Homeಮುಖಪುಟಕೇರಳ: ಜಡ್ಜ್‌ ನೇಮಕಾತಿಗೆ ಆಕ್ಷೇಪ; ಕೇಂದ್ರದ ದ್ವಿಮುಖ ನೀತಿ ಗಮನಿಸಿದ ಕೋರ್ಟ್‌

ಕೇರಳ: ಜಡ್ಜ್‌ ನೇಮಕಾತಿಗೆ ಆಕ್ಷೇಪ; ಕೇಂದ್ರದ ದ್ವಿಮುಖ ನೀತಿ ಗಮನಿಸಿದ ಕೋರ್ಟ್‌

- Advertisement -
- Advertisement -

ಕೇರಳ ಹೈಕೋರ್ಟ್ ನ್ಯಾಯಮೂರ್ತಿಯಾಗಿ, ನ್ಯಾಯವಾದಿ ಮನೋಜ್ ಪುಲಂಬಿ ಮಾಧವನ್ ಅವರ ಪದೋನ್ನತಿಯನ್ನು ಆಕ್ಷೇಪಿಸಿದ ಕೇಂದ್ರ ಸರಕಾರದ ಆಕ್ಷೇಪಣೆಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದ್ದು, ಬಿಜೆಪಿಯ ಮಹಿಳಾ ನಾಯಕಿ ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ(ಹೆಸರನ್ನು ಉಲ್ಲೇಖಿಸದೆ ಪ್ರಸ್ತಾಪಿಸಿದ್ದ ಕೋರ್ಟ್‌) ಅವರನ್ನು ಜಡ್ಜ್‌ ಆಗಿ ನೇಮಿಸಿರುವುದನ್ನು ಕೋರ್ಟ್‌ ಉಲ್ಲೇಖಿಸಿದ್ದು, ಕೇಂದ್ರದ ದ್ವಿಮುಖ ನೀತಿಯನ್ನು ಗಮನಿಸಿದೆ.

ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ಪೀಠವು ಈ ಕುರಿತ ಅರ್ಜಿಯನ್ನು ವಿಚಾರಣೆ ನಡೆಸಿ ಕೇಂದ್ರದ ಆಕ್ಷೇಪಣೆಯನ್ನು ತಿರಸ್ಕರಿಸಿದೆ. ಪೀಠದಲ್ಲಿ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಬಿ.ಆರ್.ಗವಾಯಿ ಅವರಿದ್ದರು.

ಮಾಧವನ್ ಅವರು ಸಿಪಿಐ(ಎಂ) ಸಹಾನುಭೂತಿ ಹೊಂದಿರುವವರು ಮತ್ತು 2010 ಮತ್ತು 2016-2021ರಲ್ಲಿ ಎಲ್‌ಡಿಎಫ್ ಸರ್ಕಾರದಿಂದ ಸರ್ಕಾರಿ ವಕೀಲರಾಗಿ ನೇಮಕಗೊಂಡಿದ್ದರಿಂದ ಮಾಧವನ್ ನ್ಯಾಯಾಧೀಶರಾಗಲು ಯೋಗ್ಯರಲ್ಲ ಎಂದು ಸರ್ಕಾರ ಹೇಳಿಕೊಂಡಿತ್ತು.

ಡೆಕ್ಕನ್ ಹೆರಾಲ್ಡ್ ಪ್ರಕಾರ, ಸುಪ್ರೀಂಕೋರ್ಟ್‌ ಕೊಲಿಜಿಯಂ ಸರ್ಕಾರದ ಕಾರಣಗಳನ್ನು ಅಸ್ಪಷ್ಟ ಮತ್ತು ಆಧಾರ ರಹಿತ ಎಂದು ಕರೆದಿದೆ. ಅಭ್ಯರ್ಥಿಯು ರಾಜಕೀಯ ಹಿನ್ನೆಲೆಯನ್ನು ಹೊಂದಿದ್ದಾನೆ ಎಂಬ ಅಂಶವು ಎಲ್ಲಾ ಸಂದರ್ಭಗಳಲ್ಲಿ ಸಾಕಷ್ಟು ಕಾರಣವಾಗಿರುವುದಿಲ್ಲ ಎಂದು ಕೊಲಿಜಿಯಂ ಹೇಳಿದೆ.

2023ರಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡ ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ ಅವರ ವಿವಾದಾತ್ಮಕ ಉನ್ನತಿಯನ್ನು ಸಹ ಕೊಲಿಜಿಯಂ ಉಲ್ಲೇಖಿಸಿದೆ. ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ವಿವಾದಾತ್ಮಕ ಹೇಳಿಕೆಗಳು ಮತ್ತು ಭಾರತೀಯ ಜನತಾ ಪಕ್ಷದೊಂದಿಗೆ ಅವರ ಆಪಾದಿತ ಸಂಬಂಧಗಳಿಗಾಗಿ ಗೌರಿ ಟೀಕೆಗೆ ಗುರಿಯಾಗಿದ್ದರು.

