Homeಕರ್ನಾಟಕಅನಂತ್‌ ಕುಮಾರ್‌ ಹೆಗಡೆ ರಕ್ತದಲ್ಲಿಯೇ ದ್ವೇಷ ಇದೆ: ಸುಧೀರ್‌ ಕುಮಾರ್‌ ಮುರೊಳ್ಳಿ

ಅನಂತ್‌ ಕುಮಾರ್‌ ಹೆಗಡೆ ರಕ್ತದಲ್ಲಿಯೇ ದ್ವೇಷ ಇದೆ: ಸುಧೀರ್‌ ಕುಮಾರ್‌ ಮುರೊಳ್ಳಿ

- Advertisement -
- Advertisement -

ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಕೇವಲ ಟಿಕೆಟ್‌ ಗಿಟ್ಟಿಸುವುದಕ್ಕಾಗಿ ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿಲ್ಲ. ಬದಲಿಗೆ ಅಂಬೇಡ್ಕರ್‌ ಮತ್ತು ಗಾಂಧಿ ಬಗೆಗಿನ ದ್ವೇಷ ಆರ್‌ಎಸ್‌ಎಸ್‌ ವ್ಯಕ್ತಿಗಳ ರಕ್ತದಲ್ಲಿಯೇ ಅಂತರ್ಗತವಾಗಿದೆ ಎಂದು ಚಿಂತಕ ಸುಧೀರ್‌ ಕುಮಾರ್‌ ಮುರೊಳ್ಳಿ ಹೇಳಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ಜಾಗೃತ ಕರ್ನಾಟಕ’ ಸಂಘಟನೆ ಮಂಗಳವಾರ ಹಮ್ಮಿಕೊಂಡಿದ್ದ ‘ಕರ್ನಾಟಕ ಪಣ–ನಾಡ ಅರಿವು’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಆರಂಭದಲ್ಲಿ ನಾವೆಲ್ಲರೂ ಆರ್‌ಎಸ್‌ಎಸ್‌ನ ಕಾಲಾಳುಗಳಾಗಿದ್ದೆವು. ಮೆದುಳಿನ ಭಾಗವಾಗಿ ಎಂ.ಜಿ ಹೆಗ್ಡೆಯವರು, ಲಕ್ಷ್ಮೀಶ ಗಬ್ಬಲಡ್ಕ ಕೆಲಸ ಮಾಡಿದರು. ಆದರೆ, ಆರ್‌ಎಸ್‌ಎಸ್‌ ನಮ್ಮ ನೆಲದ ಸಂಸ್ಕೃತಿಯನ್ನು ಬಿಂಬಿಸುವುದಿಲ್ಲ. ನಮ್ಮ ಧರ್ಮದ ವಕ್ತಾರರು, ಧರ್ಮ ರಕ್ಷಕರು ಅವರಲ್ಲ ಎಂಬುವುದು ತಿಳಿದು ಅದರಿಂದ ಹೊರಬಂದೆವು” ಎಂದರು.

“ನಾವು ಭಾರತೀಯರು ಪ್ರಪಂಚದ ಎಲ್ಲರನ್ನೂ ಸ್ವೀಕರಿಸಿದ್ದೇವೆ. ಇಲ್ಲಿನ ಶ್ರಮಿಕರು, ಮಹಿಳೆಯರು, ರೈತರು ನಮ್ಮ ಪಾಲಿನ ಭಾರತಾಂಬೆ ಆಗಿದ್ದಾರೆ. ಇವರು ಯಾರೂ ಆರ್‌ಎಸ್‌ಎಸ್‌ನವರಿಗೆ ಬೇಕಿಲ್ಲ. ಕೇವಲ ಭಾರತಾಂಬೆಯ ಫೋಟೊ ತೋರಿಸುವುದು ಮಾತ್ರ ಆರ್‌ಎಸ್‌ಎಸ್‌ನ ದೇಶಭಕ್ತಿ” ಎಂದು ಟೀಕಿಸಿದರು.

“ಏನಾದರೂ ಅನ್ಯಾಯ ನಡೆದರೆ ನಾವು ಅಯ್ಯೋ ರಾಮನೇ, ಅಯ್ಯೋ ಶಿವನೆ ಎಂದು ಹೇಳುತ್ತೇವೆ. ಇದು ನಮ್ಮ ಧರ್ಮ. ಆದರೆ ಇನ್ನೊಬ್ಬರ ವಿರುದ್ಧ ದ್ವೇಷ ಸಾಧಿಸಲು ಘೋಷಣೆ ಕೂಗಿಸಲು ಮಾತ್ರ ಆರ್‌ಎಸ್‌ಎಸ್‌ ರಾಮನ ಹೆಸರು ಬಳಸಿಕೊಳ್ಳುತ್ತಿದೆ” ಎಂದು ಕಿಡಿಕಾರಿದರು.

