Homeಮುಖಪುಟತೆಲಂಗಾಣ| ಕುರ್ಚಿ ಮೇಲೆ ಸಿಎಂ, ನೆಲದ ಮೇಲೆ ಕುಳಿತ ದಲಿತ ಡಿಸಿಎಂ: ಜಾತಿ ತಾರತಮ್ಯ ಆರೋಪ

ತೆಲಂಗಾಣ| ಕುರ್ಚಿ ಮೇಲೆ ಸಿಎಂ, ನೆಲದ ಮೇಲೆ ಕುಳಿತ ದಲಿತ ಡಿಸಿಎಂ: ಜಾತಿ ತಾರತಮ್ಯ ಆರೋಪ

- Advertisement -
- Advertisement -

ಯಾದ್ರಾದ್ರಿ ದೇವಸ್ಥಾನಕ್ಕೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ಜೊತೆ ಭೇಟಿ ನೀಡಿದ್ದ ವೇಳೆ ತೆಲಂಗಾಣದ ಉಪ ಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರನ್ನು ನೆಲದ ಮೇಲೆ ಕೂರಿಸಿದ್ದು ವಿವಾದಕ್ಕೆ ಕಾರಣವಾಗಿದೆ.

ಯಾದ್ರಾದ್ರಿ ಗುಟ್ಟದ ಶ್ರೀ ಲಕ್ಷೀ ನರಸಿಂಹ ಸ್ವಾಮಿ ದೇವಸ್ಥಾನದ ಬ್ರಹ್ಮತ್ಸೋವದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ತೆರಳಿದ್ದರು. ರೇವಂತ್ ರೆಡ್ಡಿ ಸಿಎಂ ಆದ ಬಳಿಕ ಮೊದಲ ಬಾರಿಗೆ ಯಾದಾದ್ರಿ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದರು.

ದೇವಸ್ಥಾನದಲ್ಲಿ ವಿಶೇಷ ಪೂಜೆ ವೇಳೆ ಮುಖ್ಯಮಂತ್ರಿ, ಅವರ ಪತ್ನಿ ಮತ್ತು ಇನ್ನಿಬ್ಬರು ಸಚಿವರು ಖುರ್ಚಿಯಲ್ಲಿ ಕುಳಿತಿದ್ದರು. ಆದರೆ, ಉಪ ಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಅವರನ್ನು ನೆಲದ ಮೇಲೆ ಕೂರಿಸಲಾಗಿದೆ. ಈ ಕುರಿತ ಫೋಟೋ, ವಿಡಿಯೋಗಳು ವೈರಲ್ ಆಗಿದ್ದು, “ಭಟ್ಟಿ ವಿಕ್ರಮಾರ್ಕ ಅವರು ದಲಿತರಾದ ಕಾರಣ ಕೆಳಗೆ ಕೂರಿಸಿ ಅವಮಾನಿಸಲಾಗಿದೆ” ಎಂಬ ಆರೋಪ ಕೇಳಿ ಬಂದಿದೆ.

ಶಿಷ್ಟಾಚಾರ ಉಲ್ಲಂಘನೆಯನ್ನು ಉಲ್ಲೇಖಿಸಿರುವ ಪ್ರತಿಪಕ್ಷ ಬಿಆರ್‌ಎಸ್‌, ಕಾಂಗ್ರೆಸ್ ಭಟ್ಟಿ ವಿಕ್ರಮಾರ್ಕ ಅವರನ್ನು ಕ್ರೂರವಾಗಿ ಅವಮಾನಿಸಿದೆ ಎಂದು ಆರೋಪಿಸಿದೆ.

