Homeಫ್ಯಾಕ್ಟ್‌ಚೆಕ್Fact Check: ನಮಾಝ್ ಮಾಡಲು ಬಂದ ವ್ಯಕ್ತಿ ಬುರ್ಖಾ ಧರಿಸಿದ್ದ ಎಂದು ಸುಳ್ಳು ಸುದ್ದಿ ಹಂಚಿಕೆ

Fact Check: ನಮಾಝ್ ಮಾಡಲು ಬಂದ ವ್ಯಕ್ತಿ ಬುರ್ಖಾ ಧರಿಸಿದ್ದ ಎಂದು ಸುಳ್ಳು ಸುದ್ದಿ ಹಂಚಿಕೆ

- Advertisement -
- Advertisement -

ದೆಹಲಿಯ ಇಂದರ್‌ಲೋಕ್ ಪ್ರದೇಶದ ರಸ್ತೆಯಲ್ಲಿ ಕಳೆದ ಶುಕ್ರವಾರ (ಮಾ.8) ಜುಮಾ ನಮಾಝ್ ಮಾಡುತ್ತಿದ್ದ ವ್ಯಕ್ತಿಗೆ ಪೊಲೀಸ್ ಅಧಿಕಾರಿ ಬೂಟುಗಾಲಿನಿಂದ ಒದ್ದ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರಸ್ತುತ, ಆ ಪೊಲೀಸ್ ಅಧಿಕಾರಿ ಮನೋಜ್ ಕುಮಾರ್ ತೋಮರ್ ಅವರನ್ನು ಅಮಾನತು ಮಾಡಲಾಗಿದೆ.

ಪೊಲೀಸ್ ಅಧಿಕಾರಿ ನಮಾಝ್ ಮಾಡುತ್ತಿದ್ದ ವ್ಯಕ್ತಿಗೆ ಒದ್ದ ವಿಡಿಯೋ ವೈರಲ್ ಆದ ಬಳಿಕ, ಬಲ ಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋದಲ್ಲಿ ‘ವ್ಯಕ್ತಿಯೊಬ್ಬರು ಬುರ್ಖಾ ಧರಿಸಿ ಬಂದಿರುವುದು ಸೆರೆಯಾಗಿದೆ ಎಂದು ಸುದ್ದಿ ಹಬ್ಬಿಸಿದ್ದಾರೆ. ನಮಾಝ್‌ಗೆ ಬರುವಾಗ ಪುರುಷ ಬುರ್ಖಾ ಧರಿಸಿ ಬಂದದ್ದು ಯಾಕೆ? ಮುಸಲ್ಮಾನರು ಏನೋ ಮಾಡಲು ಸಂಚು ರೂಪಿಸಿದ್ದರು’ ಎಂಬರ್ಥದಲ್ಲಿ ಸುದ್ದಿ ಹಬ್ಬಿಸಲಾಗಿದೆ.

ಪತ್ರಕರ್ತ ಎಂದು ಹೇಳಿಕೊಂಡಿರುವ ‘Abhijit Majumder’ಎಂಬ ಎಕ್ಸ್‌ ಬಳಕೆದಾರ 30 ನಿಮಿಷದ ವಿಡಿಯೋದ 16ನೇ ಸೆಕೆಂಡ್‌ನಲ್ಲಿ ವ್ಯಕ್ತಿಯೊಬ್ಬ ಕಪ್ಪು ಬಟ್ಟೆ ಧರಿಸಿರುವುದು ಕಾಣುತ್ತಿದೆ. ಆ ವ್ಯಕ್ತಿ ಬುರ್ಖಾ ಧರಿಸಿ ಬಂದಿದ್ರಾ? ಆತ ಅಲ್ಲಿ ರಸ್ತೆಯಲ್ಲಿ ಏನು ಮಾಡುತ್ತಿದ್ದ ಎಂದು ಅನುಮಾನ ವ್ಯಕ್ತಪಡಿಸಿ ಪ್ರಶ್ನಿಸಿದ್ದಾರೆ.

ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ, ‘Mr Sinha’ ಕೂಡ ವಿಡಿಯೋ ಹಂಚಿಕೊಂಡಿದ್ದು, “ಇದು ಅತ್ಯಂತ ಗಂಭೀರ ವಿಚಾರ. ಈ ಘಟನೆಯನ್ನು ಇನ್ನಷ್ಟು ಅನುಮಾನಾಸ್ಪದವಾಗಿಸಿದೆ. ಅಲ್ಲಿ ಬುರ್ಖಾ ತೊಟ್ಟ ವ್ಯಕ್ತಿ ಏನು ಮಾಡುತ್ತಿದ್ದ? ಈ ಬಗ್ಗೆ ಸೂಕ್ತ ತನಿಖೆಯ ಅಗತ್ಯವಿದೆ” ಎಂದು ಬರೆದುಕೊಂಡಿದ್ದಾರೆ. ಕೇಂದ್ರ ಗೃಹ ಸಚಿವಾಲಯ ಮತ್ತು ದೆಹಲಿ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.