“ಆರ್‌ಎಸ್‌ಎಸ್‌ ಹುಟ್ಟಿ ಕೇವಲ 99 ವರ್ಷ ಆಗಿದೆ. ಆದರೆ ನಮ್ಮ ಕರ್ನಾಟಕಕ್ಕೆ ಹಲವು ಶತಮಾನಗಳ ಇತಿಹಾಸವಿದೆ. ಈ ಆರ್‌ಎಸ್‌ಎಸ್‌ನ ಇಡೀ ವಿಚಾರಧಾರೆಗೆ ನಮ್ಮ ಕರ್ನಾಟಕ ಹಿಂದಿನಿಂದಲೂ ಮುಖಾಮುಖಿಯಾಗಿದೆ. ಸಾವಿರಾರು ವರ್ಷಗಳಿಂದ ಮನುಷ್ಯತ್ವವೇ ಮುಖ್ಯ ಎಂದು ಕನ್ನಡ ಪರಂಪರೆ ಹೇಳಿದೆ. ಕನ್ನಡದ ಪಂಪ ಮನುಷ್ಯ ಜಾತಿ ತಾನೋಂದೆ ವಲಂ ಎಂದರು. ಕಲಬೇಡ, ಕೊಲಬೇಡ ಎಂದು ಬಸವಣ್ಣ ಹೇಳಿದರು. ಅಂಬೇಡ್ಕರ್‌ ಸಂವಿಧಾನ, ಕನಕದಾಸರ ತತ್ವಗಳು ಈ ಆರ್‌ಎಸ್‌ಎಸ್‌ ಸಿದ್ದಾಂತಕ್ಕೆ ಸಂಪೂರ್ಣ ತದ್ವಿರುದ್ದವಾಗಿರುವುದನ್ನು ಗಮನಿಸಬೇಕು” ಎಂದರು.

“ಭಾರತದ ಮಣ್ಣಿನ ಮಗ ಅಂಬೇಡ್ಕರ್‌ ಕೊಟ್ಟ ಸಂವಿಧಾನ ನಮಗೆ ದಾರಿ ದೀಪವಾಗಿದೆ. ಕನ್ನಡದ ನೆಲ ಅಂಬೇಡ್ಕರ್‌ ಮತ್ತು ಗಾಂಧಿಯನ್ನು ಸ್ವೀಕಾರ ಮಾಡಿಕೊಂಡಿದೆ. ಆದರೆ, ಆರ್‌ಎಸ್‌ಎಸ್‌ನವರಿಗೆ ಅಂಬೇಡ್ಕರ್‌, ಗಾಂಧಿ ಮೇಲೆ ದ್ವೇಷ ಇದೆ. ಅವರು ಪಠ್ಯದಲ್ಲಿ ಕುವೆಂಪು ಅವರನ್ನು ತಿರುಚಿ ಅಪಮಾನ ಮಾಡಿದವರು. ಏಕೆಂದರೆ ಕನ್ನಡದ ಮಣ್ಣಿನ ಮಗ ಕುವೆಂಪು ಅವರಿಗೆ ಬೇಡ” ಎಂದು ಹೇಳಿದರು.

“ಏಕ ಅನ್ನುವುದೇ ಅವಿವೇಕ, ಅದು ವಿದೇಶಿ ಸಂಸ್ಕೃತಿಯಾಗಿದೆ. ಭಾರತ ಅನೇಕವಾದುದು. ಅನೇಕವಾದುದ್ದನ್ನು ವಿರೋಧ ಮಾಡುವುದೇ ಆರ್‌ಎಸ್‌ಎಸ್‌ ತಂತ್ರ. ಆದರೆ ವಿವಿಧತೆಯಲ್ಲಿ ಏಕತೆ, ಭಾರತದ ರಾಷ್ಟ್ರಧ್ವಜ, ಕನ್ನಡ ಧ್ವಜ ನಮ್ಮ ಅಸ್ಮಿತೆ” ಎಂದರು.

