Homeಮುಖಪುಟಕೇಂದ್ರದಿಂದ ಸಿಎಎ ಜಾರಿ: ದೇಶದ ವಿವಿದೆಡೆ ಭುಗಿಲೆದ್ದ ಪ್ರತಿಭಟನೆ

ಕೇಂದ್ರದಿಂದ ಸಿಎಎ ಜಾರಿ: ದೇಶದ ವಿವಿದೆಡೆ ಭುಗಿಲೆದ್ದ ಪ್ರತಿಭಟನೆ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೊಳಿಸಿ ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಹೊರಡಿಸುತ್ತಿದ್ದಂತೆ ಅಸ್ಸಾಂ, ಕೇರಳ ಸೇರಿದಂತೆ ದೇಶದ ವಿವಿದೆಡೆ ಪ್ರತಿಭಟನೆ ಭುಗಿಲೆದ್ದಿದೆ.

ನಿನ್ನೆ (ಮಾ.11) ಸಂಜೆ ಸಿಎಎ ಜಾರಿಯಾಗುತ್ತಿದ್ದಂತೆ ಮಲಪ್ಪುರಂನಲ್ಲಿ ಡೆಮಾಕ್ರಟಿಕ್ ಯೂಥ್ ಫೆಡರೇಷನ್ ಆಫ್ ಇಂಡಿಯಾ (ಡಿವೈಎಫ್‌ಐ) ಮೊದಲು ಪ್ರತಿಭಟನೆ ನಡೆಸಿತು. ಆ ಬಳಿಕ ಯುವ ಕಾಂಗ್ರೆಸ್ ಕಾರ್ಯಕರ್ತರು ಕೂಡ ಎರಡು ರೈಲುಗಳನ್ನು ತಡೆದು ಕೇಂದ್ರದ ನಿಲುವಿನ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಮಲಪ್ಪುರಂನ ಕುನ್ನುಮ್ಮಲ್‌ನಲ್ಲಿ ಡಿವೈಎಫ್‌ಐ ಪ್ರತಿಭಟನೆ ನಡೆಸಿತು. ಮಲಪ್ಪುರಂ ಲೋಕಸಭಾ ಕ್ಷೇತ್ರದ ಎಲ್‌ಡಿಎಫ್‌ ಅಭ್ಯರ್ಥಿ ಹಾಗೂ ಡಿವೈಎಫ್‌ಐ ರಾಜ್ಯಾಧ್ಯಕ್ಷ ವಿ.ವಾಸಿಫ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನಂತರ ಡಿವೈಎಫ್‌ಐ ಕಾರ್ಯಕರ್ತರು ಕೋಝಿಕ್ಕೋಡ್, ಕೊಲ್ಲಂ ಹಾಗೂ ರಾಜ್ಯದ ವಿವಿಧ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿದರು.

ಯುವ ಕಾಂಗ್ರೆಸ್ ಕಾರ್ಯಕರ್ತರು ಕೋಝಿಕ್ಕೋಡ್‌ನಲ್ಲಿ ಮಲಬಾರ್ ಎಕ್ಸ್ ಪ್ರೆಸ್ ರೈಲು ತಡೆದು ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದು, ರೈಲು ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ಪ್ರತಿಭಟನೆಯಿಂದ ಅರ್ಧ ಗಂಟೆ ರೈಲು ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮತ್ತೊಂದೆಡೆ ಎರ್ನಾಕುಲಂ ಸೌತ್‌ನಲ್ಲಿ ಮಾವೇಲಿ ಎಕ್ಸ್‌ಪ್ರೆಸ್ ರೈಲು ತಡೆದು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು.

ಎಲ್‌ಡಿಎಫ್-ಯುಡಿಎಫ್ ಜಂಟಿ ಸಮರ

ಕೇರಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದ ಆಡಳಿತರೂಡ ಎಲ್‌ಡಿಎಫ್‌ ಮತ್ತು ಪ್ರತಿಪಕ್ಷ ಮೈತ್ರಿಕೂಟ ಯುಡಿಎಫ್ ತೀವ್ರ ವಿರೋಧ ವ್ಯಕ್ತಪಡಿಸಿವೆ.

