Homeಮುಖಪುಟಸಿಎಎ ಜಾರಿ 'ಐತಿಹಾಸಿಕ ಪ್ರಮಾದ' ಎಂದ ಸಂಸತ್ತಿನಲ್ಲಿ CAA ಪರ ಮತ ಚಲಾಯಿಸಿದ್ದ ಎಐಎಡಿಎಂಕೆ

ಸಿಎಎ ಜಾರಿ ‘ಐತಿಹಾಸಿಕ ಪ್ರಮಾದ’ ಎಂದ ಸಂಸತ್ತಿನಲ್ಲಿ CAA ಪರ ಮತ ಚಲಾಯಿಸಿದ್ದ ಎಐಎಡಿಎಂಕೆ

- Advertisement -
- Advertisement -

ಕೇಂದ್ರ ಸರಕಾರ ನಿನ್ನೆ ಅಧಿಸೂಚನೆಯ ಮೂಲಕ ‘ಅಸಂವಿಧಾನಿಕ’ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿದೆ. ಸಂಸತ್ತಿನಲ್ಲಿ ಸಿಎಎ ಬಿಲ್‌ ಪರವಾಗಿ ಎಐಎಡಿಎಂಕೆ ಸಂಸದರು ಮತವನ್ನು ಚಲಾಯಿಸಿದ್ದರು. ಆದರೆ ಇದೀಗ ಬಿಲ್‌ ಕುರಿತು ಅಧಿಸೂಚನೆ ಹೊರ ಬರುತ್ತಿದ್ದಂತೆ ಎಐಎಡಿಎಂಕೆ ತೀವ್ರ ವಿರೋಧವನ್ನು ವ್ಯಕ್ತಪಡಿಸಿದೆ.

2019ರಲ್ಲಿ ಸಂಸತ್ತಿನಲ್ಲಿ ಸಿಎಎ ಮಸೂದೆಯನ್ನು ಮಂಡಿಸಿದ ವೇಳೆ ಎಐಎಡಿಎಂಕೆಯನ್ನು ಪ್ರತಿನಿಧಿಸುವ ಎಲ್ಲಾ 12 ಸಂಸತ್ ಸದಸ್ಯರು ಮಸೂದೆಯ ಪರವಾಗಿ ಮತ ಚಲಾಯಿಸಿದ್ದರು. ಈ ಬಗ್ಗೆ ತಮಿಳುನಾಡಿನಲ್ಲಿ ಡಿಎಂಕೆ ಪಕ್ಷವು, ಎಐಎಡಿಎಂಕೆ ವಿರುದ್ಧ ಬಾರೀ ಟೀಕೆಯನ್ನು ಮಾಡಿತ್ತು. ನೂತನವಾಗಿ ಸ್ಟ್ಯಾಲಿನ್‌ ನೇತೃತ್ವದ ಡಿಎಂಕೆ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಸಿಎಎ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯವನ್ನು ಕೂಡ ಅಂಗೀಕರಿಸಿತ್ತು.

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಸಿಎಎ ನಿಯಮಗಳ ಕುರಿತ ಅಧಿಸೂಚನೆಯನ್ನು ಕಟುವಾಗಿ ಟೀಕಿಸಿದ್ದು, ಕೇಂದ್ರ ಸರ್ಕಾರವು ಸಿಎಎ ಅನುಷ್ಠಾನದ ಮೂಲಕ ಐತಿಹಾಸಿಕ ಪ್ರಮಾದವನ್ನು ಮಾಡಿದೆ. ರಾಜಕೀಯ ಲಾಭಕ್ಕಾಗಿ ಕೇಂದ್ರದ ಆಡಳಿತಾರೂಢ ಬಿಜೆಪಿಯು ಸಿಎಎಯನ್ನು ಜಾರಿಗೊಳಿಸಿದೆ ಎಂದು ಆರೋಪಿಸಿದ್ದಾರೆ.

