Homeಫ್ಯಾಕ್ಟ್‌ಚೆಕ್Fact Check: ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?

Fact Check: ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?

- Advertisement -
- Advertisement -

“ಇನ್ನೊಂದು ಜನ್ಮವಿದ್ದರೆ ನಾನು ಮುಸ್ಲಿಮನಾಗಿ ಹುಟ್ಟಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ ಎನ್ನಲಾದ ವಿಡಿಯೋ ಕ್ಲಿಪ್ ಒಂದು ಭಾರೀ ವೈರಲ್ ಆಗಿದೆ. ಅನೇಕ ಬಿಜೆಪಿ ನಾಯಕರು ಮತ್ತು ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಈ ವಿಡಿಯೋ ಹಂಚಿಕೊಂಡಿದ್ದಾರೆ.

‘Murali Purshotham’ಎಂಬ ಎಕ್ಸ್‌ ಬಳಕೆದಾರ ವಿಡಿಯೋ ಹಂಚಿಕೊಂಡಿದ್ದು, “ಮುಂದಿನ ಜನ್ಮ ಯಾಕೆ ಇವಾಗ್ಲೇ ಕನ್ವರ್ಟ್ ಆಗಿ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ

ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ ‘ರಿಷಿ ಬಾಗ್ರೀ’ (Rishi Bagree)ಕೂಡ ಎಕ್ಸ್‌ನಲ್ಲಿ ವೈರಲ್ ವಿಡಿಯೋ ಹಂಚಿಕೊಂಡಿದ್ದು, “ಸಿದ್ದರಾಮಯ್ಯ ಅವರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್‌ನ್ನು ಅನೇಕ ಎಕ್ಸ್ ಬಳಕೆದಾರರು ಮರು ಟ್ವೀಟ್ ಮಾಡಿದ್ದಾರೆ. ಆದರೆ, ರಿಷಿ ಬಾಗ್ರೀ ಪ್ರಸ್ತುತ ಪೋಸ್ಟ್ ಡಿಲಿಟ್ ಮಾಡಿದ್ದಾರೆ.

 

‘BJP Intellectual Cell- Bengaluru (Modi Ka Parivar)’ ಎಂಬ ಎಕ್ಸ್‌ ಖಾತೆಯಲ್ಲಿ ವೈರಲ್ ವಿಡಿಯೋ ಹಂಚಿಕೊಳ್ಳಲಾಗಿದ್ದು, “ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟುವ ಆಸೆ ಸಿದ್ದರಾಮಯ್ಯ ಅವರದ್ದು. ಆದರೆ ಸಾಹೇಬರು ಇದೆ ಜನಮದಲ್ಲಿ ವಿಶೇಷ ಸಮುದಾಯದ ತುಷ್ಟೀಕರಣ ರಾಜಕಾರಣ ಆರಂಭಿಸಿದ್ದಾರೆ” ಎಂದು ಬರೆದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಕರ್ನಾಟಕದ ಕೆಲ ಬಿಜೆಪಿ ನಾಯಕರು ಸೇರಿದಂತೆ, ಇನ್ನೂ ಹಲವರು ವೈರಲ್ ವಿಡಿಯೋ ಹಂಚಿಕೊಂಡಿದ್ದರು. ಆದರೆ, ಈಗ ಅದನ್ನು ಡಿಲಿಟ್ ಮಾಡಿದ್ದಾರೆ.

ಫ್ಯಾಕ್ಟ್ ಚೆಕ್ : ಸಿಎಂ ಸಿದ್ದರಾಮಯ್ಯ ಕುರಿತ ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾನುಗೌರಿ.ಕಾಂ ಮೊದಲು ಸಿಎಂ ಭಾಷಣದ ಮೂಲ ವಿಡಿಯೋವನ್ನು ಹುಡುಕಿದೆ.

ಗೂಗಲ್‌ನಲ್ಲಿ ಸಂಬಂಧಿತ ಕೀ ವರ್ಡ್‌ ಹಾಕಿ ಹುಡುಕಾಡಿದಾಗ ನಮಗೆ ಯೋಯೋ ಟಿವಿ (yoyo Tv) ಎಂಬ ಕನ್ನಡ ಯೂಟ್ಯೂಬ್ ಚಾನೆಲ್‌ನಲ್ಲಿ 29:45 ನಿಮಿಷದ ವಿಡಿಯೋವೊಂದು ಸಿಕ್ಕಿದೆ.

