Homeಕರ್ನಾಟಕರಂಗೀಲಾ ರಾಘುಸ್ವಾಮಿ ಚೇಲಾಗಳ ಕಿತಾಪತಿ, ಗಿರಿನಗರ ಪೊಲೀಸರ ಹುಚ್ಚಾಟದಿಂದ ಸತ್ತವರ ಮೇಲೆ ದಾಖಲಾಯ್ತು ಎಫ್‌ಐಆರ್‌

ರಂಗೀಲಾ ರಾಘುಸ್ವಾಮಿ ಚೇಲಾಗಳ ಕಿತಾಪತಿ, ಗಿರಿನಗರ ಪೊಲೀಸರ ಹುಚ್ಚಾಟದಿಂದ ಸತ್ತವರ ಮೇಲೆ ದಾಖಲಾಯ್ತು ಎಫ್‌ಐಆರ್‌

- Advertisement -
- Advertisement -

“ಅತ್ಯಾಚಾರ ಆರೋಪದ ವಿಷಯಕ್ಕೆ ಲೋಕಪ್ರಸಿದ್ಧನಾಗಿರುವ ರಾಮಚಂದ್ರಪುರ ಮಠದ ಸ್ವಾಮಿ ರಾಘು ಯಾನೆ ರಾಘವೇಶ್ವರ ಭಾರತಿ ಬುರ್ನಾಸ್ ಭಾನ್ಗಡಿಗಳಿಂದು ಸುದ್ದಿಯಾಗುತ್ತಲೇ ಇದ್ದಾನೆ. ಅದೆಂದೋ ಜೈಲುಪಾಲಾಗಬೇಕಿದ್ದ ಈ ಧರ್ಮಭ್ರಷ್ಟ ನ್ಯಾಯ ಆಡಳಿತ ವ್ಯವಸ್ಥೆಗಳನ್ನೇ ದಿಕ್ಕುತಪ್ಪಿಸಿ ತಿಂದುಂಡು ಬೋಗಸ್ ಪ್ರವಚನ ಬಿಗಿಯುತ್ತ ಲೌಕಿಕಾನಂದ ಅನುಭವಿಸುತ್ತಿದ್ದಾನೆ ಎಂಬ ಆರೋಪಗಳಿವೆ. ಕನ್ಯಾದೀಕ್ಷೆ, ಏಕಾಂತ ಸಂದರ್ಶನ, ಹೆಂಗಸರ ಹಣೆಗೆ ಕುಂಕುಮವಿಟ್ಟು ಮೈಸವರಿ ಆಶೀರ್ವಾದ ಮಾಡುವುದೇ ಮುಂತಾದ ಲೈಂಗಿಕ ಕುಚೇಷ್ಟೆಗಳಿಂದ ಹವ್ಯಕರ ಮಠವನ್ನು ತನ್ನ ಕಾಮಕಾಂಡದ ಅಡ್ಡೆ ಮಾಡಿಕೊಂಡಿದ್ದಾನೆ” ಎಂದು ಮೊಟ್ಟಮೊದಲು ಆರೋಪ ಮಾಡಿದ್ದು ಕುಮಟಾದ ಪ್ರಸಿದ್ಧ ವೈದ್ಯರೂ, ಸಾಮಾಜಿಕ ಮುಖಂಡರೂ ಹವ್ಯಕ ಹೀರೇಮಾಣಿಗಳೂ ಆಗಿದ್ದ ಡಾ.ಟಿ.ಟಿ.ಹೆಗಡೆ!

