೆ ಪೌರತ್ವ ಅವಕಾಶವನ್ನು ನೀಡಲಾಗಿತ್ತು, ಈ ಕಾಯಿದೆಯು ವಿದೇಶಿ ಅಕ್ರಮ ವಲಸಿಗರು ಭಾರತೀಯ ಪೌರತ್ವವನ್ನು ಪಡೆದುಕೊಳ್ಳುವುದನ್ನು ನಿಷೇಧಿಸಿದೆ. ಇದಲ್ಲದೆ 1955ರ ಕಾಯ್ದೆಯ ಪ್ರಕಾರ ಪೌರತ್ವವನ್ನು ಪಡೆಯಬೇಕಿದ್ದರೆ ಆತ ಭಾರತದಲ್ಲಿ ಕನಿಷ್ಠ 11ವರ್ಷ ವಾಸಿಸಿರಬೇಕು.

ಪೌರತ್ವ (ತಿದ್ದುಪಡಿ) ಮಸೂದೆ-2019

ಈ ಕಾಯ್ದೆಯಡಿಯಲ್ಲಿ ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ಮುಸ್ಲಿಮೇತರರು ಅಂದರೆ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಅಥವಾ ಕ್ರಿಶ್ಚಿಯನ್ ಧಾರ್ಮಿಕ ಸಮುದಾಯಗಳಿಗೆ ಸೇರಿದ ಅಕ್ರಮ ವಲಸಿಗರು ಡಿಸೆಂಬರ್ 31, 2014ರಂದು ಅಥವಾ ಅದಕ್ಕೂ ಮೊದಲು ಭಾರತಕ್ಕೆ ಪ್ರವೇಶಿಸಿದರೆ ಅವರಿಗೆ ಪೌರತ್ವವನ್ನು ನೀಡಬಹುದು. ಕಾಯಿದೆಯ ಮೂರನೇ ಶೆಡ್ಯೂಲ್‌ನ ಸೆಕ್ಷನ್ 5 ರ ಅಡಿಯಲ್ಲಿನ ಷರತ್ತುಗಳಿಗೆ ಸಮ್ಮತಿಸಿದರೆ ಒಬ್ಬ ವ್ಯಕ್ತಿಗೆ ನೋಂದಣಿ ಪ್ರಮಾಣಪತ್ರ ನೀಡಬಹುದು. ಇದಲ್ಲದೆ ಆ ವ್ಯಕ್ತಿ ಭಾರತದಲ್ಲಿ ಕಡ್ಡಾಯವಾಗಿ ನೆಲೆಸಿದವನಾಗಿರಬೇಕಾಗಿರುವ ವರ್ಷಗಳ ಸಂಖ್ಯೆಯನ್ನು 11 ವರ್ಷದಿಂದ 5 ವರ್ಷಕ್ಕೆ ಇಳಿಸಲಾಗಿದೆ.

2019ರಲ್ಲಿ ಕೈಗೊಂಡ ತಿದ್ದುಪಡಿಯ ಪ್ರಕಾರ, ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದಿಂದ ಭಾರತಕ್ಕೆ ವಲಸೆ ಬಂದವರಲ್ಲಿ ನಿರ್ದಿಷ್ಟ ಸಮುದಾಯಗಳಿಗೆ ಸೇರಿದವರಿಗೆ ಮಾತ್ರ ಭಾರತದ ಪೌರತ್ವ ನೀಡಬೇಕು ಎಂಬ ಅಂಶವನ್ನು ಸೇರಿಸಲಾಗಿದೆ. ಈ ಸಮುದಾಯಗಳವರು ತಮ್ಮ ದೇಶಗಳಿಂದ ಭಾರತಕ್ಕೆ ಕಾಲಿಟ್ಟ ದಿನಾಂಕದಿಂದಲೇ ಅವರಿಗೆ ಪೌರತ್ವ ಅನ್ವಯವಾಗುತ್ತದೆ. ಭಾರತದ ಕೆಲವು ಪ್ರಾಂತ್ಯಗಳಿಗೆ ಈ ತಿದ್ದುಪಡಿಯಿಂದ ವಿನಾಯ್ತಿ ನೀಡಲಾಗಿದೆ. 2019ರ ಮಸೂದೆಯಲ್ಲೇ ಅದನ್ನು ಉಲ್ಲೇಖಿಸಲಾಗಿತ್ತು. ಸಂವಿಧಾನದ 6ನೇ ಶೆಡ್ಯೂಲ್ ನಲ್ಲಿರುವ ಮೇಘಾಲಯ, ಮಿಜೋರಂ, ಅಸ್ಸಾಂ, ತ್ರಿಪುರಾದಲ್ಲಿ ವಾಸಿಸುತ್ತಿರುವ ಜನರಿಗೆ ಈ ನಿಯಮ ಅನ್ವಯವಾಗುವುದಿಲ್ಲ. 1883ರ ಬಾಂಗ್ಲಾ ಪೂರ್ವ ಗಡಿ ನಿಯಂತ್ರಣಾ ನಿಯಮಗಳಿಗೆ ಅನುಗುಣವಾಗಿ ರೂಪಿಸಲಾಗಿರುವ ಆಂತರಿಕ ಗಡಿ ರೇಖೆಯೊಳಗೆ ಜೀವಿಸುತ್ತಿರುವ ನಾಗರಿಕರಿಗೆ ಇದು ಅನ್ವಯವಾಗುವುದಿಲ್ಲ.