“ವಿಶಾಲ ಹಿಂದೂ ಧರ್ಮವನ್ನು ಕಟ್ಟುತ್ತೇವೆ. ವಿಶ್ವವ್ಯಾಪಕವಾದುದ್ದನ್ನು ಕಟ್ಟುತ್ತೇವೆ ಎನ್ನುವ ನೀವು ಹೆಡಗೇವಾರ್‌, ಗೋಳ್ವಾಕರ್‌, ಸಾವರ್ಕರ್‌ರನ್ನು ಆರಾಧಿಸುತ್ತೀರಿ. ನಿಜವಾದ ಆಧ್ಯಾತ್ಮ ನಾಯಕರಾದ ರಾಮಕೃಷ್ಣ ಪರಮಹಂಸ, ವಿವೇಕಾನಂದ, ಕುವೆಂಪು ರವರನ್ನು ವಿರೋಧಿಸುತ್ತೀರಿ” ಎಂದು ಕಿಡಿಕಾರಿದರು.

ಆಧ್ಯಾತ್ಮಿಕ ಅರಿವು ಇದ್ದವರು ಮಾತ್ರ ಆರ್‌ಎಸ್‌ಎಸ್‌ನಿಂದ ಹೊರಬರಲು ಸಾಧ್ಯ – ನಿಕೇತ್‌ ರಾಜ್‌ ಮೌರ್ಯ

“ಆಧ್ಯಾತ್ಮಿಕ ಅರಿವು ಇದ್ದವರು ಮಾತ್ರ ಆರ್‌ಎಸ್‌ಎಸ್‌ನಿಂದ ಹೊರಬರಲು ಸಾಧ್ಯ. ನಾವು ಉಪನಿಷತ್ತುಗಳ ವಿರೋಧಿಗಳಲ್ಲ, ದಾಸರು, ಶರಣರು ಸೂಫಿಗಳು ಧರ್ಮವನ್ನು ಅರಿತಿದ್ದರು. ನಾನು ನೀನು ಬೇರೆಯಲ್ಲ, ಒಂದೇ ಎಂಬ ಅರಿವು ಆಳವಾಗಿ ಯಾರಿಗೂ ಮೂಡುತ್ತೋ ಅವರು ಮಾತ್ರ ಧರ್ಮ ಅರ್ಥವಾಗುತ್ತದೆ. ಇದು ಆರ್‌ಎಸ್‌ಎಸ್‌ನವರಿಗೆ ಸಾಧ್ಯವಿಲ್ಲ” ಎಂದು ಯುವ ವಾಗ್ಮಿ ನಿಕೇತ್‌ ರಾಜ್‌ ಮೌರ್ಯ ಹೇಳಿದರು.

“ಈ ಸಭೆಯಲ್ಲಿ ಭಾರಿಸಿದ ಗಂಟೆ ನನ್ನದೇ ಸರಿ, ಬೇರೆಯದೆಲ್ಲವೂ ತಪ್ಪು ಎನ್ನುವ ಅಲ್ಪ ಮತಿಗಳಿಗೆ ಸಾವಿನ ಕರೆಗಂಟೆಯಾಗಬೇಕು ಎಂದು ಚಿಕಾಗೋ ಸಮ್ಮೇಳನದಲ್ಲಿ ಸ್ವಾಮಿ ವಿವೇಕಾನಂದರು ಸಾರಿದರು. ಭಾರತ ದೇಶದ ಆಧ್ಯಾತ್ಮ ಪ್ರತಿನಿಧಿಯಾಗಿದ್ದ ಅವರು ಅಲ್ಲಿ ನೆರೆದಿದ್ದ ವಿಭಿನ್ನ ಸಂಸ್ಕೃತಿಯ ಜನರನ್ನು ಅವರನ್ನು ಸಹೋದರ, ಸಹೋದರಿಯರೆ ಎಂದು ಸಂಭೋದಿಸಿದರು. ಅಂತಹ ವಿವೇಕಾನಂದರ ವಿಚಾರಗಳನ್ನು ಈ ಆರ್‌ಎಸ್‌ಎಸ್‌ ಮಾತನಾಡುವುದಿಲ್ಲ” ಎಂದರು.