ಕೋರ್ಟ್‌ ವಿಚಾರಣೆಯ ವೇಳೆ, ಉದಾಹರಣೆಗೆ ಇತ್ತೀಚೆಗೆ ವಕೀಲರೋರ್ವರನ್ನು ಉಚ್ಚ ನ್ಯಾಯಾಲಯದ ನ್ಯಾಯಾಧೀಶರನ್ನಾಗಿ ನೇಮಿಸಲಾಗಿದೆ. ಅವರು ಪದೋನ್ನತಿಯ ಮೊದಲು ರಾಜಕೀಯ ಪಕ್ಷದ ಪದಾಧಿಕಾರಿಯಾಗಿದ್ದರು ಎಂಬುವುದನ್ನು ಸುಪ್ರೀಂಕೋರ್ಟ್‌ ಕೊಲಿಜಿಯಂ ಹೇಳಿದೆ.

ಮಾಧವನ್ ಪರಿಶಿಷ್ಟ ಜಾತಿಗೆ ಸೇರಿದವರು. ಅವರ ನೇಮಕಾತಿಗೆ ಆಕ್ಷೇಪವನ್ನು ಸಲ್ಲಿಸಲು ಮಾನ್ಯವಾದ ಆಧಾರವಿಲ್ಲ ಎಂದು ಕೋರ್ಟ್‌ ಹೇಳಿದೆ. ಅಭ್ಯರ್ಥಿಯನ್ನು ಈ ಹಿಂದೆ ಸರ್ಕಾರಿ ವಕೀಲರಾಗಿ ನೇಮಕ ಮಾಡಿರುವುದಿಂದ ಕಾನೂನಿನ ವಿವಿಧ ವಿಭಾಗಗಳಲ್ಲಿನ ಪ್ರಕರಣ ನಿರ್ವಹಿಸುವಲ್ಲಿ ಅವರು ಸಾಕಷ್ಟು ಅನುಭವವನ್ನು ಪಡೆದಿರುವುದನ್ನು ಸೂಚಿಸುತ್ತದೆ. ಅಭ್ಯರ್ಥಿಯು ಹೈಕೋರ್ಟಿನ ನ್ಯಾಯಾಧೀಶರಾಗಿ ನೇಮಕಗೊಳ್ಳಲು ಸಮರ್ಥರಾಗಿದ್ದಾರೆ ಎಂದು ಕೋರ್ಟ್‌ ಹೇಳಿದೆ.

ಇದಲ್ಲದೆ ವಕೀಲರಾದ ಅಬ್ದುಲ್ ಹಕೀಮ್, ಮುಲ್ಲಪ್ಪಲ್ಲಿ ಅಬ್ದುಲ್ ಅಜೀಜ್, ಶ್ಯಾಮ್ ಕುಮಾರ್ ವಡಕ್ಕೆ ಮುದವಕ್ಕಟ್, ಹರಿಶಂಕರ್ ವಿಜಯನ್ ಮೆನನ್, ಮನು ಶ್ರೀಧರನ್ ನಾಯರ್ ಮತ್ತು ಈಶ್ವರನ್ ಸುಬ್ರಮಣಿ ಅವರಿಗೆ ಕೇರಳ ಹೈಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲು ಕೊಲಿಜಿಯಂ ಶಿಫಾರಸು ಮಾಡಿದೆ.

ಏನಿದು ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ ಪ್ರಕರಣ:

ಬಿಜೆಪಿ ನಾಯಕಿ, ವಕೀಲೆ ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ ಅವರನ್ನು ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ಈ ಹಿಂದೆ ನೇಮಿಸಲಾಗಿತ್ತು. ಅಲ್ಪಸಂಖ್ಯಾತ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿರುವ ಅವರನ್ನು ನ್ಯಾಯಮೂರ್ತಿಯನ್ನಾಗಿ ನೇಮಿಸಿರುವುದು ಟೀಕೆಗೆ ಗುರಿಯಾಗಿತ್ತು.

ಗೌರಿ ಅವರು ಭಾರತೀಯ ಜನತಾ ಪಕ್ಷದ ಸದಸ್ಯೆಯಾಗಿದ್ದಾರೆ. ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ಹಲವು ಬಾರಿ ನೀಡಿದ್ದರು. ಅವರ ಹೆಸರನ್ನು ಶಿಫಾರಸು ಮಾಡಿದ ಕೊಲಿಜಿಯಂ ಕ್ರಮವು ಸರಿಯಲ್ಲ ಎಂದು ವಕೀಲರು ಮತ್ತು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದರು.

ಬಿಜೆಪಿಯ ಸೈದ್ಧಾಂತಿಕ ಪೋಷಕ, ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಅತ್ಯಾಪ್ತವಾಗಿದ್ದ ವಿಕ್ಟೋರಿಯಾ ಗೌರಿ, ಆರೆಸ್ಸೆಸ್‌ನ ಆಂಗ್ಲ ಭಾಷೆಯ ಮುಖವಾಣಿ ಆರ್ಗನೈಸರ್‌ನಲ್ಲಿ ಲೇಖನವನ್ನು ಬರೆಯುತ್ತಿದ್ದರು.

ಇದನ್ನು ಓದಿ: ಗೋಹತ್ಯೆ ವದಂತಿಯಿಂದ ಮುಸ್ಲಿಂ ವ್ಯಾಪಾರಿಯ ಗುಂಪು ಹತ್ಯೆ: ಪೊಲೀಸರು ಕೂಡ ತಪ್ಪಿತಸ್ಥರೆಂದು ಕೋರ್ಟ್‌ ಹೇಳಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...