ಡಾ.ಹೆಗಡೆಯನ್ನು ರಾಘವ ಮಠ ಮಾಫಿಯಾ ಒಂದೆರಡು ರೀತಿಯಲ್ಲಿ ಕಾಡಲಿಲ್ಲ. ಹಲವು ಬಾರಿ ಅವರ ಮೇಲೆ ಭೀಭತ್ಸ ಹಲ್ಲೆಯಾಗಿತ್ತು. ಪೊಲೀಸರನ್ನು ಛೂ ಬಿಟ್ಟು ಕಾಡಿದ್ದರು. ಕೇಸುಗಳನ್ನು ಹಾಕಿಸಿದ್ದರು. ರಾಘುನ ಪೂರ್ವಾಶ್ರಮದ ಸಹೋದರಿ ಗ್ಯಾಂಗು ಕಟ್ಟಿಕೊಂಡು ಪೊರಕೆಯಿಂದ ಹೊಡೆಯಲು ಹೋಗಿ ತಮ್ಮನ ಕಲ್ಯಾಣ ಗುಣಗಳ ಅನಾವರಣವೂ ಮಾಡಿದ್ದಳು. ಎಂಬತ್ತರ ಗಡಿದಾಟಿದ್ದ ಡಾ.ಹೆಗಡೆ ಹಲ್ಲೆಯಿಂದ ಆಸ್ಪತ್ರೆಯಲ್ಲಿ ಕಳೆಯುವಂತಾಗಿತ್ತು. ಇಷ್ಟಾದರೂ ಹೆಗಡೆ ಹೆದರಲಿಲ್ಲ. ತ್ರಿಕಾಲ ಪೂಜೆ ಮಾಡದೆ ಹಣ-ಹೆಣ್ಣಿನ ವಾಸನೆಗೆ ಬಿದ್ದಿರುವ ರಾಘು ಗುರು ಪೀಠದಲ್ಲಿರಲು ಅನರ್ಹನೆಂದು ತನ್ನ ಕೊನೆಗಾಲದತನಕ ಹೇಳುತ್ತಲೇ ಇದ್ದರು. ರಾಘುನ ಪೀಠೋಚ್ಛಾಟನೆ ಮಾಡಲು ನ್ಯಾಯಾಲಯಕ್ಕೂ ಹೋಗಿದ್ದರು.

ಡಾ.ಹೆಗಡೆಯವರು ಸಾಮಾಜಿಕ ಕಳಕಳಿ, ಧಾರ್ಮಿಕ ಪಾಂಡಿತ್ಯ, ನೈತಿಕ ನಡವಳಿಕೆಯಿಂದ ಹವ್ಯಕ ಸಮುದಾಯದಲ್ಲಿ ಪ್ರೀತಿ-ಗೌರವ ಸಂಪಾದಿಸಿದ್ದರು. ಸ್ತ್ರೀ ಸಖ್ಯಾ ಸುಖ ಸಂತೃಪ್ತ “ಸನ್ಯಾಸಿ” ರಾಘುನ ಕಂಡರೆ ಹವ್ಯಕರು ಮೂಗು ಮುರಿಯುತ್ತಿದ್ದರೆ ಟಿ.ಟಿ.ಹೆಗಡೆಯನ್ನು ನೋಡಿದಾಕ್ಷಣ ತಲೆಬಾಗಿ ನಮಿಸುತ್ತಿದ್ದರು. ಆದರೆ ಹವ್ಯಕರು ರಾಘು ಗ್ಯಾಂಗಿನ ಬಹಿಷ್ಕಾರ, ಹಲ್ಲೆ, ಜೀವನೋಪಾಯ ವ್ಯವಹಾರಕ್ಕೆ ಕಲ್ಲುಹಾಕುವ ಕ್ರೌರ್ಯಕ್ಕೆ ಹೆದರಿ ಟಿ.ಟಿ.ಹೆಗಡೆಯ ಹೋರಾಟಕ್ಕೆ ಬೆಂಬಲ ನೀಡಲಿಲ್ಲ. ಇದಕ್ಕೆಲ್ಲಾ ಬೇಸರಿಸದೆ ಟಿ.ಟಿ.ಹೆಗಡೆ “ಜಾಣ” ಹವ್ಯಕರ ಕಣ್ಣಿನ ಪೊರೆ ತೆರೆಯಲು ಪ್ರಯತ್ನ ಮಾಡುತ್ತಲೇ ಇದ್ದರು ಎಂಬುದು‌ ಅವರನ್ನು ಬಲ್ಲವರೆಲ್ಲರೂ ಹೇಳುವ ಮಾತು.

