Homeಮುಖಪುಟಸಿಎಎ ವಿರುದ್ಧದ ಪ್ರತಿಭಟನೆ: ಕೇರಳ ಪೊಲೀಸರಿಂದ ಲಾಠೀ ಚಾರ್ಜ್‌

ಸಿಎಎ ವಿರುದ್ಧದ ಪ್ರತಿಭಟನೆ: ಕೇರಳ ಪೊಲೀಸರಿಂದ ಲಾಠೀ ಚಾರ್ಜ್‌

- Advertisement -
- Advertisement -

ಸಿಎಎ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ವಿದ್ಯಾರ್ಥಿ ಸಂಘಟನೆಯಾದ ಫ್ರೆಟರ್ನಿಟಿ ಮೂವ್‌ಮೆಂಟ್‌ನ ಸದಸ್ಯರ ಮೇಲೆ ಕೇರಳ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಈ ವೇಳೆ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.   ಪ್ರತಿಭಟನೆಗೆ ಸಂಬಂಧಿಸಿ ಒಂಬತ್ತು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಅದರಲ್ಲಿ 8 ಮಂದಿಯನ್ನು ಬಂಧಿಸಲಾಗಿದೆ.

ಪೊಲೀಸರ ಲಾಠೀ ಚಾರ್ಜ್‌ನಿಂದ ಗಾಯಗೊಂಡ ವಿದ್ಯಾರ್ಥಿಗಳನ್ನು  ಕೋಝಿಕ್ಕೋಡ್‌ನ ಬೀಚ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಕೋಝಿಕ್ಕೋಡ್ ಕಾರ್ಪೊರೇಷನ್‌ನಿಂದ ಆರಂಭವಾದ ಮೆರವಣಿಗೆ ರಾತ್ರಿ 11 ಗಂಟೆ ಸುಮಾರಿಗೆ ಬೀಚ್ ಬಳಿಯ ಆಕಾಶವಾಣಿ ಕಚೇರಿ (ಆಕಾಶವಾಣಿ) ತಲುಪಿದೆ.