“ವಿವೇಕಾನಂದರು ಸನ್ಯಾಸ್ತತ್ವ ಸ್ವೀಕರಿಸಿದ್ದು ಕ್ರಿಸ್ತ ಹುಟ್ಟಿದ ದಿನ. ಶ್ರೀರಾಮಕೃಷ್ಣ ಪರಮಹಂಸರು ಜಗತ್ತಿನ ಎಲ್ಲಾ ಧರ್ಮಗಳ ಮೂಲಕವೂ ಮೋಕ್ಷ ಸಾಧಿಸಬಹುದು ಎಂದು ಸಾರಿದರು. ಜಿತೊ ಮತ್‌ ತತೋ ಪಂತ್‌ ಎಲ್ಲಾ ಮಾರ್ಗಗಳು ಒಂದೇ ಗುರಿಗೆ ಕರೆದುಕೊಂಡು ಹೋಗುತ್ತಿವೆ. ಒಟ್ಟಾಗಿ ಬಾಳುವುದನ್ನು ಕಲಿಸಿ ಎಂದು ಹೇಳಿದ್ದಾರೆ.  ಆದರೆ, ಅದನ್ನು ಆರ್‌ಎಸ್‌ಎಸ್‌ ಹೇಳುವುದಿಲ್ಲ” ಎಂದರು.

“ಹೊಟ್ಟೆ ಕಿಚ್ಚಿಗೆ ತಣ್ಣಿರ್‌ ಸುರಿಸು, ಒಟ್ಟಿಗೆ ಬಾಳುವ ತೆರದಲ್ಲಿ ಹರಸು’ ಎಂದು ಕುವೆಂಪು ಹೇಳಿದರು. ನಮ್ಮನ್ನು ಒಡೆಯುವ ಪ್ರಯತ್ನವೇ ಅಧರ್ಮ. ನಮ್ಮನ್ನು ಜೋಡಿಸುವುದೆ ಧರ್ಮ. ನಮ್ಮೊಳಗೆ ಇರುವ ಕೆಡುಕನ್ನು ಕಳೆದುಕೊಳ್ಳಲು ಇರುವ ಆದರ್ಶವೇ ರಾಮ. ಗಾಂಧಿಗಿಂತ ದೊಡ್ಡ ಹಿಂದೂ ಇರಲು ಸಾಧ್ಯವೇ? ಅವರನ್ನೇ ಹಿಂದೂ ವಿರೋಧಿ ಎಂದು ಈ ಆರ್‌ಎಸ್‌ಎಸ್‌ನವರು ಕರೆದರಲ್ಲ” ಎಂದು ಪ್ರಶ್ನಿಸಿದರು.

“ಪ್ರಶ್ನೆ ಮಾಡದೇ ಹೋದರೆ ಧಮಕ್ಕೆ ಅರ್ಥ ವಿದೆಯೇ? ದ್ವೇಷ ಮಾಡುವುದು ಧರ್ಮವಲ್ಲ, ದ್ವೇಷ ಕಲಿಸುವುದು ಧಾರ್ಮಿಕ ಸಂಘಟನೆಯಲ್ಲ. ಹಾಗಾಗಿ, ಗಾಂಧಿ, ಕುವೆಂಪು, ಕನಕದಾಸ, ದಾರ್ಶನಿಕರು, ಸೂಫಿಗಳು, ನಾರಾಯಣ ಗುರುಗಳು ಮಾತಾಡಿದ್ದು ನಮ್ಮ ಧರ್ಮ, ಆರ್‌ಎಸ್‌ಎಸ್‌ನದು ಅಧರ್ಮ” ಎಂದರು.

ಆರ್‌ಎಸ್‌ಎಸ್‌ ವೇದ ಮತ್ತು ಉಪನಿಷತ್ತನ್ನು ಹೇಳುವುದಿಲ್ಲ: ಎಂ.ಜಿ ಹೆಗಡೆ

“ಆರ್‌ಎಸ್‌ಎಸ್‌ ವೇದ ಮತ್ತು ಉಪನಿಷತ್ತನ್ನು ಹೇಳುವುದಿಲ್ಲ. ಏಕೆಂದರೆ, ಅದರಲ್ಲಿ ಬರೆದಿರುವುದು ಆರ್‌ಎಸ್‌ಎಸ್‌ ಸಿದ್ದಾಂತಕ್ಕೆ ವಿರುದ್ಧವಾಗಿದೆ” ಎಂದು ಎಂ.ಜಿ ಹೆಗಡೆ ಹೇಳಿದರು.

