Homeಮುಖಪುಟಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ತನ್ನ ಕ್ಷೇತ್ರದ 8 ರೈಲು ನಿಲ್ದಾಣಗಳಿಗೆ ದೇವಾಲಯ, ವಿಗ್ರಹದ ಹೆಸರು ಮರುನಾಮಕರಣ...

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ತನ್ನ ಕ್ಷೇತ್ರದ 8 ರೈಲು ನಿಲ್ದಾಣಗಳಿಗೆ ದೇವಾಲಯ, ವಿಗ್ರಹದ ಹೆಸರು ಮರುನಾಮಕರಣ ಮಾಡಿಸಿದ ಸ್ಮೃತಿ ಇರಾನಿ

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಅಮೇಥಿ ಜಿಲ್ಲೆಯ 8 ರೈಲು ನಿಲ್ದಾಣಗಳಿಗೆ ಸ್ಥಳೀಯ ದೇವಾಲಯಗಳು, ಸಂತರು, ವಿಗ್ರಹಗಳು ಮತ್ತು ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನು ಸ್ಮೃತಿ ಇರಾನಿ ಮರು ನಾಮಕರಣ ಮಾಡಿಸಿದ್ದಾರೆ. ಮರುನಾಮಕರಣ ಮಾಡುವ ಯುಪಿ ಸರ್ಕಾರದ ಪ್ರಸ್ತಾವನೆಗೆ ಕೇಂದ್ರ ಗೃಹ ಸಚಿವಾಲಯವು ಮಂಗಳವಾರ ನಿರಾಕ್ಷೇಪಣಾ ಪ್ರಮಾಣಪತ್ರವನ್ನು (ಎನ್‌ಒಸಿ) ನೀಡಿದೆ.

ಅಮೇಥಿಯ ಸಾಂಸ್ಕೃತಿಕ ಗುರುತು ಮತ್ತು ಪರಂಪರೆಯನ್ನು ಕಾಪಾಡುವ ದೃಷ್ಟಿಯಿಂದ ತಮ್ಮ ಕ್ಷೇತ್ರದ ಎಂಟು ರೈಲು ನಿಲ್ದಾಣಗಳ ಹೆಸರನ್ನು ಬದಲಾಯಿಸಲಾಗಿದೆ ಎಂದು ಸ್ಮೃತಿ ಇರಾನಿ ಬುಧವಾರ ಹೇಳಿದ್ದಾರೆ.

ವಿರಾಸತ್ ಭೀ, ವಿಕಾಸ್ ಭಿ… ಅಮೇಥಿ ಲೋಕಸಭಾ ಕ್ಷೇತ್ರದ ಎಂಟು ರೈಲು ನಿಲ್ದಾಣಗಳ ಹೆಸರನ್ನು ಬದಲಾಯಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಲು ನನಗೆ ಸಂತೋಷವಾಗಿದೆ. ಈ ನಿರ್ಧಾರವು ಅಮೇಥಿಯ ಸಾಂಸ್ಕೃತಿಕ ಅಸ್ಮಿತೆ ಮತ್ತು ಪರಂಪರೆಯನ್ನು ಉಳಿಸುವಲ್ಲಿ ಉಪಯುಕ್ತವಾಗಿದೆ ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಸ್ಮೃತಿ ಇರಾನಿ ಹೇಳಿದ್ದಾರೆ.

