Homeಫ್ಯಾಕ್ಟ್‌ಚೆಕ್Fact Check: ತುಮಕೂರಿನ ಪುರದಲ್ಲಿ ರಥಕ್ಕೆ ಬೆಂಕಿ ಇಟ್ಟ ಆರೋಪಿ ಮುಸ್ಲಿಂ ಅಲ್ಲ

Fact Check: ತುಮಕೂರಿನ ಪುರದಲ್ಲಿ ರಥಕ್ಕೆ ಬೆಂಕಿ ಇಟ್ಟ ಆರೋಪಿ ಮುಸ್ಲಿಂ ಅಲ್ಲ

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ನಿಟ್ಟೂರು ಬಳಿಯ ಪುರ ಗ್ರಾಮದ ಕಲ್ಲೇಶ್ವರ ರಥಕ್ಕೆ ಬೆಂಕಿ ಇಟ್ಟ ಘಟನೆ ಮಾರ್ಚ್‌ 11ರಂದು ಸೋಮವಾರ ನಡೆದಿತ್ತು. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಮುಸ್ಲಿಂ ಸಮುದಾಯಕ್ಕೆ ಸೇರಿದವನು ಎಂಬ ರೀತಿಯಲ್ಲಿ ಸುದ್ದಿ ಹರಿಬಿಟ್ಟು ಘಟನೆಗೆ ಕೋಮು ಬಣ್ಣ ಬಳಿಯುವ ಪ್ರಯತ್ನವನ್ನು ಬಿಜೆಪಿ ಹಾಗೂ ಬಲಪಂಥೀಯ ಮಾಧ್ಯಮಗಳು ಮಾಡಿವೆ.

ಬಲಪಂಥೀಯ ಮಾಧ್ಯಮ ‘ಪೋಸ್ಟ್ ಕಾರ್ಡ್’ ಘಟನೆ ಕುರಿತು ಪೋಸ್ಟರ್ ಒಂದನ್ನು ಹರಿಬಿಟ್ಟಿದ್ದು, ಅದರಲ್ಲಿ “ತುಮಕೂರು ಜಿಲ್ಲೆಯ ನಿಟ್ಟೂರಿನ 800 ವರ್ಷಗಳ ಇತಿಹಾಸ ಇರುವ ಶ್ರೀ ಕಲ್ಲೇಶ್ವರ ಸ್ವಾಮಿ ದೇವಸ್ಥಾನದ ರಥಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಹಿಂದುಗಳು ಮೌನವಾದಷ್ಟು ಅವರ ಅಟ್ಟಹಾಸ ಜಾಸ್ತಿಯಾಗುತ್ತದೆ” ಎಂದು ಬರೆಯಲಾಗಿದೆ.

ಇದೇ ಪ್ರತಿಪಾದನೆಯನ್ನು ರಾಜ್ಯ ಬಿಜೆಪಿಯ ಅಧಿಕೃತ ಎಕ್ಸ್ ಖಾತೆಯಲ್ಲೂ ಮಾಡಲಾಗಿದ್ದು, “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಹಿಂದೂ ಧರ್ಮೀಯರ ಮೇಲೆ ಹಾಗೂ ಹಿಂದೂ ದೇವಾಲಯಗಳ ಮೇಲೆ ದಾಳಿ ನಿತ್ಯ ನಿರಂತರ. ಮತಾಂಧ ಖಿಲ್ಜಿ, ಘಜ್ನಿ, ಘೋರಿ ಕಾಲದಲ್ಲಿ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದ ಮಾದರಿಯಲ್ಲಿ ತುಮಕೂರಿನ ಗುಬ್ಬಿಯ ನಿಟ್ಟೂರುಪುರದ 800 ವರ್ಷಗಳ ಇತಿಹಾಸ ಹೊಂದಿರುವ ಕಲ್ಲೇಶ್ವರ ಸ್ವಾಮಿಯ ರಥಕ್ಕೆ ಮಟ ಮಟ ಮಧ್ಯಾಹ್ನವೇ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೇ, ಇದು ನಿಮ್ಮ ಓಲೈಕೆ ಹಾಗೂ ಅರಾಜಕತೆಯ ಆಡಳಿತದ ದುಷ್ಪರಿಣಾಮ. ಹಿಂದೂ ಧರ್ಮ, ಹಿಂದೂ ದೇವಾಲಯ, ಹಿಂದೂಗಳ ಮೇಲಿನ ನಿಮಗೇಕೆ ಈ ಪರಿ ಅಸಡ್ಡೆ. ಹಿಂದೂಗಳಿಗೆ ನಿಮ್ಮ ಆಡಳಿತದಲ್ಲಿ ರಕ್ಷಣೆ ಇಲ್ಲವೇ..?” ಎಂದು ಬರೆದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ಹಿಂದುತ್ವ ಮುಖಂಡ ಪುನೀತ್ ಕೆರೆಹಳ್ಳಿ “ನಿನ್ನೆ ರಾಮೇಶ್ವರ ಕೆಫೆ, ಇಂದು ಕಲ್ಲೇಶ್ವರ ಸ್ವಾಮಿ ರಥ. ಗುಬ್ಬಿ ತಾಲೂಕು ಪುರ ಗ್ರಾಮದ ಕಲ್ಲೇಶ್ವರ ದೇವಾಲಯದ ರಥಕ್ಕೆ ಬೆಂಕಿ ಹಾಕಿದ ಜಿಹಾದಿ ಮನಸ್ಥಿತಿಗಳು” ಎಂದು ಶೀರ್ಷಿಕೆ ಕೊಟ್ಟು ಘಟನೆಯ ವಿಡಿಯೋ ಹಂಚಿಕೊಂಡಿದ್ದ.