ಹಿರಿಯ ಸಿಪಿಐ (ಎಂ) ನಾಯಕ ಮತ್ತು ರಾಜ್ಯ ಕಾನೂನು ಸಚಿವ ಪಿ ರಾಜೀವ್ ಅವರು, “ಈ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಬಿಜೆಪಿ ಗಮನವನ್ನು ಬೇರೆಡೆ ಸೆಳೆಯಲು ಮತ್ತು ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದೆ” ಎಂದು ಹೇಳಿದ್ದಾರೆ.

ಸಿಎಎ ಜಾರಿ ವಿರುದ್ದ ರಾಜ್ಯಾದ್ಯಂತ ಪ್ರತಿಭಟನೆಗೆ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಕೆ.ಸುಧಾಕರನ್ ಕರೆ ನೀಡಿದ್ದು, “ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ದೇಶದ ಪ್ರಜೆಗಳನ್ನು ಒಡೆದು ಆಳುವ ಈ ಕಾನೂನನ್ನು ಅರಬ್ಬೀ ಸಮುದ್ರಕ್ಕೆ ಎಸೆಯುತ್ತೇವೆ” ಎಂದಿದ್ದಾರೆ.

“ಚುನಾವಣೆ ಹೊಸ್ತಿಲಲ್ಲಿ ಕೇಂದ್ರ ಸರ್ಕಾರ ಸಂವಿಧಾನ ವಿರೋಧಿ ಕಾನೂನು ಜಾರಿಗೊಳಿಸಿದೆ. ಇದರ ವಿರುದ್ಧ ನಾವು ಕಾನೂನು ಸಮರ ನಡೆಸುತ್ತೇವೆ” ಎಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಮುಖ್ಯಸ್ಥ ಪಿ ಕುಂಞಾಲಿಕುಟ್ಟಿ ಹೇಳಿದ್ದಾರೆ.

ಕೇರಳದಲ್ಲಿ ಸಿಎಎ ಜಾರಿಗೊಳಿಸುವುದಿಲ್ಲ : ಪಿಣರಾಯಿ ವಿಜಯನ್

ಕೇರಳದಲ್ಲಿ ಸಿಎಎ ಜಾರಿಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪುನರುಚ್ಚಿಸಿದ್ದಾರೆ. ಸಂಸತ್‌ನಲ್ಲಿ ಸಿಎಎ ಮಸೂದೆ ಅಂಗೀಕರಿಸಿದಾಗಲೇ ಕೇರಳದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳು ಜಂಟಿಯಾಗಿ ಪ್ರತಿಭಟನೆ ನಡೆಸಿತ್ತು ಮತ್ತು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿತ್ತು.

ಕೇರಳದಲ್ಲಿ ಸಿಪಿಐ, ಸಿಪಿಐ(ಎಂ), ಡಿವೈಎಫ್‌ಐ, ಮುಸ್ಲಿಂ ಲೀಗ್, ಎಂಎಸ್‌ಎಫ್‌, ಎಸ್‌ಎಸ್‌ಎಫ್‌, ಎಸ್‌ಕೆಎಸ್‌ಎಸ್‌ಎಫ್‌ ಸೇರಿದಂತೆ ರಾಜಕೀಯ, ಧಾರ್ಮಿಕ ಸಂಘಟನೆಗಳು ಮತ್ತೊಮ್ಮೆ ಸಿಎಎ ವಿರುದ್ದ ಹೋರಾಟಕ್ಕೆ ಸಿದ್ದತೆ ನಡೆಸಿದೆ.