ಕಾಸಿಂಪುರ ರೈಲ್ವೇ ನಿಲುಗಡೆಯನ್ನು ‘ಜೈಸ್ ಸಿಟಿ’ ಎಂದು ಮರುನಾಮಕರಣ ಮಾಡಲು ಮತ್ತು ಜೈಸ್‌ನ್ನು  ಗುರು ಗೋರಖ್‌ನಾಥ್ ಧಾಮ್ ಎಂದು ಮರುನಾಮಕರಣ, ಬನಿ ರೈಲ್ವೇ ಬಿಲ್ಧಾಣವನ್ನು ಸ್ವಾಮಿ ಪರಮಹಂಸ್ ಎಂದು, ಮಿಸ್ರೌಲಿಯನ್ನು ಮಾ ಕಾಲಿಕನ್ ಧಾಮ್ ಎಂದು, ನಿಹಾಲ್‌ಗಢವನ್ನು ಮಹಾರಾಜ ಬಿಜ್ಲಿ ಪಾಸಿ ಎಂದು, ಅಕ್ಬರ್‌ಗಂಜ್‌ನ್ನು ಮಾ ಅಹೋರ್ವಾ ಭವಾನಿ ಧಾಮ್ ಆಗಿ, ವಾರಿಸ್‌ಗಂಜ್‌ನ್ನು ಅಮರ್ ಶಾಹಿದ್ ಭಲೇ ಸುಲ್ತಾನ್ ಎಂದು ಮತ್ತು ಫರ್ಸತ್‌ಗಂಜ್‌ನ್ನು ತಪೇಶ್ವರನಾಥ್ ಧಾಮ್ ಆಗಿ ಮರುನಾಮಕರಣ ಮಾಡಲು ಫೆಬ್ರವರಿ 12ರಂದು ಸರ್ಕಾರವು MHAಗೆ ಪ್ರಸ್ತಾವನೆಯನ್ನು ರವಾನಿಸಿತ್ತು. ಇದೀಗ ಮರುನಾಮಕರಣ ಮಾಡುವ ಯುಪಿ ಸರ್ಕಾರದ ಪ್ರಸ್ತಾವನೆಗೆ ಕೇಂದ್ರ ಗೃಹ ಸಚಿವಾಲಯವು ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡಿದೆ.

ಬಿಜೆಪಿಯ ಅಮೇಥಿ ಘಟಕದ ಜಿಲ್ಲಾಧ್ಯಕ್ಷ ರಾಮ್ ಪ್ರಸಾದ್ ಮಿಶ್ರಾ ಅವರು ಈ ಬಗ್ಗೆ ಮಾತನಾಡುತ್ತಾ, ಸ್ಥಳೀಯ ದೇವಾಲಯಗಳು, ಸಂತರು, ವಿಗ್ರಹಗಳು ಮತ್ತು ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನು ಅಮೇಥಿಯಲ್ಲಿ ರೈಲು ನಿಲ್ದಾಣಗಳಿಗೆ ಮರುನಾಮಕರಣ ಮಾಡಬೇಕೆಂಬ ಬೇಡಿಕೆ ಬಹುಕಾಲದಿಂದ ಇತ್ತು ಎಂದು ಮಾಹಿತಿ ನೀಡಿದ್ದಾರೆ.

ಮುಸ್ಲಿಂ ಬಾಹುಳ್ಯ ಇರುವ ಕಾಸಿಂಪುರ ಗ್ರಾಮದ ಹೆಸರನ್ನು ಕಾಸಿಂಪುರ ಹಾಲ್ಟ್ ರೈಲ್ವೆ ನಿಲ್ದಾಣಕ್ಕೆ ಹೆಸರಿಸಲಾಗಿತ್ತು‌. ಇದನ್ನು ಜೈಸ್ ಸಿಟಿ ಎಂದು ಮರುನಾಮಕರಣ ಮಾಡಬೇಕೆಂದು ಸಲಹೆ ನೀಡಲಾಯಿತು. ಪ್ರಸ್ತುತ ಜೈಸ್ ರೈಲು ನಿಲ್ದಾಣವು ಅದರ ಸಮೀಪದಲ್ಲಿ ಅನೇಕ ಆಶ್ರಮಗಳನ್ನು ಹೊಂದಿದೆ. ಇದರಲ್ಲಿ ಪ್ರಮುಖವಾದದ್ದು ಗುರು ಗೋರಖನಾಥ ಧಾಮ್ ಆಶ್ರಮ, ಆದ್ದರಿಂದ ನಿಲ್ದಾಣಕ್ಕೆ ಆಶ್ರಮದ ಹೆಸರನ್ನು ಮರುನಾಮಕರಣ ಮಾಡಲು ಪ್ರಸ್ತಾಪಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಗೋಹತ್ಯೆ ವದಂತಿಯಿಂದ ಮುಸ್ಲಿಂ ವ್ಯಾಪಾರಿಯ ಗುಂಪು ಹತ್ಯೆ: ಪೊಲೀಸರು ಕೂಡ ತಪ್ಪಿತಸ್ಥರೆಂದು ಕೋರ್ಟ್‌ ಹೇಳಿದ್ದೇಕೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...