ನಲ್ಗೊಂಡದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಬಿಆರ್‌ಎಸ್ ಎಂಎಲ್‌ಸಿ ಕವಿತಾ, ಭಟ್ಟಿ ವಿಕ್ರಮಾರ್ಕ ಮತ್ತು ಕೊಂಡ ಸುರೇಖಾ ಇಬ್ಬರನ್ನೂ ದೇವಸ್ಥಾನದ ಗರ್ಭಗುಡಿಯಲ್ಲಿ ನೆಲದ ಮೇಲೆ ಕೂರಿಸುವ ಮೂಲಕ ಜಾತಿ ತಾರತಮ್ಯ ಎಸಗಲಾಗಿದೆ. ಈ ಪ್ರಮಾದಕ್ಕಾಗಿ ಮುಖ್ಯಮಂತ್ರಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಮಾಜಿ ಶಾಸಕ ಬಾಲ್ಕ ಸುಮನ್ ಮತ್ತು ಇತರ ಬಿಆರ್‌ಎಸ್ ಮುಖಂಡರು ಕೂಡ ಈ ಕುರಿತು ಪ್ರತಿಕ್ರಿಯಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಮಾತನಾಡಬೇಕು. ಇಂತಹ ಘಟನೆಗಳು ಮರುಕಳಿಸದಂತೆ ತಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಬಿಎಸ್‌ಪಿ ತೆಲಂಗಾಣದ ಅಧ್ಯಕ್ಷ ಆರ್‌ಎಸ್‌ ಪ್ರವೀಣ್‌ಕುಮಾರ್‌ ಅವರು, “ಲಕ್ಷ್ಮೀ ನರಸಿಂಹ ಸ್ವಾಮಿಯ ಸಮ್ಮುಖದಲ್ಲಿ ಭಟ್ಟಿ ವಿಕ್ರಮಾರ್ಕ ಅವರಿಗೆ ಅವಮಾನ ಮಾಡಲಾಗಿದೆ ಎಂದು ಖಂಡನೆ ವ್ಯಕ್ತಪಡಿಸಿದ್ದಾರೆ. ಇಡೀ ದಲಿತ ಸಮುದಾಯಕ್ಕೆ ನೋವುಂಟು ಮಾಡಿರುವ ಕಾಂಗ್ರೆಸ್‌ನ ಅಸಲಿ ಮುಖ ಬಯಲಾಗಿದೆ. ಮುಖ್ಯಮಂತ್ರಿ ರೇವಂತ್ ರೆಡ್ಡಿ ದಲಿತ ಸಮುದಾಯದ ಕ್ಷಮೆಯಾಚಿಸಬೇಕು ಮತ್ತು ಆಸನ ವ್ಯವಸ್ಥೆ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಕೇವಲ ಮತಕ್ಕಾಗಿ ದಲಿತ ಸಮುದಾಯದ ಮೇಲೆ ಪ್ರೀತಿಯ ಸುರಿಮಳೆ ಸುರಿಸುತ್ತದೆ. ಆದರೆ, ಅದನ್ನು ಆಚರಣೆಯಲ್ಲಿ ಜಾರಿಗೆ ತರುವಲ್ಲಿ ವಿಫಲವಾಗಿದೆ” ಕಿಡಿಕಾರಿದ್ದಾರೆ.

ಕರ್ನಾಟಕ ಕಾಂಗ್ರೆಸ್ ವಕ್ತಾರೆ ಭವ್ಯ ನರಸಿಂಹಮೂರ್ತಿ ಕೂಡ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ” ಇದು ನಿಜವಾಗಿದ್ದರೆ ಸ್ವೀಕಾರಾರ್ಹವಲ್ಲ. ಒಬ್ಬರು ಸಾಂವಿಧಾನಿಕ ಹುದ್ದೆಯಲ್ಲಿರುವವರಿಂದ, ವಿಶೇಷವಾಗಿ ಮುಖ್ಯಮಂತ್ರಿಯಿಂದ ನಾವು ಇದನ್ನು ನೀರೀಕ್ಷಿಸಿರಲಿಲ್ಲ. ಇದರಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರ ಮೇಲೂ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದಿದ್ದಾರೆ.

ಇದನ್ನೂ ಓದಿ : ಹರಿಯಾಣ ಸಿಎಂ ಮನೋಹರ್‌ ಲಾಲ್ ಖಟ್ಟರ್, ಸಚಿವ ಸಂಪುಟ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...