Homeಮುಖಪುಟಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ಧನಾತ್ಮಕ ನಿರೂಪಣೆ PIB ವೆಬ್‌ಪೇಜ್‌ನಿಂದ ನಾಪತ್ತೆ!

ಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ಧನಾತ್ಮಕ ನಿರೂಪಣೆ PIB ವೆಬ್‌ಪೇಜ್‌ನಿಂದ ನಾಪತ್ತೆ!

- Advertisement -
- Advertisement -

ಗೃಹ ಸಚಿವಾಲಯ ಬಿಡುಗಡೆ ಮಾಡಿದ ಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ‘ಧನಾತ್ಮಕ ನಿರೂಪಣೆ’  ಪಿಐಬಿ(ಪ್ರೆಸ್‌ ಇನ್ಪೋರ್ಮೇಶನ್‌ ಬ್ಯೂರೋ) ವೆಬ್‌ಪೇಜ್‌ನಿಂದ ತೆಗೆದು ಹಾಕಲಾಗಿದೆ ಎಂದು ದಿ ವೈರ್‌ ವರದಿ ಮಾಡಿದೆ.

‘ಪೌರತ್ವ ತಿದ್ದುಪಡಿ ಕಾಯಿದೆ-2019’ ಇಸ್ಲಾಂನ್ನು ಶೋಷಣೆಯ ಹೆಸರಿನಲ್ಲಿ ಕಳಂಕಗೊಳಿಸದಂತೆ ರಕ್ಷಿಸುತ್ತದೆ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಪತ್ರಿಕಾ ಪ್ರಕಟಣೆಯು ಅದರ ಮೂಲ ಪತ್ರಿಕಾ ಮಾಹಿತಿ ಬ್ಯೂರೋ (ಪಿಐಬಿ) ವೆಬ್‌ಪುಟದಲ್ಲಿ ಮತ್ತು ಎಕ್ಸ್‌ ಪೇಜ್‌ನಲ್ಲಿ ಇನ್ನು ಮುಂದೆ ಲಭ್ಯವಿರುವುದಿಲ್ಲ.

ಪೌರತ್ವ ತಿದ್ದುಪಡಿ ಕಾಯಿದೆ-2019ರ ಧನಾತ್ಮಕ ನಿರೂಪಣೆ (Positive Narrative on Citizenship Amendment Act, 2019) ಎಂಬ ಶೀರ್ಷಿಕೆಯ ಪ್ರಶ್ನೋತ್ತರ ಸ್ವರೂಪದ ವಿನ್ಯಾಸದಲ್ಲಿ ಪತ್ರಿಕಾ ಪ್ರಕಟಣೆಯು ಇತ್ತು. CAAಯಿಂದ ಭಾರತದ ಮುಸ್ಲಿಂ ನಾಗರಿಕರ ಪೌರತ್ವದ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಉಲ್ಲೇಖಿಸಲಾಗಿತ್ತು. ಮಾರ್ಚ್ 12ರ ಮಂಗಳವಾರ ಸಂಜೆ 6:43ಕ್ಕೆ ಪಿಐಬಿ ವೆಬ್‌ಸೈಟ್‌ಗೆ ಪೋಸ್ಟ್ ಮಾಡಲಾಗಿದೆ. ಈ ಪ್ರಕಟಣೆಯು ಈಗ ಏಕೆ ಲಭ್ಯವಿಲ್ಲ ಎಂಬುವುದು ಸ್ಪಷ್ಟವಾಗಿಲ್ಲ. ಈ ಬಗ್ಗೆ PIBಯ ಎಕ್ಸ್‌ ಪುಟದಲ್ಲಿ ಕೂಡ ಪೋಸ್ಟ್‌ ಮಾಡಲಾಗಿತ್ತು.