ಕಳೆದ ಐದು ವರ್ಷಗಳಿಂದ ಜಾರಿಯಾಗದೆ ನೆನೆಗುದಿಗೆ ಬಿದ್ದಿದ್ದ ಮಸೂದೆಯನ್ನು ಲೋಕಸಭೆ ಚುನಾವಣೆ ವೇಳೆ ಜನರನ್ನು ಒಡೆದು ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಜಾರಿಗೆ ತರಲಾಗಿದೆ, ಈ ಕ್ರಮವನ್ನು ಎಐಎಡಿಎಂಕೆ ತೀವ್ರವಾಗಿ ಖಂಡಿಸುತ್ತದೆ ಎಂದು ಎಡಪ್ಪಾಡಿ ಕೆ ಪಳನಿಸ್ವಾಮಿ ಹೇಳಿದ್ದಾರೆ.

ಕೇಂದ್ರ ಸರ್ಕಾರವು ಈ ಮೂಲಕ ಐತಿಹಾಸಿಕ ಪ್ರಮಾದವನ್ನು ಎಸಗಿದೆ, ಎಐಎಡಿಎಂಕೆ ಸ್ಥಳೀಯ ಮುಸ್ಲಿಮರು ಮತ್ತು ಶ್ರೀಲಂಕಾ ತಮಿಳರ ವಿರುದ್ಧ ಇದನ್ನು ಜಾರಿಗೊಳಿಸುವ ಯಾವುದೇ ಪ್ರಯತ್ನವನ್ನು ಎಂದಿಗೂ ಅನುಮತಿಸುವುದಿಲ್ಲ. ಎಐಎಡಿಎಂಕೆ ಇದನ್ನು ಪ್ರಜಾಸತ್ತಾತ್ಮಕವಾಗಿ ವಿರೋಧಿಸಲು ದೇಶದ ಜನರೊಂದಿಗೆ ಸೇರಿಕೊಳ್ಳುತ್ತದೆ ಎಂದು ಎಡಪ್ಪಾಡಿ ಕೆ ಪಳನಿಸ್ವಾಮಿ ಹೇಳಿದ್ದಾರೆ.

ನೂತನ ಪೌರತ್ವ (ತಿದ್ದುಪಡಿ) ಕಾಯಿದೆ- 2019 ಭಾರತಕ್ಕೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಡಿಸೆಂಬರ್ 31, 2014ರ ಮೊದಲು ವಲಸೆ ಬಂದ ಮುಸ್ಲಿಮರನ್ನು ಹೊರತು ಪಡಿಸಿ ಹಿಂದೂಗಳು, ಸಿಖ್‌ಗಳು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವವನ್ನು ನೀಡು ಗುರಿಯನ್ನು ಹೊಂದಿದೆ.

ಗೃಹ ವ್ಯವಹಾರಗಳ ಸಚಿವಾಲಯ (MHA) ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಕಿರುಕುಳಕ್ಕೊಳಗಾದ ವ್ಯಕ್ತಿಗಳಿಗಾಗಿ ವೆಬ್ ಪೋರ್ಟಲ್ (https://indiancitizenshiponline.nic.in) ನ್ನು ಪ್ರಾರಂಭಿಸಿದೆ. ಪೋರ್ಟಲ್ ಮೂಲಕ ನಿರ್ದಿಷ್ಟವಾಗಿ ಆರು ಅಲ್ಪಸಂಖ್ಯಾತ ಸಮುದಾಯಗಳು -ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನು ಓದಿ: ಮುಸ್ಲಿಮರು, ತಮಿಳರಿಗೆ ದ್ರೋಹ ಮಾಡಿ ವಿಭಜನೆಯ ಬೀಜ ಬಿತ್ತಿದ ಬಿಜೆಪಿ : ಸಿಎಎ ಜಾರಿ ಬಗ್ಗೆ ತಮಿಳುನಾಡು ಸಿಎಂ ಆಕ್ರೋಶ

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...