1955ರ ಭಾರತೀಯ ಪೌರತ್ವ ಕಾಯ್ದೆಯ ಪ್ರಕಾರ, ಸಾಗರೋತ್ತರ ಭಾರತೀಯ ಸಂಜಾತರು (ಓವರ್ ಸೀಸ್ ಸಿಟಿಜೆನ್ಸ್ ಆಫ್ ಇಂಡಿಯಾ – ಓಐಸಿ) ಭಾರತೀಯ ಮೂಲದವರಾಗಿದ್ದರೆ ಅವರು ಅದಕ್ಕೆ ಪೂರಕವಾದ ದಾಖಲೆಗಳನ್ನು ಸಲ್ಲಿಸಿ ಪೌರತ್ವ ಪಡೆಯಬಹುದು. ಅದಲ್ಲದೆ, ಅವರು ಭಾರತೀಯ ಮೂಲದವರನ್ನು ವಿವಾಹವಾಗಿದ್ದರೆ ಅಂಥವರೂ ಸಹ ಭಾರತೀಯ ಪೌರತ್ವಕ್ಕೆ ಅರ್ಹರಾಗಿರುತ್ತಾರೆ. ಅಂಥವರು ಭಾರತಕ್ಕೆ ಬಂದು ನೆಲೆಸಲು, ಇಲ್ಲಿ ಶಿಕ್ಷಣವನ್ನು ಪಡೆಯಲು ಅಥವಾ ಉದ್ಯೋಗಗಳನ್ನು ಮಾಡಲು ಅವಕಾಶವಿರುತ್ತದೆ. ಇಂಥವರಿಗಾಗಿ ಓಐಸಿ ಕಾರ್ಡ್ ಗಳನ್ನು ನೀಡಲಾಗುತ್ತದೆ. 2019ರ ತಿದ್ದುಪಡಿಯಲ್ಲಿ, ಹೀಗೆ, ಸಾಗರೋತ್ತರ ಭಾರತೀಯ ಸಂಜಾತರು, ಕೇಂದ್ರ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿದಾಗ ಅಂಥವರ ಓಐಸಿ ಕಾರ್ಡ್ ಗಳನ್ನು ರದ್ದುಗೊಳಿಸುವ ಪರಮಾಧಿಕಾರವನ್ನು ಕೇಂದ್ರ ಸರ್ಕಾರಕ್ಕೆ ನೀಡಲಾಗಿದೆ.

ಸಿಎಎ ಜಾರಿಗೊಳಿಸಲು ಪೋರ್ಟಲ್ ಆರಂಭ:

ಸಿಎಎ ಜಾರಿಗೊಳಿಸಲು ಕೇಂದ್ರ ಸರ್ಕಾರ ಪೋರ್ಟಲ್ ಆರಂಭಿಸಿದೆ. ಪೌರತ್ವಕ್ಕಾಗಿ ಅರ್ಜಿ ಸಲ್ಲಿಸುವ ಮತ್ತು ಪೌರತ್ವ ನೀಡುವ ಪ್ರಕ್ರಿಯೆಯು ಆನ್‌ಲೈನ್ ಮುಖಾಂತರ ನಡೆಯಲಿದೆ. ಅರ್ಜಿದಾರರು ದಾಖಲೆಗಳಿಲ್ಲದೆ ಭಾರತವನ್ನು ಪ್ರವೇಶಿಸಿದ ವರ್ಷವನ್ನು ಅಲ್ಲಿ ನಮೂದಿಸಬೇಕು. ಮೂಲಗಳ ಪ್ರಕಾರ, ಅರ್ಜಿ ಸಲ್ಲಿಸಲು ಬಯಸುವವರಿಗೆ ಯಾವುದೇ ದಾಖಲೆಗಳನ್ನು ಕೇಳಲಾಗುವುದಿಲ್ಲ. ಬಳಿಕ ಗೃಹ ಸಚಿವಾಲಯವು ಅರ್ಜಿಯನ್ನು ಪರಿಶೀಲಿಸಿದ ನಂತರ ಅವರಿಗೆ ಪೌರತ್ವವನ್ನು ನೀಡಲಿದೆ.

2018ರಲ್ಲಿ ಸಿಎಎ ಕಾಯ್ದೆ ವಿರುದ್ಧ ವಿರುದ್ಧ ಭಾರತದಲ್ಲಿ ಪ್ರತಿಭಟನೆಗಳು ಭುಗಿಲೆದ್ದವು ಮತ್ತು ಆರು ಧರ್ಮಗಳಿಗೆ ಮಾತ್ರ ಪೌರತ್ವ ಯಾಕೆ ಮತ್ತು ಮುಸ್ಲಿಮರಿಗೆ ಪೌರತ್ವ ಯಾಕಿಲ್ಲ ಎಂದು ಪೌರತ್ವ ಕಾಯ್ದೆ ಬಗ್ಗೆ ಪ್ರಶ್ನೆಗಳು ಉದ್ಭವಿಸಿದ್ದವು. ಭಾರತದಲ್ಲಿ ಧರ್ಮದ ಆಧಾರದಲ್ಲಿ ಪೌರತ್ವವನ್ನು ನೀಡವುದು ಸಂವಿಧಾನ ಬಾಹಿರವಾಗಿದೆ. ಇದಲ್ಲದೆ ಅಸ್ಸಾಂನಲ್ಲಿ ಎನ್‌ಆರ್‌ಸಿಯಂತೆ ನಾಗರಿಕರ ನೋಂದಣಿಯನ್ನು ಮಾಡಲು ರಾಷ್ಟ್ರವ್ಯಾಪಿ  ಮುಂದಾದರೆ ನಡೆದರೆ ಏನಾಗುತ್ತದೆ ಎಂಬುದು ಜನರಲ್ಲಿ ಭಯ ನೆಲೆಯೂರಿತ್ತು. ಅಸ್ಸಾಂನಲ್ಲಿ ಆರಂಭದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರನ್ನು ನಾಗರಿಕರ ಪಟ್ಟಿಯಿಂದ ಹೊರಗಿಡಲಾಗಿತ್ತು, ವರದಿಗಳ ಪ್ರಕಾರ, ಇದರಲ್ಲಿ ಕನಿಷ್ಠ 5 ಲಕ್ಷ ಹಿಂದೂಗಳು ಅದರಲ್ಲಿ ಸೇರಿದ್ದಾರೆ. ಇದರಿಂದಾಗಿ ಸಿಎಎ ಎನ್‌ಆರ್‌ಸಿ ವಿರುದ್ಧ ದೇಶದಾದ್ಯಂತ ವ್ಯಾಪಕವಾದ ಪ್ರತಿಭಟನೆಗಳು ನಡೆದಿದ್ದವು. ಈ ಬಳಿಕ ನಡೆದ ಗಲಭೆಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. ದೇಶದ ವಿರೋಧ ಪಕ್ಷಗಳು ಮತ್ತು ಬಿಜೆಪಿಯೇತರ ಅಧಿಕಾರದ ರಾಜ್ಯಗಳಲ್ಲಿ ತೀವ್ರ ಪ್ರತಿರೋಧ ವ್ಯಕ್ತವಾಗಿತ್ತು.

ಇದನ್ನು ಓದಿ: ಮುಸ್ಲಿಮರು, ತಮಿಳರಿಗೆ ದ್ರೋಹ ಮಾಡಿ ವಿಭಜನೆಯ ಬೀಜ ಬಿತ್ತಿದ ಬಿಜೆಪಿ : ಸಿಎಎ ಜಾರಿ ಬಗ್ಗೆ ತಮಿಳುನಾಡು ಸಿಎಂ ಆಕ್ರೋಶ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...