“ಯಾರೂ ಕೂಡ ಶ್ರೇಷ್ಟರಲ್ಲ, ಯಾರೂ ಕನಿಷ್ಟರಲ್ಲ ಎಂದು ಉಪನಿಷತ್ತು ಹೇಳುತ್ತದೆ. ಇವೆಲ್ಲವನ್ನೂ ಮೂಲೆಗೆ ಸರಿಸಿ, ಬದಿಗೆ ಇಟ್ಟರು. ಉಪನಿಷತ್ತು ಇರುವುದು ಪ್ರಶ್ನೆಗಳ ಆಧಾರದ ಮೇಲೆ. ಯಮನ ಹತ್ತಿರ ಹೋಗಿ ನಚಿಕೇತ ಪ್ರಶ್ನೆ ಕೇಳುತ್ತಾನೆ. ಪ್ರಶ್ನೆ ಕೇಳುವುದರಿಂದಲೇ ಚಿಂತನೆ ಹುಟ್ಟಿದ್ದು. ವೇದಗಳು ಹೇಳುವುದು ಪ್ರಕೃತಿಯ ಆರಾಧನೆ. ಇವು ಯಾವುವು ಆರ್‌ಎಸ್‌ಎಸ್‌ಗೆ ಬೇಕಿಲ್ಲ” ಎಂದರು.

“ಆರ್‌ಎಸ್‌ಎಸ್‌ನ ಯಾರೂ ಹಿಂದೂ ಧರ್ಮದ ಅಧ್ಯಯನ ಮಾಡುವುದಿಲ್ಲ. ನಮಸ್ತೆ ಸದಾ ವಸ್ತಲೇ ಎಂಬ ಪ್ರಾರ್ಥನೆ ಕೂಡ ಕೇಸರಿ ಶಾಲು ಹಾಕಿ ಓಡಾಡುವ ಕಾರ್ಯಕರ್ತರಿಗೆ ಬರುವುದಿಲ್ಲ. ರಾಜಕೀಯ ಚಳವಳಿಯಾಗಿ ಅದು ಬಂದಿದೆ” ಎಂದರು.

“ಹಿಂದೂ ಅಂದರೆ ನಮ್ಮದು ಆರಾಧನಾ ಪದ್ದತಿ. ಹಿಂದುತ್ವ ಎಂದರೆ ವ್ಯಾಪಾರ, ವ್ಯವಹಾರ ಮತ್ತು ಅಧಿಕಾರ ಅಷ್ಟೆ. ಹಿಂದೂ ನಾಯಕರು ಎನ್ನುವವರು ಈಗ 200 ಕೋಟಿ ಆಸ್ತಿಯನ್ನು ಹೇಗೆ ಮಾಡಿಕೊಂಡರು ಎಂದು ನನ್ನ ಜೊತೆಗೆ ಚರ್ಚೆಗೆ ಬರುವರೆ?” ಎಂದು ಸವಾಲು ಹಾಕಿದರು.

“ಸಮಾನವಾಗಿ ಎಲ್ಲರನ್ನು ಒಟ್ಟಿಗೆ ಕೊಂಡೊಯ್ಯುವವರು ಹಿಂದು ಆಗಿರುತ್ತಾರೆ. ಆದರೆ ಬಡ, ಹಿಂದುಳಿದ, ದಲಿತ ಯುವಕರನ್ನು ಮುಂದೆ ತಳ್ಳಿ ಜೈಲು ಪಾಲು ಮಾಡುವವರು ಹಿಂದುತ್ವವಾದಿಗಳು. ಧರ್ಮದ ಸಮಸ್ಯೆ ಇಡೀ ಜಗತ್ತಿಗೆ ಇರಬೇಕು. ಬಡವರಿಗೆ ಮಾತ್ರ ಏಕೆ? ಇವರ ಕುರಿತು ಯುವಕರು ಎಚ್ಚರದಿಂದರಬೇಕು” ಎಂದರು.