ಪೊಲೀಸರು ಯಾವುದೇ ಅಹಿತಕರ ಘಟನೆ ಅಥವಾ ಪ್ರಚೋದನೆ ಇಲ್ಲದೆ ಶಾಂತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆ ಲಾಠೀ ಪ್ರಹಾರ ನಡೆಸಿದ್ದಾರೆ, ಜೊತೆಗೆ ಮಹಿಳಾ ವಿದ್ಯಾರ್ಥಿಗಳಿಗೆ ಪುರುಷ ಪೊಲೀಸ್‌ ಸಿಬ್ಬಂದಿಗಳು ಕಿರುಕುಳ ನೀಡಿದ್ದಾರೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಫ್ರಟರ್ನಿಟಿ ಮೂವ್‌ಮೆಂಟ್‌ನ ಕೋಝಿಕ್ಕೋಡ್ ಜಿಲ್ಲಾ ಕಾರ್ಯದರ್ಶಿ ಶಾಹೀನ್ ಅಹಮ್ಮದ್ ಈ ಬಗ್ಗೆ ಮಾತನಾಡಿದ್ದು, ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠೀ ಪ್ರಹಾರ ಮಾಡಲು ಪ್ರಾರಂಭಿಸಿದರು. ರಸ್ತೆ ಅಥವಾ ಸಮುದ್ರ ತೀರದಲ್ಲಿ ಯಾವುದೇ ರಶ್ ಇರಲಿಲ್ಲ ಏಕೆಂದರೆ ಅದು ರಂಜಾನ್ ತಿಂಗಳ ಆರಂಭವಾಗಿದೆ. ನಾವು ರಸ್ತೆಯ ಒಂದು ಬದಿಯನ್ನು ನಿರ್ಬಂಧಿಸಿದ್ದೇವೆ ಆದರೆ ಇನ್ನೊಂದು ಬದಿಯಲ್ಲಿ ವಾಹನಗಳಿಗೆ ತೆರಳಲು ಅವಕಾಶ ಮಾಡಿಕೊಟ್ಟಿದ್ದೇವೆ. ಪ್ರತಿಭಟನೆಯ ಉದ್ಘಾಟನಾ ಭಾಷಣದ ವೇಳೆ, ಪೊಲೀಸ್ ಸಿಬ್ಬಂದಿ ಬಸ್‌ನಲ್ಲಿ ಬಂದು ಪ್ರತಿಭಟನಾಕಾರರನ್ನು ಬಂಧಿಸಲು ಪ್ರಾರಂಭಿಸಿದರು. ನಾವು ಬಂಧನವನ್ನು ವಿರೋಧಿಸಿದ ನಂತರ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ನಮಗೆ ಯಾವುದೇ ತೊಂದರೆ ಮಾಡುವ ಉದ್ದೇಶ ಇರಲಿಲ್ಲ, ನಾವು ಪ್ರತಿಭಟನಾ ಭಾಷಣದ ಬಳಿಕ ಅಲ್ಲಿಂದ ತೆರಳುತ್ತಿದ್ದೆವು ಆದರೆ ಪೊಲೀಸರು ಲಾಠೀ ಚಾರ್ಜ್‌ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರತಿಭಟನಾಕಾರರು ಸಾರ್ವಜನಿಕ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಪಡಿಸಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಪ್ರತಿಭಟನಾಕಾರರು ನಡೆಸಿದ ಬಲ ಪ್ರಯೋಗದಿಂದ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಈ ಕುರಿತು ದಾಖಲಾದ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಒಂಬತ್ತು ವಿದ್ಯಾರ್ಥಿಗಳ ಮೇಲೆ ಭಾರತೀಯ ದಂಡ ಸಂಹಿತೆಯ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಇದರಲ್ಲಿ ಸೆಕ್ಷನ್ 147 (ಗಲಭೆಗೆ ಶಿಕ್ಷೆ), 143 (ಕಾನೂನುಬಾಹಿರ ಸಭೆ), 283, 353, 332 ಮತ್ತು ಕೇರಳ ಪೊಲೀಸ್ ಕಾಯಿದೆ 2011ರ 177 (ಇ)ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದಲ್ಲದೆ ತಿರುವನಂತಪುರಂ ಮ್ಯೂಸಿಯಂ ಪೊಲೀಸರು ಸೋಮವಾರ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ರಾಜಭವನಕ್ಕೆ ಪ್ರತಿಭಟನಾ ಮೆರವಣಿಗೆ ನಡೆಸಿದಕ್ಕಾಗಿ ಫ್ರಾಟರ್ನಿಟಿ ಮೂವ್ಮೆಂಟ್, ಮುಸ್ಲಿಂ ಸ್ಟೂಡೆಂಟ್ಸ್ ಫೆಡರೇಶನ್ ಮತ್ತು ವೆಲ್ಫೇರ್ ಪಾರ್ಟಿಗೆ ಸೇರಿದ 124 ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸಿಎಎ ಪ್ರತಿಭಟನೆಯ ಭಾಗವಾಗಿ ಮಾವೇಲಿ ಎಕ್ಸ್‌ಪ್ರೆಸ್‌ನ್ನು ತಡೆದಿದ್ದಕ್ಕಾಗಿ ಎರ್ನಾಕುಲಂ ಪೊಲೀಸರು ಏಳು ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ರೈಲ್ವೇ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಸಿಎಎ ಅನುಷ್ಠಾನದ ವಿರುದ್ಧ ಪ್ರತಿಭಟನೆ ನಡೆಸಿದ ಸುಮಾರು 500 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರ ಮೇಲೆ ಆಲುವಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದನ್ನು ಓದಿ: ಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ಧನಾತ್ಮಕ ನಿರೂಪಣೆ PIB ವೆಬ್‌ಪೇಜ್‌ನಿಂದ ನಾಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...