ಸಿಎಎ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ 2015ರ ಮೊದಲು ಭಾರತಕ್ಕೆ ಆಗಮಿಸಿದ ಹಿಂದೂಗಳು, ಪಾರ್ಸಿಗಳು, ಸಿಖ್ಖರು, ಬೌದ್ಧರು, ಜೈನರು ಮತ್ತು ಕ್ರಿಶ್ಚಿಯನ್ನರು ಕಿರುಕುಳದಿಂದ ಪಲಾಯನ ಮಾಡುವವರಿಗೆ ಪೌರತ್ವವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಶಾಸನದ ನಿಬಂಧನೆಗಳಿಂದ ಮುಸ್ಲಿಮರನ್ನು ಹೊರಗಿಡಲಾಗಿತ್ತು ಮತ್ತು ಎನ್‌ಆರ್‌ಸಿ ವೇಳೆ ಭಾರತದಲ್ಲಿನ ಅನೇಕ ಮುಸ್ಲಿಮರ ಪೌರತ್ವವನ್ನು ಕಸಿದುಕೊಳ್ಳುತ್ತದೆ ಎಂಬ ಆತಂಕವು ಮನೆ ಮಾಡಿತ್ತು, ಇದು ದೇಶಾದ್ಯಂತ ಸಿಎಎ ವಿರುದ್ಧ ವಿರೋಧಕ್ಕೆ ಮತ್ತು  ಭಾರೀ ಪ್ರತಿಭಟನೆಗೆ ಕಾರಣವಾಗಿತ್ತು.

ಸಂಸತ್ತು 2019ರ ಕೊನೆಯಲ್ಲಿ ಶಾಸನವನ್ನು ಅಂಗೀಕರಿಸಿದೆ, ಆದರೆ ಸರ್ಕಾರವು ಅದರ ನಿಯಮಗಳನ್ನು ನಿನ್ನೆಯಷ್ಟೇ ಬಹಿರಂಗಪಡಿಸಿದೆ. ನಿಯಮಗಳಿಲ್ಲದೆ ಸಿಎಎ ಜಾರಿಗೆ ತರಲು ಸಾಧ್ಯವಿಲ್ಲ.

ಗೃಹ ವ್ಯವಹಾರಗಳ ಸಚಿವಾಲಯದ ಪ್ರಶ್ನೆಗಳಲ್ಲಿ CAA ಇಸ್ಲಾಂ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂದು ಕೇಳಲಾಗಿದೆ..

ಈ ಪ್ರಶ್ನೆಗೆ ಉತ್ತರ ಹೀಗಿತ್ತು: ಆ ಮೂರು ಮುಸ್ಲಿಂ ರಾಷ್ಟ್ರಗಳಲ್ಲಿ ಅಲ್ಪಸಂಖ್ಯಾತರ ಮೇಲಿನ ಕಿರುಕುಳದಿಂದಾಗಿ, ಪ್ರಪಂಚದಾದ್ಯಂತ ಇಸ್ಲಾಂ ಧರ್ಮದ ಹೆಸರಿಗೆ ಕಳಂಕಿ ಉಂಟಾಗಿತ್ತು. ಆದರೆ ಇಸ್ಲಾಂ ಶಾಂತಿಯುತ ಧರ್ಮವಾಗಿರುವುದರಿಂದ, ದ್ವೇಷ, ಹಿಂಸೆ, ಧಾರ್ಮಿಕ ನೆಲೆಯಲ್ಲಿ ಯಾವುದೇ ಕಿರುಕುಳವನ್ನು ಎಂದಿಗೂ ಬೋಧಿಸುವುದಿಲ್ಲ ಅಥವಾ ಸೂಚಿಸುವುದಿಲ್ಲ. ಈ ಕಾಯ್ದೆಯು ಶೋಷಣೆಗೆ ಸಹಾನುಭೂತಿ ಮತ್ತು ಪರಿಹಾರವನ್ನು ಹೇಳುತ್ತದೆ, ಶೋಷಣೆಯ ಹೆಸರಿನಲ್ಲಿ ಇಸ್ಲಾಂ ಧರ್ಮವನ್ನು ಕಳಂಕಗೊಳಿಸದಂತೆ ರಕ್ಷಿಸುತ್ತದೆ ಎಂದು ಉಲ್ಲೇಖಿಸಿತ್ತು.