‘ಮಂಡ್ಯದಲ್ಲಿ ಸಿಎಂ ಸಿದ್ದರಾಮಯ್ಯ ಹೈ ವೋಲ್ಟೇಜ್ ಭಾಷಣ’ ಎಂಬ ತಂಬ್‌ನೈಲ್ ಶೀರ್ಷಿಕೆಯಲ್ಲಿ ಇತ್ತೀಚೆಗೆ ಅಪ್ಲೋಡ್ ಮಾಡಲಾದ ವಿಡಿಯೋದಲ್ಲಿ, 13 ನಿಮಿಷ 36 ಸೆಕೆಂಡ್‌ನಿಂದ ವೈರಲ್ ಕ್ಲಿಪ್‌ನಲ್ಲಿರುವ ಮಾತುಗಳನ್ನು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಡಿಯೋವನ್ನು 13 ನಿಮಿಷ 26 ಸೆಕೆಂಡ್‌ನಿಂದ 13 ನಿಮಿಷ 44 ಸೆಕೆಂಡ್‌ಗಳ ನಡುವೆ ಸರಿಯಾಗಿ ಗಮನಿಸಿದರೆ ಸಿಎಂ ಸಿದ್ದರಾಮಯ್ಯ ಅವರು ಆಡಿರುವ ಸಂಪೂರ್ಣ ಮಾತುಗಳು ಇವೆ. ” ಅದರಲ್ಲಿ, ಇದೇ ದೇವೆಗೌಡರು ನಾನು ಯಾವ ಕಾರಣಕ್ಕೂ ಬಿಜೆಪಿ ಜೊತೆ ಹೋಗಲ್ಲ. ಏನಾದರು ಇನ್ನೊಂದು ಜನ್ಮ ಇದೇ ಎನ್ನುದಾದರೆ, ಮುಂದಿನ ಜನ್ಮದಲ್ಲಿ ನಾನು ಮುಸ್ಲಿಮನಾಗಿ ಹುಟ್ಟಬೇಕು ಎಂದಿದ್ದರು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಯೂಟ್ಯೂಬ್ ವಿಡಿಯೋ ಲಿಂಕ್ ಇಲ್ಲಿದೆ 

ಇಲ್ಲಿ, ಮುಂದಿನ ಜನ್ಮವಿದ್ದರೆ ನಾನು ಮುಸ್ಲಿಮನಾಗಿ ಹುಟ್ಟಬೇಕು ಎಂದು ದೇವೆಗೌಡರು ಹೇಳಿದ್ದರು. ಅಂತಹ ದೇವೆಗೌಡರು ಈಗ ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ ಎಂಬುವುದಾಗಿದೆ ಸಿಎಂ ಸಿದ್ದರಾಮಯ್ಯ ಅವರ ಮಾತಿನ ಆರ್ಥ. ಆದರೆ, ಬಿಜೆಪಿ ನಾಯಕರು ಮತ್ತು ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ‘ದೇವೆಗೌಡರು ಹೇಳಿದ್ದರು’ ಎಂಬುವುದನ್ನು ಕಟ್ ಮಾಡಿ ಹಂಚುವ ಮೂಲಕ, ಸಿಎಂ ಸಿದ್ದರಾಮಯ್ಯ ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕು ಎಂದು ಹೇಳಿದ್ದಾಗಿ ತಪ್ಪು ಮಾಹಿತಿ ನೀಡಿದ್ದಾರೆ. ಇದನ್ನೇ ನಿಜವೆಂದು ನಂಬಿದ ಅನೇಕ ಮಂದಿ ವಿಡಿಯೋ ಶೇರ್ ಮಾಡಿದ್ದಾರೆ.

ಯೂಟ್ಯೂಬ್‌ನಲ್ಲಿ ಲಭ್ಯವಿರುವ ವಿಡಿಯೋದ 12ನೇ ನಿಮಿಷದಲ್ಲಿ, “ಅವರು (ಜೆಡಿಎಸ್) ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿಲ್ಲ. 2018 ರಲ್ಲಿ, ನಮ್ಮ ನಾಯಕರು ಅವರ (ಕುಮಾರಸ್ವಾಮಿ) ಮನೆಗೆ ಹೋಗಿಮುಖ್ಯಮಂತ್ರಿಯಾಗಬೇಕು ಎಂದು ಹೇಳಿದ್ದರು. ನಾವು ಅವರನ್ನು ಮುಖ್ಯಮಂತ್ರಿ ಮಾಡಿದ್ದೇವೆ. ಏಕೆಂದರೆ, ಕೋಮುವಾದಿ ಬಿಜೆಪಿ ಅಧಿಕಾರಕ್ಕೆ ಬರುವುದು ನಮಗೆ ಇಷ್ಟವಿರಲಿಲ್ಲ. ನಂತರ, ಅವರ ಪಕ್ಷವನ್ನು ಮುರಿದವರು ಯಾರು? ಯಡಿಯೂರಪ್ಪನವರು. ಬಿಜೆಪಿ ಆಪರೇಷನ್ ಕಮಲ ಮಾಡಿ 17 ಶಾಸಕರಿಗೆ ಹಣ ನೀಡಿ ಕುಮಾರಸ್ವಾಮಿ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿತು”ಎಂದು ಹೇಳಿದ್ದಾರೆ.

