Homeಮುಖಪುಟಮನುಷ್ಯ ಜೀವಕ್ಕೆ ಅಪಾಯ: 23 "ಕ್ರೂರ" ನಾಯಿ ತಳಿಗಳ ಆಮದು, ಮಾರಾಟ, ಭಾರತದಲ್ಲಿ ನಿಷೇಧ

ಮನುಷ್ಯ ಜೀವಕ್ಕೆ ಅಪಾಯ: 23 “ಕ್ರೂರ” ನಾಯಿ ತಳಿಗಳ ಆಮದು, ಮಾರಾಟ, ಭಾರತದಲ್ಲಿ ನಿಷೇಧ

- Advertisement -
- Advertisement -

ದೇಶಾದ್ಯಂತ ಹೆಚ್ಚುತ್ತಿರುವ ನಾಯಿ ಕಡಿತದ ಪ್ರಕರಣಗಳ ಮಧ್ಯೆ, “ಮನುಷ್ಯನ ಜೀವಕ್ಕೆ ಅಪಾಯ” ಎಂದು ಪರಿಗಣಿಸಲಾದ 23 “ಕ್ರೂರ” ನಾಯಿ ತಳಿಗಳ ಆಮದು, ಮಾರಾಟ ಮತ್ತು ಸಂತಾನೋತ್ಪತ್ತಿಯ ಮೇಲೆ ಕೇಂದ್ರವು ನಿಷೇಧ ಹೇರಿದೆ.

ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಜಂಟಿ ಕಾರ್ಯದರ್ಶಿ ಡಾ.ಒ.ಪಿ.ಚೌಧರಿ ಅವರು ನಿಷೇಧ ಹೇರಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವನ್ನು ಕಳುಹಿಸಿದ್ದಾರೆ.

ನಿಷೇಧಿತ ನಾಯಿ ತಳಿಗಳ ಪಟ್ಟಿ: ಪಿಟ್‌ಬುಲ್ ಟೆರಿಯರ್, ಟೋಸಾ ಇನು, ಅಮೇರಿಕನ್ ಸ್ಟಾಫರ್ಡ್‌ಶೈರ್ ಟೆರಿಯರ್, ಫಿಲಾ ಬ್ರೆಸಿಲಿರೊ, ಡೊಗೊ ಅರ್ಜೆಂಟಿನೋ, ಅಮೇರಿಕನ್ ಬುಲ್‌ಡಾಗ್, ಬೋರ್‌ಬೋಲ್, ಕಂಗಲ್, ರಷ್ಯನ್ ಶೆಫರ್ಡ್, ಟೊರ್ನ್‌ಜಾಕ್, ಸರ್ಪ್ಲಾನಿನಾಕ್, ಜಪಾನೀಸ್ ಟೋಸಾ ಮತ್ತು ಅಕಿಟಾ, ಮಾಸ್ಟಿಫ್ಸ್, ರಾಟ್‌ವೀಲರ್, ಟೆರಿಯರ್‌ಗಳು ರಿಡ್ಜ್ಬ್ಯಾಕ್, ವುಲ್ಫ್ ಡಾಗ್ಸ್, ಕೆನರಿಯೊ, ಅಕ್ಬಾಶ್ ನಾಯಿ, ಮಾಸ್ಕೋ ಗಾರ್ಡ್ ಡಾಗ್, ಕೇನ್ ಕೊರ್ಸೊ, ಮತ್ತು ಸಾಮಾನ್ಯವಾಗಿ ಬ್ಯಾನ್ ಡಾಗ್‌ಗೆ ಭಾರತದಲ್ಲಿ ನಿಷೇಧವನ್ನು ವಿಧಿಸಲಾಗಿದೆ.

ಪಶು ಸಂಗೋಪನಾ ಆಯುಕ್ತರ ಅಧ್ಯಕ್ಷತೆಯಲ್ಲಿ ರಚಿಸಲಾದ ತಜ್ಞರ ಸಮಿತಿಯು ಈ ಮೇಲೆ ಉಲ್ಲೇಖಿಸಿದ ನಾಯಿ ತಳಿಗಳ ಆಮದನ್ನು ನಿಷೇಧಿಸಲು ಶಿಫಾರಸು ಮಾಡಿದೆ. ಶ್ವಾನ ಸಾಕಣೆ ಮತ್ತು ಮಾರುಕಟ್ಟೆ ನಿಯಮಗಳು 2017 ಮತ್ತು ಪೆಟ್ ಶಾಪ್ ನಿಯಮಗಳು 2018ರ ಜಾರಿಗಾಗಿ ಕೇಂದ್ರ ಸರ್ಕಾರವು ಇದೇ ವೇಳೆ ಸೂಚಿಸಿದೆ.

ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (PETA) ಇಂಡಿಯಾದಿಂದ ಮನವಿ ಮಾಡಿದ ನಂತರ ಕೇಂದ್ರದ ಈ ಕ್ರಮವು ಬಂದಿದೆ. ಈ ಬಗ್ಗೆ ಪೇಟಾ ದೆಹಲಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿಯನ್ನೂ ಸಲ್ಲಿಸಿದೆ. ತನ್ನ ಅರ್ಜಿಯಲ್ಲಿ PETA, ಈ ಆದೇಶವು ಮಾನವರು ಮತ್ತು ನಾಯಿಗಳೆರಡಕ್ಕೂ ರಕ್ಷಣೆಯನ್ನು ಒದಗಿಸುವಲ್ಲಿ ಪ್ರಮುಖವಾಗಿದೆ ಎಂದು ತಿಳಿದು ಬಂದಿದೆ.

ಕಳೆದ ಕೆಲವು ತಿಂಗಳು ದೇಶಾದ್ಯಂತ ನಾಯಿ ಕಡಿತದಿಂದ ಹಲವಾರು ಸಾವುಗಳು ಸಂಭವಿಸಿವೆ. ಮಂಗಳವಾರ, ಹಿಮಾಚಲದ ಬಿಲಾಸ್‌ಪುರ ಪ್ರದೇಶದಲ್ಲಿ ಬೀದಿ ನಾಯಿಯ ದಾಳಿಯಿಂದ 20 ಜನರು ಗಾಯಗೊಂಡಿದ್ದರು. ದೆಹಲಿಯಲ್ಲಿ ಪಿಟ್‌ಬುಲ್‌ ದಾಳಿಯಿಂದ ಪುಟ್ಟ ಮಗು 17 ದಿನಗಳ ಕಾಲ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ವಾರ ಗಾಝಿಯಾಬಾದ್‌ನಲ್ಲಿ ಪಿಟ್ ಬುಲ್ ದಾಳಿಗೆ 10 ವರ್ಷದ ಇನ್ನೊಂದು ಮಗು ತೀವ್ರವಾಗಿ ಗಾಯಗೊಂಡಿತ್ತು.

ಇದನ್ನು ಓದಿ: ಭಾರತದಲ್ಲಿ ಸಿಎಎ ಜಾರಿ: ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆ, ಅಮೆರಿಕ

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...