ಭಾರತೀಯ ಮುಸ್ಲಿಮರು ಪೌರತ್ವದ ಮೇಲೆ ಪರಿಣಾಮ ಬೀರುವ ಯಾವುದೇ ನಿಬಂಧನೆಯನ್ನು ಸಿಎಎ ಹೊಂದಿಲ್ಲ, ಆದ್ದರಿಂದ ಅವರು ಈ ಬಗ್ಗೆ ಚಿಂತಿಸಬೇಕಾಗಿಲ್ಲ. ಪ್ರಸ್ತುತ 18 ಕೋಟಿ ಭಾರತೀಯ ಮುಸ್ಲಿಮರಿಗೆ ಯಾವುದೇ ಸಂಬಂಧವಿಲ್ಲ, ಅವರು ತಮ್ಮ ಹಿಂದೂಗಳಂತೆಯೇ ಸಮಾನ ಹಕ್ಕುಗಳನ್ನು ಹೊಂದಿದ್ದಾರೆ. ಸಿಎಎ ಕಾಯ್ದೆಯು ಯಾವುದೇ ಭಾರತೀಯ ನಾಗರಿಕನಲ್ಲಿ ತನ್ನ ಪೌರತ್ವವನ್ನು ಸಾಬೀತುಪಡಿಸಲು ದಾಖಲೆಯನ್ನು ನೀಡುವಂತೆ ಕೇಳುವುದಿಲ್ಲ ಎಂದು ಅದರಲ್ಲಿ ಉಲ್ಲೇಖಿಸಲಾಗಿತ್ತು.

ಅಕ್ರಮ ಮುಸ್ಲಿಮ್ ವಲಸಿಗರನ್ನು ವಾಪಸು ಕಳುಹಿಸಲು ಅಫ್ಘಾನಿಸ್ತಾನ, ಪಾಕಿಸ್ತಾನ ಅಥವಾ ಬಾಂಗ್ಲಾದೇಶದೊಂದಿಗೆ ಭಾರತವು ಒಪ್ಪಂದವನ್ನು ಹೊಂದಿಲ್ಲ. ಈ ಪೌರತ್ವ ಕಾಯಿದೆಯು ಅಕ್ರಮ ವಲಸಿಗರ ಗಡೀಪಾರು ಮಾಡುವುದನ್ನು ಹೇಳುವುದಿಲ್ಲ, ಆದ್ದರಿಂದ CAA ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧವಾಗಿದೆ ಎಂಬ ಮುಸ್ಲಿಮರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಜನರ ಒಂದು ವರ್ಗದ ನಿರೂಪಣೆಯು ತಪ್ಪಾಗಿದೆ ಎಂದು ಹೇಳಲಾಗಿದೆ.

ಪೌರತ್ವ ಕಾಯ್ದೆಯನ್ನು ಏಕೆ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ಕೇಳಿದ ಪ್ರಶ್ನೆಗೆ, ಅಕ್ರಮ ವಲಸಿಗರನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ಉಲ್ಲೇಖಿಸಲಾಗಿದೆ. ಮೂರು ದೇಶಗಳ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರ ಮೇಲೆ ಕರುಣೆ ತೋರಿಸಲು, ಭಾರತದ ಉದಾರ ಸಂಸ್ಕೃತಿಯ ಪ್ರಕಾರ ಅವರ ಸಂತೋಷ ಮತ್ತು ಸಮೃದ್ಧ ಭವಿಷ್ಯಕ್ಕಾಗಿ ಭಾರತೀಯ ಪೌರತ್ವವನ್ನು ಪಡೆಯಲು ಅವಕಾಶವನ್ನು ನೀಡಲಾಗುತ್ತಿದೆ ಎಂದು ಉಲ್ಲೇಖಿಸಲಾಗಿತ್ತು.

ಇದನ್ನು ಓದಿ: ಎಸ್‌ಬಿಐ ಮುಖ್ಯಸ್ಥರ ರಾಜೀನಾಮೆಗೆ ನೌಕರರ ಒಕ್ಕೂಟ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...