ಹಿಂದೂ ಅನ್ನುವುದು ಮತ ಅಲ್ಲ, ಜೀವನ ಪ್ರವಾಹ : ಲಕ್ಷ್ಮೀಶ ಗಬ್ಬಲಡ್ಕ

“ನಮ್ಮೊಳಗಿನ ಬೆಂಕಿ ಕಡಿಮೆಯಾಗಿ ತಂಪು ಬಂದ ಕಾರಣ ನಾವು ಆರ್‌ಎಸ್‌ಎಸ್‌ನಿಂದ ಹೊರಗೆ ಬಂದಿದ್ದೇವೆ. ಆರ್‌ಎಸ್‌ಎಸ್‌ನಲ್ಲಿ ಆಟದ ಹೆಸರಿನಲ್ಲಿ, ಹಾಡಿನ, ಚಾರಣ, ಬೆಳದಿಂಗಳ ಊಟ, ಕಥೆ ಹೆಸರಿನಲ್ಲಿ ಒಟ್ಟು ಸೇರಿಸಿ ಒಂದು ಸಿದ್ದಾಂತ ತುಂಬಿಸುವ ಕೆಲಸ ಶುರು ಆಗುತ್ತದೆ. ಯೋಜಿತ ಕಾರ್ಯಪದ್ದತಿ ಇದೆ ಅಲ್ಲಿ. ಪೊಲೀಸ್‌, ನ್ಯಾಯಾಂಗದವರೆಗೂ ಇದು ಹಬ್ಬಿದೆ” ಎಂದು ವಿಷಾದ ವ್ಯಕ್ತಪಡಿಸಿದರು.

“ವ್ಯವಸ್ಥಿತವಾದ ಕಾರ್ಯಯೋಜನೆ ನಮಗೆ ಬೇಕು. ನಾವು ಭಯ, ಅಸಹನೆ ಹುಟ್ಟಿಸದೇ ಭಾವ ಜಾಗೃತಿಯನ್ನು ಉಂಟು ಮಾಡಬೇಕು ಎಂದು ಅರಿತಿದ್ದೇನೆ. 15 ವರ್ಷದ ಹಿಂದೆ ಶಿರಾದಲ್ಲಿ ನನ್ನ ಭಾಷಣ ಕೇಳಿ ಜನ ಮುಸ್ಲಿಮರ ಅಂಗಡಿಗೆ ಬೆಂಕಿ ಹಾಕಿದರು. ಬೆಂಕಿ ಹಾಕಿದವರಿಗೆ ಚೂರಿ ಹಾಕಿದರು. ಆ ಪಾಪ ನನ್ನ ಮೇಲಿದೆ. ಅದಕ್ಕೆ ಪ್ರಾಯಶ್ಚಿತ ಪಟ್ಟುಕೊಳ್ಳಲು ನಾನು ಇವತ್ತು ಇಲ್ಲಿಗೆ ಬಂದಿದ್ದೇನೆ” ಎಂದರು.

ಭಾರತದ ಭವ್ಯ ಪರಂಪರೆಯನ್ನು ಕೇವಲ ಒಂದು ಮತಕ್ಕೆ ಸೀಮಿತಗೊಳಿಸಿ ಭವಿಷ್ಯದಲ್ಲಿ ಆತಂಕದಿಂದ ಬದುಕುವ ದುಸ್ಥಿತಿಯನ್ನು ಆರ್‌ಎಸ್‌ಎಸ್‌ ಸೃಷ್ಟಿಸಿದೆ. ಆರ್‌ಎಸ್‌ಎಸ್‌ ಹಿಂದ್ ಧರ್ಮದ ಪ್ರಾತಿನಿಧಿಕ ಸಂಸ್ಥೆ ಅಲ್ಲ. ಅದನ್ನು ತ್ಯಜಿಸಿ ಜಗತ್ತಿನ ಎಲ್ಲದರಿಂದ ಒಳ್ಳೇಯದನ್ನು ನಾವು ತೆಗೆದುಕೊಳ್ಳೋಣ ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಪಣ ಪ್ರತಿಜ್ಞೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್‌ ತೊರೆದು ಬಂದ ಎಲ್.ಎನ್‌ ಮುಕುಂದರಾಜ್‌, ಹನುಮೇಗೌಡರು ಮಾತನಾಡಿದರು. ಜಾಗೃತ ಕರ್ನಾಟಕ ರಾಜಶೇಖರ್‌ ಅಕ್ಕಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಡಾ.ವಾಸು ಹೆಚ್.ವಿ, ಹೇಮಾ ವೆಂಕಟ್‌, ಡಾ.ರಮೇಶ್‌ ಬೆಲ್ಲಂಕೊಂಡ, ಬಿ.ಸಿ ಬಸವರಾಜು ಉಪಸ್ಥಿತರಿದ್ದರು.

ಇದನ್ನೂ ಓದಿ : 5,8, 9ನೇ ತರಗತಿಗಳ ಬೋರ್ಡ್ ಪರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆ: ಪರೀಕ್ಷೆ ಮುಂದೂಡಿದ ಶಿಕ್ಷಣ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...