ಮತ್ತೊಂದು ಬಲಪಂಥೀಯ ಎಕ್ಸ್ ಖಾತೆ ‘MeghUpdates’ಕೂಡ ವಿಡಿಯೋ ಹಂಚಿಕೊಂಡಿದ್ದು, ವ್ಯಕ್ತಿಯೊಬ್ಬ ಬುರ್ಖಾ ಹಾಕಿಕೊಂಡು ಬಂದಿದ್ದರು ಎಂದು ಪ್ರತಿಪಾದಿಸಿದೆ.

ಫ್ಯಾಕ್ಟ್‌ ಚೆಕ್ : ಪೊಲೀಸ್ ಅಧಿಕಾರಿ ನಮಾಝ್ ಮಾಡುತ್ತಿದ್ದ ವ್ಯಕ್ತಿಗೆ ಬೂಟುಗಾಲಿನಿಂದ ಒದ್ದ ಘಟನೆಗೆ ಸಂಬಂಧಿಸಿದಂತೆ ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ನಮಗೆ ದೊರೆತ ವಿಡಿಯೋದಲ್ಲಿ ಕೂಡ ಬುರ್ಖಾ ಧರಿಸಿ ಬಂದಿದ್ದಾರೆ ಎನ್ನಲಾದ ವ್ಯಕ್ತಿ ಇದ್ದಾರೆ.

ಒಟ್ಟು 1 ನಿಮಿಷ 29 ಸೆಕೆಂಡ್‌ನ ವಿಡಿಯೋದಲ್ಲಿ 11 ನಿಮಿಷ ಆಗುವಾಗ ಕಪ್ಪು ಬಣ್ಣದ ಬಟ್ಟೆ ಧರಿಸಿರುವ ವ್ಯಕ್ತಿ ಕಾಣಿಸಿಕೊಂಡಿದ್ದಾರೆ. ವಿಡಿಯೋದಲ್ಲಿ ಕಾಣುವಂತೆ ಆ ವ್ಯಕ್ತಿ ಕಪ್ಪು ಪ್ಯಾಂಟ್, ಕಡು ಕಪ್ಪು ಬಣ್ಣದ ಟೀ ಶರ್ಟ್ ಅಥವಾ ಹೂಡಿ ಮತ್ತು ತಲೆಯಲ್ಲಿ ಕಪ್ಪು ಬಣ್ಣದ ಟೋಪಿ ಧರಿಸಿರುವುದನ್ನು ಕಾಣಬಹುದು. ಅವರ ಕೈಯಲ್ಲಿ ಮತ್ತೊಂದು ಬಟ್ಟೆ ಇರುವುದು ಸ್ಪಷ್ಟವಾಗಿ ಕಾಣುತ್ತಿದೆ.

ವಿಡಿಯೋದ 30 ನಿಮಿಷದಲ್ಲಿ ಆ ವ್ಯಕ್ತಿ ಕ್ಯಾಮರಾ ಕಡೆ ಬೆನ್ನು ಹಾಕಿ ಮತ್ತೊಬ್ಬರ ಜೊತೆ ಮಾತನಾಡಿದ್ದಾರೆ. ಈ ವೇಳೆ ಹೂಡಿಯ ಸ್ಕಲ್ಪ್ (ತಲೆ ಮುಚ್ಚುವ ಭಾಗ) ಕೂಡ ಕಾಣುತ್ತಿದೆ. ಹಾಗಾಗಿ, ಆ ವ್ಯಕ್ತಿ ಧರಿಸಿರುವುದು ಬುರ್ಖಾ ಅಲ್ಲ ಎಂಬುವುದು ಸ್ಪಷ್ಟ.

ವಿಡಿಯೋದಲ್ಲಿ ಕಾಣುವಂತೆ ರಸ್ತೆಯಲ್ಲಿ ನಮಾಝ್ ಮಾಡಲು ಬಂದ ಹೆಚ್ಚಿನ ಜನರು ನಮಾಝ್ ಮ್ಯಾಟ್ ಅಥವಾ ಮುಸಲ್ಲೆಯನ್ನು ತಂದಿದ್ದರು. ಅದೇ ರೀತಿ ಕಪ್ಪು ಬಟ್ಟೆ ಧರಿಸಿದ್ದ ವ್ಯಕ್ತಿ ಕೂಡ ಕೈಯಲ್ಲಿ ನಮಾಝ್ ಮ್ಯಾಟ್ ಹಿಡಿದಿರಬಹುದು. ಅಲ್ಲದೆ ಅವರು ಬುರ್ಖಾ ಧರಿಸಿ ಬಂದಿದ್ದಾರೆ ಎಂಬುವುದು ಸುಳ್ಳು

ಇದನ್ನೂ ಓದಿ : Fact Check: ಉತ್ತರ ಪ್ರದೇಶದಲ್ಲಿ 21 ಬಿಲಿಯನ್ ವರ್ಷ ಹಳೆಯ ಸನಾತನ ಡ್ರೋಣ್ ಸಿಕ್ಕಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...