ಅಸ್ಸಾಂನಲ್ಲಿ ಪ್ರತಿಭಟನೆ

ಸಿಎಎ-ಎನ್‌ಆರ್‌ಸಿ ಜಾರಿಯಾದರೆ ಅದರ ಹೆಚ್ಚಿನ ಪರಿಣಾಮ ಉಂಟಾಗುವುದು ಅಸ್ಸಾಂ ಮೇಲೆ. ಹಾಗಾಗಿ, ಸಿಎಎ ಮಸೂದೆ ಸಂಸತ್ತಿನಲ್ಲಿ ಅಂಗೀಕರಿಸಿದಾಗ ಅಸ್ಸಾಂನಲ್ಲಿ ದೊಡ್ಡ ಮಟ್ಟದ ಹೋರಾಟ ನಡೆದಿತ್ತು. ಇದೀಗ ಸಿಎಎ ಜಾರಿ ಬೆನ್ನಲ್ಲೆ ಮತ್ತೊಮ್ಮೆ ಪ್ರತಿಭಟನೆಗೆ ಅಸ್ಸಾಂನ ವಿವಿಧ ಸಂಘಟನೆಗಳು ಮುಂದಾಗಿವೆ.

ಆಲ್ ಅಸ್ಸಾಂ ಸ್ಟೂಡೆಂಟ್ ಯೂನಿಯನ್ (ಎಎಎಸ್‌ಯು) ಸೇರಿದಂತೆ ಹಲವು ಸಂಘಟನೆಗಳು ಈಗಾಗಲೇ ಸಿಎಎ ವಿರುದ್ದ ಪ್ರತಿಭಟನೆ ಪ್ರಾರಂಭಿಸಿದ್ದು, ರಾಜ್ಯಾದ್ಯಂತ ರ್‍ಯಾಲಿಗಳನ್ನು ಆಯೋಜಿಸುತ್ತಿದೆ ಮತ್ತು ಸಿಎಎ ಪ್ರತಿಗಳನ್ನು ಸುಡುತ್ತಿದೆ.

ಶಾಂತಿಯುತವಾಗಿ ಕಾನೂನು ಚೌಕಟ್ಟಿನೊಳಗೆ ಪ್ರತಿಭಟನೆ ನಡೆಸುವುದಾಗಿ ಮತ್ತು ಸಿಎಎ ವಿರುದ್ದ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಎಎಎಸ್‌ಯು ಘೋಷಿಸಿದೆ.

ಸಿಎಎ ವಿರೋಧಿ ಆಂದೋಲನದಿಂದ ರೂಪುಗೊಂಡ ರೈಜೋರ್ ದಳ ಮತ್ತು ಅಸ್ಸಾಂ ರಾಷ್ಟ್ರೀಯ ಪರಿಷತ್ ಸಕ್ರಿಯವಾಗಿ ಪ್ರತಿಭಟನೆ ನಡೆಸುತ್ತಿವೆ. ಆಮ್ ಆದ್ಮಿ ಪಕ್ಷವೂ ಗುವಾಹಟಿಯಲ್ಲಿ ಪ್ರತಿಭಟನೆ ನಡೆಸಿದೆ.

ಸಿಎಂ ಶರ್ಮಾ ಎಚ್ಚರಿಕೆ

ಅಸ್ಸಾಂನಲ್ಲಿ ಕಾನೂನು ಮೀರಿ ಪ್ರತಿಭಟಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಹೇಳಿದ್ದಾರೆ. ರಾಜಕೀಯ ಪಕ್ಷಗಳು ಕಾನೂನು ಮೀರಿದರೆ ನೋಂದಣಿ ರದ್ದಾಗಲಿವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಗುವಾಹಟಿ ಪೊಲೀಸರಿಂದ ಎಚ್ಚರಿಕೆ

ಸಂಪೂರ್ಣ ಬಂದ್ ಮಾಡಿ ಪ್ರತಿಭಟಿಸಲು ಅವಕಾಶ ಇಲ್ಲ ಎಂದು ಗುವಾಹಟಿ ಪೊಲೀಸರು ತಿಳಿಸಿದ್ದು, ರೈಲ್ವೆ, ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿ-ಪಾಸ್ತಿಗೆ ಹಾನಿ ಮಾಡಿದ್ದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ : ಮುಸ್ಲಿಮರು, ತಮಿಳರಿಗೆ ದ್ರೋಹ ಮಾಡಿ ವಿಭಜನೆಯ ಬೀಜ ಬಿತ್ತಿದ ಬಿಜೆಪಿ : ಸಿಎಎ ಜಾರಿ ಬಗ್ಗೆ ತಮಿಳುನಾಡು ಸಿಎಂ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...