ವೈರಲ್ ಕ್ಲಿಪ್‌ಗೆ ಸಂಬಂಧಿಸಿದ ಕಾರ್ಯಕ್ರಮದ ವರದಿಯನ್ನು ಹಿಂದುಸ್ತಾನ್ ಟೈಮ್ಸ್ ಮಾರ್ಚ್ 11ರಂದು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. “ದೇವೇಗೌಡರು ತಮ್ಮ ಉಳಿವಿಗಾಗಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ: ಸಿಎಂ ಸಿದ್ದರಾಮಯ್ಯ” ಎಂಬ ಶೀರ್ಷಿಕೆಯ ವರದಿಯಲ್ಲಿ, ಜನತಾ ದಳ (ಜಾತ್ಯತೀತ) ಪಕ್ಷದ ನಾಯಕ ಹೆಚ್‌ಡಿ ದೇವೇಗೌಡರು ತಮ್ಮ ಪಕ್ಷದ ಉಳಿವಿಗಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಭಾನುವಾರ ಮಂಡ್ಯದ ಕಂಗೇರಿಯಲ್ಲಿ ನಡೆದ ಶಿಕ್ಷಕರ ಕೃತಜ್ಞತಾ ಸಮಾವೇಶದಲ್ಲಿ ಸಿಎಂ ಮಾತನಾಡಿದರು” ಎಂದು ಬರೆಯಲಾಗಿದೆ.

ವರದಿಯ ಲಿಂಕ್ ಇಲ್ಲಿದೆ 

ಮಾರ್ಚ್‌ 11ರಂದು ಎಕ್ಸ್‌ನಲ್ಲಿ ಸರಣಿ ಪೋಸ್ಟ್ ಹಾಕಿದ್ದ ಸಿಎಂ ಸಿದ್ದರಾಯ್ಯ “ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಜನಿಸುತ್ತೇನೆ ಎಂದಿದ್ದ ಮಾಜಿ ಪ್ರಧಾನಿ ದೇವೇಗೌಡರು ಈಗ ಬಿಜೆಪಿ ಜೊತೆ ಸೇರಿಕೊಂಡು ಬಿಜೆಪಿ ಮತ್ತು ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳುತ್ತಿದ್ದಾರೆ. ದ್ವಂದ್ವ ಹೇಳಿಕೆ ನೀಡುವ ಇವರನ್ನು ಹೇಗೆ ನಂಬುತ್ತೀರಿ? ಪ್ರಶ್ನಿಸಿದ್ದರು.

ಮೊನ್ನೆ ನಡೆದ ವಿಧಾನ‌ಪರಿಷತ್ ಚುನಾವಣೆಯು ನಾಳೆ ಬರಲಿರುವ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದು ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದರು. ಆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ದೋಸ್ತಿಯನ್ನು ಸೋಲಿಸಿ ಕಾಂಗ್ರೆಸ್ ಪಕ್ಷದಿಂದ ಪುಟ್ಟಣ್ಣ ಜಯಭೇರಿ ಬಾರಿಸಿದ್ದಾರೆ. ಹೀಗಾಗಿ ಕುಮಾರಸ್ವಾಮಿಯವರ ಮಾತಿನಂತೆ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಸೋಲುತ್ತದೆ. ಕಾಂಗ್ರೆಸ್ ಗೆಲ್ಲುತ್ತದೆ ಎಂದು ಬರೆದುಕೊಂಡಿದ್ದರು.

ಲಭ್ಯವಿರುವ ಎಲ್ಲಾ ಮೂಲಗಳನ್ನು ಪರಿಶೀಲಿಸಿ ನೋಡಿದಾಗ, ದೇವೇಗೌಡರು ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಜನಿಸಲು ಬಯಸುತ್ತೇನೆ ಎಂದು ಹೇಳಿದ್ದರು ಎಂಬುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆಯೇ ಹೊರತು, ನಾನು ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಜನಿಸಲು ಬಯಸುತ್ತೇನೆ ಎಂದು ಹೇಳಿಲ್ಲ. ಸಿಎಂ ಭಾಷಣವನ್ನು ಎಡಿಟ್ ಮಾಡಿ ತಪ್ಪಾಗಿ ಹಂಚುತ್ತಿರುವುದು ಈ ಮೂಲಕ ಖಚಿತವಾಗಿದೆ.

ಇದನ್ನೂ ಓದಿ : Fact Check: ನಮಾಝ್ ಮಾಡಲು ಬಂದ ವ್ಯಕ್ತಿ ಬುರ್ಖಾ ಧರಿಸಿದ್ದ ಎಂದು ಸುಳ್ಳು ಸುದ್ದಿ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...