Homeಮುಖಪುಟಕೇಂದ್ರ ಚುನಾವಣಾ ಆಯುಕ್ತರಾಗಿ ಜ್ಞಾನೇಶ್‌ ಕುಮಾರ್‌, ಸುಖಬೀರ್‌ ಸಂಧು ಆಯ್ಕೆ

ಕೇಂದ್ರ ಚುನಾವಣಾ ಆಯುಕ್ತರಾಗಿ ಜ್ಞಾನೇಶ್‌ ಕುಮಾರ್‌, ಸುಖಬೀರ್‌ ಸಂಧು ಆಯ್ಕೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ತ್ರಿಸದಸ್ಯ ಸಮಿತಿಯು ಜ್ಞಾನೇಶ್‌ ಕುಮಾರ್‌ ಮತ್ತು ಸುಖಬೀರ್‌ ಸಂಧು ಅವರನ್ನು ಚುನಾವಣಾ ಆಯುಕ್ತರನ್ನಾಗಿ ಆಯ್ಕೆ ಮಾಡಿದೆ. ಅರುಣ್‌ ಗೋಯಲ್‌ ಅವರ ರಾಜೀನಾಮೆ ಬಳಿಕ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗ ಈ ಬೆಳವಣಿಗೆ ನಡೆದಿದೆ.

ಭಾರತೀಯ ಚುನಾವಣಾ ಆಯೋಗದ ಉನ್ನತ ಸಮಿತಿಯಲ್ಲಿ ಖಾಲಿ ಇದ್ದ ಎರಡು ಹುದ್ದೆಗಳಿಗೆ ಸುಖಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಇಂದು ಮಧ್ಯಾಹ್ನ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಗೆ ಚುನಾವಣಾ ಆಯೋಗವು ತಯಾರಿ ನಡೆಸುತ್ತಿರುವಾಗ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಸಹಾಯ ಮಾಡಲು ಇಬ್ಬರು ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ಚೌಧರಿ ಭಾಗವಹಿಸಿದ್ದರು. ಪ್ರಧಾನಿ ಮತ್ತು ಚೌಧರಿ ಅವರಲ್ಲದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಭೆಯಲ್ಲಿ ಭಾಗವಹಿಸಿದ್ದರು.

ಭಾರತದ ಮುಖ್ಯ ನ್ಯಾಯಾಧೀಶರ ಬದಲಿಗೆ ಕೇಂದ್ರ ಸಚಿವರನ್ನು ಆಯ್ಕೆ ಸಮಿತಿಯಲ್ಲಿ ನೇಮಿಸಿದ ಕಾನೂನಿನ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್‌ ಚೌಧರಿ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದು, ಭಾರತದ ಮುಖ್ಯ ನ್ಯಾಯಮೂರ್ತಿ ಈ ಸಮಿತಿಯಲ್ಲಿ ಇರಬೇಕಿತ್ತು, ಕಳೆದ ವರ್ಷ ತಂದ ಕಾನೂನು ಸಭೆಯನ್ನು ಕೇವಲ ‘ಔಪಚಾರಿಕತೆ’ಗೆ ಇಳಿಸಿದೆ. ಪ್ಯಾನಲ್‌ನಲ್ಲಿ ಸರ್ಕಾರವು ಬಹುಮತದಲ್ಲಿದೆ, ಅವರು ಬಯಸಿದ್ದು ನಡೆಯುತ್ತದೆ ಎಂದು ಹೇಳಿದ್ದಾರೆ.

ನಿನ್ನೆ ರಾತ್ರಿ ಪರಿಶೀಲನೆಗೆ 212 ಹೆಸರುಗಳನ್ನು ನೀಡಲಾಗಿದೆ. ನಾನು ನಿನ್ನೆ ರಾತ್ರಿ ದೆಹಲಿಗೆ ತಲುಪಿದೆ ಮತ್ತು ಸಭೆ ಇಂದು ಮಧ್ಯಾಹ್ನವಾಗಿತ್ತು. ನನಗೆ 212 ಹೆಸರುಗಳನ್ನು ನೀಡಲಾಯಿತು, ಯಾರಾದರೂ ಒಂದು ದಿನದಲ್ಲಿ ಇಷ್ಟು ಅಭ್ಯರ್ಥಿಗಳನ್ನು ಹೇಗೆ ಪರೀಕ್ಷಿಸುತ್ತಾರೆ? ನಂತರ, ಸಭೆಯ ಮೊದಲು ನನಗೆ 6 ಶಾರ್ಟ್‌ಲಿಸ್ಟ್ ಹೆಸರುಗಳನ್ನು ನೀಡಲಾಯಿತು. ಬಹುಮತವು ಅವರ ಬಳಿ ಇದೆ, ಆದ್ದರಿಂದ ಅವರು ಬಯಸಿದ ಅಭ್ಯರ್ಥಿಗಳನ್ನು ಅವರು ಆಯ್ಕೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಇದೇ ವೇಳೆ ಆಯ್ಕೆಯ ಕಾರ್ಯವಿಧಾನವನ್ನು ಪ್ರಶ್ನಿಸಿ ಭಿನ್ನಾಭಿಪ್ರಾಯ ಟಿಪ್ಪಣಿ ನೀಡಿರುವುದಾಗಿ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ಫೆಬ್ರವರಿ 14ರಂದು ಚುನಾವಣಾ ಆಯುಕ್ತ ಸ್ಥಾನದಿಂದ ಪಾಂಡೆ ನಿವೃತ್ತರಾಗಿದ್ದರು. ಆದರೆ ಇದಾದ ಬಳಿಕ ಅರುಣ್‌ ಗೋಯಲ್‌ ಚುನಾವಣಾ ಆಯುಕ್ತರ ಸ್ಥಾನಕ್ಕೆ ದಿಡೀರ್‌ ರಾಜೀನಾಮೆ ನೀಡಿದ್ದರು. ಗೋಯೆಲ್ ಅವರ ಅನಿರೀಕ್ಷಿತ ರಾಜೀನಾಮೆ ಬಳಿಕ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ಆಯೋಗದ ಏಕೈಕ ಸದಸ್ಯರಾಗಿದ್ದರು. ಅರುಣ್‌ ಗೋಯಲ್‌ ದಿಡೀರ್‌ ರಾಜೀನಾಮೆ ದೇಶದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.

ಇದನ್ನು ಓದಿ: ಗೋಹತ್ಯೆ ವದಂತಿಯಿಂದ ಮುಸ್ಲಿಂ ವ್ಯಾಪಾರಿಯ ಗುಂಪು ಹತ್ಯೆ: ಪೊಲೀಸರು ಕೂಡ ತಪ್ಪಿತಸ್ಥರೆಂದು ಕೋರ್ಟ್‌ ಹೇಳಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...