ಮಠಬಾನಿಗಳನ್ನು ಎದುರುಹಾಕಿಕೊಂಡಿದ್ದ ಟಿ.ಟಿ.ಹೆಗಡೆಯವರು ಸುಮಾರು ಎರಡು ತಿಂಗಳ ಹಿಂದೆ ವಯೋಸಹಜ ಸಾವು ಕಂಡಿದ್ದಾರೆ. ಲಗಾಯ್ತಿನಿಂದಲೂ ಅನಾಚಾರಿ ರಾಘುನ ಚೇಲಾಗಿರಿ ಮಾಡುತ್ತಲೇ ಬಂದಿರುವ ಬೆಂಗಳೂರಿನ ಗಿರಿನಗರ ಪೊಲೀಸ್‌ ಅಧಿಕಾರಿಗಳು ದಿವಂಗತ ಟಿ.ಟಿ.ಹೆಗಡೆ ಮೇಲೆ ಕೇಸು ಜಡಿದಿದ್ದಾರೆ. ರಾಘುನ ವಿರುದ್ಧ ಅವಹೇಳನಕಾರಿ ಬರಹವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಚುರಪಡಿಸುತ್ತಿದ್ದಾರೆಂಬ ಆರೋಪ ಹೊರಿಸಿದ್ದಾರೆ. ಪಾಪಾ ಟಿ.ಟಿ ಹೆಗಡೆಯವರು ಮರಣಹೊಂದಿ ಎರಡು ತಿಂಗಳಾದರೂ ಸಹ ಅವರನ್ನು ಬಿಡುತ್ತಿಲ್ಲ ಮಠಬಾನಿಗಳು. ಮಠದ ಸಿಇಓ ಕೆ.ಜಿ.ಭಟ್ಟ ಕೊಟ್ಟ ಕಂಪ್ಲೇಂಟಿನ ಮೇಲೆ ಎಫ್‌ಐಆರ್‌ ಕೂಡ ಹಾಕಿರುವ ಪೆದ್ದು ಪೊಲೀಸರು ಅದನ್ನು ನ್ಯಾಯಾಲಯಕ್ಕೂ ಸಲ್ಲಿಸಿದ್ದಾರೆ. ಎನ್‌ಸಿಆರ್‌ 207/19 ನಂಬರಿನ ಎಫ್‌ಐಆರ್ ಅನ್ನು 25-09-2019 ರಂದು ಕೋರ್ಟಿಗೆ ಸಲ್ಲಿಸಿರುವ ಪೊಲೀಸ್ ಅಧಿಕಾರಿಗಳು ಮತ್ತು ಮಠಬಾನಿಗಳ ಹುಚ್ಚಾಟಕ್ಕೆ ಜನ ಬಿದ್ದು ಬಿದ್ದು ನಗುತ್ತಿದ್ದಾರೆ!!

ಈ ಗಿರಿನಗರ ಪೊಲೀಸರು ಹಿಂದೆ ರಾಘುನ ವಿರುದ್ಧ ಅತ್ಯಾಚಾರ ಸಂತ್ರಸ್ತೆಯು ದೂರು ಕೊಡಲು ಹೋದಾಗಲೂ ಸತಾಯಿಸಿದ್ದರು. ರಾಘುನ ರಗಳೆ-ರಾದ್ಧಾಂತದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚಿಸಿದ್ದವರಿಗೆ, ಅಲ್ಲಲ್ಲಿ ಮಾತಾಡಿದವರಿಗೆಲ್ಲಾ ಈ ಗಿರಿನಗರ ಪೊಲೀಸರು ಹಿಂಸೆ ನೀಡಿದ್ದ ದೊಡ್ಡ ಪಟ್ಟಿಯೇ ಇದೆ. ಸತ್ತವರನ್ನು ಬಿಡದೇ ಕಾಡಿ ತೆವಲು ತೀರಿಸಿಕೊಳ್ಳುವ ಸ್ಯಾಡಿಸ್ಟ್ ರಾಘುನ ಪೀಠಕ್ಕೆ ಬಲಿಯಾದ ಪುತ್ತೂರಿನ ಶ್ಯಾಮಶಾಸ್ತ್ರಿಯ ಕುಟುಂಬ ಪಟ್ಟ ಕಷ್ಟ ಹೇಳತೀರದು. ಈಗ ದಿವಂಗತ ಟಿ.ಟಿ.ಹೆಗಡೆ ಮೇಲೆ ಮಸಲತ್ತಿನ ಎಫ್‌ಐಆರ್‌ ಆಗಿದೆ. ಹವ್ಯಕರಿಗೇಕೆ ನೈತಿಕ ಸಾತ್ವಿಕ ಸಿಟ್ಟು ಬರುತ್ತಿಲ್ಲ? ಹವ್ಯಕ ಕುಲಘಾತುಕ ರಾಘುನನ್ನ ಆ ಸಮುದಾಯ ಇನ್ನೆಷ್ಟು ದಿನ ಸಹಿಸಿಕೊಳ್ಳುತ್ತದೋ ಎಂಬ ಪ್ರಶ್ನೆ ಅವರನ್ನು ವಿರೋಧಿಸುತ್ತಿರುವ ಹವ್ಯಕರದ್ದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...