ಪೋಸ್ಟ್ ಲಿಂಕ್ ಇಲ್ಲಿದೆ

ಮೇಲಿನ ಮೂರೂ ಪೋಸ್ಟ್‌ಗಳಲ್ಲಿ ರಥಕ್ಕೆ ಬೆಂಕಿ ಹಚ್ಚಿದವರು ಮುಸ್ಲಿಮರು ಎಂದು ಪರೋಕ್ಷವಾಗಿ ಬಿಂಬಿಸುವ ಪ್ರಯತ್ನ ಮಾಡಲಾಗಿದೆ.

ಫ್ಯಾಕ್ಟ್‌ಚೆಕ್ : ರಥಕ್ಕೆ ಬೆಂಕಿ ಹಚ್ಚಿರುವ ಆರೋಪಿಯ ಬಂಧನದ ಕುರಿತು ತುಮಕೂರು ಪೊಲೀಸರು ಮಾರ್ಚ್‌ 11ರಂದು ಪ್ರಕಟನೆ ಹೊರಡಿಸಿದ್ದು, “11 ಮಾರ್ಚ್ 2024ರಂದು ತುಮಕೂರಿನ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಪುರ ಗ್ರಾಮದ ದೇವಾಲಯ ಶ್ರೀ ಕಲ್ಲೇಶ್ವರ ಸ್ವಾಮಿ ರಥಕ್ಕೆ ಉದಾರಿ ಬಿನ್ ರಾಧೇಶಾಂ ಘೋರಕಪುರ ಎಂಬ ವ್ಯಕ್ತಿಯು ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೆಂಕಿ ಹಚ್ಚಿದ್ದಾನೆ. ಈ ಘಟನೆಯಿಂದಾಗಿ ರಥವು ಬೆಂಕಿಯಲ್ಲಿ ಸಂಪೂರ್ಣ ಸುಟ್ಟು ಹೋಗಿದೆ. ರಥವು ಇದ್ದ ಜಾಗದಲ್ಲೇ ಬೆಂಕಿ ಹಚ್ಚಿರುವ ಉದಾರಿ ಬಿನ್ ರಾಧೇಶಾಂ ಎಂಬ ವ್ಯಕ್ತಿಯನ್ನು ಪುರ ಗ್ರಾಮಸ್ಥರು ಮತ್ತು ಭಕ್ತಾದಿಗಳು ವಶಕ್ಕೆ ಪಡೆದಿದ್ದಾರೆ ಮತ್ತು ಪೋಲಿಸರಿಗೆ ಒಪ್ಪಿಸಿದ್ದಾರೆ. ಈ ರಥವು ಸುಟ್ಟಿರುವುದರಿಂದ 20 ಲಕ್ಷದಷ್ಟು ನಷ್ಟವಾಗಿದೆ” ಎಂದು ಹೇಳಿದ್ದಾರೆ.

ಉದಾರಿ ಬಿನ್ ರಾಧೇಶಾಂ 35 ವಯಸ್ಸಿನವರಾಗಿದ್ದು, ಉತ್ತರ ಪ್ರದೇಶದ ಘೋರಕಪುರದವರಾಗಿದ್ದಾರೆ. ಸದ್ಯ ಪೋಲಿಸರು ಅವರನ್ನು ದಸ್ತಗಿರಿ ಮಾಡಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿರುವುದಾಗಿ ತುಮಕೂರು ಜಿಲ್ಲಾ ಪೋಲಿಸ್ ಕಛೇರಿ ಸ್ಪಷ್ಟಪಡಿಸಿದೆ.

ಮಾರ್ಚ್ 12ರಂದು ತುಮಕೂರು ಎಸ್‌ಪಿ ಕೂಡ ಆರೋಪಿಯ ಬಂಧನದ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದು, “ಜಿಲ್ಲೆಯ ಗುಬ್ಬಿ ತಾಲೂಕಿನ ಪುರ ಗ್ರಾಮದ ಶ್ರೀಕಲ್ಲೇಶ್ವರ ಸ್ವಾಮಿ ರಥಕ್ಕೆ ಬೆಂಕಿ ಹಚ್ಚಿದವನ ಬಂಧನದ ಬಗ್ಗೆ ಪತ್ರಿಕಾ ಪ್ರಕಟಣೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದರು.

ಪೊಲೀಸರ ಸ್ಪಷ್ಟನೆ ಪ್ರಕಾರ, ರಥಕ್ಕೆ ಬೆಂಕಿ ಹಚ್ಚಿದ ಆರೋಪಿ ಹಿಂದೂ ಧರ್ಮಕ್ಕೆ ಸೇರಿದವನೇ ಹೊರತು ಮುಸ್ಲಿಮನಲ್ಲ ಎಂಬುವುದು ಖಚಿತವಾಗಿದೆ.

ಇದನ್ನೂ ಓದಿ : Fact Check: ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...